ದಿನದ ಸುದ್ದಿ
ಮ.ರಾಮಮೂರ್ತಿಯವರ ಕೊಟ್ಟ ಕನ್ನಡದ ಬಾವುಟ ; ಹೋರಾಟದ ಜವಾಬ್ದಾರಿಯ ಹಸ್ತಾಂತರಕ್ಕೆ ಮೆರಗು
- ಸುಮನ್ ಜೆ.ಎಸ್,ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ವಿದ್ಯಾರ್ಥಿ,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಬೆಂಗಳೂರು ವಿಶ್ವವಿದ್ಯಾಲಯ
ಕನ್ನಡ ನಾಡಿನ ಅಭಿಮಾನ ಸ್ವಾಭಿಮಾನ ಮತ್ತು ಅಸ್ಮಿತೆಯಾಗಿ ಕನ್ನಡಿಗರ ಉಸಿರಲ್ಲಿ ಬೆರೆತು ಹೋಗಿರುವ ಕೆಂಪು-ಹಳದಿ ಬಾವುಟದ ನಿರ್ಮಾತೃ ಮ.ರಾಮಮೂರ್ತಿ ಎಂದು ಈ ಹೆಸರು ಕೇಳಿದ ತಕ್ಷಣವೇ ಕನ್ನಡಿಗರ ನರನಾಡಿಗಳಲ್ಲಿ ಸಂಚಲನ ಉಂಟಾಗುತ್ತದ್ದೆ ನಮ್ಮ ತಾಯಿನಾಡು ಅನುಭವಿಸುತ್ತಿರುವ ವೇದನೆಗಳಿಗೆ ತೀವ್ರವಾಗಿ ಪ್ರತಿರೋಧಿಸುವ ಪ್ರೇರಕ ಶಕ್ತಿಯೊಂದು ಇಡಿ ದೇಹದ ತುಂಬೆಲ್ಲಾ ವಿದ್ಯುತ್ತಿನಂತೆ ಸಂಚರಿಸುತ್ತದೆ ಅಂತಹ ಒಂದು ಪ್ರಚೋದಕ ಶಕ್ತಿಯಿಂದ ಕೂಡಿರುವ ವ್ಯಕ್ತಿತ್ವವಾಗಿತ್ತು.
ರಾಮಮೂರ್ತಿ ರವರು ಮಾರ್ಚ್ 11, -1918ರಂದು ನಂಜನಗೂಡಿನ ಗಾಂಧಿವಾದಿಯಾಗಿ ವೀರ ಕೇಸರಿ ಪತ್ರಿಕೆಯ ಸಂಪಾದರಾಗಿದ್ದ ಸೀತಾರಾಮ ಶಾಸ್ತ್ರಿ ಮತ್ತು ಸುಬ್ಬಮ್ಮ ಅವರ ಪುತ್ರನಾಗಿ ಹುಟ್ಟಿದ ರವರು ಶೈಕ್ಷಣಿಕ ಜೀವನವೂ ಹುಟ್ಟೂರಲ್ಲಿ ಸೇರಿದಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ಆರ್ಯ ವಿದ್ಯಾಶಾಲೆಯಲ್ಲಿ ಮುಂದೊರೆಯಿತು. ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾದ ಸುಬ್ರಮಣ್ಯ ಅಯ್ಯರ್ ಅವರಿಂದ ಮತ್ತು ಮಾಧ್ಯಮಿಕ ಶಾಲೆಯಿಂದ ಶಿಕ್ಷಕರಾದ ದೇವುಡು ಅವರಿಂದ ವಿಶೇಷ ಕಾಳಜಿಗೊಳಪಟ್ಟು ಅವರಿಂದ ಪ್ರಭಾವಿತರಾದರು.ಹುಟ್ಟಿನಿಂದ ಪ್ರತಿಭಾವಂತರಾಗಿದ್ದ ರಾಮಮೂರ್ತಿ ರವರಿಗೆ ಚಳವಳಿಗಳಿಗೆ ಧುಮುಕಲು ಮೊದಲ ಪ್ರೇರಣೆಯಾಗಿದ್ದು ಅವರ ತಂದೆಯವರಾದ ಸೀತಾರಾಮಶಾಸ್ತ್ರಿ,
ಗಾಂಧೀಜಿಯವರ ವಿಚಾರಗಳಿಂದ ಪ್ರಭಾವಿತರಾಗಿ ಚಳವಳಿಗಳತ್ತ ಮುಖ ಮಾಡಿದ ಶಾಸ್ತ್ರಿ ಅದರ ಪ್ರಚಾರಕ್ಕಾಗಿ ‘ವೀರ ಕೇಸರಿ’ ಎನ್ನುವ ಪತ್ರಿಕೆಯನ್ನು ಹೊರಡಿಸುತ್ತಿದ್ದರು. ಮುಂದೆ ರಾಮಮೂರ್ತಿ ಪತ್ರಕರ್ತರಾಗಿ ಹೊರಹೊಮ್ಮುವಲ್ಲಿ ಬಹಳ ದೊಡ್ಡ ಪಾತ್ರವಹಿಸಿದ್ದು ಇದೆ ವೀರಕೇಸರಿ ಪತ್ರಿಕೆ.
ತನ್ನ ತಂದೆಯವರು ಸ್ಥಾಪಿಸಿದ ಪತ್ರಿಕೆಯಲ್ಲಿ ಸ್ವತಃ ತಾನೂ ಕೂಡ ತಂದೆಯವರೊಂದಿಗೆ ತೊಡಗಿಸಿಕೊಂಡು ಮುಂದೆ ತಾವೇ ವೀರಕೇಸರಿ ಪತ್ರಿಕೆಯ ಸಂಪಾದಕರಾದರು. ಸ್ವತಂತ್ರ ಚಳವಳಿ ಉತ್ತುಂಗದಲ್ಲಿದ್ದ ಕಾಲದಲ್ಲಿದಲ್ಲಿ ಈ ಪತ್ರಿಕೆಯು ತನ್ನ ಓದುಗರನ್ನ ಚಳುವಳಿಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುತ್ತಿತ್ತು ಆ ಪತ್ರಿಕೆಯು ಭಾರತ ಸ್ವತಂತ್ರವಾಗಿ ಭಾಷಾವಾರು ರಾಜ್ಯಗಳು ರಚನೆಯಾದ ಮೇಲೆ ಕರ್ನಾಟಕದ ಹಲವಾರು ಮೂಲಭೂತ ಸಮಸ್ಯೆಗಳನ್ನು ನಾಡಿನ ಜನತೆಯ ಎದುರು ತೆರೆದಿಡಲು ರಾಮಮೂರ್ತಿ ರವರ ಸಂಪಾದಕತ್ವದಲ್ಲಿ ಆರಂಭಿಸಿತು.
ಅನೇಕ ಕಾರಣಾಂತರಗಳಿಂದ ವೀರಕೇಸರಿ ಪತ್ರಿಕೆಯು ನಿಂತುಕೊಂಡ ಮೇಲೆ ಮಹತ್ವಾಕಾಂಕ್ಷೆಯ ವ್ಯಕ್ತಿತ್ವಯುಳ್ಳ ರಾಮಮೂರ್ತಿ ವಿನೋದಿನಿ, ಕಥಾವಾಣಿ, ವಿನೋದವಾಣಿ ಅಂತಹ ಪತ್ರಿಕೆಗಳನ್ನು ಹುಟ್ಟುಹಾಕಿ ತನ್ನ ಸಕ್ರಿಯತೆಯನ್ನು ಕಾಯ್ದುಕೊಂಡರು. ನಾಡಿನಲ್ಲಿ ಲೈಂಗಿಕ ವಿಜ್ಞಾನದ ಪತ್ರಿಕೆಯ ಕೊರತೆಯನ್ನು ಅರಿತು ರಾಮಮೂರ್ತಿ, ‘ಕಾಮಕಲಾ’ ಎನ್ನುವ ಪತ್ರಿಕೆ ಹೊರಡಿಸಿದರು. ಇಂತಹ ಹಲವಾರು ಸಮಸ್ಯೆಗಳು ಎದುರಾದಾಗ ಪತ್ರಿಕೆಯನ್ನು ಮುಚ್ಚಿದರು ಹೀಗೆ ಒಬ್ಬ ಸೃಜನಶೀಲ ಪತ್ರಕರ್ತರಾಗಿ ಕಾರ್ಯನಿರ್ವಹಿಸಿ ಅನೇಕ ಏಳು ಬೀಳುಗಳು ನಡುವೆ ಜಗ್ಗದೆ ಹೋರಾಟ ನಡೆಸಿದರು.
ರಾಮಮೂರ್ತಿ ಪ್ರಾಥಮಿಕ ಶಾಲಾ ಹಂತದಿಂದಲೇ ಸಾಹಿತ್ಯಾಸಕ್ತರಾಗಿದ್ದರು. ಆ ಆಸಕ್ತಿಯೇ ಮುಂದೆ ಅವರಿಗೆ ಬರಹಗಾರರಾಗಿ, ಪತ್ತೆದಾರಿ ಕಾದಂಬರಿಕಾರರಾಗಿ ರೂಪಗೊಳ್ಳುವಲ್ಲಿ ಪ್ರಚೋದಿಸಿದರ ಕಾರಣದಿಂದಾಗಿ 1950-60ರ ದಶಕದಲ್ಲಿ ವಿಪ್ಲವ, ಇಬ್ಬರು ರಾಣಿಯರು, ಚಿತ್ರಲೇಖ, ರಾಜದಂಡ, ವಿಷಕನ್ಯೆ ಮರೆಯಾಗಿದ್ದ ವಜ್ರಗಳು ಇಂತಹ ಪತ್ತೆದಾರಿ ಕಾದಂಬರಿಗಳಲ್ಲದೆ ಭಾಗ್ಯದ ಮದುವೆ, ಪ್ರೇಮಮಂದಿರ, ಹಿಪ್ಪರಗಿ ಇಂತಹ ಐತಿಹಾಸಿಕ ಕಾದಂಬರಿಗಳನ್ನ ಒಳಗೊಂಡು ಸುಮಾರು 150ಕ್ಕೂ ಹೆಚ್ಚು ಕಾದಂಬರಿಗಳು ಇವರ ವಿದ್ವತ್ತಿಗೆ ಸಾಕ್ಷಿಯಾಗಿವೇ. ಕನ್ನಡದ ಓದುಗರಿಗೆ ಸುಲಭವಾಗಿ ಎಟುಕುವ ದರದಲ್ಲಿ ತನ್ನ ಪುಸ್ತಕಗಳನ್ನು ಪ್ರಕಟಿಸುತ್ತಿದ್ದ ವಿಶಾಲ ಮನಸ್ಸು ಕೂಡ ರಾಮಮೂರ್ತಿಯವದಾಗಿತ್ತು.
ಇದಕೊಂದು ನಿದರ್ಶನ ಕೊಡುವುದಾದರೆ 120-130ರ ಪುಟಗಳ ಪುಸ್ತಕ ಅವರು ಬರವಣಿಗೆ ಮಾರಾಟದ ದರವನ್ನು ನಿಗದಿ ಪಡಿಸಿದ್ದು, ಇದು ಕನ್ನಡದ ಸಾಹಿತ್ಯದ ಬೆಳವಣಿಗೆಗಾಗಿ ಅವರು ಕೈಗೊಂಡ ಕೆಲಸಗಳಲ್ಲಿ ಒಂದು ಎಂದರು ಉತ್ಪ್ರೇಕ್ಷೆ ಅಲ್ಲ.
ಬಹುರೂಪಿಯಾಗಿದ್ದ ರಾಮಮೂರ್ತಿ ಸಾಹಿತಿಯಾಗಿ, ಪತ್ತೆದಾರಿ ಕಾದಂಬರಿಕಾರರಾಗಿ, ಪ್ರಖರ ಪತ್ರಕರ್ತರಾಗಿ, ಸ್ವತಂತ್ರ ಹೋರಾಟಗಾರರಾಗಿ, ಕನ್ನಡಪರ ಹೋರಾಟಗಾರರಾಗಿ ತನ್ನ ನಿರಂತರತೆಯನ್ನ ಸಮಾಜದೊಂದಿಗೆ ಸೆಣೆಸುತ್ತಲೆ ಬಂದವರು. ಈ ನಾಡು ಇಂದು ಪ್ರತಿಯೊಂದು ಕ್ಷಣದಲ್ಲು ಮ.ರಾಮಮೂರ್ತಿ ರವರನ್ನು ಸ್ಮರಿಸಲು ಹಲವಾರು ಕಾರಣಗಳಿವೆ. ಅವರು ಬದುಕಿ ಬಾಳಿದ ಕಾಲವೂ ಸ್ವತಂತ್ರ ಚಳುವಳಿ, ಸಾಮಾಜಿಕ ಚಳುವಳಿಗಳು ಸೇರಿದಂತೆ ಹಲವಾರು ಚಳುವಳಿಗಳು ಉತ್ತುಂಗದಲ್ಲಿ ಕಾಲವದು ಭಾರತವೂ 1947ರಲ್ಲಿ ಸ್ವಾತಂತ್ರ್ಯವನ್ನು ಪಡೆದ ನಂತರ ಆಂತರಿಕವಾಗಿ ಭಾರತವೂ ಹಲವಾರು ಹೋರಾಟಗಳು ತನ್ನೊಳಗಿನ ಅಸ್ತವ್ಯಸ್ತತೆಯನ್ನು ಸರಿ ಪಡಿಸಿಕೊಳ್ಳುವತ್ತ ಸಾಗಿತ್ತು.
ಇತ್ತ ಕರ್ನಾಟಕದಲ್ಲೂ ಸಹ ಹಲವಾರು ಹೋರಾಟಗಳು ಮುನ್ನೆಲೆಗೆ ಬಂದವು, ಭಾಷಾವಾರು ರಾಜ್ಯಗಳ ರಚನೆಗಳಾದಾಗ ಕರ್ನಾಟಕವೂ ತೀವ್ರ ತರದ ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು. ಈ ಸಮಸ್ಯೆಗಳನ್ನು ಪ್ರತಿನಿಧಿಸಲು ಬೇಕಾದ ಪ್ರತಿನಿಧಿಗಳು ಹಲವಾರಿದ್ದರು. ರಾಮಮೂರ್ತಿ ಮತ್ತವರ ಸಮಕಾಲಿನವರಾದ
ಕನ್ನಡ ಚಳವಳಿಗಳ ಹರಿಕಾರರು ಎಂದೆ ಪ್ರಸಿದ್ಧರಾಗಿರುವ ಕೊಣಂದೂರು ಲಿಂಗಪ್ಪ, ಅ.ನ.ಕೃ, ಮೈ.ಸು.ನಟರಾಜ್, ಮೈ.ಸು. ಶೇಷಗಿರಿರಾವ್, ನಾಡಿಗೇರ ಕೃಷ್ಣರಾವ್, ಕರ್ಲಮಂಗಲಂ ಶ್ರೀಕಂಠಯ್ಯ ಮೊದಲಾದವರುಗಳ ಜತೆಗೆ ಗುರುತಿಸಿಕೊಂಡವರು.
ಮ.ರಾಮಮೂರ್ತಿ ಕನ್ನಡ ಚಳವಳಿಗಳು ನಿರ್ಣಾಯಕ ಹಂತದಲ್ಲಿರುವ ಕಾಲಘಟ್ಟದಲ್ಲಿ ಹಲವಾರು ಹೋರಾಟಗಳಲ್ಲಿ ಮಹತ್ವದ ಪಾತ್ರವನ್ನು ವಹಿಸಿದರು.1956ರಲ್ಲಿ ಭಾಷಾವಾರು ರಾಜ್ಯಗಳ ರಚನೆ ಆದಾಗಾ ಕರ್ನಾಟಕವೂ ಸುತ್ತುಮುತ್ತಲಿನ ಅನ್ಯಭಾಷಿಕರಿಂದ ಹಲವು ಸಮಸ್ಯೆಗಳು ಎದುರಿಸುತ್ತಿತ್ತು. ವಿಶೇಷವಾಗಿ ಬೆಂಗಳೂರು ಅನ್ಯಭಾಷಿಕರಿಂದ ಸಮಸ್ಯೆಗಳನ್ನ ಎದುರಿಸುತ್ತಿತ್ತು. ಅಂತಹ ಕಾಲದಲ್ಲಿ ಇದರ ವಿರುದ್ಧವಾಗಿ ಕನ್ನಡ ನೆಲದ ಹಿತಾಸಕ್ತಿಯನ್ನು ಕಾಪಾಡಲು ಮುಂದಾದ ನೂರಾರು ಮಹನೀಯರಲ್ಲಿ ಮ.ರಾಮಮೂರ್ತಿ ಪ್ರಾತಃಸ್ಮರಣಿಯರು ಇಡಿ ಬದುಕೆ ಕನ್ನಡ ನಾಡಿನ ಹಿತಕ್ಕಾಗಿ ಸವೆಸಿದರು.
ಬೆಂಗಳೂರಲ್ಲಿನ ಹಲವಾರು ಬಡಾವಣೆಗಳಲ್ಲಿ ಕನ್ನಡಕ್ಕೆ ಗೌರವ ಕೊಡೊದಲ್ಲೆ ಇರಲಿ ಕನ್ನಡ ಎಂದರೆ ಎನ್ನಡ ಎನ್ನುವ ಸ್ಥಿತಿ ತಲುಪಿತ್ತು. ನಂತರ ದಿನದಲ್ಲಿ ಕನ್ನಡದ ಕುವರರಾದ ಕೋಣಂದೂರ ಲಿಂಗಪ್ಪಾ, ಬಂದಗದ್ದೆ ರಮೇಶ್ ಅನ್ನು ತರುಣ ವಿಧ್ಯಾರ್ಥಿಗಳು ‘ಕನ್ನಡ ಯುವಜನ ಸಭಾ’ ಎನ್ನುವ ಹೆಸರಲ್ಲಿ ಕನ್ನಡ ವಿರೋಧಿ ಶಕ್ತಿಗಳಿಗೆ ಪ್ರತಿರೋಧ ಒಡ್ಡಲು ಆರಂಭಿಸಿದರು.
ಅದು ಸ್ಪೋಟಗೊಂಡಿದ್ದು, ಮತ್ತೆ ಮ.ರಾಮಮೂರ್ತಿ ಮತ್ತೆ ಅ.ನ.ಕೃ ಅವರು 04.02.1962ರಲ್ಲಿ ಆಯೋಜಿಸಿದ್ದ ‘ಬೆಂಗಳೂರು ಕನ್ನಡಿಗರ ಸಮಾವೇಶ’ ನಡೆಸಿ ಅದರ ಪ್ರಚಾರಕ್ಕಾಗಿ ಮತ್ತು ಕನ್ನಡ ಪರ ಸಂಘಟನೆಗಳಲ್ಲಿ ಹೋರಾಟದ ಶಕ್ತಿ ತುಂಬಲು ‘ಕನ್ನಡ ಯುವಜನ’ ಎನ್ನುವ ಪಾಕ್ಷಿಕ ಪತ್ರಿಕೆ ಹೊರಡಿಸಿ ಚಳವಳಿಗೆ ಹೊಸ ಆಯಾಮ ನೀಡಿದರು.
ಪುನಃ 27.05.1963ರಂದು ಚಾಮರಾಜಪೇಟೆ ರಾಮಸೇವಾ ಮಂಡಳಿಯಲ್ಲಿ ಎಂ.ಎಸ್. ಸುಬ್ಬಲಕ್ಷ್ಮೀ ಅವರ ಸಂಗೀತ ಕಚೇರಿ ವ್ಯವಸ್ಥೆಯಾಗಿತ್ತು, ಕನ್ನಡಕ್ಕೆ ಅವಕಾಶವೆ ಇಲ್ಲದ ಕಾರ್ಯಕ್ರಮವನ್ನು ಮ.ರಾಮಮೂರ್ತಿ ಮತ್ತು ಅ.ನ.ಕೃ ಅವರು ತೀವ್ರವಾಗಿ ಖಂಡಿಸಿ ಪ್ರತಿಭಟನೆ ಮಾಡಿದ್ದರ ಫಲವಾಗಿ ಆ ಕಚೇರಿ ರದ್ದಾಯಿತು. ಕನ್ನಡ ಅಂತ ಬಂದಾಗ ಯಾವುದಕ್ಕೂ ಸಹ ರಾಜಿಯಾಗದ ವ್ಯಕ್ತಿತ್ವ ರಾಮಮೂರ್ತಿಯವರದಾಗಿತ್ತು. ಈ ಪ್ರತಿಭಟನೆಯು ಹೊಸ ಒಂದು ಹೆಜ್ಜೆಗೆ ನಾಂದಿ ಹಾಡಿತ್ತು.
ಅದೇನೆಂದರೆ ಸುಮಾರು 60ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಒಳಗೊಂಡ ‘ಕರ್ನಾಟಕ ಸಂಯುಕ್ತ ರಂಗ’ದ ಉದಯವಾಯಿತು. ಅ.ನ.ಕೃರವರು ಅಧ್ಯಕ್ಷರಾದರು. ರಾಮಮೂರ್ತಿ ಕಾರ್ಯದರ್ಶಿಯಾಗಿ ಹಲವಾರು ಐತಿಹಾಸಿಕ ನಿರ್ಧಾರಗಳು, ಹೋರಾಟಗಳು ಕೈಗೊಂಡರು.
ಅಜಾನುಬಾಹು ದೇಹ ನಿರ್ಭಿತ ಹೆಜ್ಜೆಗಳಿಂದ ಕೂಡಿದ ರಾಮಮೂರ್ತಿ ವ್ಯಕ್ತಿತ್ವಕ್ಕೆ “ಕನ್ನಡದ ವೀರ ಸೇನಾನಿ” ಎನ್ನುವ ಬಿರುದು ಬರಲು ಒಂದು ರೋಚಕ ಘಟನೆಯೇ ಇದೆ. ಇದು ರಾಮಮೂರ್ತಿರವರ ಎದೆಗಾರಿಕೆಗೆ ಸಾಕ್ಷಿಯಾಗಿದೆ.
ಅಂದಿನ ಕಾಲದಲ್ಲಿ ಚಿತ್ರದುರ್ಗದ ಹಿರಿಯೂರಲ್ಲಿ ನಿರ್ಮಾಣವಾಗಿದ್ದ ವಾಣಿ ವಿಲಾಸ ಸಾಗರ ಕಟ್ಟುವಾಗ ಕೂಲಿ ಕಾರ್ಮಿಕರಾಗಿ ತಮಿಳರೇ ಇದ್ದರು. ಇಡೀ ಹಿರಿಯೂರು ಪಟ್ಟಣವೇ ತಮಿಳರ ಕೈವಶ ಮಾಡಿಕೊಂಡು ಪಟ್ಟಣದಲ್ಲಿ ಡಿಎಂಕೆ ಪಕ್ಷದ ಬಾವುಟವನ್ನು ಹಾರಿಸಿದ್ದರು. ಇದು ಅಲ್ಲಿನ ಕನ್ನಡಪರ ಮನಸ್ಸುಗಳಲ್ಲಿ ತಳಮಳ ಉಂಟಾದರು ಏನೂ ಮಾಡದ ಸ್ಥಿತಿಯಲ್ಲಿದ್ದಾಗ ವಿಷಯ ರಾಮಮೂರ್ತಿ ಗಮನಕ್ಕೆ ಬಂದು ಬಾವುಟವನ್ನು ತೆಗೆಯುವಂತೆ ಮೌಖಿಕವಾಗಿ ಸೂಚಿಸಿದರು.
ನಂತರ ಅದನ್ನ ಕಡೆಗಣಿಸಿದ ತಮಿಳರು ಕನ್ನಡಿಗರ ತಾಳ್ಮೆ ಮತ್ತಷ್ಟು ಪರೀಕ್ಷೆ ಮಾಡಿದರು. ಇದನ್ನ ಸಹಿಸದ ರಾಮಮೂರ್ತಿ ಹಿರಿಯೂರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಆವಾಗಲೂ ಕೂಡ ತಾವಾಗಿಯೇ ಬಾವುಟ ತೆಗೆಯಿರಿ ಇಲ್ಲಾ ನಾನು ಇದನ್ನ ತೆಗೆದು ಎಸೆಯುತ್ತೆನೆ ಎಂದು ಹೇಳಿದ್ದು, ಲಘುವಾಗಿ ತಗೊಂಡ ತಮಿಳರು ಇವರ ಮಾತನ್ನು ಕಡೆಗಣಿಸಿದಾಗ ರೊಚ್ಚಿಗೆದ್ದ ರಾಮಮೂರ್ತಿ ತಾನೇ ಆ ಡಿಎಂಕೆ ಬಾವುಟ ಕಿತ್ತೆಸೆಯಲು ಮುಂದಾದಾಗ ಒಬ್ಬ ತಮಿಳು ಯುವಕ ಅವರನ್ನ ತಡೆದು ತಾನೆ ಬಾವುಟ ತೆಗೆದ ತಮಿಳರು ಕ್ನನಡಿಗರಿಗೆ ಕ್ಷಮೆ ಯಾಚಿಸಿದರು. ಈ ಒಂದು ದಿಟ್ಟ ನಡೆಯಿಂದ ಅವರಿಗೆ ವೀರ ಸೇನಾನಿ ಎಂಬ ಬಿರುದು ಅಭಿಮಾನಪೂರ್ವಕವಾಗಿ ಅರ್ಪಿಸಲಾಯಿತು.
ರಾಮಮೂರ್ತಿ ಪ್ರತಿಯೊಂದು ಹೋರಾಟವೂ ಕನ್ನಡಿಗರ ಲಾಭಕ್ಕಾಗಿ, ಉದ್ದಾರಕ್ಕಾಗಿ ನಾಡಿನ ಸಮಗ್ರ ಹಿತಕ್ಕಾಗಿಯೇ ಇತ್ತು. ಎನ್ನುವುದಕ್ಕೆ ಬಹಳಷ್ಟು ಸಾಕ್ಷಿಗಳಿವೆ. ಡಬ್ಬಿಂಗ್ ಚಿತ್ರ ವಿರೋಧಿ ಹೋರಾಟ, ಸ್ಥಳಿಯ ಕೆಲಸಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ, ಕನ್ನಡ ಶಿಕ್ಷಣ ಮಾಧ್ಯಮ ಭಾಷೆ ಮಾಡಲು, ಕನ್ನಡ ಚಿತ್ರಗಳಿಗೆ ಥಿಯೇಟರ್ ಸಲುವಾಗಿ ಇಂತಹ ದೂರಾಲೋಚನೆಗಳು ಕನ್ನಡಿಗರ ಭವಿಷ್ಯದ ಹಿತಕ್ಕಾಗಿ ನಡೆದ ನಡೆಯಬೇಕಾದ ಹೋರಾಟಗಳಾದರೆ.
ಅನ್ಯಭಾಷಿಕರಿಂದ ಕನ್ನಡಕ್ಕಾಗುತ್ತಿರುವ ಅನ್ಯಾಯ, ಕಾರ್ಖನೆಗಳಲ್ಲಿ ದುಡಿಯುವ ಕನ್ನಡದ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯವನ್ನು ನಿರಂತರವಾಗಿ ಪ್ರತಿಭಟಿಸಿದರು. ಇದಕ್ಕೆ ಒಳ್ಳೆಯ ನಿದರ್ಶನ ಎಂದರೆ ಮೈಕೊ ಕಾರ್ಖನೆಯ ಕಾರ್ಮಿಕರ ಪರವಾಗಿ ಹೋರಾಟ ಮಾಡಿದ್ದು ಅವರಿಗೆ ಕನ್ನಡದ ದುಡಿಯುವ ಜನರ ಮೇಲಿರುವ ಪ್ರೀತಿಯನ್ನು ತೋರಿಸುತ್ತದೆ.
ಇಂತಹ ಒಂದು ಘನ ವ್ಯಕ್ತಿತ್ವದ ರಾಮಮೂರ್ತಿ ರವರ ಕನಕಪುರ ರಸ್ತೆ ಪಕ್ಕದ ತಲೆಘಟ್ಟಪೂರದಲ್ಲಿ ಡಿಸೆಂಬರ್ 27.1962ರಲ್ಲಿ ತಮ್ಮ ಜಮೀನಿನಲ್ಲಿ ಬಾವಿಗೆ ನೀರು ಬಂದಿದೆ ಎನ್ನುವ ಖುಷಿಯಲ್ಲಿ ಕೆಲಸಗಾರರೊಂದಿಗೆ ಬಾವಿಗಿಳಿದಾಗ ಮೇಲಿಂದ ಮಣ್ಣು ಕುಸಿದು ಇಬ್ಬರು ಕೆಲಸಗಾರರೊಂದಿಗೆ ದುರಂತವಾಗಿ ಸಾವಿಗಿಡಾದರು. ಕನ್ನಡ ಬಹುದೊಡ್ಡ ಶಕ್ತಿಯೊಂದು ವಿಧಿ ಕನ್ನಡಿಗರಿಂದ ಕಿತ್ತುಕೊಂಡು ಬಿಟ್ಟಿತ್ತು.
ಕನ್ನಡವು ಸುಮ್ಮನೆ ಯಾವುದು ಕೂಡ ಉಳಿಸಿಕೊಂಡಿಲ್ಲ ಪ್ರತಿಯೊಂದರ ಹಿಂದೆ ರೋಚಕ ಇತಿಹಾಸವಿದೆ ಆ ಇತಿಹಾಸ ರೂಪಿಸುವಲ್ಲಿ ಸಾಹಿತಿಗಳು, ಕವಿಗಳು, ಹೋರಾಟಗಾರರು, ಪತ್ರಕರ್ತರು, ಗೋಪಾಲಗೌಡರಂತಹ ಕನ್ನಡ ಪ್ರೇಮಿ ರಾಜಕಾರಣಿಗಳು ಸೇರಿದಂತೆ ಪ್ರತಿಯೊಬ್ಬರು ದುಡಿದಿದ್ದಾರೆ. ಇಂತಹ ಹಲವಾರು ಮಹನೀಯರ ಕನಸಿನ ಕನ್ನಡ ನಾಡು ಅಂದು ಅವರು ಎದುರುಗೊಂಡು ಹೋರಾಡಿದ ಸಮಸ್ಯೆಗಳು ಇಂದು ಮತ್ತೆ ಅದರ ಹತ್ತರಷ್ಟಾಗಿ ಕನ್ನಡಿಗರ ಎದುರಿಗೆ ಬೃಹದಾಕಾರದಲ್ಲಿ ನಿಂತಿದೆ.
ಮ.ರಾಮಮೂರ್ತಿ ಅವರಂತಹ ಕನ್ನಡದ ಕಲಿಗಳು ಹಾಕಿಕೊಟ್ಟ ದಾರಿಯಲ್ಲೇ ಮತ್ತೆ ನಾವೂ ಸಾಗಬೇಕಾಗಿದೆ. ನಮ್ಮ ನಾಡು ನುಡಿ ನೆಲ ಜಲ ಇಂದು ಅನುಭವಿಸುತ್ತಿರುವ ನೋವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ರಾಮಮೂರ್ತಿ ಅವರು ತನ್ನ ಹೋರಾಟವನ್ನ ಬಾವುಟವನ್ನು ನಿರ್ಮಿಸಿ ನಾಡಿಗೆ ಅರ್ಪಿಸುವ ಮೂಲಕ ನಾಡು ನುಡಿಗಾಗಿ ಹೋರಾಡುವ ಜವಾಬ್ದಾರಿಯನ್ನು ಕೂಡ ಕನ್ನಡಿಗರ ಹೆಗಲಿಗೆ ವಹಿಸಿದ್ದಾರೆ. “ಒಂದಲ್ಲಾ ಒಂದು ದಿನ ಈ ರಾಜ್ಯದಲ್ಲಿ ಕನ್ನಡ ಬಾವುಟ ಹಾರಿಸುತ್ತೇನೆ. ಎಲ್ಲೆಡೆ ಕನ್ನಡ ಕಾಣುವಂತೆ ಮಾಡುವವರೆಗೆ ವಿರಮಿಸಲಾರೆ” ಎನ್ನುವ ಅವರ ಕೆಚ್ಚೆದೆಯ ಘೋಷವಾಕ್ಯವೂ ನಮ್ಮ ಕನ್ನಡಿಗರ ಎದೆಬಡಿತವಾಗಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243



