ಲೈಫ್ ಸ್ಟೈಲ್
ಮದುವೆ ಎಂದರೆ ಹೆಣ್ಣು-ಗಂಡಿನ ದೈಹಿಕ ಸುಖವಲ್ಲ ಅದು ಕುಟುಂಬ ಕುಟುಂಬಗಳ ಮನಸ್ಸಿನ ಸಂಬಂಧ

- ಶಿವಾನಂದ ಕಲಬುರಗಿ
ಸರಸ ಜನನ ವಿರಸ ಮರಣ ಸಮರಸವೇ ಜೀವನ ಬೇಂದ್ರೆಯವರ ದಿವ್ಯ ವಾಣಿಯಂತೆ ಬದುಕಬೇಕೆಂದರೆ ಮನೆಯೇ ಮೊದಲ ಪಾಠಶಾಲೆ ಆಗಬೇಕು. ತಾಯಿಯೇ ಮೊದಲ ಗುರು ಆಗಬೇಕಾಗಿದೆ. ನೂಲಿನಂತೆ ಸೀರೆ ತಾಯಿಯಂತೆ ಮಗಳು ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಸುಳ್ಳಿಗೆ ಸುಖವಿಲ್ಲ ಸತ್ಯಕ್ಕೆ ಸಾವಿಲ್ಲ.
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡಿಸು. ಎಂಬ ಗಾದೆ ಮಾತಿನಂತೆ ಮದುವೆ ಎಂಬುದು ಗಂಡು ಹೆಣ್ಣಿನ ದೈಹಿಕ ಸುಖವಲ್ಲ ಕುಟುಂಬ ಕುಟುಂಬಗಳ ನಡುವಿನ ಮನಸ್ಸಿನ ಸಂಬಂಧ. ಮದುವೆ ಏಳೇಳು ಜನ್ಮದ ಅನುಬಂಧ ಹೆಣ್ಣಿಗೊಂದು ಗಂಡು ಗಂಡಿಗೊಂದು ಹೆಣ್ಣು ಪ್ರಪಂಚದ ಸೃಷ್ಟಿಯಲ್ಲಿ ಇದ್ದೇ ಇರುತ್ತದೆ. ಬಡವರ ಮನೆಯ ಹೆಣ್ಣು ತಂದುಕೊಳ್ಳಬೇಕು ಶ್ರೀಮಂತರ ಮನೆಗೆ ಹೆಣ್ಣು ಕೊಡಬೇಕು. ಇದು ಲೋಕ ರೂಢಿಯ ಸಿದ್ಧಾಂತ.
ಋಣಾನುಬಂಧದ ಸಂಬಂಧ ಕೂಡಿಬಂದಾಗ ಮದುವೆಯೆಂಬ ಶುಭಕಾರ್ಯ ನೆರವೇರುತ್ತದೆ. ಮದುವೆಯಾದ ನವದಂಪತಿಗಳು ಪರಸ್ಪರ ಸ್ನೇಹಭಾವದಿಂದ ಅರಿತು ಬಾಳಬೇಕು. ಯಾರು ಹೆಚ್ಚಲ್ಲ ಯಾರು ಕಡಿಮೆಯೂ ಅಲ್ಲ ಗಂಡನಾದವನು ತನ್ನ ಹೆಂಡತಿಯಲ್ಲಿ ತನ್ನ ಸೋದರಿಯರ ಪ್ರೀತಿ ಕಾಣಬೇಕು. ಹೆಂಡತಿಯಾದವಳು ತನ್ನ ಗಂಡನಲ್ಲಿ ಸಹೋದರನ ಪ್ರೀತಿ ಕಾಣಬೇಕು. ಸೊಸೆಯಾದವಳು ತನ್ನ ಅತ್ತೆಯಲ್ಲಿ ತನ್ನ ತಾಯಿಯ ಪ್ರೀತಿ ಕಾಣಬೇಕು. ಅತ್ತೆಯಾದವಳು ತನ್ನ ಸೊಸೆಯಲ್ಲಿ ತನ್ನ ಮಗಳ ಪ್ರೀತಿ ಕಾಣಬೇಕು. ಅತ್ತೆಗೊಂದು ಕಾಲ ಸೊಸೆಗೊಂದು ಕಾಲ. ಕಾಲಾಯ ತಸ್ಮೈ ನಮಃ ಎಂಬ ಮಾತಿನೊಂದಿಗೆ ಅರ್ಥಪೂರ್ಣವಾಗಿ ಬಾಳಬೇಕು.
ಗಂಡ-ಹೆಂಡತಿ ಇಬ್ಬರೂ ಒಂದು ನಾಣ್ಯದ ಎರಡು ಮುಖಗಳಂತೆ. ಎರಡರಲ್ಲಿ ಒಂದು ಇಲ್ಲದಿದ್ದರೂ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತದೆ. ಹೆಣ್ಣು ಜಗದ ಕಣ್ಣು ಎಂದು ಬಿಂಬಿಸಲಾಗುತ್ತದೆ. ನಿಸರ್ಗದ ಶಕ್ತಿಯ ಜೊತೆಗೆ ಹೆಣ್ಣನ್ನು ಹೋಲಿಸುತ್ತೇವೆ. ಜನನ ಮತ್ತು ಮರಣಕ್ಕೂ ನಿಸರ್ಗವೇ ಹೇಗೆ ಕಾರಣವೋ ಹಾಗೆಯೇ ಹೆಣ್ಣು ಕೂಡ ಜನನ ಮರಣದ ನಡುವಿನ ವಿಸ್ಮಯ ಶಕ್ತಿ.
ಹೆಣ್ಣು ವಂಶವನ್ನು ಉದ್ಧಾರ ಮಾಡುವವಳು ಮನೆ ಬೆಳಗುವವಳು ಮನೆಯ ಮಹಾಲಕ್ಷ್ಮಿ ಸೌಭಾಗ್ಯವತಿ ಸುಕಾಂತೆ ಸಕಲ ಸಂಪನ್ನದಾತೆ ಮನೆ ಬೆಳಗುವ ನಂದದೀಪ ಎಂದು ಹೀಗೆ ನಾನಾ ರೀತಿಯಲ್ಲಿ ಅವಳನ್ನು ನಾಮಪದಿಂದ ಗುಣವಾಚಕವಾಗಿ ಪರಿವರ್ತಿಸಿ ಗೌರವಿಸಲಾಗಿದೆ. ಆದರೆ ಈ ಮೇಲಿನ ಎಲ್ಲಾ ಗುಣಗಾನವು ಎಲ್ಲಾ ಹೆಣ್ಣಿನಲ್ಲಿ ಸಾಧಾರಣವಾಗಿ ಕಂಡುಕೊಳ್ಳಲು ಕಷ್ಟಸಾಧ್ಯ. ಸಮಾಜದಲ್ಲಿನ ಬಹುತೇಕ ಸಂಸಾರಗಳಲ್ಲಿ ಗಂಡು-ಹೆಣ್ಣಿನ ಮಧ್ಯೆ ಹೊಂದಾಣಿಕೆ ಇಲ್ಲದೆ ಪವಿತ್ರವಾದ ಮದುವೆಯೆಂಬ ಸಂಬಂಧ ಕ್ಷಣಾರ್ಧದಲ್ಲಿ
ಕಡ್ಡಿ ಮುರಿದಂತೆ ಮುರಿದು ಬೀಳುತ್ತವೆ.
ಇದಕ್ಕೆಲ್ಲ ಕಾರಣ ಗಂಡ-ಹೆಂಡತಿಯರ ಮಧ್ಯ ಹೊಂದಾಣಿಕೆಯ ಎಂಬ ಆತ್ಮವಿಶ್ವಾಸ ಕೊರತೆಯಿಂದ. ನಾವು ಬಳಸುವ ಭಾಷೆ ಇತರರ ಹೃದಯವನ್ನು ಕಲಕಬೇಕು. ಮಾತು ಮೃತ್ಯುವಾಗದೆ ಮೃದುವಾಗಿ ಮನಸ್ಸಿಗೆ ನೆಮ್ಮದಿಯನ್ನು ನೀಡುವಂತಿರಬೇಕು. ಕಪಟತನ ಮೋಸ ವಂಚನೆ ಸುಳ್ಳು ತಮ್ಮ ಆಭರಣವನ್ನಾಗಿ ಮಾಡಿಕೊಂಡು ಮಾತನಾಡುವ ಅಹಂಕಾರಿಗಳು ಸಮಾಜದಲ್ಲಿ ಬೇಕಾದಷ್ಟು ಸಂಖ್ಯೆಯಲ್ಲಿದ್ದಾರೆ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೆ ಹೋಯಿತು. ಆದ್ದರಿಂದ ಅರಿತು ನಡೆಯಬೇಕು ಮರೆತು ನಡೆಯಬಾರದು. ಅರಿವೇ ಗುರು ವಾಗುತ್ತದೆ ಮರುವು ಶಿಕ್ಷೆಯಾಗುತ್ತದೆ.
ನಾವು ನಡೆದು ಬಂದ ಹಾದಿ ಎಂದೆಂದಿಗೂ ಮರೆಯಬಾರದು. ಜೀವನದಲ್ಲಿ ಕಷ್ಟ ಸುಖಗಳನ್ನು ಸಮಾನವಾಗಿ ಸವಿಯಬೇಕು. ನಾನು ನನ್ನದು ನನ್ನಿಂದಲೇ ಎಂಬ ಅಹಂಕಾರ ನಮ್ಮ ವ್ಯಕ್ತಿತ್ವವನ್ನೇ ನಾಶಮಾಡುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಬಹಳ ಮುಖ್ಯವಾಗುತ್ತದೆ. ಸಮಾಜದಲ್ಲಿ ಅಲ್ಪಸುಖಿಗಳು ಸಾಮಾನ್ಯವಾಗಿ ಕಾಣುತ್ತೇವೆ. ಒಂದು ದಿನದ ಗಂಜಿ ಕಾಣದ ಅದೆಷ್ಟೋ ಕುಟುಂಬಗಳಿಗೆ ತದನಂತರ ಬಂದ ಶ್ರೀಮಂತಿಕೆಯಿಂದ ತಮ್ಮ ಇಂದಿನ ಆದಿಯನ್ನು ಮರೆತುಬಿಡುತ್ತಾರೆ. ಹೇಳೋದು ಅದಕ್ಕಾಗಿಯೇ ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದನಂತೆ. ಶ್ರೀಮಂತಿಕೆ ನೆತ್ತಿಗೇರಿದಾಗ ಬಸವನ ಹಾಲಿನಿಂದ ಕುಂಡಿ ತೊಳೆದನಂತೆ. ಬಡತನ ಸಿರಿತನ ಗೋಡೆ ಮೇಲಿನ ನೆರಳಿನಂತೆ.
ಒಂದು ತುತ್ತು ಅನ್ನ ಸಿಕ್ಕರೆ ತೊಡೆಯ ಮರೆಮಾಡಿ ಉಣ್ಣಬೇಕು ಎಂಬ ಅನುಭವದ ಮಾತು ನಮ್ಮ ಹಿರಿಯರು ನಮಗೆ ನಿರ್ದೇಶನ ಮಾಡಿದ್ದಾರೆ. ನಮ್ಮ ದೇಹವೆಂಬುದು ತುಂಬಿದ ಬಂಡಿಯಂತೆ ನಮ್ಮ ಕಾಲುಗಳು ಚಕ್ರದಂತೆ ನಡೆಯುವಾಗ ಜಾಗೃತಿಯಿಂದ ಹೆಜ್ಜೆ ಇಡಬೇಕು . ನಮ್ಮ ಪಂಚೇಂದ್ರಿಯಗಳು ಚಂಚಲಕ್ಕೆ ಸಿಕ್ಕಿಕೊಳ್ಳದಂತೆ ಹತೋಟಿಯಲ್ಲಿ ಹಿಡಿದುಕೊಳ್ಳುವುದೇ ಸಾಧನೆ. ಪ್ರತಿಯೊಬ್ಬ ಮನುಷ್ಯನು ತಮ್ಮ ಆತ್ಮ ಅವಲೋಕನದಿಂದ ಬದುಕಬೇಕು. ವಿಚಾರಾತ್ಮಕವು ಮತ್ತು ವಿಮರ್ಶಾತ್ಮಕವೂ ನಮ್ಮ ಸತ್ಯಾ ಅನ್ವೇಷಣೆಯ ಪಥದಲ್ಲಿ ಸಾಗುವಂತೆ ನೋಡಿಕೊಳ್ಳಬೇಕು.
ಮನುಷ್ಯ ಧರ್ಮ ದಲ್ಲಿ ಪಾಲಿಸಬೇಕಾದ ಬಹುದೊಡ್ಡ ಧರ್ಮ ಎಂದರೆ ಹಸಿದವನಿಗೆ ಅನ್ನ ನೀಡುವುದು, ಸೋತವನಿಗೆ ಸ್ಫೂರ್ತಿ ನೀಡಿ ಗೆಲುವಿನ ಕನಸುಗಳನ್ನು ಬಿತ್ತುವುದು, ಕಷ್ಟದಲ್ಲಿದ್ದವರಿಗೆ ಕೈಲಾದ ಸಹಾಯ ಮಾಡುವುದು. ಪರೋಪಕಾರಿಯಾಗಿ ಬದುಕುವುದು , ಮನುಷ್ಯರನ್ನು ಮನುಷ್ಯರೇ ಪ್ರೀತಿಸುವದೇ ಮನುಷ್ಯನ ಒಳಮರ್ಮ. ಪ್ರತಿಯೊಬ್ಬರೂ ತಮ್ಮ ಕಾಯಕದಲ್ಲಿ ಪ್ರಾಮಾಣಿಕತೆ ಸದಾಚಾರ ಹೊಂದಿರುವುದೇ ಧರ್ಮ. ನೀ ದೇವನಾದರೆ ಎನ್ನನೇಕೆ ಸಲಹೇ ಎಂದು ಅಲ್ಲಮ ದೇವರನ್ನು ಪ್ರಶ್ನಿಸುತ್ತಾನೆ. ನಮ್ಮ ಆತ್ಮವೇ ಪರಮಾತ್ಮ ನಮ್ಮ ಸದಾಚಾರವೇ ಸಕಲ ಸೌಭಾಗ್ಯ ನಮ್ಮ ಮಾತುಗಳಿಗೆ ಸತ್ಯವೇ ಸದಾ ಭೂಷಣ ಸತ್ಯವನ್ನು ನುಡಿಯುವುದು. ಸತ್ಯ ಮತ್ತು ಸುಳ್ಳು ಮನುಷ್ಯನ ವ್ಯಕ್ತಿತ್ವವನ್ನು ಅನಾವರಣಮಾಡುತ್ತವೆ. ಮದುವೆಯೆಂಬುದು ಗಂಡು-ಹೆಣ್ಣುಗಳ ಭಾವ ಸಂಬಂಧದಲ್ಲಿ ಲೀನವಾಗುವುದು.
ಸಾಮಾನ್ಯವಾಗಿ ಪ್ರತಿಯೊಂದು ಹೆಣ್ಣು ತಾನು ಮದುವೆಯಾದ ಗಂಡನೊಂದಿಗೆ ಸಂತೋಷದಿಂದ ಇರಬೇಕೆಂದರೆ ಇಬ್ಬರು ಕುಳಿತು ಆಲೋಚಿಸಿ ಪರಸ್ಪರ ಒಬ್ಬರನ್ನೊಬ್ಬರು ಆತ್ಮಸಾಕ್ಷಿಯಾಗಿ ಅರ್ಥಮಾಡಿಕೊಳ್ಳುವುದರಲ್ಲಿ ಸಂತೋಷವನ್ನು ಕಾಣಬೇಕು . ಹೆಣ್ಣಿಗೆ ಗಂಡನ ಶಾಶ್ವತ ಡಾಕ್ಟರ್ ರಾಜ್ ಅವರ ಒಂದು ಹಾಡು ನೆನಪಿಸುತ್ತಾ
ಬಂದು ಕೊಡಿಸೋ ಸೀರೆ ಬಣ್ಣ ಹೋಗುವವರಿಗೆ ತಂದೆ ಕೊಡಿಸೋ ಸೀರೆ ಮದುವೆಯಾಗುವವರೆಗೆ ತಾಯಿ ಕೊಡಿಸುವ ಸೀರೆ ತಾಯಿ ಆಗುವವರೆಗೆ ಗಂಡ ಕೊಡಿಸುವ ಸೀರೆ ಹೆಣ್ಣಿನ ಕುಂಕುಮ ಇರುವವರೆಗೆ ಮಣ್ಣಿನ ಮಮತೆ ಇರುವವರೆಗೂ. ಕೊಟ್ಟ ಹೆಣ್ಣು ಕುಲದ ಹೊರಗು.
ಎಷ್ಟೇ ಪ್ರೀತಿ ಪ್ರೇಮ ವಿಶ್ವಾಸ ಅನನ್ಯತೆಯಿಂದ ಇದ್ದರೂ ಗಂಡ-ಹೆಂಡತಿಯರ ಮಧ್ಯೆ ಒಂದಿಲ್ಲ ಒಂದು ಕಾರಣಕ್ಕೆ ಆಗಾಗ ಸಂಸಾರದಲ್ಲಿ ಜಂಜಾಟಗಳು ಗಲಾಟೆ ಗದ್ದಲಗಳು ಜಗಳಗಳು ಸರ್ವೇ ಸಾಮಾನ್ಯ. ತಮ್ಮಿಬ್ಬರ ಮಧ್ಯೆ ಆದ ಕ್ಷಣಿಕದ ಕಲಹ ತನ್ನ ತವರುಮನೆಗೆ ಎಂದು ದೂರು ನೀಡಬಾರದು. ಗಂಡ ಹೆಂಡರ ಜಗಳ ಗಂಧ ತೀಡಿದಂಗ.
ಗಂಡ ಹೆಂಡರ ಜಗಳ ಉಂಡು ಮಲಗುವತನಕ ಗಂಡ ಹೆಂಡರ ಜಗಳ ಕುಂಡಿ ತಿರುಗುವತನಕ ಅಂತಹ ಪವಿತ್ರವಾದ ತಮ್ಮ ಸಂಬಂಧವನ್ನು ತಾವೇ ಹಾಳು ಮಾಡಿಕೊಳ್ಳುತ್ತಾರೆ. ಚಾಡಿ ಹೇಳಿ ಸಂಸಾರ ಕೆಡಿಸಿಕೊಳ್ಳಬಾರದು. ಕನಕದಾಸರು ಹೇಳುತ್ತಾರೆ. ತಾಯಿ-ತಂದೆ ಇರುವವರೆಗೂ ತವರುಮನೆ. ತಂದೆ ತಾಯಿ ಇಲ್ಲದ ತವರು ಮನೆ ನೀರಿಲ್ಲದ ಕೆರೆಗೆ ಕರು ನೀರಿಗಾಗಿ ಧಾವಿಸಿ ಬಂದಂತೆ. ತಾಯಿ ಇದ್ದರೆ ತವರೆಚ್ಚು ತಂದೆ ಇದ್ದರೆ ಬಳಗ ಹೆಚ್ಚು ಸಾವಿರದಾಗೆಚ್ಚು ಪತಿ ಪುರುಷ. ಗಂಜಿಯ ಕುಡಿದರೂ ಗಂಡನ ಮನೆ ಲೇಸು ಅಂಗಿನ ಬಾನ ತವರೂರು.
ಆಸರಿಕೆ ಬ್ಯಾಸರಿಕೆ ಕಳಿಲ್ಯಾಕಂತ ತವರು ಮನೆಗೆ ಹೋದರೆ ಒಮ್ಮನದ ಜೋಳ ಒಳ್ಮುಂದೆ ಇಟ್ಟರಾ ಅಣ್ಣನ ಮಡದಿಯರು. ಹೆಣ್ಣಿಗೆ ತವರು ಸ್ಥಿರವಲ್ಲ ಕಟ್ಟಿದ ಬುತ್ತಿ ಹೊಟ್ಟಿದ ಬಣವೆ ಶಾಶ್ವತವಲ್ಲ. ಸತಿ-ಪತಿಗಳ ಇಬ್ಬರು ಸಂಸಾರದಲ್ಲಿ ಹಾಲು ಸಕ್ಕರೆಯಂತೆ ಕೂಡಿಬಾಳಿದರೆ ಬದುಕೆ ಒಂದು ನಂದನವನ. ಸತಿಪತಿಗಳಲ್ಲಿ ಒಂದಾಗದ ಭಕ್ತಿ ಹಿತವಪ್ಪುದು ಶಿವಂಗೆ . ಆ ಶಿವನೇ ಅರ್ಧನಾರೇಶ್ವರ ಸತಿ-ಪತಿಯರ ಧರ್ಮ ಎಲ್ಲಾ ಧರ್ಮಗಳಿಗಿಂತಲೂ ಅತ್ಯಂತ ಶ್ರೇಷ್ಠ ಧರ್ಮ. ಹೆಣ್ಣಿಗೆ ಪತಿಯೇ ಪರದೈವ ಗಂಡ ಎಂಬ ದೈವಶಕ್ತಿ ಪತಿವ್ರತೆ ಅನುಸೂಯೆ ತನ್ನ ಪತಿಯ ಪಾದ ಪೂಜದ ನೀರಿನಿಂದ ಪವಾಡ ಮೆರೆದಿದ್ದಾಳೆ. ಪಾರ್ವತಿ ಲಕ್ಷ್ಮಿ ಸರಸ್ವತಿ ಲೋಕಕ್ಕೆ ಮೂರು ಜನ ಪತಿವ್ರತೆಯರು ಎಂದು ತಮಗೆ ತಾವೇ ಬಿರುದು ತಂದುಕೊಂಡಿದ್ದರು.
ತಮಗಿಂತಲೂ ಅನುಸೂಯೆ ಪತಿವ್ರತೆ ಎಂದು ವರ್ತಮಾನ ತಿಳಿದು. ಮೂವರು ತಲೆಗೆ ಬಟ್ಟೆ ಕಟ್ಟಿಕೊಂಡು ತಮ್ಮ ಗಂಡಂದಿರು ಬರುವುದರಲ್ಲಿ ಮಂಚದ ಮೇಲೆ ಬಿಮ್ಮನೆ ಮಲಗಿದ್ದರು. ಸತಿಯರ ಮಲಗಿದ್ದ ಕಾರಣ ಕೇಳಿದ ಬ್ರಹ್ಮ ವಿಷ್ಣು ಮಹೇಶ್ವರರು ದಿಗ್ಭ್ರಾಂತರಾಗುತ್ತಾರೆ. ಮೂರು ಜನ ತಮ್ಮ ಗಂಡಂದಿರಿಗೆ ಚಾಡಿ ಹೇಳುತ್ತಾರೆ. ಲೋಕಕ್ಕೆ ದೊಡ್ಡವರಾದ ನೀವು ನಮಗಾದ ಅಪಮಾನವನ್ನು ಸರಿಪಡಿಸಬೇಕು. ಕೂಡಲೇ ಅನುಸೂಯೆಯ ಅರಮನೆಗೆ ಹೋಗಿ ಅವಳ ಪತಿವ್ರತೆಯನ್ನು ಪರೀಕ್ಷಿಸಬೇಕು ಎಂದು ಸವಾಲು ಹಾಕುತ್ತಾರೆ. ಹೆಂಡತಿಯರ ಮಾತು ಕೇಳಿದ ಬ್ರಹ್ಮ ವಿಷ್ಣು ಮಹೇಶ್ವರರು ಮಾರುವೇಷ ತೊಟ್ಟು ಋಷಿಮುನಿಗಳಾಗಿ ಅನುಸೂಯೆ ಅರಮನೆಯ ಬಾಗಿಲ ಮುಂದೆ ನಿಂತು ಭವತಿ ಭಿಕ್ಷಾಂದೇಹಿ ಎಂದು ಕೂಗುತ್ತಾರೆ. ಅರಮನೆಯ ಒಳಗೆ ಪತಿಯ ಸೇವೆ ಮಾಡುತ್ತಿದ್ದ ಅನುಸೂಯೆ ಹೊರಬಂದು ಸ್ವಾಮಿ ವೇಷಧರಿಸಿದ ಪೂಜ್ಯರನ್ನು ನೋಡಿ ಸಂತೋಷ ಪಡುತ್ತಾಳೆ. ಕೈ ಕಾಲು ತೊಳೆದುಕೊಳ್ಳಲು ಮೀಸಲು ನೀರು ತಂದು ನೀಡಿದಳು. ಒಳಗೆ ರತ್ನಗಂಬಳಿಯ ಗದ್ದಿಗೆ ಹಾಸಿ ಒಳಗೆ ಬನ್ನಿ ಎಂದು ವಿನಂತಿಸಿದಳು.
ಅವಳಲ್ಲಿನ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಎಲ್ಲ ವರ್ತಮಾನ ತನ್ನ ಪತಿರಾಯನಿಗೆ ಹೇಳಿದಳು. ಬಂದಂತಹ ಸ್ವಾಮಿಗಳಲ್ಲಿ ಒಬ್ಬರು ನಮಗೆ ಹಸಿವಾಗಿದೆ ಊಟ ಬಡಿಸು ಎಂದು ಬೇಡಿಕೊಳ್ಳುತ್ತಾರೆ. ಗುರುಗಳ ಆಸೆಯನ್ನು ಪೂರೈಸುವ ಹುಮ್ಮಸ್ಸಿನಲ್ಲಿ ತಮಗೇನು ಊಟಬೇಕು ಹೇಳಿದರೆ ಭಕ್ತಿಯಿಂದ ಮಾಡುತ್ತೇನೆ . ತಾವು ಸಂತೃಪ್ತಿಯಿಂದ ಹಾರೈಸಬೇಕು . ನಮಗೆ ಬೇಕಾದ ಆಹಾರವನ್ನು ಸಿದ್ದ ಪಡಿಸಬಲ್ಲೆಯಾ ಎಂದು ಅಪಹಾಸ್ಯ ಮಾಡುತ್ತಾರೆ. ತಮಗೇನು ಬೇಕು ಮಹಾಪ್ರಭು ತಾವು ಆಸೆಪಟ್ಟದನ್ನೆ ಮಾಡಿ ಬಡಿಸುತ್ತೇನೆ ಎಂದು ಒಪ್ಪಿಕೊಳ್ಳುತ್ತಾಳೆ.
ಹಾಗಾದರೆ ಉಸುಕಿನ ಉಸುಳಿ ಬಸಿಯಬೇಕು ಎಂದು ಹೇಳುತ್ತಾರೆ. ಆಗಲಿ ಎಂದು ಅಡುಗೆ ಮನೆಯವ ಒಳಗೆ ಬಂದು ನೀರು ಕಾಯಿಸಲು ಹಿಟ್ಟು ಬೊಗಸೆ ಮರಳನ್ನು ತಂದು ಪಾತ್ರೆಯಲ್ಲಿ ಹಾಕುತ್ತಾಳೆ. ಆಮೇಲೆ ಗಂಡನ ಪಾದ ಪೂಜೆಯ ಧೂಳಿನ ನೀರು ಅಡುಗೆ ಮಾಡಿದ ಪಾತ್ರೆಯ ಮೇಲೆ ಸಿಂಪಡಿಸಿದಾಗ ಪಾಯಸವಾಗುತ್ತದೆ. ಹೊಟ್ಟೆ ತುಂಬ ಊಟ ಮಾಡಿದ ಋಷಿಮುನಿಗಳು ಹಲಗೆ ತೊಟ್ಟಿಲಲ್ಲಿ ಮಲಗುವ ಇಂಗಿತವನ್ನು ವ್ಯಕ್ತಪಡಿಸುತ್ತಾರೆ. ಅವರ ಆಸೆಯಂತೆ ಹಲಗೆ ತೊಟ್ಟಿಲಿನಲ್ಲಿ ಹಾಸಿಗೆ ಹಾಸಿ ಮಲಗಲು ವಿನಂತಿಸಿದಾಗ ಅಪಹಾಸ್ಯ ಮಾಡುತ್ತಾರೆ.
ಗಂಡನ ಪಾದ ಪೂಜೆದ ಧೂಳಿನ ನೀರು ಮೂವರು ಋಷಿಗಳ ಮೇಲೆ ಸಿಂಪಡಿಸಿದಾಗ ವರ್ಷದ ಕೂಸುಗಳಾಗಿ ಬದಲಾಗುತ್ತಾರೆ. ಅಂತ ಅಗಾಧವಾದ ಶಕ್ತಿ ಗಂಡ-ಹೆಂಡತಿಯರಲ್ಲಿ ಅಡಗಿದೆ.
ದಿನಪೂರ್ತಿ ತಮ್ಮ ಗಂಡಂದಿರು ಬರುವ ಹಾದಿಯನ್ನೇ ಕಾಯುತ್ತಾರೆ. ಭಯಗೊಂಡು ಸರಸ್ವತಿ ಪಾರ್ವತಿ ಲಕ್ಷ್ಮಿಯವರು ಮಾರುವೇಷ ಧರಿಸಿ ಭವತಿ ಭಿಕ್ಷಾಂದೇಹಿ ಎಂದು ಅನುಸೂಯೆ ಅವರ ಮನೆಗೆ ಬರುತ್ತಾರೆ. ಅವರನ್ನು ಪ್ರೀತಿಯಿಂದ ಸ್ವಾಗತಿಸಿದ ಅನುಷಾದೇವಿಗೆ ಅಪಹಾಸ್ಯದ ಮಾತುಗಳಿಂದ ನಾವು ಕುಂದ್ರಲೂ ನಿಂದ್ರಲೂ ಬಂದಿಲ್ಲ ನಮ್ಮ ಗಂಡಂದಿರನ್ನು ಹುಡುಕಿಕೊಂಡು ಬಂದಿದ್ದೇವೆ. ಅವರನ್ನು ನಮಗೆ ಒಪ್ಪಿಸು ಎಂದು ವಿನಂತಿಸುತ್ತಾರೆ.
ಅದಕ್ಕೆ ಪತಿವ್ರತೆಯರಾದ ನೀವು ನಿಮ್ಮ ನಿಮ್ಮ ಗಂಡಂದಿರನ್ನು ನೀವೇ ಕರೆದುಕೊಂಡು ಹೋಗಿ ಎಂದು ಅಲಗಿ ತೊಟ್ಟಿಲಲ್ಲಿ ಮಲಗಿದ್ದ ಕೂಸುಗಳನ್ನು ತೋರಿಸುತ್ತಾಳೆ. ಬ್ರಹ್ಮ ವಿಷ್ಣು ಮಹೇಶ್ವರರು ಒಂದು ವರ್ಷದ ಮಕ್ಕಳಾಗಿ ಒಂದೇ ಮುಖದ ಒಂದೇ ಉಡುಗೆ ತೊಟ್ಟು ಮಲಗಿರುವುದನ್ನು ನೋಡಿ ಸರಸ್ವತಿ ಪಾರ್ವತಿ ಲಕ್ಷ್ಮಿಯವರು ಲೋಕಕ್ಕೆ ನೀನೇ ಮಹಾಪತಿವ್ರತೆ ಎಂದು ಅನುಷಾದೇವಿಯವರ ಕಾಲಿಗೆ ಎರಗುತ್ತಾರೆ. ತಮ್ಮಲ್ಲಿರುವ ಅಹಂಕಾರದ ಬುದ್ಧಿ ಅರಿವಾಗಿ ಅನುಷಾದೇವಿಯವರಿಗೆ ಶರಣಾಗುತ್ತಾರೆ. ಮತ್ತೊಂದು ಉದಾಹರಣೆ ಎಂದರೆ ಜಮದಗ್ನಿಯ ರೂಪ ಸೌಂದರ್ಯಕ್ಕೆ ಮರುಳಾದ ರೇಣುಕಾದೇವಿ ಜಮದಗ್ನಿ ಋಷಿಯನ್ನು ಮದುವೆಯಾಗಲು ಅಪೇಕ್ಷೆ ಪಡುತ್ತಾರೆ.
ಜಮದಗ್ನಿ ಮಹಾಋಷಿಗಳು ಬೇಡ ಎಂದು ಹೇಳಿದರು ಕೇಳದ ರೇಣುಕಾ ಮದುವೆಯಾಗುತ್ತಾರೆ. ಗಂಡನ ಪೂಜೆಗೆ ಮೀಸಲು ನೀರು ತರಲು ಉಸುಕಿನ ಕೊಡವ ಮಾಡಿ ಹಾವಿನ ಸಿಂಬಿ ಮಾಡಿ ನದಿಯ ನೀರಿಗೆ ಹೋಗಿ ಬಿಂದಿಗೆಯಲ್ಲಿ ನೀರು ತುಂಬಿಕೊಂಡು ಬರುವಾಗ ಒಬ್ಬ ಪುರುಷನನ್ನು ನೋಡಿ ಕಾಮೋದ್ರೇಕದ ಭಾವನೆಯ ಮೂಡಿದಾಗ ಪರ ಪುರುಷರನ್ನು ನೋಡಿದ ಶಾಪಕ್ಕೆ ಬಲಿಯಾಗುತ್ತಾಳೆ. ಹಾವಿನ ಸಿಂಬೆ ಹರಿದುಹೋಗುತ್ತದೆ ಮರಳಿನ ಬಿಂದಿಗೆ ಹೊಡೆದು ಹೋಗುತ್ತದೆ.
ಜಮದಗ್ನಿಯ ಕೋಪಕ್ಕೆ ಗುರಿಯಾಗುತ್ತಾಳೆ. ರೇಣುಕಾ ದೇವಿಗೆ ಜಮದಗ್ನಿ ಶಾಪ ಕೊಡುತ್ತಾರೆ. ಶಾಪ ವಿಮೋಚನೆಗಾಗಿ ರೇಣುಕರಾಜ ಜಮದಗ್ನಿಯ ಋಷಿಯ ಪಾದದ ಪೂಜೆಯ ನೀರು ತಂದು ಕುಷ್ಟರೋಗದಿಂದ ಬಳಲುತ್ತಿರುವ ರೇಣುಕಾದೇವಿಯ ಮೈಮೇಲೆ ಸಿಂಪಡಿಸಿದಾಗ ರೋಗದಿಂದ ಗುಣಮುಖಳಾದ ಘಟನೆಗಳು ಪುರಾಣಗಳಲ್ಲಿ ನೋಡುತ್ತೇವೆ.
ಇಂತಹ ಪವಿತ್ರವಾದ ಪತಿಯ ಮತ್ತು ಸತಿಯ ಶಕ್ತಿಯನ್ನು ಅರ್ಥಮಾಡಿಕೊಂಡು ಬಾಳಿದರೆ ಬದುಕು ಬಂಗಾರವಾಗಿ ಸಮಾಜದಲ್ಲಿ ಇತರರಿಗೆ ಮಾದರಿಯಾಗಿ ಬದುಕಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025
ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ
-
ದಿನದ ಸುದ್ದಿ6 days ago
ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ
-
ರಾಜಕೀಯ4 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ5 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ದಿನದ ಸುದ್ದಿ6 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ
-
ದಿನದ ಸುದ್ದಿ4 days ago
ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ