Connect with us

ಲೈಫ್ ಸ್ಟೈಲ್

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ | ಏನಿದು MDMA ಡ್ರಗ್ ಮಾತ್ರೆ..? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ : ಮಿಸ್ ಮಾಡ್ದೆ ಓದಿ

Published

on

  • ವೈಶಾಲಿ ದುರ್ಗಪ್ಪ

ಡ್ರಗ್ಸ್ ಮಾಫಿಯಾ ಜಗತ್ತಿಗೆ ಹೊಸದೇನಲ್ಲ. ಇದುವರೆಗೂ‌ ಈ‌ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ತಡೆದುಹಾಕಲು ಪೊಲೀಸ್ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ಎಂಬ ಯಕ್ಷ ಪ್ರಶ್ನೆ‌ ಕಾಡುತ್ತದೆ. ಡ್ರಗ್ಸ್ ಬಗ್ಗೆ ಆಗೊಮ್ಮೆ- ಈಗೊಮ್ಮೆ ಪತ್ರಿಕೆಯ ‌ಯಾವುದೋ ಮೂಲೆಯಲ್ಲಿ ಸಣ್ಣ ಸುದ್ದಿಯಾಗಿ, ಸಿನೆಮಾಗಳ ಒಂದಷ್ಟು ದೃಶ್ಯಗಳಲ್ಲಿ ನೋಡಿದ ನೆನಪು ಬರುತ್ತದೆ.

ಪ್ರಸ್ತುತ ನ್ಯೂಸ್ ಚಾನೆಲ್‌ ಗಳ ಟಿ ಆರ್ ಪಿ ಕೇಂದ್ರಿತ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ಸುದ್ದಿ ದಿ‌ನದಿಂದ‌ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ವಿಚಾರಣೆ ಒಳಗಾದ ಕೆಲವು ನಟನಟಿಯರಿಂದ MDMA ಎಂಬ ಡ್ರಗ್ ಮಾತ್ರೆಯನ್ನು ಸೇವಿಸಿದ್ದರ ಬಗ್ಗೆ ಮಾಹಿತಿ‌ ದೊರೆತಿದೆ.

ಹಾಗಾದರೆ ಏನಿದು MDMA .? ಇದನ್ನು ಸೇವಿಸಿದರೆ ದೇಹ ಮತ್ತು ಮನಸಿನ ಮೇಲಾಗುವ ದುಷ್ಪರಿಣಾಮಗಳೇನು..?ಎಂಬುದರ ಬಗ್ಗೆ ಸರ್ಕಾರದ ‘National Institute on Drug Abuse‘ ವೆಬ್ಸೈಟ್ ನಲ್ಲಿ ಪ್ರಕಟವಾಗಿರುವ ಬರಹವನ್ನು ಇಂಗ್ಲಿಷ್ ನಿಂದ ಕನ್ನಡಕ್ಕೆ ‘ವೈಶಾಲಿ‌ ದುರ್ಗಪ್ಪ’ ಅವರು ತಂದಿದ್ದಾರೆ. ಈ ಬರಹ MDMA ಬಗ್ಗೆ ಹಲವು ಮಾಹಿತಿಯನ್ನು ನೀಡುತ್ತದೆ. ಈ ಬರಹ ಓದಿ ಪ್ರತಿಕ್ರಿಯಿಸಿ.


ಎಂಡಿಎಂಎ ಎಂದರೇನು..?

3,4-ಮಿಥೈಲಿನ್ ಡೈ ಆಕ್ಸಿ – ಹೆಪ್ಟಾಮೈನ್ (3,4-methylenedioxy-methamphetamine(MDMA)
ಇದು ವ್ಯಕ್ತಿ ಒಬ್ಬನ ಬಾಹ್ಯ ಪ್ರಪಂಚದ ಬಗ್ಗೆ ತನಗಿರುವ ಗ್ರಹಿಕೆ ಹಾಗೂ ಮನಸ್ಥಿತಿಯನ್ನು ಬದಲಾಯಿಸುವಂತಹ ಒಂದು ಸಂಶ್ಲೇಷಿತ (ಸಿಂಥೆಟಿಕ್) ಡ್ರಗ್ ಆಗಿದೆ. ಇದು ರಾಸಾಯನಿಕವಾಗಿ ಉತ್ತೇಜಕ ಹಾಗೂ ಭ್ರಾಮಕಗಳಿಗೆ ಹೋಲುತ್ತದೆ. ಈ ಡ್ರಗ್ ಅನ್ನು ಸೇವಿಸಿದ ವ್ಯಕ್ತಿಯಲ್ಲಿ ದೇಹಕ್ಕೆ ಇದ್ದಕ್ಕಿದ್ದಂತೆ ಶಕ್ತಿ ದೊರೆಯುವುದು, ಅತೃಪ್ತ ಮಾನಸಿಕ ಸಂತೋಷ ಹೊಂದುವುದು. ಭಾವನಾತ್ಮಕವಾಗಿ ಬೆಚ್ಚಗಿನ ಅನುಭವ ಹೊಂದಿ ತನಗರಿವಿಲ್ಲದ ಯಾವುದೋ ಲೋಕದಲ್ಲಿ ವಿಹರಿಸುವಂತಹ ಭಾವನೆಯಲ್ಲಿ ತೇಲುವರು.

ರಾಸಾಯನಿಕ Molecular ಪದವನ್ನು ಸಂಕ್ಷಿಪ್ತಗೊಳಿಸಿ. Molly ಎಂಬ ಹೆಸರಿನಿಂದ MDMA ಡ್ರಗ್ ಅನ್ನು ಯುವಜನರಲ್ಲಿ ಪ್ರಚಲಿತ ಗೊಳಿಸಿದ್ದಾರೆ. ಮೊದಲೆಲ್ಲಾ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗಳಲ್ಲಿ ದೊರೆಯುತ್ತಿದ್ದ ಡ್ರಗ್ ಇಂದು ಕಾಲೇಜು ಅಂಗಳದವರೆಗೂ ಕಾಲಿಟ್ಚಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ.

ವ್ಯಸನಿಗಳು ಡ್ರಗ್ ಅನ್ನು ಹೆಚ್ಚಾಗಿ ಮಾತ್ರೆ ಅಥವಾ ಕ್ಯಾಪ್ಸುಲ್ ರೂಪದಲ್ಲಿ ಸೇವನೆ ಮಾಡುವರು. ಕೆಲವರು ಇದನ್ನು ದ್ರವ ರೂಪದಲ್ಲಿ ಸೇವಿಸಿದರೆ, ಹೆಚ್ಚಿನವರು ಡ್ರಗ್ ಪುಡಿಯನ್ನು ಉಸಿರುಗಟ್ಟಿ ಒಳಸೇದುವ ಮೂಲಕ ಸೇವಿಸುವರು. ಸ್ಫಟಿಕ ರೂಪದ ಪುಡಿಯನ್ನು ಹೆಚ್ಚಾಗಿ ಕ್ಯಾಪ್ಸುಲ್ ರೂಪದಲ್ಲಿ ಮಾರಾಟ ಮಾಡುವುದು ಪ್ರಚಲಿತದಲ್ಲಿದೆ. ಇಷ್ಟೇ ಅಲ್ಲದೆ Molly ಡ್ರಗ್ ಅನ್ನು ಆಲ್ಕೋಹಾಲ್ ಅಥವಾ ಗಾಂಜಾದೊಟ್ಟಿಗೆ ಸೇರಿಸಿ ತೆಗೆದುಕೊಳ್ಳುವುದು ಸಹ ಕೆಲವರಲ್ಲಿ ರೂಢಿಯಲ್ಲಿದೆ.

MDMA ಡ್ರಗ್ ನ ವ್ಯವಸಿಗಳಲ್ಲಿ ಮೆದುಳಿನ ಮೇಲೆ ಪರಿಣಾಮ ಬೀರಿ, ಬಾಹ್ಯ ನಡವಳಿಕೆಗಳಲ್ಲಿ ಬದಲಾವಣೆಯನ್ನು ತರುವಲ್ಲಿ ಮೂರು ರಾಸಾಯನಿಕಗಳು ಮುಖ್ಯ ಪಾತ್ರ ವಹಿಸುತ್ತದೆ. ಅವುಗಳೆಂದರೆ,

1.ಡೋಪಮೈನ್ (Dopamine)

ಈ ರಾಸಾಯನಿಕವು ದೇಹಕ್ಕೆ ಹೆಚ್ಚು ಶಕ್ತಿಯನ್ನು ಒದಗಿಸಿ, ವ್ಯಕ್ತಿಯ ನಡವಳಿಕೆಯನ್ನು ಇದ್ದಕ್ಕಿದ್ದಂತೆ ಬದಲಾಯಿಸುವುದು.

2.ಸೆರಟೋನಿನ್ (Serotonin)

ವ್ಯಕ್ತಿಯಲ್ಲಿ ಮನಸ್ಥಿತಿಯ ಬದಲಾಯಿಸುವುದು, ಹಸನಾಗಿಸುವುದು ಅಥವಾ ನಿದ್ರೆ ಬರಿಸುವುದು ಈ ರಾಸಾಯನಿಕದ ಕೆಲಸವಾಗಿದೆ. ಹಾಗೂ ಅವರಲ್ಲಿ ಲೈಂಗಿಕ ಆಸಕ್ತಿ ಹೆಚ್ಚಿಸುವಂತಹ ಹಾರ್ಮೋನುಗಳನ್ನು ಸ್ರವಿಸುವಲ್ಲಿ ಪಾತ್ರ ವಹಿಸುತ್ತದೆ. ಸೆರಟೋನಿನ್ ಹೆಚ್ಚು ಉತ್ಪಾದನೆ ಆಗುವುದರಿಂದ ಭಾವಾತಿರೇಕ ಉಂಟಾಗುವುದು, ಜೊತೆಯಲ್ಲಿರುವವರ ಮೇಲೆ ಎಂದೂ ಕಾಣದ ಪ್ರೀತಿ ಉಂಟಾಗುವುದು, ಎಲ್ಲೋ ಹೇಳಿದಂತಹ ಅನುಭವವೂ ಆಗುವುದುಂಟು.

3.ನೊರ್ಪೈನ್ಫ್ರಿನ್ (Norepinephrine)

ರಕ್ತದೊತ್ತಡ ಹಾಗೂ ಹೃದಯ ಬಡಿತ ಹೆಚ್ಚಾಗುವುದು, ವಿಶೇಷವಾಗಿ ಹೃದಯ ಸಂಬಂಧಿ ಕಾಯಿಲೆ ಇರುವಂತಹವರಿಗೆ ಈ ರಾಸಾಯನಿಕದ ಪ್ರಮಾಣ ದೇಹದಲ್ಲಿ ಹೆಚ್ಚಾದಲ್ಲಿ ಮಾರಣಾಂತಿಕವೂ ಆಗಬಹುದು.
ಇದರೊಟ್ಟಿಗೆ, ವಾಕರಿಕೆ ಬರುವುದು, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು, ತಮಗರಿವಿಲ್ಲದೆ ಹಲ್ಲು ಕಡಿಯುವುದು, ಕಣ್ಣು ಮಂಜಾದಂತಾಗುವುದು, ಬೆವರುವುದು, ಚಳಿ ಯಾಗುವಂತಹ ಆರೋಗ್ಯ ಸಂಬಂಧಿ ಪರಿಣಾಮಗಳನ್ನು ಅನುಭವಿಸುವರು.

ಕನ್ನಡಕ್ಕೆ : ವೈಶಾಲಿ ದುರ್ಗಪ್ಪ

MDMA ಡ್ರಗ್ ಗನ್ನು ಒಮ್ಮೆ ಸೇವಿಸಿದರೆ, ಅದರ ಪರಿಣಾಮ ಕನಿಷ್ಠ ಮೂರರಿಂದ ಆರು ಗಂಟೆಗಳವರೆಗೆ ಇರಬಹುದು. ಮೊದಲ ಡೋಸ್ ನ ಪರಿಣಾಮ ಕಡಿಮೆಯಾಗುತ್ತಾ ಹೋದಂತೆ ಕೆಲವೊಬ್ಬರು ಮತ್ತೊಂದು ಡೋಸ್ ನ ಮೊರೆ ಹೋಗುವರು.ಡೋಸ್ ಕಡಿಮೆ ಆದರೂ ಸಹ, ಕೆಲವು ವಾರಗಳವರೆಗೆ, ವ್ಯಕ್ತಿಯಲ್ಲಿ ದೈಹಿಕವಾಗಿ ಕಿರಿಕಿರಿ ಅನುಭವಿಸುವುದು, ಆಕ್ರಮಣಕಾರಿ ನಡವಳಿಕೆ, ಖಿನ್ನತೆಗೆ ಒಳಗಾದ ಭಾವ, ನಿದ್ರಾಹೀನತೆ, ಆತಂಕ, ನೆನಪಿನ ಶಕ್ತಿಯ ಕೊರತೆ, ಹಸಿವಾಗದೆ ಇರುವಂತಹ ಅನುಭವ, ಲೈಂಗಿಕತೆಯಲ್ಲಿ ಉತ್ಸಾಹದ ಕೊರತೆಯಂತಹ ಪರಿಣಾಮಗಳನ್ನು ಎದುರಿಸಬೇಕಾಗಬಹುದು.

MDMA’ ಡ್ರಗ್ ನ ವೈದ್ಯಕೀಯ ಪ್ರಾಮುಖ್ಯತೆ

1970 ರಲ್ಲಿ ಮೊದಲ ಬಾರಿಗೆ MDMA ಡ್ರಗ್ ಅನ್ನು ಮನೋವೈದ್ಯಕೀಯ ಚಿಕಿತ್ಸೆಯಲ್ಲಿ ಬಳಸಲಾಯಿತು.(ಟಾಪ್ ತೆರಫಿ ಅಂತಹ ಮಾನಸಿಕ ಚಿಕಿತ್ಸೆಗಳಲ್ಲಿ) ಆದರೆ ವ್ಯಸನಿಗಳು/ಸಂಶೋಧಕರನ್ನು ಉಪಯೋಗಿಸಿಕೊಂಡು ವೈದ್ಯಕೀಯ ಪ್ರಯೋಗವನ್ನು ನಡೆಸಿದಂತಹ ಆಧಾರಗಳಿಲ್ಲ ಅಥವಾ ಯು.ಎಸ್ ನ ಫುಡ್ ಅಂಡ್ ಅಡ್ಮಿನಿಸ್ಟ್ರೇಷನ್ ನಿಂದ ಮಾನ್ಯತೆಯು ಸಿಕ್ಕಿಲ್ಲ.

ಆದರೆ, 1985 ರಲ್ಲಿ ಯು. ಎಸ್ ನ ಡ್ರಗ್ ಎನ್ಫೋರಸ್ಮೆಂಟ್ ಅಡ್ಮಿನಿಸ್ಟ್ರೇಷನ್ MDMA ಅನ್ನು ವೈದ್ಯಕೀಯ ಚಿಕಿತ್ಸೆಯಲ್ಲಿ ಕಾನೂನುಬಾಹಿರ ಎಂದು ಆದೇಶಿಸಿತು. ಆದರೆ, ಕೆಲವು ಸಂಶೋಧಕರ ಪ್ರಕಾರ, ನಿಯಂತ್ರಿತ ಪರಿಸ್ಥಿತಿಗಳಲ್ಲಿ, ಮನೋ ವೈದ್ಯಕೀಯ ಚಿಕಿತ್ಸೆಗಳಲ್ಲಿ ಬಳಸಬಹುದು ಎಂಬ ವಾದವನ್ನು ಮುಂದಿಟ್ಟು ಡಿಸೇಸ್ ಇತ್ತೀಚಿನ ಬೆಳವಣಿಗೆಯಲ್ಲಿ ಪೋಸ್ಟ್ ಟ್ರೆಮಾಟಿಕ್ ಸ್ಟ್ರೆಸ್( PTSD) ಚಿಕಿತ್ಸೆಯಲ್ಲಿ MDMA ಯನ್ನು ಬಳಸಿ ಪ್ರಗತಿಯನ್ನು ಸಾಧಿಸಿ ಯಶಸ್ವಿಯಾಗಿ ಹೊಸ ಆಯಾಮವನ್ನು ತೆರೆದಿದ್ದಾರೆ.

MDMA’ ಸೇವನೆಯಿಂದ ಆರೋಗ್ಯದ ಮೇಲಾಗುವಪರಿಣಾಮಗಳು

ಅತಿಯಾದ ಸೇವನೆಯಿಂದಾಗಿ ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗುವುದು, ದೇಹದ ಉಷ್ಣತೆಯು ಹೆಚ್ಚಾಗುವುದು, ಇದು ಯಕೃತ್ತು ಹಾಗೂ ಮೂತ್ರಪಿಂಡಗಳ ಕಾರ್ಯದಲ್ಲಿ ಅಡೆತಡೆಯನ್ನು ಉಂಟುಮಾಡಬಹುದು. ಕೆಲವೊಮ್ಮೆ ಅಸ್ವಾಭಾವಿಕ ಲೈಂಗಿಕ ಸಂಪರ್ಕ ಹೊಂದುವುದರಿಂದ, ಲೈಂಗಿಕ ಪ್ರಸರಣ ರೋಗ( STD) ಗಳಾದ ಗೊನೋರಿಯ,AID/HIV ಹಾಗೂ ಹೆಪಟೈಟಿಸ್ ನಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿದೆ.

MDMA ಡ್ರಗ್ ಒಂದು ವ್ಯಸನವೇ..?

ಸಂಶೋಧನೆಗಳ ಪ್ರಕಾರ ಇದು ವ್ಯಸನವೇ ಎಂಬುದು ಖಚಿತವಾಗಿಲ್ಲ. ಅಲ್ಲದೇ, ಇದು ಕೋಕೋ ನಷ್ಟು ಗೀಳಲ್ಲವೆಂಬುದು ಸಂಶೋಧಕರ ವಾದವಾಗಿದೆ. ಆದರೆ, ಕೆಲವು ವ್ಯಸನಿಗಳು ಆಯಾಸ ಖಿನ್ನತೆಗೆ ಒಳಗಾಗುವುದು, ಹಸಿವಿಲ್ಲದಿರುವುದು, ಏಕಾಗ್ರತೆಯಲ್ಲಿ ಕೊರತೆಯನ್ನು ಅನುಭವಿಸುವಂತಹ ಲಕ್ಷಣಗಳನ್ನು ತೋರುವುದು ಉಂಟು.

ವ್ಯಸನಿಗಳಿಗೆ ಬಳಸಬಹುದಾದ ಚಿಕಿತ್ಸೆ

ಇಂತಹದ್ದೇ ಚಿಕಿತ್ಸೆಯನ್ನು ಬಳಸಿ MDMAಡ್ರಗ್ ನಾ ಚಟದಿಂದ ವ್ಯಕ್ತಿಯೊಬ್ಬನನ್ನು ವ್ಯಸನಮುಕ್ತ ಗಳಿಸಬಹುದು ಎಂದು ಹೇಳುವಂತಹ ಯಾವುದೇ ಖಂಡಿತವಾದ ಚಿಕಿತ್ಸೆಯು ವೈದ್ಯಕೀಯ ಕ್ಷೇತ್ರದಲ್ಲಿಲ್ಲ. ಆದರೆ, ‘Behavioral
Therapy’ /ನಡವಳಿಗೆ ಚಿಕಿತ್ಸೆಯು ಪರಿಣಾಮಕಾರಿ ಆಗಬಲ್ಲದು ಎಂಬ ನಂಬಿಕೆಗಳಿವೆ. ಅದು ಎಷ್ಟರ ಮಟ್ಟಿಗೆ ಪರಿಣಾಮಕಾರಿ ಎಂಬ ನಿಟ್ಟಿನಲ್ಲಿ ಸಂಶೋಧನೆಗಳು ಇನ್ನಷ್ಟೇ ನಡೆಯಬೇಕಿದೆ.

ಮೂಲ ಬರಹದ ಲಿಂಕ್ ಇಲ್ಲಿದೆ, ಕ್ಲಿಕ್ ಮಾಡಿ ಓದಿ

https://www.drugabuse.gov/publications/drugfacts/mdma-ecstasymolly

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

Trending