Connect with us

ದಿನದ ಸುದ್ದಿ

ಡಾ. ಚಿದಾನಂದ ಮೂರ್ತಿ ಅವರಿಗೆ ಅಂತಿಮ ನಮನಗಳು

Published

on

  • ಡಾ. ಪುರುಷೋತ್ತಮ ಬಿಳಿಮಲೆ

ಸ್ವಾತಂತ್ರ್ಯೋತ್ತರ ಕಾಲದ ಕನ್ನಡ ಸಂಶೋಧನೆಗೆ ಭದ್ರವಾದ ತಳಹದಿ ಹಾಕಿಕೊಟ್ಟವರಲ್ಲಿ ಡಾ. ಚಿದಾನಂದ ಮೂರ್ತಿಯವರು (1931 – 2020) ಕೂಡಾ ಒಬ್ಬರು. ಪಾಶ್ಚಾತ್ಯ ವಿದ್ವಾಂಸರು ಮಾಡಿದ ಕೆಲಸಗಳು ಸಂಶೋಧನೆಯ ಮೂಲ ಆಕರಗಳಾಗಿ ಸಹಕರಿಸುತ್ತಲಿರುವ ಸಂದರ್ಭದಲ್ಲಿ ಅವರು ನಿಘಂಟು ಶಾಸ್ತ್ರ, ಶಾಸನ ಶಾಸ್ತ್ರ, ಹಸ್ತ ಪ್ರತಿ ಸಂಪಾದನೆ, ಗ್ರಂಥ ಸಂಪಾದನೆ, ಸಂಸ್ಕೃತಿ ಸಂಶೋಧನೆ ಮತ್ತು ಜಾನಪದ ಕೆಲಸಗಳ ಮೂಲಕ ಕನ್ನಡ ಸಂಶೋಧನೆಯ ವಸ್ತು ಮತ್ತು ವಿಧಾನಗಳನ್ನು ಪುನಾರೂಪಿಸಿದರು.

ತೀ. ನಂ. ಶೀಕಂಠಯ್ಯನವರ ಮಾರ್ಗದರ್ಶನದಲ್ಲಿ1964 ರಲ್ಲಿ ಅವರು ಪಿಎಚ್.ಡಿ ಪದವಿಗಾಗಿ ಸಿದ್ಧ ಪಡಿಸಿದ್ದ ‘ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ’ ಕೃತಿಯು ನಮಗೆಲ್ಲಾ ಪ್ರೇರಣೆ ನೀಡಿದ ಅತ್ಯುತ್ತಮ ಸಂಶೋಧನಾ ಗ್ರಂಥ. ಉಳಿದಂತೆ, ಅವರು ಬರೆದ ಭಾಷಾ ವಿಜ್ಞಾನದ ಮೂಲತತ್ವಗಳು, ವಾಗಾರ್ಥ, ಸಂಶೋಧನ ತರಂಗ ಒಂದು ಮತ್ತು ಎರಡು, ಮಧ್ಯಕಾಲೀನ ಕನ್ನಡ ಸಾಹಿತ್ಯ ಮತ್ತು ಅಸ್ಪ್ರಶ್ಯತೆ, ಹೊಸತು ಹೊಸತು, ಶೂನ್ಯ ಸಂಪಾದನೆಯನ್ನು ಕುರಿತು, ವಚನ ಸಾಹಿತ್ಯ, ಗ್ರಾಮೀಣ, ಪಗರಣ ಮತ್ತು ಇತರ ಸಂಪ್ರಯದಾಯಗಳು ಕೃತಿಗಳನ್ನು ನಾನು ಇವತ್ತಿಗೂ ಆಗಾಗ ಪರಿಶೀಲಿಸುತ್ತಿರುತ್ತೇನೆ.

1988ರಲ್ಲಿ ಅವರು ‘ಕನ್ನಡ ಶಕ್ತಿಕೇಂದ್ರವನ್ನು’ ಸ್ಥಾಪಿಸಿದ ಮೇಲೆ ಅವರ ಸಂಶೋಧನೆಯ ಪ್ರಖರತೆ ಕಳೆಗುಂದಿತು. ಆದರೆ ಕಾಲ್ನಡಿಗೆಯ ಮೂಲಕ ಬೆಂಗಳೂರಿನಿಂದ ಹಂಪಿಗೆ ಪ್ರಯಾಣ ಮಾಡಿ, ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಗೆ ಕಾರಣರಾದರು. ಟಿಪ್ಪುವಿನ ವಿಷಯದಲ್ಲಂತೂ ಪೂರ್ಣ ಕೋಮುವಾದಿಯಾದರು. ನಾವೆಲ್ಲ ಚಿದಾನಂದಮುರ್ತೀ ಅವರ ಪುಸ್ತಕಗಳನ್ನು ಕೈಯಲ್ಲಿ ಹಿಡಿದುಕೊಂಡೇ ಕಲಬುರ್ಗಿ ಅವರ ಕಡೆಗೆ ವಾಲಿಕೊಂಡೆವು.

ನಾನು ಕನ್ನಡ ವಿವಿಯಲ್ಲಿದ್ದಾಗ ಅವರೊಮ್ಮೆ ಕನ್ನಡದ ಉಳಿವಿಗಾಗಿ ತುಂಗಾಭದ್ರ ನದಿಗೆ ಹಾರಿದ್ದರು. ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಅವರನ್ನು ಯಾರೋ ಮೇಲೆತ್ತಿ ಹಾಕಿದರು. ನಡು ರಾತ್ರಿ ನಾನು ಮತ್ತು ಕೆ ವಿ ನಾರಾಯಣ ಅವರನ್ನು ಹೊಸಪೇಟೆಗೆ ತಂದು ಆರೈಕೆ ಮಾಡಿದೆವು.

ಈಚಿಗೆ ಅವರಿಗೆ ರಾಷ್ಟ್ರಪತಿಗಳ ಪ್ರಶಸ್ತಿ ಬಂದಿತ್ತು. ‘ ಬಿಳಿಮಲೆ, ನೀವು ಅಲ್ಲಿದ್ದೀರಲ್ವಾ? ಬರ್ತೇನೆ’ ಎಂದಿದ್ದರು. ಎರಡು ದಿನ ಅವರ ಜೊತೆ ಇದ್ದೆ. ಅದಕ್ಕೂ ಹಿಂದೆ ಒಮ್ಮೆ ಬಂದಿದ್ದಾಗ, ಕೆಳದಿ ನೃಪ ವಿಜಯದಲ್ಲಿ ಉಲ್ಲೇಖಿತವಾಗಿದ್ದ ಚಾವಲ್ ಮಂಡಿಯನ್ನು ಅವರು ದೆಹಲಿಯ ಕೆಂಪು ಕೋಟೆಯ ಬಳಿ ಪತ್ತೆ ಹಚ್ಚಿದ್ದರು. ನಾನು ಸಿದ್ಧವೇಶದ ಬಗ್ಗೆ ಮತ್ತು ಕುಮಾರರಾಮನ ಬಗ್ಗೆ ಬರೆದ ಲೇಖನಗಳನ್ನು ಅವರು ಬಹಳ ಮೆಚ್ಚಿಕೊಂಡಿದ್ದರು.

ಡಿ ಎಲ್ ನರಸಿಂಹಾಚಾರ್, ಆರ್ ನರಸಿಂಹಾಚಾರ್, ಕೆ ಬಿ ಪಾಠಕ್, ಪಿ ಬಿ ದೇಸಾಯಿ, ಕೆ ಜಿ ಕುಂದಣಗಾರ, ಟಿ ಎಸ್ ವೆಂಕಣಯ್ಯ, ಮಂಜೇಶ್ವರ ಗೋವಿಂದ ಪೈ, ಮುಳಿಯ ತಿಮ್ಮಪ್ಪಯ್ಯ, ಸೇಡಿಯಾಪು ಕೃಷ್ಣ ಭಟ್, ಎಲ್ ಬಸವರಾಜು, ಶಂಭಾ ಜೋಷಿ, ಫ ಗು ಹಳಕಟ್ಟಿ, ಚನ್ನಪ್ಪ ಉತ್ತಂಗಿ ಮೊದಲಾದವರಿಂದ ಪ್ರೇರಣೆ ಪಡೆದು, ಕನ್ನಡಕ್ಕೆ ಮಹತ್ವದ ಕೊಡುಗೆ ನೀಡಿದ ಚಿದಾನಂದ ಮೂರ್ತಿ ಅವರು ನನ್ನ ಕಾಲದ ಅತ್ಯುತ್ತಮ ಸಂಶೋಧಕರಲ್ಲಿ ಒಬ್ಬರು. ಅವರಿಗೆ ನಮನಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending