ದಿನದ ಸುದ್ದಿ
ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತ ಕಾಪಾಡಲು ಬದ್ಧ ಎಂದು ಹೇಳಿದ್ದಾರೆ. ಮಹದಾಯಿ ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243