Connect with us

ದಿನದ ಸುದ್ದಿ

ಲೋಕರೂಢಿಯ ಮೀರಿ, ನಿರಾಕರಣೆಯೊಳಗಿನ ಸೌಜನ್ಯದ ಧ್ವನಿ ಸೌಂದರ್ಯ

Published

on

  • ಡಾ.ಎನ್.ಕೆ.ಪದ್ಮನಾಭ

ಲೋಕದ ರೂಢಿಗಳ ಮೀರುವುದನ್ನು ಸಾಂಪ್ರದಾಯಿಕ ದೃಷ್ಟಿಕೋನವು ಅಕ್ಷಮ್ಯ ಎಂದು ಪರಿಗಣಿಸುತ್ತದೆ. ಅಷ್ಟೇ ಅಲ್ಲ, ಮೀರಿದರೆ ಆಗುವ ಅಪಾಯಗಳನ್ನೂ ನೆನಪಿಸುತ್ತಾ ಭಯ ಹುಟ್ಟಿಸುತ್ತಾ ಚೌಕಟ್ಟುಗಳ ವ್ಯಾಪ್ತಿಯನ್ನು ಹಿಗ್ಗಿಸುತ್ತದೆ.

ಸ್ಥಗಿತತೆ ಶಾಶ್ವತವಾಗಿರಬೇಕು ಎಂಬ ಹುಮ್ಮಸ್ಸಿನಲ್ಲಿ ಚಲನೆಯ ನಿಜದಜೀವಂತಿಕೆಯನ್ನುಇಲ್ಲವಾಗಿಸುವುದರಕಡೆಗೇಅತ್ಯುತ್ಸಾಹದಲ್ಲಿ ಮುನ್ನಡೆಯುತ್ತಿರುತ್ತದೆ. ಈಗ ಅದರದ್ದು ಕೇವಲ ಅತ್ಯುತ್ಸಾಹವಾಗಿಯಷ್ಟೇ ಉಳಿದಿಲ್ಲ. ಲೋಕರೂಢಿ ಮೀರುವವರನ್ನು ಬಲಿತೆಗೆದುಕೊಳ್ಳುವ ಮತ್ತು ನಿಶ್ಚಲ ಸ್ಥಿತಿಯನ್ನು ಹಿಂದೆಂದಿಗಿಂತಲೂದಟ್ಟವಾಗಿ ಪ್ರತಿಷ್ಠಾಪಿಸುವ ಕ್ರೌರ್ಯದರೂಪವನ್ನೂ ಪಡೆದುಕೊಂಡುಬಿಟ್ಟಿದೆ.

ಈ ಸಾಂಪ್ರದಾಯಿಕ ಜಾಡ್ಯವನ್ನು ಎದುರುಗೊಳ್ಳುವ, ಚಲನೆಯ ಜೀವಂತಿಕೆಗೆ ಜೀವತುಂಬುವ ದಾರಿಅತ್ಯಂತಕಠಿಣವಾದದ್ದು. ಈ ಹಂತದಲ್ಲಿ ಬಂಡಾಯದ ಆಕ್ರಾಮಕ ಆವೇಶಭರಿತಧ್ವನಿ ಮುಖ್ಯವೋಅಥವಾ ಸೌಜನ್ಯದ ಸಂಯಮಪೂರ್ಣ ಪ್ರಖರ ವೈಚಾರಿಕ ವಿವೇಚನೆಯ ಮಾದರಿ ಮಹತ್ವದ್ದೋಎಂಬುದನ್ನು ಸ್ಪಷ್ಟಪಡಿಸಿಕೊಳ್ಳಲೇಬೇಕಾಗುತ್ತದೆ.

ಇಲ್ಲದಿದ್ದರೆ ಸಾಂಪ್ರದಾಯಿಕತೆಯ ವಿಚಿತ್ರ ಹಠದತಕಧಿಮಿಗುಟ್ಟುವಿಕೆ ಮತ್ತಷ್ಟು ಹೆಚ್ಚಾಗುತ್ತದೆ. ಆಕ್ರಾಮಕ ಪರಿಭಾಷೆ ಮತ್ತುಆಕ್ರೋಶಭರಿತಆವೇಶಕ್ಕಿಂತ ಸೌಜನ್ಯದ ಧ್ವನಿಯೊಂದಿಗಿನ ಮನವರಿಕೆಯ ಮಾತೃತ್ವದ ಶೈಲಿಯು ಸಾಮಾಜಿಕ ಚಲನೆಗೆ ಬೇಕಾದ ಪೂರಕ ವಾತಾವರಣ ಸೃಷ್ಟಿಸುತ್ತದೆ.

ಚೇತನ ಸೋಮೇಶ್ವರಅವರ ‘ಲೋಕರೂಢಿಯ ಮೀರಿ’ ಕೃತಿಯೊಳಗೆ ಇಂಥದ್ದೊಂದು ಸದಾಶಯವಿದೆ. ಎ.ಎನ್.ಮೂರ್ತಿರಾವ್ ಎಂಬ ವೈಚಾರಿಕ ವ್ಯಕ್ತಿತ್ವ ಸಾಮಾಜಿಕ ಸಾಂಪ್ರದಾಯಿಕತೆಯನ್ನು ಎದುರುಗೊಂಡ ವಿವೇಚನಾತ್ಮಕ ವೈಚಾರಿಕ ಹೆಜ್ಜೆಗಳ ಕುರಿತಾದಪ್ರಸ್ತಾಪವು ಈ ಕೃತಿಯ ಸದಾಶಯವನ್ನು ಇನ್ನಷ್ಟು ಅಧಿಕೃತಗೊಳಿಸುವಲ್ಲಿ ಯಶಸ್ವಿಯಾಗಿದೆ. ಸದ್ಯದ ಕಾಲವು ಚಲನೆಗೆ ಹೊರಳಿಕೊಳ್ಳುವ ದಾರಿಯಾವುದಾಗಿರಬೇಕುಎಂಬುದನ್ನು ಮನಗಾಣಿಸುವಲ್ಲಿಯೂಗೆದ್ದಿದೆ.

ಈ ಕೃತಿಯೊಳಗೇ ಅಡಕವಾಗಿರುವ ‘ಲೋಕರೂಢಿ ಮೀರುವ’ ಸದಾಶಯಕ್ಕೆ ಸದ್ಯದ ವೈಚಾರಿಕ ಬಿಕ್ಕಟ್ಟುಗಳ ಸ್ವರೂಪವನ್ನು ಬದಲಿಸುವ ಶಕ್ತಿ ಇದೆ. ವಾಚಾಳಿತನದ ಗೀಳಿನ ಪರಿಭಾಷೆಯನ್ನೇ ಬಹುದೊಡ್ಡ ಬಂಡಾಯ ಎಂಬ ತಪ್ಪುಕಲ್ಪನೆಯನ್ನುಇಲ್ಲವಾಗಿಸುವಂಥಮಾರ್ಗದರ್ಶಿಸೂತ್ರ ಹೊಳೆಸುವ ಗುಣಲಕ್ಷಣವಿದೆ. ಬಂಡಾಯ ಕ್ಕಿಂತ ತಿಳಿವ ತಿಳಿಗೊಳಿಸುವ ಕಾಳಜಿಯುತ ತಿಳುವಳಿಕೆಯ ಅಗತ್ಯವನ್ನು ಪ್ರತಿಪಾದಿಸುವ ನೋಟಕ್ರಮವಿದೆ. ‘ದೇವರ’ ಅಸ್ತಿತ್ವ ಅಥವಾಧರ್ಮವಲ್ಲದ ‘ಧರ್ಮ’ – ಇವೆರಡರ ನಿರಾಕರಣೆಯೊಳಗೂ ಅಡಗಿರಬಹುದಾದ ಸೌಜನ್ಯದಧ್ವನಿಸೌಂದರ್ಯವನ್ನುಕಾಣಿಸುವ ನಿಜದ ಬೆಳಕಿದೆ.

ಲೋಕರೂಢಿಯನ್ನು ಮೀರುವುದುಅಗತ್ಯ ಮಾತ್ರವಲ್ಲ, ಅನಿವಾರ್ಯತೆಯೂ ಹೌದು ಎಂಬುದನ್ನುಚೇತನ ಸೋಮೇಶ್ವರ ಅವರು ಆಪ್ತವಾಗಿ ಸ್ಪಷ್ಟಪಡಿಸುತ್ತಾರೆ. ಎ.ಎನ್.ಮೂರ್ತಿರಾವ್‌ಅವರಂಥ ಪ್ರಖರ ವೈಚಾರಿಕ ಶಕ್ತಿಯನ್ನು ಪಿ.ಎಚ್.ಡಿ ಸಂಶೋಧನೆಯ ಕೇಂದ್ರವಾಗಿಸಿಕೊಳ್ಳುವುದೂ ಒಂದು ಬಗೆಯ ಮೀರುವಕ್ರಮವೇಆಗಿದೆ.

ಉನ್ನತ ಶಿಕ್ಷಣ ವ್ಯವಸ್ಥೆಯ ಒಳಗೇ ಇರುವಕ್ಲೀಷಾ ಚೌಕಟ್ಟುಗಳನ್ನು ಒಡೆಯುವ ಮತ್ತು ಆ ಮೂಲಕ ವಿಶ್ವವಿದ್ಯಾಲಯಗಳೊಳಗಿನ ಸವಕಲು ರೂಢಿಗಳನ್ನು ಮೀರುವದಾರಿಯನ್ನೂತಮ್ಮ ಸಂಶೋಧನಾ ಪ್ರಬಂಧದ ಮೂಲಕ ಅವರು ಕಾಣಿಸಿದ್ದಾರೆ. ಇದನ್ನುಕೃತಿರೂಪದಲ್ಲಿ ಹೊರತಂದು ಸಾಮಾಜಿಕ ಚಲನೆಯ ಹಾದಿಯನ್ನು ‘ಅವಧಿ’ಯಜಿ.ಎನ್.ಮೋಹನ್‌ಅವರು ಅಧಿಕೃತಗೊಳಿಸಿದ್ದಾರೆ. ಈ ಹೆಜ್ಜೆಯು ಸಾಮಾಜಿಕ ಚಲನೆಯ ‘ಅವಧಿ’ಯನ್ನು ವಿಸ್ತರಿಸಿದ್ದರ ಸಂಕೇತವೂ ಹೌದು.

ಎಲ್ಲಾ ಕಾಲಗಳಲ್ಲೂ ವಿಜೃಂಭಿಸುವ ಲೋಕರೂಢಿಗಳೊಳಗಿನ ಟೊಳ್ಳುತನವನ್ನು ಪ್ರಶ್ನಿಸಿ ಅವುಗಳಿಗೆ ಪರ್ಯಾಯವಾದ ಆಲೋಚನೆಗಳನ್ನು ಹೊಳೆಸುವ ಪ್ರಯತ್ನಗಳು ನಡೆಯುತ್ತಲೇಇರುತ್ತವೆ. ಅವುಗಳಿಗೆ ಸಿಗುವ ಪ್ರತಿಸ್ಪಂದನೆ ಯಾವುದೇ ರೀತಿಯದ್ದೇ ಇರಲಿ, ಅವುಗಳು ತದನಂತರದ ಕಾಲಘಟಕ್ಕೆ ಬೇಕಾಗುವ ಮಾದರಿಗಳನ್ನು ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಸಾಹಿತ್ಯ ಮತ್ತು ಕಲಾ ಮಾಧ್ಯಮಗಳು ಇಂಥ ಮಾದರಿಗಳನ್ನು ಮುನ್ನೆಲೆಗೆತರುತ್ತವೆ. ಇವುಗಳ ಅಭಿವ್ಯಕ್ತಿಯು ಲೋಕೋದ್ಧಾರದ ನಿಜದದಾರಿಯನ್ನುಕಾಣಿಸುವ ಹೊಣೆಗಾರಿಕೆಯನ್ನುಅತ್ಯಂತ ಶ್ರದ್ಧೆಯಿಂದ ನಿರ್ವಹಿಸಿದೆ.

ಅಧಿಕಾರ ವ್ಯವಸ್ಥೆ, ರಾಜಕೀಯ ವಲಯ ಮತ್ತುರಂಜನೀಯಉದ್ಯಮದೇವರು, ಧರ್ಮ ಮತ್ತು ಮನುಷ್ಯ ಸಂಕುಚಿತತೆಯನ್ನೇತನ್ನ ಲಾಭಕ್ಕೆ ಬಳಸಿಕೊಂಡಾಗಲೆಲ್ಲಾ ಸಾಹಿತ್ಯ ಮತ್ತು ಕಲೆ ವಿವೇಚನೆಯಕಡೆಗೆ ಸಮಾಜವನ್ನು ಮುನ್ನಡೆಸುವಂಥ ಕಾಣ್ಕೆಗಳನ್ನು ನೀಡಿವೆ.

ಎ.ಎನ್.ಮೂರ್ತಿರಾವ್‌ಅವರ ಬರಹಗಳ ಹಿಂದಿನ ಸ್ಫೂರ್ತಿ ಈ ತರಹದ ಕಾಣ್ಕೆಗಳೇ. ಇವುಗಳನ್ನು ಗ್ರಹಿಸಿ ಒಂದು ಸ್ಪಷ್ಟ ವಿವೇಚನಾತ್ಮಕ ನಿಲುವು ತಳೆಯುವುದಕ್ಕೆ ‘ಲೋಕರೂಢಿಯ ಮೀರಿ’ ಕೃತಿ ನೆರವಾಗುತ್ತದೆ. ಈ ಕಾಣ್ಕೆಗಳನ್ನು ಸದ್ಯದ ವೈರುಧ್ಯಗಳ ನಡುವೆ ನೋಡುವ, ಆ ಮೂಲಕ ವ್ಯಕ್ತಿಗತವಾಗಿ ಸ್ಪಷ್ಟಗೊಳ್ಳುವುದಕ್ಕೆ ಚೇತನ ಸೋಮೇಶ್ವರಅವರ ವಿಶ್ಲೇಷಣೆಯಕ್ರಮವುಓದುಗರನ್ನು ಸಿದ್ಧಪಡಿಸುತ್ತದೆ.

ಈಗ ಅಧಿಕಾರ ಕೇಂದ್ರಗಳು ಮತ್ತು ಅವುಗಳನ್ನು ಪ್ರತಿನಿಧಿಸುವವರು ‘ಅಜ್ಜ ನೆಟ್ಟಆಲದ ಮರ’ದಆಶ್ರಯ ಪಡೆದುಅದರ ನೆರಳಿನ ಕೆಳಗೆ ವಿಕೃತಿಯ ಬಿಂಬಗಳನ್ನು ಮೂಡಿಸುತ್ತಲೇಇದ್ದಾರೆ. ಒಂದು ಕಡೆಗೆ ದೇವರು, ಧರ್ಮದಕುರಿತ ನಂಬಿಕೆಯಜಗತ್ತು. ಇನ್ನೊಂದುಕಡೆಗೆ ಇವುಗಳನ್ನು ನಿರಾಕರಿಸುವ ವೈಚಾರಿಕ ಲೋಕ. ಇವೆರಡನ್ನೂ ಪರಸ್ಪರ ವಿರೋಧಾತ್ಮಕವಾಗಿ ನೋಡಬೇಕೇ ಅಥವಾ ಒಂದನ್ನೊಂದು ಅನುಸಂಧಾನಗೊಳಿಸಿಕೊಂಡು ವರ್ತಮಾನವನ್ನು ಸುಂದರವಾಗಿಸಿಕೊಳ್ಳುವುದರ ಕಡೆಗೆಗಮನಹರಿಸಬೇಕೇ ಎಂಬ ದ್ವಂದ್ವಕ್ಕೆ ಈ ಕೃತಿ ಪರಿಹಾರ ಹೇಳುತ್ತದೆ.

ನಂಬಿಕೆ ಮತ್ತು ವೈಚಾರಿಕತೆಇವೆರಡರ ನಡುವಿನ ಅನುಸಂಧಾನಾತ್ಮಕ ನಿಕಷವು ಸಮಾಜಕ್ಕೆ ಬೇಕಾದ ಒಳನೋಟಗಳನ್ನು ಕಟ್ಟಿಕೊಳ್ಳಲು ಸಹಾಯಕವಾಗುತ್ತದೆ. ವಚನ, ದಾಸ ಮತ್ತುತತ್ವಪದ ಸಾಹಿತ್ಯ ಪ್ರತಿಪಾದಿಸಿದ್ದು ಈ ತರಹದ ಒಳನೋಟಗಳನ್ನೇ. ನಂಬಿಕೆ ಮೌಢ್ಯಕ್ಕೆತಿರಗುದ ಹಾಗೆ ನೋಡಿಕೊಂಡ ಒಳನೋಟಗಳಿವು. ಇವನ್ನು ಸರಿಯಾಗಿ ಅರ್ಥೈಸಿಕೊಂಡ ಕಾರಣಕ್ಕಾಗಿಯೇ ಈ ದೇಶವು ವೈವಿಧ್ಯತೆಯ ನೆಲೆಯಾಗಿದೆ. ಇದನ್ನು ಗೊತ್ತುಮಾಡಿಕೊಳ್ಳುವುದಕ್ಕೆ ಈ ಕೃತಿಒತ್ತಾಸೆ ಮೂಡಿಸುತ್ತದೆ.

ದೇವಾಲಯಗಳು, ಧರ್ಮಗಳನ್ನು ಆಧರಿಸಿಕೊಂಡು ಪ್ರತಿಷ್ಠಾಪಿತವಾಗುವ ಸಾಮಾಜಿಕ-ದೈವಿಕ ಸಂಸ್ಥೆಗಳು ನಿಜವಾದ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವಾಗ ಲೋಕರೂಢಿಗಳನ್ನೇ ಆಶ್ರಯಿಸುತ್ತವೆ. ಬಹುಹಿಂದಿನಿಂದಲೂ ನಡೆದುಕೊಂಡು ಬಂದ ಸಾಂಪ್ರದಾಯಿಕ ವಿಧಿವಿಧಾನಗಳನನ್ನು ವೈಭವೀಕರಿಸಿ ದೇವರ ಪರಿಕಲ್ಪನೆಯನ್ನು ಮೌಢ್ಯಕ್ಕೆತಿರುಗಿಸುತ್ತವೆ.

ನಿಷ್ಠುರ ವಿಚಾರವಾದಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತುಧರ್ಮನಿಷ್ಠ ಮಹಾತ್ಮಾಗಾಂಧೀಜಿ ಅವರ ನಡುವಿನ ಸಂವಾದ ನಂಬಿಕೆಯಜಗತ್ತನ್ನುಗ್ರಹಿಸುವ ಮಾದರಿಯನ್ನು ಸೃಷ್ಟಿಸಿದೆ. ನಂಬಿಕೆಯಜಗತ್ತಿನ ಬೆಂಬಲದಲ್ಲಿಜನರಉದ್ಧಾರದ ಆದರ್ಶೀಕೃತ ಆಲೋಚನೆ ಗಾಂಧೀಜಿಅವರದ್ದಾಗಿತ್ತು.

ವಾಸ್ತವವಾದಿ ಅಂಬೇಡ್ಕರ್‌ಅವರ ವೈಚಾರಿಕತೆಯು ನಂಬಿಕೆಯಜಗತ್ತು ಯಥಾಸ್ಥಿತಿವಾದವನ್ನು ಮುಂದುವರೆಸುವಂಥದ್ದು ಎಂಬುದನ್ನು ಪ್ರತಿಪಾದಿಸಿತ್ತು. ಈಗ ಅಂಬೇಡ್ಕರ್‌ ಅವರ ಗ್ರಹಿಕೆಯಂತೆಯೇ ನಂಬಿಕೆಯ ಜಗತ್ತು ಉಳ್ಳವರ ಸ್ವತ್ತಾಗಿದೆ. ಜಾತಿ ಪ್ರಾಬಲ್ಯದ ಬೇರುಗಳನ್ನು ಗಟ್ಟಿಗೊಳಿಸಿದೆ.

ಅಸಮಾನತೆಯನ್ನುಇನ್ನಷ್ಟು ವಿಸ್ತರಿಸುತ್ತಲೇ ಇದೆ. ಸಾಮಾಜಿಕ ಸ್ಥಗಿತತೆಯನ್ನು ಪೋಷಿಸುತ್ತಲೇಇದೆ. ಇಂಥ ಸಂದರ್ಭದಲ್ಲಿ ‘ಲೋಕರೂಢಿಯ ಮೀರಿ’ ಕನ್ನಡದ ದೃಷ್ಟಿಕೋನವನ್ನು ಎತ್ತರಿಸುವ ಪ್ರಜ್ಞೆಯಾಗುತ್ತದೆ. ಸಾಮಾಜಿಕ ಚಲನೆಗೆ ಬೇಕಾಗುವ ಮುನ್ನುಡಿಯಾಗುತ್ತದೆ.

ಮೂರ್ತಿರಾಯರಚಿಂತನೆಯನ್ನು ವಿಶ್ಲೇಷಿಸುತ್ತಾಚೇತನ ಸೋಮೇಶ್ವರಅವರುಅನನ್ಯ ಹೊಳಹುಗಳನ್ನು ಹೊಳೆಸುವ ಮಾದರಿಕೃತಿಯನ್ನು ರಚಿಸಿದ್ದಾರೆ. ‘ಲೋಕರೂಢಿಯ ಮೀರಿ’ ಶೀರ್ಷಿಕೆಯ ಅನನ್ಯಾರ್ಥಅನ್ವರ್ಥಕತೆಗೆ ಸಾಕ್ಷಿಯಾಗಿಇಲ್ಲಿಯ ವಿವಿಧ ಅಧ್ಯಾಯಗಳಿವೆ. ಬಹುತೇಕ ಸಂಶೋಧನಾ ಪ್ರಬಂಧಗಳಲ್ಲಿರುವಂತೆ ಇಲ್ಲಿಹಿಂದಿನ ಚಿಂತನೆಗಳ ಕುರಿತಾದ ರೆಫರೆನ್ಸ್ಗಳ ಹೊರೆಗಳಿಲ್ಲ.

ಮೂರ್ತಿರಾಯರು ಮತ್ತು ಹಿಂದಿನ ಚಿಂತನೆಯ ಕ್ರಮಗಳನ್ನು ತಮ್ಮನಿಲುವುಗಳ ಸಮರ್ಥನೆಗೆ ಎಷ್ಟು ಬೇಕೋ ಅಷ್ಟು ಬಳಸಿಕೊಂಡು ಓದುಗರು ಈ ಕ್ಷಣಕ್ಕೆ ಹೇಗೆ ಯೋಚಿಸಬೇಕುಎನ್ನುವುದರಕಡೆಗೇ ಗಮನ ಕೇಂದ್ರೀಕರಿಸುತ್ತಾರೆ. ಅಭಿಮಾನಪೂರ್ವಕಆರಾಧನಾ ಮನೋಭಾವದ ಬದಲು ಮೂರ್ತಿರಾಯರ ಜೀವಧ್ವನಿಯಾಗಿದ್ದ ಚಿಕಿತ್ಸಕ ದೃಷ್ಟಿಕೋನವನ್ನೇ ಆಧರಿಸಿಕೊಂಡು ಚೇತನ ಸೋಮೇಶ್ವರಕೃತಿಯ ಒಳನೋಟಗಳನ್ನು ಕಟ್ಟಿದ್ದಾರೆ.

ಅವರು ಸಂಸ್ಕೃತಿಯನ್ನುಇಲ್ಲಿ ಮೌಲ್ಯನಿಷ್ಠ ಪರಿಕಲ್ಪನೆಯನ್ನಾಗಿಇಲ್ಲಿ ಬಿಂಬಿಸಿದ್ದಾರೆ. ಒಳಿತಿನ ಪರವಾಗಿ ನಿಂತು ಜಾತ್ಯಾತೀತವಾಗುವ ದಾರಿಯಾವುದು ಎಂಬುದನ್ನು ಮನಗಾಣಿಸಿದ್ದಾರೆ. ಮತ-ಧರ್ಮಗಳು ಜೀವಪರ ವೈಶಿಷ್ಟ್ಯವನ್ನು ಹಿಡಿದಿಟ್ಟಿದ್ದಾರೆ. ಸ್ವಾತಂತ್ರ್ಯದ ಒಳಗೇ ಇರುವಜೀವಂತಿಕೆಯನ್ನುಕಾಣಿಸುತ್ತಾರೆ.

ಸಮಾನತೆಯಗಮ್ಯವೇ ನಿರ್ಣಾಯಕಎಂಬುದನ್ನು ಆಪ್ತವಾಗಿ ಕಟ್ಟಿಕೊಟ್ಟಿದ್ದಾರೆ. ಇಡೀ ಶೈಕ್ಷಣಿಕ ವ್ಯವಸ್ಥೆಯುಜ್ಞಾನದ ಮಹಾಮಾರ್ಗವಾಗಿ ಪುನರುತ್ಥಾನಗೊಳ್ಳುವ ಬಗೆಯನ್ನು ಚಿತ್ರಿಸಿದ್ದಾರೆ. ಅಲ್ಲದೇ ಈ ಮಹಾಮಾರ್ಗ ಲೋಕರೂಢಿಯೊಳಗಿನ ಮಿತಿಗಳನ್ನು ಮೀರುವ ವಿವೇಚನಾತ್ಮ ವೈಚಾರಿಕತೆಯನ್ನು ತಂದುಕೊಳ್ಳುವ ಪ್ರೇರಣೆಯೂ ಹೌದುಎಂದುದೃಢೀಕರಿಸುತ್ತಾರೆ. ಇವೆಲ್ಲ ಆಶಯಗಳು ಎ.ಎನ್. ಮೂರ್ತಿರಾಯರಚಿಂತನೆಯನ್ನು ಹೊಸ ಕಾಲದಲ್ಲಿ ಹೇಗೆ ಅನ್ವಯಿಸಿಕೊಳ್ಳಬೇಕು ಎಂಬುದನ್ನು ಹೇಳಿಕೊಡುತ್ತವೆ.
ಈ ಕೃತಿಯನ್ನುಯಾಕೆಓದಬೇಕು? ಓದಲೇಬೇಕು.

ದೇವರು, ಧರ್ಮವನ್ನು ಸ್ವಯಂ ಲಾಭಕ್ಕೆ ಬಳಸಿಕೊಳ್ಳುವ ಹುನ್ನಾರಗಳನ್ನು ಅರ್ಥ ಮಾಡಿಕೊಳ್ಳುವುದಕ್ಕೆ, ನಂಬಿಕೆಯಜಗತ್ತನ್ನು ಕೈಗೊಂಬೆಯಾಗಿಸಿಕೊಂಡ ನಾಯಕರೆನ್ನಿಸಿಕೊಂಡ ನಾಯಕರಲ್ಲದವರ ಇಮೇಜಿನೊಳಗಿನ ಬಾಲಿಶತನವನ್ನುಅರಿಯುವುದಕ್ಕೆ. ದೇವರು ಎಂಬ ಅಮೂರ್ತ ಪರಿಕಲ್ಪನೆಯನ್ನು ಮಾನವೀಯಗೊಳಿಸಿಕೊಂಡು ಅದಕ್ಕೆಜೀವಪರತೆಯಜೀವಂತಿಕೆಯನ್ನು ತಂದುಕೊಳ್ಳುವುದಕ್ಕೆ.

ಅಸಮಾನತೆಯ ಅಂಶಗಳನ್ನೇ ಆಧರಿಸಿಕೊಂಡು ಸಂಘರ್ಷವನ್ನುಖಾಯಂ ಆಗಿರಿಸಿದ ವಿಧ್ವಂಸಕ ಶಕ್ತಿಗಳ ಹೆಜ್ಜೆಗಳನ್ನು ಗುರುತಿಸುವುದಕ್ಕೆ. ಎಲ್ಲಕ್ಕಿಂತ ಹೆಚ್ಚಾಗಿ ತರಹೇವಾರಿ ಮಿತಿಗಳೊಂದಿಗಿನ ಹತ್ತುಹಲವು ಲೋಕರೂಢಿಗಳನ್ನು ಮೀರಿ ನಿರ್ದಿಗಂತವಾಗಿಏರುವುದಕ್ಕೆ. ಅನಿಕೇತನದ ಹಾದಿಯಲ್ಲಿ ಸುದೀರ್ಘ ಪ್ರಯಾಣ ಕೈಗೊಳ್ಳುವುದಕ್ಕಾಗಿ.

(ವಿಳಾಸ:
ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರಕೇಂದ್ರ
ಉಜಿರೆ )

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending