Connect with us

ಲೈಫ್ ಸ್ಟೈಲ್

ಮದುವೆ ಎಂದರೆ ಹೆಣ್ಣು-ಗಂಡಿನ ದೈಹಿಕ ಸುಖವಲ್ಲ ಅದು ಕುಟುಂಬ ಕುಟುಂಬಗಳ ಮನಸ್ಸಿನ ಸಂಬಂಧ

Published

on

  • ಶಿವಾನಂದ ಕಲಬುರಗಿ

ರಸ ಜನನ ವಿರಸ ಮರಣ ಸಮರಸವೇ ಜೀವನ ಬೇಂದ್ರೆಯವರ ದಿವ್ಯ ವಾಣಿಯಂತೆ ಬದುಕಬೇಕೆಂದರೆ ಮನೆಯೇ ಮೊದಲ ಪಾಠಶಾಲೆ ಆಗಬೇಕು. ತಾಯಿಯೇ ಮೊದಲ ಗುರು ಆಗಬೇಕಾಗಿದೆ. ನೂಲಿನಂತೆ ಸೀರೆ ತಾಯಿಯಂತೆ ಮಗಳು ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಸುಳ್ಳಿಗೆ ಸುಖವಿಲ್ಲ ಸತ್ಯಕ್ಕೆ ಸಾವಿಲ್ಲ.

ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡಿಸು. ಎಂಬ ಗಾದೆ ಮಾತಿನಂತೆ ಮದುವೆ ಎಂಬುದು ಗಂಡು ಹೆಣ್ಣಿನ ದೈಹಿಕ ಸುಖವಲ್ಲ ಕುಟುಂಬ ಕುಟುಂಬಗಳ ನಡುವಿನ ಮನಸ್ಸಿನ ಸಂಬಂಧ. ಮದುವೆ ಏಳೇಳು ಜನ್ಮದ ಅನುಬಂಧ ಹೆಣ್ಣಿಗೊಂದು ಗಂಡು ಗಂಡಿಗೊಂದು ಹೆಣ್ಣು ಪ್ರಪಂಚದ ಸೃಷ್ಟಿಯಲ್ಲಿ ಇದ್ದೇ ಇರುತ್ತದೆ. ಬಡವರ ಮನೆಯ ಹೆಣ್ಣು ತಂದುಕೊಳ್ಳಬೇಕು ಶ್ರೀಮಂತರ ಮನೆಗೆ ಹೆಣ್ಣು ಕೊಡಬೇಕು. ಇದು ಲೋಕ ರೂಢಿಯ ಸಿದ್ಧಾಂತ.

ಋಣಾನುಬಂಧದ ಸಂಬಂಧ ಕೂಡಿಬಂದಾಗ ಮದುವೆಯೆಂಬ ಶುಭಕಾರ್ಯ ನೆರವೇರುತ್ತದೆ. ಮದುವೆಯಾದ ನವದಂಪತಿಗಳು ಪರಸ್ಪರ ಸ್ನೇಹಭಾವದಿಂದ ಅರಿತು ಬಾಳಬೇಕು. ಯಾರು ಹೆಚ್ಚಲ್ಲ ಯಾರು ಕಡಿಮೆಯೂ ಅಲ್ಲ ಗಂಡನಾದವನು ತನ್ನ ಹೆಂಡತಿಯಲ್ಲಿ ತನ್ನ ಸೋದರಿಯರ ಪ್ರೀತಿ ಕಾಣಬೇಕು. ಹೆಂಡತಿಯಾದವಳು ತನ್ನ ಗಂಡನಲ್ಲಿ ಸಹೋದರನ ಪ್ರೀತಿ ಕಾಣಬೇಕು. ಸೊಸೆಯಾದವಳು ತನ್ನ ಅತ್ತೆಯಲ್ಲಿ ತನ್ನ ತಾಯಿಯ ಪ್ರೀತಿ ಕಾಣಬೇಕು. ಅತ್ತೆಯಾದವಳು ತನ್ನ ಸೊಸೆಯಲ್ಲಿ ತನ್ನ ಮಗಳ ಪ್ರೀತಿ ಕಾಣಬೇಕು. ಅತ್ತೆಗೊಂದು ಕಾಲ ಸೊಸೆಗೊಂದು ಕಾಲ. ಕಾಲಾಯ ತಸ್ಮೈ ನಮಃ ಎಂಬ ಮಾತಿನೊಂದಿಗೆ ಅರ್ಥಪೂರ್ಣವಾಗಿ ಬಾಳಬೇಕು.

ಗಂಡ-ಹೆಂಡತಿ ಇಬ್ಬರೂ ಒಂದು ನಾಣ್ಯದ ಎರಡು ಮುಖಗಳಂತೆ. ಎರಡರಲ್ಲಿ ಒಂದು ಇಲ್ಲದಿದ್ದರೂ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತದೆ. ಹೆಣ್ಣು ಜಗದ ಕಣ್ಣು ಎಂದು ಬಿಂಬಿಸಲಾಗುತ್ತದೆ. ನಿಸರ್ಗದ ಶಕ್ತಿಯ ಜೊತೆಗೆ ಹೆಣ್ಣನ್ನು ಹೋಲಿಸುತ್ತೇವೆ. ಜನನ ಮತ್ತು ಮರಣಕ್ಕೂ ನಿಸರ್ಗವೇ ಹೇಗೆ ಕಾರಣವೋ ಹಾಗೆಯೇ ಹೆಣ್ಣು ಕೂಡ ಜನನ ಮರಣದ ನಡುವಿನ ವಿಸ್ಮಯ ಶಕ್ತಿ.

ಹೆಣ್ಣು ವಂಶವನ್ನು ಉದ್ಧಾರ ಮಾಡುವವಳು ಮನೆ ಬೆಳಗುವವಳು ಮನೆಯ ಮಹಾಲಕ್ಷ್ಮಿ ಸೌಭಾಗ್ಯವತಿ ಸುಕಾಂತೆ ಸಕಲ ಸಂಪನ್ನದಾತೆ ಮನೆ ಬೆಳಗುವ ನಂದದೀಪ ಎಂದು ಹೀಗೆ ನಾನಾ ರೀತಿಯಲ್ಲಿ ಅವಳನ್ನು ನಾಮಪದಿಂದ ಗುಣವಾಚಕವಾಗಿ ಪರಿವರ್ತಿಸಿ ಗೌರವಿಸಲಾಗಿದೆ. ಆದರೆ ಈ ಮೇಲಿನ ಎಲ್ಲಾ ಗುಣಗಾನವು ಎಲ್ಲಾ ಹೆಣ್ಣಿನಲ್ಲಿ ಸಾಧಾರಣವಾಗಿ ಕಂಡುಕೊಳ್ಳಲು ಕಷ್ಟಸಾಧ್ಯ. ಸಮಾಜದಲ್ಲಿನ ಬಹುತೇಕ ಸಂಸಾರಗಳಲ್ಲಿ ಗಂಡು-ಹೆಣ್ಣಿನ ಮಧ್ಯೆ ಹೊಂದಾಣಿಕೆ ಇಲ್ಲದೆ ಪವಿತ್ರವಾದ ಮದುವೆಯೆಂಬ ಸಂಬಂಧ ಕ್ಷಣಾರ್ಧದಲ್ಲಿ
ಕಡ್ಡಿ ಮುರಿದಂತೆ ಮುರಿದು ಬೀಳುತ್ತವೆ.

ಇದಕ್ಕೆಲ್ಲ ಕಾರಣ ಗಂಡ-ಹೆಂಡತಿಯರ ಮಧ್ಯ ಹೊಂದಾಣಿಕೆಯ ಎಂಬ ಆತ್ಮವಿಶ್ವಾಸ ಕೊರತೆಯಿಂದ. ನಾವು ಬಳಸುವ ಭಾಷೆ ಇತರರ ಹೃದಯವನ್ನು ಕಲಕಬೇಕು. ಮಾತು ಮೃತ್ಯುವಾಗದೆ ಮೃದುವಾಗಿ ಮನಸ್ಸಿಗೆ ನೆಮ್ಮದಿಯನ್ನು ನೀಡುವಂತಿರಬೇಕು. ಕಪಟತನ ಮೋಸ ವಂಚನೆ ಸುಳ್ಳು ತಮ್ಮ ಆಭರಣವನ್ನಾಗಿ ಮಾಡಿಕೊಂಡು ಮಾತನಾಡುವ ಅಹಂಕಾರಿಗಳು ಸಮಾಜದಲ್ಲಿ ಬೇಕಾದಷ್ಟು ಸಂಖ್ಯೆಯಲ್ಲಿದ್ದಾರೆ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೆ ಹೋಯಿತು. ಆದ್ದರಿಂದ ಅರಿತು ನಡೆಯಬೇಕು ಮರೆತು ನಡೆಯಬಾರದು. ಅರಿವೇ ಗುರು ವಾಗುತ್ತದೆ ಮರುವು ಶಿಕ್ಷೆಯಾಗುತ್ತದೆ.

ನಾವು ನಡೆದು ಬಂದ ಹಾದಿ ಎಂದೆಂದಿಗೂ ಮರೆಯಬಾರದು. ಜೀವನದಲ್ಲಿ ಕಷ್ಟ ಸುಖಗಳನ್ನು ಸಮಾನವಾಗಿ ಸವಿಯಬೇಕು. ನಾನು ನನ್ನದು ನನ್ನಿಂದಲೇ ಎಂಬ ಅಹಂಕಾರ ನಮ್ಮ ವ್ಯಕ್ತಿತ್ವವನ್ನೇ ನಾಶಮಾಡುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಬಹಳ ಮುಖ್ಯವಾಗುತ್ತದೆ. ಸಮಾಜದಲ್ಲಿ ಅಲ್ಪಸುಖಿಗಳು ಸಾಮಾನ್ಯವಾಗಿ ಕಾಣುತ್ತೇವೆ. ಒಂದು ದಿನದ ಗಂಜಿ ಕಾಣದ ಅದೆಷ್ಟೋ ಕುಟುಂಬಗಳಿಗೆ ತದನಂತರ ಬಂದ ಶ್ರೀಮಂತಿಕೆಯಿಂದ ತಮ್ಮ ಇಂದಿನ ಆದಿಯನ್ನು ಮರೆತುಬಿಡುತ್ತಾರೆ. ಹೇಳೋದು ಅದಕ್ಕಾಗಿಯೇ ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದನಂತೆ. ಶ್ರೀಮಂತಿಕೆ ನೆತ್ತಿಗೇರಿದಾಗ ಬಸವನ ಹಾಲಿನಿಂದ ಕುಂಡಿ ತೊಳೆದನಂತೆ. ಬಡತನ ಸಿರಿತನ ಗೋಡೆ ಮೇಲಿನ ನೆರಳಿನಂತೆ.

ಒಂದು ತುತ್ತು ಅನ್ನ ಸಿಕ್ಕರೆ ತೊಡೆಯ ಮರೆಮಾಡಿ ಉಣ್ಣಬೇಕು ಎಂಬ ಅನುಭವದ ಮಾತು ನಮ್ಮ ಹಿರಿಯರು ನಮಗೆ ನಿರ್ದೇಶನ ಮಾಡಿದ್ದಾರೆ. ನಮ್ಮ ದೇಹವೆಂಬುದು ತುಂಬಿದ ಬಂಡಿಯಂತೆ ನಮ್ಮ ಕಾಲುಗಳು ಚಕ್ರದಂತೆ ನಡೆಯುವಾಗ ಜಾಗೃತಿಯಿಂದ ಹೆಜ್ಜೆ ಇಡಬೇಕು . ನಮ್ಮ ಪಂಚೇಂದ್ರಿಯಗಳು ಚಂಚಲಕ್ಕೆ ಸಿಕ್ಕಿಕೊಳ್ಳದಂತೆ ಹತೋಟಿಯಲ್ಲಿ ಹಿಡಿದುಕೊಳ್ಳುವುದೇ ಸಾಧನೆ. ಪ್ರತಿಯೊಬ್ಬ ಮನುಷ್ಯನು ತಮ್ಮ ಆತ್ಮ ಅವಲೋಕನದಿಂದ ಬದುಕಬೇಕು. ವಿಚಾರಾತ್ಮಕವು ಮತ್ತು ವಿಮರ್ಶಾತ್ಮಕವೂ ನಮ್ಮ ಸತ್ಯಾ ಅನ್ವೇಷಣೆಯ ಪಥದಲ್ಲಿ ಸಾಗುವಂತೆ ನೋಡಿಕೊಳ್ಳಬೇಕು.

ಮನುಷ್ಯ ಧರ್ಮ ದಲ್ಲಿ ಪಾಲಿಸಬೇಕಾದ ಬಹುದೊಡ್ಡ ಧರ್ಮ ಎಂದರೆ ಹಸಿದವನಿಗೆ ಅನ್ನ ನೀಡುವುದು, ಸೋತವನಿಗೆ ಸ್ಫೂರ್ತಿ ನೀಡಿ ಗೆಲುವಿನ ಕನಸುಗಳನ್ನು ಬಿತ್ತುವುದು, ಕಷ್ಟದಲ್ಲಿದ್ದವರಿಗೆ ಕೈಲಾದ ಸಹಾಯ ಮಾಡುವುದು. ಪರೋಪಕಾರಿಯಾಗಿ ಬದುಕುವುದು , ಮನುಷ್ಯರನ್ನು ಮನುಷ್ಯರೇ ಪ್ರೀತಿಸುವದೇ ಮನುಷ್ಯನ ಒಳಮರ್ಮ. ಪ್ರತಿಯೊಬ್ಬರೂ ತಮ್ಮ ಕಾಯಕದಲ್ಲಿ ಪ್ರಾಮಾಣಿಕತೆ ಸದಾಚಾರ ಹೊಂದಿರುವುದೇ ಧರ್ಮ. ನೀ ದೇವನಾದರೆ ಎನ್ನನೇಕೆ ಸಲಹೇ ಎಂದು ಅಲ್ಲಮ ದೇವರನ್ನು ಪ್ರಶ್ನಿಸುತ್ತಾನೆ. ನಮ್ಮ ಆತ್ಮವೇ ಪರಮಾತ್ಮ ನಮ್ಮ ಸದಾಚಾರವೇ ಸಕಲ ಸೌಭಾಗ್ಯ ನಮ್ಮ ಮಾತುಗಳಿಗೆ ಸತ್ಯವೇ ಸದಾ ಭೂಷಣ ಸತ್ಯವನ್ನು ನುಡಿಯುವುದು. ಸತ್ಯ ಮತ್ತು ಸುಳ್ಳು ಮನುಷ್ಯನ ವ್ಯಕ್ತಿತ್ವವನ್ನು ಅನಾವರಣಮಾಡುತ್ತವೆ. ಮದುವೆಯೆಂಬುದು ಗಂಡು-ಹೆಣ್ಣುಗಳ ಭಾವ ಸಂಬಂಧದಲ್ಲಿ ಲೀನವಾಗುವುದು.

ಸಾಮಾನ್ಯವಾಗಿ ಪ್ರತಿಯೊಂದು ಹೆಣ್ಣು ತಾನು ಮದುವೆಯಾದ ಗಂಡನೊಂದಿಗೆ ಸಂತೋಷದಿಂದ ಇರಬೇಕೆಂದರೆ ಇಬ್ಬರು ಕುಳಿತು ಆಲೋಚಿಸಿ ಪರಸ್ಪರ ಒಬ್ಬರನ್ನೊಬ್ಬರು ಆತ್ಮಸಾಕ್ಷಿಯಾಗಿ ಅರ್ಥಮಾಡಿಕೊಳ್ಳುವುದರಲ್ಲಿ ಸಂತೋಷವನ್ನು ಕಾಣಬೇಕು . ಹೆಣ್ಣಿಗೆ ಗಂಡನ ಶಾಶ್ವತ ಡಾಕ್ಟರ್ ರಾಜ್ ಅವರ ಒಂದು ಹಾಡು ನೆನಪಿಸುತ್ತಾ
ಬಂದು ಕೊಡಿಸೋ ಸೀರೆ ಬಣ್ಣ ಹೋಗುವವರಿಗೆ ತಂದೆ ಕೊಡಿಸೋ ಸೀರೆ ಮದುವೆಯಾಗುವವರೆಗೆ ತಾಯಿ ಕೊಡಿಸುವ ಸೀರೆ ತಾಯಿ ಆಗುವವರೆಗೆ ಗಂಡ ಕೊಡಿಸುವ ಸೀರೆ ಹೆಣ್ಣಿನ ಕುಂಕುಮ ಇರುವವರೆಗೆ ಮಣ್ಣಿನ ಮಮತೆ ಇರುವವರೆಗೂ. ಕೊಟ್ಟ ಹೆಣ್ಣು ಕುಲದ ಹೊರಗು.

ಎಷ್ಟೇ ಪ್ರೀತಿ ಪ್ರೇಮ ವಿಶ್ವಾಸ ಅನನ್ಯತೆಯಿಂದ ಇದ್ದರೂ ಗಂಡ-ಹೆಂಡತಿಯರ ಮಧ್ಯೆ ಒಂದಿಲ್ಲ ಒಂದು ಕಾರಣಕ್ಕೆ ಆಗಾಗ ಸಂಸಾರದಲ್ಲಿ ಜಂಜಾಟಗಳು ಗಲಾಟೆ ಗದ್ದಲಗಳು ಜಗಳಗಳು ಸರ್ವೇ ಸಾಮಾನ್ಯ. ತಮ್ಮಿಬ್ಬರ ಮಧ್ಯೆ ಆದ ಕ್ಷಣಿಕದ ಕಲಹ ತನ್ನ ತವರುಮನೆಗೆ ಎಂದು ದೂರು ನೀಡಬಾರದು. ಗಂಡ ಹೆಂಡರ ಜಗಳ ಗಂಧ ತೀಡಿದಂಗ.

ಗಂಡ ಹೆಂಡರ ಜಗಳ ಉಂಡು ಮಲಗುವತನಕ ಗಂಡ ಹೆಂಡರ ಜಗಳ ಕುಂಡಿ ತಿರುಗುವತನಕ ಅಂತಹ ಪವಿತ್ರವಾದ ತಮ್ಮ ಸಂಬಂಧವನ್ನು ತಾವೇ ಹಾಳು ಮಾಡಿಕೊಳ್ಳುತ್ತಾರೆ. ಚಾಡಿ ಹೇಳಿ ಸಂಸಾರ ಕೆಡಿಸಿಕೊಳ್ಳಬಾರದು. ಕನಕದಾಸರು ಹೇಳುತ್ತಾರೆ. ತಾಯಿ-ತಂದೆ ಇರುವವರೆಗೂ ತವರುಮನೆ. ತಂದೆ ತಾಯಿ ಇಲ್ಲದ ತವರು ಮನೆ ನೀರಿಲ್ಲದ ಕೆರೆಗೆ ಕರು ನೀರಿಗಾಗಿ ಧಾವಿಸಿ ಬಂದಂತೆ. ತಾಯಿ ಇದ್ದರೆ ತವರೆಚ್ಚು ತಂದೆ ಇದ್ದರೆ ಬಳಗ ಹೆಚ್ಚು ಸಾವಿರದಾಗೆಚ್ಚು ಪತಿ ಪುರುಷ. ಗಂಜಿಯ ಕುಡಿದರೂ ಗಂಡನ ಮನೆ ಲೇಸು ಅಂಗಿನ ಬಾನ ತವರೂರು.

ಆಸರಿಕೆ ಬ್ಯಾಸರಿಕೆ ಕಳಿಲ್ಯಾಕಂತ ತವರು ಮನೆಗೆ ಹೋದರೆ ಒಮ್ಮನದ ಜೋಳ ಒಳ್ಮುಂದೆ ಇಟ್ಟರಾ ಅಣ್ಣನ ಮಡದಿಯರು. ಹೆಣ್ಣಿಗೆ ತವರು ಸ್ಥಿರವಲ್ಲ ಕಟ್ಟಿದ ಬುತ್ತಿ ಹೊಟ್ಟಿದ ಬಣವೆ ಶಾಶ್ವತವಲ್ಲ. ಸತಿ-ಪತಿಗಳ ಇಬ್ಬರು ಸಂಸಾರದಲ್ಲಿ ಹಾಲು ಸಕ್ಕರೆಯಂತೆ ಕೂಡಿಬಾಳಿದರೆ ಬದುಕೆ ಒಂದು ನಂದನವನ. ಸತಿಪತಿಗಳಲ್ಲಿ ಒಂದಾಗದ ಭಕ್ತಿ ಹಿತವಪ್ಪುದು ಶಿವಂಗೆ . ಆ ಶಿವನೇ ಅರ್ಧನಾರೇಶ್ವರ ಸತಿ-ಪತಿಯರ ಧರ್ಮ ಎಲ್ಲಾ ಧರ್ಮಗಳಿಗಿಂತಲೂ ಅತ್ಯಂತ ಶ್ರೇಷ್ಠ ಧರ್ಮ. ಹೆಣ್ಣಿಗೆ ಪತಿಯೇ ಪರದೈವ ಗಂಡ ಎಂಬ ದೈವಶಕ್ತಿ ಪತಿವ್ರತೆ ಅನುಸೂಯೆ ತನ್ನ ಪತಿಯ ಪಾದ ಪೂಜದ ನೀರಿನಿಂದ ಪವಾಡ ಮೆರೆದಿದ್ದಾಳೆ. ಪಾರ್ವತಿ ಲಕ್ಷ್ಮಿ ಸರಸ್ವತಿ ಲೋಕಕ್ಕೆ ಮೂರು ಜನ ಪತಿವ್ರತೆಯರು ಎಂದು ತಮಗೆ ತಾವೇ ಬಿರುದು ತಂದುಕೊಂಡಿದ್ದರು.

ತಮಗಿಂತಲೂ ಅನುಸೂಯೆ ಪತಿವ್ರತೆ ಎಂದು ವರ್ತಮಾನ ತಿಳಿದು. ಮೂವರು ತಲೆಗೆ ಬಟ್ಟೆ ಕಟ್ಟಿಕೊಂಡು ತಮ್ಮ ಗಂಡಂದಿರು ಬರುವುದರಲ್ಲಿ ಮಂಚದ ಮೇಲೆ ಬಿಮ್ಮನೆ ಮಲಗಿದ್ದರು. ಸತಿಯರ ಮಲಗಿದ್ದ ಕಾರಣ ಕೇಳಿದ ಬ್ರಹ್ಮ ವಿಷ್ಣು ಮಹೇಶ್ವರರು ದಿಗ್ಭ್ರಾಂತರಾಗುತ್ತಾರೆ. ಮೂರು ಜನ ತಮ್ಮ ಗಂಡಂದಿರಿಗೆ ಚಾಡಿ ಹೇಳುತ್ತಾರೆ. ಲೋಕಕ್ಕೆ ದೊಡ್ಡವರಾದ ನೀವು ನಮಗಾದ ಅಪಮಾನವನ್ನು ಸರಿಪಡಿಸಬೇಕು. ಕೂಡಲೇ ಅನುಸೂಯೆಯ ಅರಮನೆಗೆ ಹೋಗಿ ಅವಳ ಪತಿವ್ರತೆಯನ್ನು ಪರೀಕ್ಷಿಸಬೇಕು ಎಂದು ಸವಾಲು ಹಾಕುತ್ತಾರೆ. ಹೆಂಡತಿಯರ ಮಾತು ಕೇಳಿದ ಬ್ರಹ್ಮ ವಿಷ್ಣು ಮಹೇಶ್ವರರು ಮಾರುವೇಷ ತೊಟ್ಟು ಋಷಿಮುನಿಗಳಾಗಿ ಅನುಸೂಯೆ ಅರಮನೆಯ ಬಾಗಿಲ ಮುಂದೆ ನಿಂತು ಭವತಿ ಭಿಕ್ಷಾಂದೇಹಿ ಎಂದು ಕೂಗುತ್ತಾರೆ. ಅರಮನೆಯ ಒಳಗೆ ಪತಿಯ ಸೇವೆ ಮಾಡುತ್ತಿದ್ದ ಅನುಸೂಯೆ ಹೊರಬಂದು ಸ್ವಾಮಿ ವೇಷಧರಿಸಿದ ಪೂಜ್ಯರನ್ನು ನೋಡಿ ಸಂತೋಷ ಪಡುತ್ತಾಳೆ. ಕೈ ಕಾಲು ತೊಳೆದುಕೊಳ್ಳಲು ಮೀಸಲು ನೀರು ತಂದು ನೀಡಿದಳು. ಒಳಗೆ ರತ್ನಗಂಬಳಿಯ ಗದ್ದಿಗೆ ಹಾಸಿ ಒಳಗೆ ಬನ್ನಿ ಎಂದು ವಿನಂತಿಸಿದಳು.

ಅವಳಲ್ಲಿನ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಎಲ್ಲ ವರ್ತಮಾನ ತನ್ನ ಪತಿರಾಯನಿಗೆ ಹೇಳಿದಳು. ಬಂದಂತಹ ಸ್ವಾಮಿಗಳಲ್ಲಿ ಒಬ್ಬರು ನಮಗೆ ಹಸಿವಾಗಿದೆ ಊಟ ಬಡಿಸು ಎಂದು ಬೇಡಿಕೊಳ್ಳುತ್ತಾರೆ. ಗುರುಗಳ ಆಸೆಯನ್ನು ಪೂರೈಸುವ ಹುಮ್ಮಸ್ಸಿನಲ್ಲಿ ತಮಗೇನು ಊಟಬೇಕು ಹೇಳಿದರೆ ಭಕ್ತಿಯಿಂದ ಮಾಡುತ್ತೇನೆ . ತಾವು ಸಂತೃಪ್ತಿಯಿಂದ ಹಾರೈಸಬೇಕು . ನಮಗೆ ಬೇಕಾದ ಆಹಾರವನ್ನು ಸಿದ್ದ ಪಡಿಸಬಲ್ಲೆಯಾ ಎಂದು ಅಪಹಾಸ್ಯ ಮಾಡುತ್ತಾರೆ. ತಮಗೇನು ಬೇಕು ಮಹಾಪ್ರಭು ತಾವು ಆಸೆಪಟ್ಟದನ್ನೆ ಮಾಡಿ ಬಡಿಸುತ್ತೇನೆ ಎಂದು ಒಪ್ಪಿಕೊಳ್ಳುತ್ತಾಳೆ.

ಹಾಗಾದರೆ ಉಸುಕಿನ ಉಸುಳಿ ಬಸಿಯಬೇಕು ಎಂದು ಹೇಳುತ್ತಾರೆ. ಆಗಲಿ ಎಂದು ಅಡುಗೆ ಮನೆಯವ ಒಳಗೆ ಬಂದು ನೀರು ಕಾಯಿಸಲು ಹಿಟ್ಟು ಬೊಗಸೆ ಮರಳನ್ನು ತಂದು ಪಾತ್ರೆಯಲ್ಲಿ ಹಾಕುತ್ತಾಳೆ. ಆಮೇಲೆ ಗಂಡನ ಪಾದ ಪೂಜೆಯ ಧೂಳಿನ ನೀರು ಅಡುಗೆ ಮಾಡಿದ ಪಾತ್ರೆಯ ಮೇಲೆ ಸಿಂಪಡಿಸಿದಾಗ ಪಾಯಸವಾಗುತ್ತದೆ. ಹೊಟ್ಟೆ ತುಂಬ ಊಟ ಮಾಡಿದ ಋಷಿಮುನಿಗಳು ಹಲಗೆ ತೊಟ್ಟಿಲಲ್ಲಿ ಮಲಗುವ ಇಂಗಿತವನ್ನು ವ್ಯಕ್ತಪಡಿಸುತ್ತಾರೆ. ಅವರ ಆಸೆಯಂತೆ ಹಲಗೆ ತೊಟ್ಟಿಲಿನಲ್ಲಿ ಹಾಸಿಗೆ ಹಾಸಿ ಮಲಗಲು ವಿನಂತಿಸಿದಾಗ ಅಪಹಾಸ್ಯ ಮಾಡುತ್ತಾರೆ.

ಗಂಡನ ಪಾದ ಪೂಜೆದ ಧೂಳಿನ ನೀರು ಮೂವರು ಋಷಿಗಳ ಮೇಲೆ ಸಿಂಪಡಿಸಿದಾಗ ವರ್ಷದ ಕೂಸುಗಳಾಗಿ ಬದಲಾಗುತ್ತಾರೆ. ಅಂತ ಅಗಾಧವಾದ ಶಕ್ತಿ ಗಂಡ-ಹೆಂಡತಿಯರಲ್ಲಿ ಅಡಗಿದೆ.
ದಿನಪೂರ್ತಿ ತಮ್ಮ ಗಂಡಂದಿರು ಬರುವ ಹಾದಿಯನ್ನೇ ಕಾಯುತ್ತಾರೆ. ಭಯಗೊಂಡು ಸರಸ್ವತಿ ಪಾರ್ವತಿ ಲಕ್ಷ್ಮಿಯವರು ಮಾರುವೇಷ ಧರಿಸಿ ಭವತಿ ಭಿಕ್ಷಾಂದೇಹಿ ಎಂದು ಅನುಸೂಯೆ ಅವರ ಮನೆಗೆ ಬರುತ್ತಾರೆ. ಅವರನ್ನು ಪ್ರೀತಿಯಿಂದ ಸ್ವಾಗತಿಸಿದ ಅನುಷಾದೇವಿಗೆ ಅಪಹಾಸ್ಯದ ಮಾತುಗಳಿಂದ ನಾವು ಕುಂದ್ರಲೂ ನಿಂದ್ರಲೂ ಬಂದಿಲ್ಲ ನಮ್ಮ ಗಂಡಂದಿರನ್ನು ಹುಡುಕಿಕೊಂಡು ಬಂದಿದ್ದೇವೆ. ಅವರನ್ನು ನಮಗೆ ಒಪ್ಪಿಸು ಎಂದು ವಿನಂತಿಸುತ್ತಾರೆ.

ಅದಕ್ಕೆ ಪತಿವ್ರತೆಯರಾದ ನೀವು ನಿಮ್ಮ ನಿಮ್ಮ ಗಂಡಂದಿರನ್ನು ನೀವೇ ಕರೆದುಕೊಂಡು ಹೋಗಿ ಎಂದು ಅಲಗಿ ತೊಟ್ಟಿಲಲ್ಲಿ ಮಲಗಿದ್ದ ಕೂಸುಗಳನ್ನು ತೋರಿಸುತ್ತಾಳೆ. ಬ್ರಹ್ಮ ವಿಷ್ಣು ಮಹೇಶ್ವರರು ಒಂದು ವರ್ಷದ ಮಕ್ಕಳಾಗಿ ಒಂದೇ ಮುಖದ ಒಂದೇ ಉಡುಗೆ ತೊಟ್ಟು ಮಲಗಿರುವುದನ್ನು ನೋಡಿ ಸರಸ್ವತಿ ಪಾರ್ವತಿ ಲಕ್ಷ್ಮಿಯವರು ಲೋಕಕ್ಕೆ ನೀನೇ ಮಹಾಪತಿವ್ರತೆ ಎಂದು ಅನುಷಾದೇವಿಯವರ ಕಾಲಿಗೆ ಎರಗುತ್ತಾರೆ. ತಮ್ಮಲ್ಲಿರುವ ಅಹಂಕಾರದ ಬುದ್ಧಿ ಅರಿವಾಗಿ ಅನುಷಾದೇವಿಯವರಿಗೆ ಶರಣಾಗುತ್ತಾರೆ. ಮತ್ತೊಂದು ಉದಾಹರಣೆ ಎಂದರೆ ಜಮದಗ್ನಿಯ ರೂಪ ಸೌಂದರ್ಯಕ್ಕೆ ಮರುಳಾದ ರೇಣುಕಾದೇವಿ ಜಮದಗ್ನಿ ಋಷಿಯನ್ನು ಮದುವೆಯಾಗಲು ಅಪೇಕ್ಷೆ ಪಡುತ್ತಾರೆ.

ಜಮದಗ್ನಿ ಮಹಾಋಷಿಗಳು ಬೇಡ ಎಂದು ಹೇಳಿದರು ಕೇಳದ ರೇಣುಕಾ ಮದುವೆಯಾಗುತ್ತಾರೆ. ಗಂಡನ ಪೂಜೆಗೆ ಮೀಸಲು ನೀರು ತರಲು ಉಸುಕಿನ ಕೊಡವ ಮಾಡಿ ಹಾವಿನ ಸಿಂಬಿ ಮಾಡಿ ನದಿಯ ನೀರಿಗೆ ಹೋಗಿ ಬಿಂದಿಗೆಯಲ್ಲಿ ನೀರು ತುಂಬಿಕೊಂಡು ಬರುವಾಗ ಒಬ್ಬ ಪುರುಷನನ್ನು ನೋಡಿ ಕಾಮೋದ್ರೇಕದ ಭಾವನೆಯ ಮೂಡಿದಾಗ ಪರ ಪುರುಷರನ್ನು ನೋಡಿದ ಶಾಪಕ್ಕೆ ಬಲಿಯಾಗುತ್ತಾಳೆ. ಹಾವಿನ ಸಿಂಬೆ ಹರಿದುಹೋಗುತ್ತದೆ ಮರಳಿನ ಬಿಂದಿಗೆ ಹೊಡೆದು ಹೋಗುತ್ತದೆ.

ಜಮದಗ್ನಿಯ ಕೋಪಕ್ಕೆ ಗುರಿಯಾಗುತ್ತಾಳೆ. ರೇಣುಕಾ ದೇವಿಗೆ ಜಮದಗ್ನಿ ಶಾಪ ಕೊಡುತ್ತಾರೆ. ಶಾಪ ವಿಮೋಚನೆಗಾಗಿ ರೇಣುಕರಾಜ ಜಮದಗ್ನಿಯ ಋಷಿಯ ಪಾದದ ಪೂಜೆಯ ನೀರು ತಂದು ಕುಷ್ಟರೋಗದಿಂದ ಬಳಲುತ್ತಿರುವ ರೇಣುಕಾದೇವಿಯ ಮೈಮೇಲೆ ಸಿಂಪಡಿಸಿದಾಗ ರೋಗದಿಂದ ಗುಣಮುಖಳಾದ ಘಟನೆಗಳು ಪುರಾಣಗಳಲ್ಲಿ ನೋಡುತ್ತೇವೆ.
ಇಂತಹ ಪವಿತ್ರವಾದ ಪತಿಯ ಮತ್ತು ಸತಿಯ ಶಕ್ತಿಯನ್ನು ಅರ್ಥಮಾಡಿಕೊಂಡು ಬಾಳಿದರೆ ಬದುಕು ಬಂಗಾರವಾಗಿ ಸಮಾಜದಲ್ಲಿ ಇತರರಿಗೆ ಮಾದರಿಯಾಗಿ ಬದುಕಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending