ಸಿನಿ ಸುದ್ದಿ
ಹಾಲಿವುಡ್ ನಟಿ ‘ಲುಪಿತಾ’ಅಂತರಂಗದ ಮಾತುಗಳು : ಮಿಸ್ ಮಾಡ್ದೆ ಓದಿ ; ಅಭಿಪ್ರಾಯ ತಿಳಿಸಿ
- ಹಾಲಿವುಡ್ ನಟಿ ಲುಪಿತಾ ನ್ಯೋಂಗೊಗೆ ಮೊನ್ನೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಸ್ಟೀವ್ ಮಕೀನ್ ನಿರ್ದೇಶನದ “12 Years a Slave ಚಿತ್ರದಲ್ಲಿ ಪಾಟ್ಸಿ ಪಾತ್ರದಲ್ಲಿ ಅತ್ಯದ್ಭುತವಾಗಿ ನಟಿಸಿದ ಈಕೆಗೆ ’ಅತ್ಯುತ್ತಮ ಪೋಷಕನಟಿ’ ಪ್ರಶಸ್ತಿ ಲಭಿಸಿದೆ. ಈ ಕೀನ್ಯಾ ಮೂಲದ ಪೋಷಕರನ್ನು ಹೊಂದಿರುವ ಮೆಕ್ಸಿಕನ್ ಕಪ್ಪು ವರ್ಣದ ತಾರೆಗೆ ಆಸ್ಕರ್ ಪ್ರಶಸ್ತಿ ಲಭಿಸುವ ಮುನ್ನ ‘ಎಸೆನ್ಸ್ ಮ್ಯಾಗಜೀನ್’ ಎಂಬ ಪ್ರಸಿದ್ಧ ಸಿನಿಮಾ ಪತ್ರಿಕೆ ’ಬ್ಲಾಕ್ ವಿಮೆನ್ ಇನ್ ಹಾಲಿವುಡ್’ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಆ ಪ್ರಶಸ್ತಿ ಆಕೆ ಸ್ವೀಕರಿಸುವಾಗ ಮಾಡಿದ ಭಾಷಣದಲ್ಲಿ ತನ್ನ ಅಂತರಂಗದ ಸೌಂದರ್ಯವನ್ನು ಬಿಚ್ಚಿಟ್ಟಳು. ಅವಳಾಡಿದ ಮಾತುಗಳನ್ನು ಅನುವಾದಿಸಿ ಬರಹ ರೂಪದಲ್ಲಿರಿಸಿದ್ದೇನೆ.
-ಅನುವಾದ ಮತ್ತು ಬರಹ ರೂಪ : ಹರ್ಷಕುಮಾರ್ ಕುಗ್ವೆ
“ಹುಡುಗಿಯೊಬ್ಬಳು ನನಗೆ ಬರೆದಿದ್ದ ಪತ್ರದ ಒಂದೆರಡು ಸಾಲುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ‘ಪ್ರಿಯ ಲುಪೀಟಾ, ರಾತ್ರೋ ರಾತ್ತಿ ಹಾಲಿವುಡ್ನಲ್ಲಿ ಯಶಸ್ಸು ಕಂಡ ನೀನು ಇಷ್ಟು ಕಪ್ಪಗಿರಲಿಕ್ಕೆ ನಿಜಕ್ಕೂ ಅದೃಷ್ಟ ಮಾಡಿದ್ದೆ ಅನ್ನಿಸುತ್ತ್ತಿದೆ. ನಾನು ನನ್ನ ಚರ್ಮವನ್ನು ಬೆಳ್ಳಗಾಗಿಸಲು ಫೇರ್ನೆಸ್ ಕ್ರೀಮ್ ಒಂದನ್ನು ಕೊಳ್ಳುವುದರಲ್ಲಿದ್ದೆ. ಅಷ್ಟರಲ್ಲಿ ನೀನು ಪ್ರಪಂಚದ ಭೂಪಟದಲ್ಲಿ ಕಾಣಿಸಿಕೊಂಡು ನನ್ನನ್ನು ಉಳಿಸಿದೆ”.
ಆ ಹುಡುಗಿ ಬರೆದ ಪತ್ರದ ಈ ಸಾಲುಗಳನ್ನು ಓದಿದ ನನ್ನ ಹೃದಯದಿಂದ ಕೊಂಚ ರಕ್ತ ಒಸರಿದಂತಾಯಿತು. ಶಾಲೆಯಿಂದ ಹೊರಬಿದ್ದೊಡನೆ ನಾನು ಆರಿಸಿಕೊಂಡ ಕೆಲಸ ನನ್ನನ್ನು ಈ ಮಟ್ಟಕ್ಕೆ ಪ್ರಭಾವಿಯನ್ನಾಗಿ ಮಾಡುತ್ತದೆ ಎಂಬ ಕಲ್ಪನೆಯೂ ನನಗಿರಲಿಲ್ಲ. ‘ಕಲರ್ ಪರ್ಪಲ್’ನ ಆ ಮಹಿಳೆಯರು ನನ್ನ ಪಾಲಿಗೆ ಹೇಗೆ ಆಶಾಭಾವನೆ ತುಂಬಿದ್ದರೋ ಅದೇ ರೀತಿಯಲ್ಲಿ ನಾನೂ ಇತರರಿಗೆ ಸ್ಪೂರ್ತಿಯಾಗಿ ನಿಲ್ಲುವ ದೃಶ್ಯವನ್ನು ನಾನು ಕಲ್ಪಸಿಕೊಂಡೂ ಇರಲಿಲ್ಲ. ’ನಾನು ಸುಂದರವಾಗಿಲ್ಲ; ಕಪ್ಪಾಗಿದ್ದೇನೆ ಎಂದು ನನಗೆ ನಾನೇ ಪದೇಪದೇ ಹೇಳಿಕೊಳ್ಳುತ್ತಿದ್ದ ದಿನಗಳು ನನಗೆ ನೆನಪಾಗುತ್ತವೆ. ಟಿ.ವಿ ಆನ್ ಮಾಡಿದರೆ ಸಾಕು ಬರೀ ಬಿಳಿಮುಖಗಳನ್ನು ನೋಡುತ್ತಿದ್ದೆ. ನನ್ನ ನಿಶಾವರ್ಣದ ಬಗ್ಗೆ ಅಪಹಾಸ್ಯಪರಿಹಾಸ್ಯಕ್ಕೊಳಗಾಗುತ್ತಿದ್ದೇನೆನಿಸುತ್ತಿತ್ತು.
ಪವಾಡಗಳನ್ನೇ ಜರುಗಿಸುವ ಆ ದೇವರಿಗೆ ನನ್ನ ಒಂದೇ ಒಂದು ಪ್ರಾರ್ಥನೆ ಏನಾಗಿತ್ತೆಂದರೆ ನಾನು ಬೆಳಿಗ್ಗೆ ಹಾಸಿಗೆ ಬಿಟ್ಟು ಏಳುತ್ತಿದ್ದಂತೆ ನನ್ನ ತ್ವಚೆ ಬೆಳ್ಳಗಾಗಲಿ ಎಂದಾಗಿತ್ತು. ಏಳುವಾಗ ದೇವರೇನಾದರೂ ನನ್ನ ವಿನಂತಿ ಆಲಿಸಿ ಕೃಪೆ ತೋರಿರಬಹುದೇ ಎಂಬ ಆಸೆಯ ಕಣ್ಣುಗಳಿಂದ ಕನ್ನಡಿ ಬಳಿ ಓಡುತ್ತಿದ್ದೆ. ಕತ್ತು ಬಗ್ಗಿಸಿ ಮೈ ನೋಡಿಕೊಳ್ಳುತ್ತಿರಲಿಲ್ಲ. ಯಾಕೆಂದರೆ ನಾನು ಮೊದಲು ನೋಡಿಕೊಳ್ಳಬಯಸುತ್ತಿದ್ದುದು ಬೆಳ್ಳಗಾಗಿ ಬದಲಾದ ಮುಖಾರವಿಂದವನ್ನು. ಆದರೆ ಪ್ರತಿದಿನವೂ ನನಗೆ ಅದೇ ಆಶಾಭಂಗವಾಗುತ್ತಿತ್ತು. ರಾತ್ರಿ ಮಲಗುವಾಗ ಹೇಗಿತ್ತೋ ಬೆಳಗೆದ್ದು ನೊಡಿಕೊಂಡಾಗಲೂ ಹಾಗೇ ಇರುತ್ತಿತ್ತು ನನ್ನ ಮುಖ. ಕೊನೆಗೆ ದೇವರೊಂದಿಗೆ ಒಂದು ಚೌಕಾಸಿ ಕುದುರಿಸಲು ನೋಡಿದೆ.
ಆತನೇನಾದರೂ ನನ್ನ ಬೇಡಿಕೆ ಈಡೇರಿಸಿದರೆ ನಾನು ಸಕ್ಕರೆ ಉಂಡೆಗಳನ್ನು ಕದಿಯುವುದನ್ನು ನಿಲ್ಲಿಸಿಬಿಡುವ ಮಾತುಕೊಟ್ಟೆ. ಮಾತ್ರವಲ್ಲದೇ ದೇವರೇನಾದರೂ ನನ್ನನ್ನು ಸ್ವಲ್ಪವಾದರೂ ಬೆಳ್ಳಗೆ ಮಾಡಿದ್ದೇ ಆದಲ್ಲಿ ಅಮ್ಮ ಹೇಳುವ (ಇಲ್ಲೇ ಕುಳಿತಿದ್ದಾರೆ ಅಮ್ಮ) ಪ್ರತಿ ಮಾತನ್ನೂ ಚಾಚೂ ತಪ್ಪದೆ ಪಾಲಿಸುತ್ತೇನೆ ಮತ್ತು ಸ್ಕೂಲ್ ಸ್ವೆಟರ್ನ್ನು ಎಂದೂ ಕಳೆದುಕೊಂಡು ಮನೆಗೆ ಬರಲ್ಲ ಎಂದೂ ಮಾತುಕೊಟ್ಟೆ. ಆದರೆ ಈ ಯಾವ ಭರವಸೆಗಳೂ ದೇವರ ಮೇಲೆ ಪರಿಣಾಮ ಬೀರಲಿಲ್ಲ. ಅವನು ನನ್ನ ಮಾತುಗಳನ್ನು ಕೆಳಿಸಿಕೊಂಡೇ ಇರಲಿಲ್ಲ.
ನಾನು ಹದಿವಯಸ್ಸಿನವಳಾದಾಗ ನನ್ನ ಬಣ್ಣದ ಮೇಲೆ ನನಗಿದ್ದ ದ್ವೇಶ ಇನ್ನೂ ಹೆಚ್ಚಾಯಿತು. ನನ್ನ ಅಮ್ಮನೇನೋ ಆಗಾಗ ನನ್ನನ್ನು ‘ನೀನು ಚೆಂದ ಇದ್ದೀಯ ಕಣೆ’ ಎಂದು ಉಸುರುತ್ತಿದ್ದಳು.
ಆದರೆ ಅದು ನನಗೆನೂ ಸಮಾಧಾನ ತರುತ್ತಿಲಿಲ್ಲ. ಎಷ್ಟೆಂದರೂ ಹೆತ್ತವರಿಗೆ ಹೆಗ್ಗಣ ಮುದ್ದಲ್ಲವೇ. ಅಮ್ಮ ಹೇಳುತ್ತಿದ್ದುದೂ ಹಾಗೇ ಅಂದುಕೊಳ್ಳುತ್ತಿದ್ದೆ. ಆ ಹೊತ್ತಿನಲ್ಲಿ ಅಂತರ ರಾಷ್ರ ಮಟ್ಟದಲ್ಲಿ ಹೆಸರುವಾಸಿಯಾದ ಮಾಡೆಲ್ ತಾರೆ ಅಲೆಕ್ ವೆಕ್ ತೆರೆಯ ಮೇಲೆ ಕಾಣಿಸಿಕೊಂಡರು ನೋಡಿ. ಆಕೆಯೂ ಕತ್ತಲಿನಷ್ಟೇ ಕಡುಗಪ್ಪು ವರ್ಣದವಳು. ಆದರೂ ಪ್ರತಿಯೊಂದು ಮ್ಯಾಗಝೀನ್ ಹಾಗೂ ಪ್ರತಿಯೊಬ್ಬರ ಬಾಯಲ್ಲಿ ಆಕೆಯ ಚೆಲು”ನ ಬಗ್ಗೆ ಪುಂಖಾನುಪುಂಖವಾಗಿ ಮಾತುಗಳು ಕೇಳಿಬರುತ್ತಿದ್ದವು. ಓಪ್ರಾ ಕೂಡಾ ಆಕೆಯನ್ನು ಚೆಲುವೆ ಎಂದು ಹೇಳಿದ ಮೇಲೆ ಅದು ನಿಜಸಂಗತಿಯೇ ಸರಿ.
ನನ್ನದೇ ಬಣ್ಣದ ಮಹಿಳೆಯೊಬ್ಬಳನ್ನು ಜನರು ಸುಂದರಿ ಎಂದು ಸ್ವೀಕರಿಸುತ್ತಿರುವುದು ನನಗೆ ನನ್ನ ಕಣ್ಣುಗಳನ್ನೇ ನಂಬದಂತೆ ಮಾಡಿತ್ತು. ನನ್ನಲ್ಲಿ ನನ್ನ ಮುಖದ ಬಣ್ಣವೇ ನನಗೆ ಒಂದು ದೊಡ್ಡ ತಡೆ ಎಂದುಕೊಂಡಿದ್ದವಳು ನಾನು. ಆದರೆ ಇಲ್ಲಿ ಒಪ್ರಾ ಅದು ಹಾಗಲ್ಲ ಎನ್ನುತ್ತಿದ್ದರು. ನಾನು ನಿಜಕ್ಕೂ ಗೊಂದಲಕ್ಕೆ ಬಿದ್ದೆ. ನನ್ನ ಮನಸ್ಸು ಓಪ್ರಾ ಮಾತನ್ನು ನಿರಾಕರಿಸತೊಡಗಿತ್ತು. ಯಾಕೆಂದರೆ ನನ್ನದೇ ಅಸಮರ್ಪಕತೆಯ ಮೋಹಕ್ಕೆ ನಾನು ಹೊಂದಿಕೊಂಡಿದ್ದೆ.
ಆದರೂ ನನ್ನೊಳಗೇ ಇದ್ದ ಹೂವೊಂದು ಅರಳುತ್ತಿತ್ತು. ಅಲೆಕ್ ಅವರನ್ನು ನೋಡಿದಾಗ ನಾನು ಆಕೆಯಲ್ಲಿ ನನ್ನನ್ನೇ ಕಂಡುಕೊಂಡಿದ್ದೆ ಎನ್ನುವುದನ್ನು ಅಲ್ಲಗಳೆಯಲಾಗುವುದಿಲ್ಲ. ಆದರೂ ನನ್ನ ಸುತ್ತಲಿನ ವಾತಾವರಣದಲ್ಲಿ ಬಿಳಿಚರ್ಮಕ್ಕೆ ಆದ್ಯತೆ ನೀಡುವುದು ಇದ್ದೇ ಇತ್ತು. ಎಲ್ಲರ ದೃಷ್ಟಿಯಲ್ಲಿ ನಾನು ಸುಂದರವಲ್ಲ ಎಂಬ ಭಾವನೆ ಕೊರೆಯುತ್ತಲೇ ಇತ್ತು. ಆ ಕುರಿತು ಯೋಚಿಸಿದಾಗಲೆಲ್ಲ ಮತ್ತೆ ನಾನು ಸುಂದರಳಲ್ಲ ಎನ್ನಿಸತೊಡಗುತ್ತಿತ್ತು. ಆಗ ಅಮ್ಮ ಹೇಳುತ್ತಿದ್ದ ಮಾತು ಇಷ್ಟೆ- “ಸೌಂದರ್ಯವನ್ನು ತಿನ್ನೋಕಾಗಲ್ಲ, ಅದೇನೂ ನಿನಗೆ ಹೊಟ್ಟೆ ತುಂಬಿಸಲ್ಲ”. ಅವಳ ಈ ಮಾತುಗಳು ನನಗೆ ಬಹಳ ತಾಗಿದವು. ಸೌಂದರ್ಯ ಎನ್ನುವುದು ನಾವು ಸ್ವಾದೀನಪಡೆದುಕೊಳ್ಳಬಹುದಾದ ಅಥವಾ ನಾವು ಭೋಗಿಸುವಂತಹದ್ದಲ್ಲ. ಸೌಂದರ್ಯ ಏನಿದ್ದರೂ ನಾನು ಇರಬೇಕಾದ ಸ್ಥಿತಿ, ರೀತಿ ಎಂದು ನನಗೆ ಮನವರಿಕೆಯಾಗುವವರೆಗೂ ಅಮ್ಮ ಹೇಳಿದ್ದ ಆ ಮಾತಿನ ಅರ್ಥ ಏನೆಂದು ನನಗಾಗಿರಲಿಲ್ಲ.
’ನೀನು ನಿನ್ನ ಸೌಂದರ್ಯವನ್ನು ತಿನ್ನೋಕಾಗಲ್ಲ’ ಎಂದು ಅಮ್ಮ ಹೇಳಿದ್ದರ ಅರ್ಥ ನಮ್ಮನ್ನು ನಾವು ಉಳಿಸಿಕೊಳ್ಳುವುದು ನಾವು ಹೇಗೆ ಕಾಣುತ್ತೇವೆ ಎನ್ನುವುದನ್ನು ಅವಲಂಬಿಸಿಲ್ಲ ಎಂದು. ನಿಜದಲ್ಲಿ ನಮ್ಮನ್ನು ಉಳಿಸುವುದು ಮತ್ತು ಮೂಲಭೂತವಾಗಿ ಸುಂದರವಾದದ್ದು ಎಂದರೆ ನಮ್ಮೊಳಗಡೆ ನಮ್ಮ ಬಗೆಗೆ ಮತ್ತು ನಮ್ಮ ಸುತ್ತಲಿರುವವರ ಬಗೆಗೆ ನಾವು ಹೊಂದಿರುವ ದಯೆ; ಕರುಣೆ ಮಾತ್ರ. ಈ ಬಗೆಯ ಸೌಂದರ್ಯ ಹೃದಯವನ್ನು ಬೆಳಗಿಸಬಲ್ಲದು ಮತ್ತು ಆತ್ಮಕ್ಕೆ ಆಹ್ಲಾದವನ್ನುಂಟುಮಾಡಬಲ್ಲದು.
ನಾನು ಅಭಿನಯಿಸಿದ ಪಾತ್ರವಾದ ಪ್ಯಾಟ್ಸಿ ತನ್ನ ಒಡೆಯನೊಂದಿಗೆ ಅಷ್ಟೊಂದು ತೊಂದರೆ ಎದುರಿಸಿದ್ದೂ ಇದಕ್ಕಾಗಿಯೇ. ಅಲ್ಲದೆ ಆಕೆಯ ಈ ಕತೆಯನ್ನು ಇಲ್ಲಿಯವರೆಗೆ ಉಳಿಸಿಕೊಂಡು ಬಂದಿದ್ದೂ ಇದೇ. ಅವಳ ದೇಹದ ಸೌಂದರ್ಯ ಮಸುಕಾದ ಮೇಲೂ ಅವಳಲ್ಲಿನ ಸ್ಪೂರ್ತಿಯ ಸೌಂದರ್ಯವನ್ನು ನಾವು ನೆನಪಿಸಿಕೊಳ್ಳಬಹುದು.ನೀವು ಓದುವ ಮ್ಯಾಗಝೀನ್ಗಳಲ್ಲಿ, ಮತ್ತು ನಿಮ್ಮ ಟಿವಿಗಳ ಪರದೆಗಳ ಮೇಲೆ ನನ್ನ ಬರುವಿಕೆ ಯುವತಿಯರನ್ನೆಲ್ಲಾ ನನ್ನದೇ ಬಗೆಯ ಪಯಣದಕ್ಕೆ ಕೊಂಡೊಯ್ಯಲಿ.
ಬಾಹ್ಯ ಸೌಂದರ್ಯವನ್ನು ಗುರುತಿಸಿಕೊಳ್ಳುವುದರ ಜೊತೆಗೆ ಅಂತರಂಗದಲ್ಲಿ ಸುಂದರವಾಗಿ ಕಾಣುವ ಉದ್ದಿಮೆಯಲ್ಲಿ ಇನ್ನೂ ಆಳವಾಗಿ ತೊಡಗಿಸಿಕೊಳ್ಳುವ ಪಯಣ ನಿಮ್ಮದೂ ಆಗಲಿ ಎಂದು ಆಶಿಸುತ್ತೇನೆ. ನಾನು ಹೇಳಿದ ಈ ಅಂತರಂಗದ ಸೌಂದರ್ಯಕ್ಕೆ ಕಪ್ಪುಛಾಯೆ ಇರುವುದಿಲ್ಲ ಎಂದು ನೆನಪಿರಲಿ.
ಧನ್ಯವಾದಗಳು.
‘12 Years a Slave’ ಸಿನೆಮಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

