ಅಸಾಮಾನ್ಯಳು

ಗ್ರಾಂಡ್ ಮಾಸ್ಟರ್ ಮಾನ್ಯ ಹರ್ಷ ; ಈಕೆ ಭಾರತದ ಅತ್ಯಂತ ಕಿರಿಯ ಕವನಗಾರ್ತಿ..!

Published

on

  • ಸುದ್ದಿದಿನ ಡೆಸ್ಕ್

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ನಾನ್ನುಡಿಯಂತೆ, ಒಂಭತ್ತನೇ ವಯಸ್ಸಿಗೇ ಪುಸ್ತಕ ಬರೆದು, ಭಾರತದ ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದಿಗೆ ಪಾತ್ರರಾಗಿದ್ದಾಳೆ ಬೆಂಗಳೂರಿನ ಚಿತ್ರ ಹಾಗೂ ಹರ್ಷ ದಂಪತಿಗಳ ಮುದ್ದಿನ ಮಗಳು ಮಾನ್ಯ ಹರ್ಷ. ಬೆಂಗಳೂರಿನ ವಿಬ್ಗಯಾರ್ ಹೈ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ಈಕೆ , ಮೂರು ದಾಖಲೆಗಳ‌ ಒಡತಿ. ಏಷಿಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ವಜ್ರ ವರ್ಲ್ಡ್ ರೆಕಾರ್ಡ್, ವತಿಯಿಂದ ಮೂರು ಬಿರುದುಗಳು ಈ ಪುಟ್ಟ ಪೋರಿಗೆ ಪ್ರಾಪ್ತ ವಾಗಿದೆ.

ಚಿಕ್ಕ ವಯಸ್ಸಿನಲ್ಲೇ, ಪರಿಸರ ಪ್ರಜ್ಞೆ ಹಾಗೂ ಕಾಳಜಿ ಬೆಳೆಸಿಕೊಂಡಿರುವ ಒಂಬತ್ತರ ಹರೆಯದ ಮಾನ್ಯ ಹರ್ಷ,ಈ ಸಣ್ಣ ವಯಸ್ಸಿನಲ್ಲೇ “ ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು “ಭಾರತದ ಕಿರಿಯ ಕವನಗಾರ್ತಿ ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾಳೆ.

ಜುಲೈ 5, 2019ರಂದು ಮುದ್ರಣಗೊಂಡ “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಗಿಟ್ಟಿಸಿಕೊಂಡಿದೆ. 55 ಕವನಗಳನ್ನು ಒಳಗೊಂಡಿರುವ ಈ ಪುಸ್ತಕ, ಚಿನ್ನರಲ್ಲಿ ಪರಿಸರ ಪ್ರಜ್ಞೆ ಮೂಡಿಸಿದೆ. ದೇಶ, ದೇಶ ಪ್ರೇಮ,ಸೈನಿಕರ‌ ತ್ಯಾಗ-ಬಲಿದಾನ, ಪ್ರಕೃತಿ, ಪರಿಸರ‌, ಹೆಣ್ಣಿನ ಮಹತ್ವದ ಬಗ್ಗೆ ಕವನಗಳನ್ನು ಒಳಗೊಂಡಿರುವ ಈ ಪುಸ್ತಕ ದಾಖಲೆ ಸೃಷ್ಟಿಸಿದೆ.

  1. ವಜ್ರ ವರ್ಲ್ಡ್ ರೆಕಾರ್ಡ್ ವತಿಯಿಂದ ಈ ಪುಸ್ತಕ ಬರೆದ ಮಾನ್ಯ ಹರ್ಷ “ಭಾರತದ  ಅತ್ಯಂತ ಕಿರಿಯ ಕವನಗಾರ್ತಿ” ಎಂಬ ಬಿರುದು ನೀಡಿ ಸನ್ಮಾನಿಸಲಾಗಿದೆ.
  2. ಏಷಿಯಾ ಬುಕ್ ಆಫ್ ರೆಕಾರ್ಡ್ಸ್  ವತಿಯಿಂದ, “ಗ್ರಾಂಡ್ ಮಾಸ್ಟರ್” ಬಿರುದು , ಪಾರಿತೋಷಕ ನೀಡಿ ಗೌರವಿಸಲಾಗಿದೆ.
  3. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ” ಪರಿಸರ ಕುರಿತ ಕವನಗಳು ರಚಿಸಿದ  ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದು, ಪಾರಿತೋಷಕ, ಮೆಡಲ್ ನೀಡಿ ಗೌರವಿಸಲಾಗಿದೆ.

ಸಣ್ಣ ವಯಸ್ಸಿನಲ್ಲೇ ಬರೆಯುವ ಗೀಳು ಅಂಟಿಸಿಕೊಂಡ ಮಾನ್ಯ, ಆರನೇ ವಯಸ್ಸಿಗೇ ಹಲವಾರು ಕವನಗಳನ್ನು ರಚಿಸತೊಡಗಿದಳು. ಇದನ್ನು ಕಂಡ ಆಕೆಯ ಶಾಲಾ ಶಿಕ್ಷಕರು, ಈ ಪುಟ್ಟ ಕವನಗಾರ್ತೀಯ ಬರೆಯುವ ಹವ್ಯಾಸವನ್ನು ಮತ್ತಷ್ಟು ಪ್ರೋತ್ಸಾಹಿಸಿದರು.

2018ರ ಕಿಡ್ಸ್ ವರ್ಲ್ಡ್ ಅಂತಾರಾಷ್ಟ್ರೀಯ ಸಣ್ಣ ಕಥೆಗಳ ಪ್ರಶಸ್ತಿಗೂ ಮಾನ್ಯ ಪಾತ್ರರಾಗಿದ್ದಾಳೆ. ಈಕೆ ರಚಿಸಿದ,” ಥಾಂಕ್ಸ್ ಗಿವಿಂಗ್” ಸಣ್ಣ ಕಥೆಯು ಭಾರೀ ಪ್ರಶಂಸೆಗೆ ಒಳಪಟ್ಟಿದೆ.

ಮೂರು ವರ್ಷಗಳ,  ಪುಸ್ತಕ ಮುದ್ರಿಸುವ,  ಈಕೆಯ ಕನಸು ಈಗ ನನಸಾಗಿದೆ. “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾನ್ಯಾಳ ಪರಿಸರ ಪ್ರಜ್ಞೆ ಹಾಗೂ ಕಾಳಜಿ ಗೆ ಕನ್ನಡಿ ಹಿಡಿದಂತಿದೆ.ಮಾರ್ಚ್ 22,2018 ರೈ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ , ಚಿನ್ನದ ವಾಕಥಾನ್ ಆಯೋಜಿಸಿದ್ದ ಈ ಪೋರಿ, ಸ್ನೇಹಿತರೊಂದಿಗೆ”ನೀರು ಉಳಿಸಿ” ಆಂದೋಲನ  ನಡೆಸಿದ್ದಳು.

ಅಂತೆಯೇ,ಜೆ.ಪಿ.ನಗರದ ಪುಟ್ಟೇನಹಳ್ಳಿ ಕೆರೆಗೆ ಕಾಲ್ನಡಿಗೆಯಲ್ಲಿ ತೆರಳಿ, ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಮೂಡಿಸದಳು ಮಾನ್ಯ ಹರ್ಷ. ಕಲೆ, ಕ್ರೀಡೆ ಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಮಾನ್ಯ,ಹಾಡು, ಕುಣಿತ,ಈಜುಗಾರಿಕೆಯಲ್ಲಿ ಹಲವಾರು ಪ್ರಶಸ್ತಿ ಗೌರವಗಳನ್ನು ಪಡೆದಿದ್ದಾಳೆ. ಕರಾಟೆ ಹಾಗೂ ಟೆಕ್ವಾಂಡೋ ವಿದ್ಯೆ ರೂಢಿಸಿಕೊಂಡಿರುವ ಮಾನ್ಯ ಕಲೆ-ಸಾಹಿತ್ಯ-ಕ್ರೀಡೆಗಳಲ್ಲಿ ಮುಂಚೂಣಿಯಲ್ಲಿದ್ದಾಳೆ.

ಇಷ್ಪಕ್ಕೇ ನಿಲ್ಲದೆ ಮಾನ್ಯಾಳ ಪುಸ್ತಕ ಪ್ರೀತಿ, ಈಗ ಈಕೆ ಕನ್ನಡದಲ್ಲಿ ರಚಿಸಿರುವ ಕವನ ಹಾಗೂ ಕಥೆಗಳ ಗುಚ್ಛವನ್ನು ಮುದ್ರಿಸುವ ತವಕದಲ್ಲಿದ್ದಾಳೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version