Connect with us

ದಿನದ ಸುದ್ದಿ

ಜನವರಿ 6 ಕ್ಕೆ ಮಡಿವಾಳ ಜನಾಂಗದ ಜಾಗೃತಿ‌ ಮಹಾ ಸಮ್ಮೇಳನ

Published

on

ಸುದ್ದಿದಿನ ಡೆಸ್ಕ್ : ಮಡಿವಾಳ ಜನಾಂಗದ ಜಾಗೃತಿ ಮಹಾ ಸಮ್ಮೇಳನ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಶಂಕುಸ್ಥಾಪನೆ ದಶಮಾನೋತ್ಸವ , ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ ಜಂಗಮದೀಕ್ಷಾ 29ನೇ ವಸಂತೋತ್ಸವ ಮತ್ತು ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ 38ನೇ ಜಯಂತ್ಯೋತ್ಸವ ” ಪರಮಪೂಜ್ಯ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳವರ ಪಟ್ಟಾಧಿಕಾರ ಮಹೋತ್ಸವ ದಿನಾಂಕ : 6 ಜನವರಿ 2019 , ಭಾನುವಾರ , ಸಮಯ ಬೆಳಗ್ಗೆ 10 . 00 ಗಂಟೆಗೆ ಸ್ಥಳ : ಚಿತ್ರದುರ್ಗ ಮಡಿವಾಳ ಸಮುದಾಯ ಇಡೀ ರಾಜ್ಯದಲ್ಲಿ ಸುಮಾರು 15 . 00 ಲಕ್ಷ ಜನಸಂಖ್ಯೆ ಇದ್ದು ಶೇ 99 % ರಷ್ಟು ತಮ್ಮ ಕುಲಕಸುಬು ಮತ್ತು ಕೂಲಿ – ನಾಲಿಯ ಆಧಾರದ ಮೇಲೆ ಜೀವನವನ್ನು ನಡೆಸುತ್ತಾ ಬಂದಿರುವಂತದ್ದಾಗಿದೆ.

ಸ್ವತಂತ್ರ ಬಂದು ಇಷ್ಟು ವರ್ಷಗಳಾದರೂ ಸರ್ಕಾರದ ಯಾವುದೇ ರೀತಿಯ ಸೌಕರ್ಯಗಳಿಂದ ವಂಚಿತರಾಗಿದ್ದಾರೆ . ಈ ಸಮುದಾಯ ಎಲ್ಲಾ ಸಮುದಾಯಗಳ ಜೊತೆಯಲ್ಲಿ ಮುಖ್ಯ ವಾಹಿನಿಗೆ ಬರಬೇಕಾದಂತಹ ಅನಿವಾರ್ಯತೆ ಇದೆ . ಇಂದಿಗೂ ಕೂಡ ಆರ್ಥಿಕ , ಶೈಕ್ಷಣಿಕ , ಸಾಮಾಜಿಕ ಮತ್ತು ರಾಜಕೀಯವಾಗಿ ಯಾವುದೇ ಪ್ರಾತಿನಿಧ್ಯಗಳು ಸಿಗದೆ ನಮ್ಮ ಹಕ್ಕುಗಳನ್ನು ಪಡೆಯಲಿಕ್ಕೆ ನಿರಂತರವಾದ ಹೋರಾಟವನ್ನ ನಡೆಸುವ ಕರ್ತವ್ಯ ನಮ್ಮದಾಗಿದೆ , ಪ್ರತಿಯೊಬ್ಬರಿಗೆ ಧಾರ್ಮಿಕ ಅರಿವು ಬಹಳ ಮುಖ್ಯ . ನಾಡಿನಲ್ಲಿ ಪ್ರತಿಷ್ಠಿತ ಮಠಗಳು ಇವೆ . ಅವುಗಳಿಂದ ಹೇಗೆ ಜನ ಪ್ರಜ್ಞಾವಂತರಾದರು , ವೈಯಕ್ತಿಕ ಹಾಗೂ ಸಾಮಾಜಿಕವಾಗಿ ಬೆಳವಣಿಗೆಯಾಗಿದ್ದಾರೆ ಎಂಬುದನ್ನು ನೋಡುತ್ತಿದ್ದೀರಿ . ಮಠಗಳು ಜನರ ಶಕ್ತಿಯ ಕೇಂದ್ರಗಳಾಗಿವೆ . ಬಹುಶಃ ಮಠಗಳು ಇರದಿದ್ದರೇ ಧಾರ್ಮಿಕ ವಂಚನೆಯನ್ನು ಅನುಭವಿಸಬೇಕಾಗಿತ್ತು . ಇಂದಿನ ಕಾಲಮಾನದಲ್ಲಿ ಮಠಗಳು ಅದನ್ನು ತಪ್ಪಿಸಿ ಪ್ರತಿಯೊಬ್ಬರನ್ನು ಪ್ರಜ್ಞಾವಂತರನ್ನಾಗಿಸಲು ಮತ್ತು ಸಾಮಾಜಿಕ ಜವಾಬ್ದಾರಿಯ ಜಾಗೃತಿ ಮೂಡಿಸಲು ಸಹಾಯಕವಾಗಿವೆ . ಎಲ್ಲರನ್ನು ಮೇಲೆತ್ತುವ ಕಾರ್ಯ ನಡೆದಿದೆ . – ಚಿತ್ರದುರ್ಗದ ಮುರುಘಾಮಠದ ಡಾ . ಶಿವಮೂರ್ತಿ ಮುರುಘಾ ಶರಣರ ದೂರದೃಷ್ಟಿಯಿಂದಾಗಿ ಹಿಂದುಳಿದ ಸಮಾಜಗಳಿಗೆ ಮಠಗಳನ್ನು ಸ್ಥಾಪಿಸಿ , ಅದೇ ಸಮಾಜದವರನ್ನು ಗುರುಗಳನ್ನಾಗಿ ಮಾಡಿ ( ದುರ್ಬಲ ) ಶಕ್ತಿಹೀನ ವರ್ಗಗಳಿಗೆ ಶಕ್ತಿ ತುಂಬಿದ್ದಾರೆ . ಅವರ ಪ್ರಗತಿಯ ಕನಸುಗಳ ಸಾಕಾರದಲ್ಲಿ ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವೂ ಒಂದು ! ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವು ಮಡಿವಾಳ ಜನಾಂಗದಲ್ಲಿ ಸಂಘಟನೆಯ ಕ್ರಾಂತಿ ಮಾಡಿ ಸಾಮಾಜಿಕ ಸಂಚಲನವನ್ನುಂಟು ಮಾಡಿದೆ . ಈ ದಶಮಾನ ಅನೇಕ ಅನುಭವಗಳನ್ನು ತಂದುಕೊಟ್ಟು ಸಾಧನೆಗಳಿಗೆ ಸಾಕ್ಷಿಯಾಗಿದೆ .

ಶುಭಕೋರುವವರು

ಈ ಎಲ್ಲ ಸಾಧನೆಗಳು ನಮೊಂದಿಗೆ ನಿಮ್ಮೆಲ್ಲರ ತಂಡರೂಪದ ಶಮದಿಂದಲೇ ಆಗಿವೆ . ಮನಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಕಳೆದ ಹತ್ತು ವರ್ಷಗಳ ಕಾಲವೇ ಜ್ವಲಂತ ನಿದರ್ಶನವಾಗಿದೆ . ಅದುವೇ ಸಾರ್ಥಕ ದಶಮಾನವಾಗಿದೆ . ಇದೊಂದು ಅಭೂತಪೂರ್ವವಾದ ದಶಮಾನ , ಈ ಸಮ್ಮೇಳನಕ್ಕೆ ನಾಡಿನ ಪ್ರಮುಖ ಮಠಾಧೀಶರು , ರಾಜಕಾರಣಿಗಳು , ಸಾಹಿತಿಗಳು ಮತ್ತು ಹೊರರಾಜ್ಯ ಸಮಾಜದ ಬಂದುಗಳು ಬರುವುದರಿಂದ ಈ ಕಾರ್ಯಕ್ರಮವನ್ನು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ ಉಜ್ವಲ ಭವಿಷ್ಯಕ್ಕಾಗಿ ನಿಮ್ಮ ದೇಣಿಗೆ # SRI MACHIDEVA MAT , STATE BANK OF INDIA ” CHITRASURGA ACCOUNT NO : 30110063927 , IFSC CODE : SBINO005618 ನಮೊಂದಿಗೆ ಕರ್ನಾಟಕ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಕರ್ನಾಟಕ ರಾಜ್ಯ ಮಹಿಳಾ ಘಟಕ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಅಲ್ಲಾ , ತಾಲ್ಲೂಕು , ಮಡಿವಾಳ ಸಂಘಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಜಿಲ್ಲಾ ತಾಲ್ಲೂಕು ಮಹಿಳಾ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಸ್ಥೆಗಳು ಆಪ್‌ಗಳು ಸಮಿತಿಗಳು ಒಕ್ಕೂಟಗಳು ಮತ್ತು ಮರಿ ಕಟ್ಟೆಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಹಾಗೂ ಸಮಾಜದ ಹಿರಿಯ ಮುಖಂಡರು , ಕುಲಬಂಧುಗಳು ಉತ್ಸಾಹಿ ಬಾಂಧವರೇ ಸಾಧನೆಯ ಸಾರ್ಥಕತೆಯನ್ನು ಸವಿಯಲು ಲಕ್ಷ ಲಕ್ಷ ಸಂಖ್ಯೆಯಲ್ಲಿ ಬನ್ನಿರಿ !

ಸಂಪರ್ಕಿಸಿ : ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠ ( ಮಡಿವಾಳ , ಗೋಧಿ , ಅಗಸ , ಪರೀಟ , ರಜಕ , ಚಾಕಲ , ಮಣ್ಣಿನ ಸಾಕಲ , ಮನ , ಪೆರೇಡಸ್ , ಸಾಕಲವಾಡು ಜನಾಂಗದ ಗುರುಪೀS ) ರಾಷ್ಟ್ರೀಯ ಹೆದ್ದಾರಿ 4 , ದಾವಣಗೆರೆ ರಸ್ತೆ , ಚಿತ್ರದುರ್ಗ – 577502 ದೂ : 9620839656 / 9448442512 ಇಮೇಲ್ : machidevarmatt9 @ gmail . com ವೆಬ್ಸೈಟ್ : www . machidevarmattin

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.

ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.

ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು...

ದಿನದ ಸುದ್ದಿ16 hours ago

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು...

ದಿನದ ಸುದ್ದಿ22 hours ago

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 625ಕ್ಕೆ 625 ಅಂಕಗಳನ್ನು...

ದಿನದ ಸುದ್ದಿ2 days ago

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app...

ದಿನದ ಸುದ್ದಿ2 days ago

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ,...

ದಿನದ ಸುದ್ದಿ3 days ago

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ...

ದಿನದ ಸುದ್ದಿ6 days ago

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ...

ದಿನದ ಸುದ್ದಿ6 days ago

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ...

ದಿನದ ಸುದ್ದಿ1 week ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ1 week ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

Trending