ಲೈಫ್ ಸ್ಟೈಲ್
ಪ್ಲಾಸ್ಟಿಕ್ ಬಳಕೆಯಿಂದ ಆಗುವ ಪರಿಣಾಮ ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ..!
Leo Henricus Arthur Baekland ಅವರು 1907ರಲ್ಲಿ Bakellite ಎಂಬ synethic ವಸ್ತುವಿನಿಂದ ಪ್ಲಾಸ್ಟಿಕ್ ಅನ್ನು ಕಂಡುಹಿಡಿದರು. ಇದನ್ನು ಕಂಡು ಹಿಡಿದ ಮೇಲೆ ಜನಕ್ಕೆ ಪ್ರತಿದಿನ ತುಂಬ ಉಪಯೋಗವಾಗಲು ಶುರುವಾಯಿತು. ವರ್ಷ ಕಳೆದಂತೆ ಜನಗಳಿಗೆ ಪ್ಲಾಸ್ಟಿಕ್ ಇಲ್ಲದೇ ದಿನವೇ ಸಾಗದಂತೆ ಆಗಿದೆ. ಈ ಪ್ಲಾಸ್ಟಿಕ್ ಮನುಷ್ಯರ ದೇಹದ ಅಂಗಗಳ ರೀತಿಯಲ್ಲಿ ಒಂದು ಅಂಗವಾಗಿದೆ. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ವರೆಗು ಒಂದಲ್ಲ ಒಂದು ರೀತಿಯಲ್ಲಿ ಪ್ಲಾಸ್ಟಿಕ್ ಅನ್ನು ಬಳಸುತ್ತೇವೆ. ಪ್ಲಾಸ್ಟಿಕ್ ಕಂಡು ಹಿಡಿದು ಇಲ್ಲಿಗೆ 111 ವರ್ಷವಾಗಿದೆ. ಅದರೆ ನಮ್ಮ ಜನರಿಗೆ ಇದು ಪ್ರಪಂಚ ಹುಟ್ಟಿದಾಗಿನಿಂದ ಈ ಪ್ಲಾಸ್ಟಿಕ್ ಇತ್ತೇನೊ ಅನ್ನೊ ಮಟ್ಟಿಗೆ ಅದನ್ನು ಅವಲಂಬಿಸಿದ್ದಾರೆ.
ಈ ಪ್ಲಾಸ್ಟಿಕ್ ಎಲ್ಲರಿಗೂ ಕಡಿಮೆ ಬೆಲೆಯಲ್ಲಿ ಸಿಗುವ ವಸ್ತು. ಆರಾಮವಾಗಿ ಎಲ್ಲಾ ಕಡೆ ಸಿಗುತ್ತದೆ ಮತ್ತು ಕೊಂಡೊಯ್ಯಲು ಸುಲಭ ಎಂದು ಜನರ ನಂಬಿಕೆ. ಪ್ಲಾಸ್ಟಿಕ್ ಅನ್ನು ಮರುಬಳಕೆ ಮಾಡಬಹುದು ,ಇದರಿಂದ ತೊಂದರೆ ಆಗುವುದಿಲ್ಲ ಎಂದು ತಿಳಿದಿದರು. ಆದರೆ ಎಲ್ಲಾ ಪ್ಲಾಸ್ಟಿಕ್ ಅನ್ನು ನಾವು ಮರುಬಳಕೆ ಮಾಡಲು ಆಗುವುದಿಲ್ಲ ಎಂದು ಈಗ ನಮಗೆ ತಿಳಿದಿರುವ ವಿಷಯ. 20% ಅಷ್ಟೇ ಪ್ಲಾಸ್ಟಿಕ್ ಅನ್ನು ಮಾತ್ರ ಮರುಬಳಕೆ ಮಾಡಬಹುದು. ಇನ್ನೂ ಸ್ವಲ್ಪ ಸುಟ್ಟು ಹಾಕುತ್ತಾರೆ.
ಈ ಪ್ಲಾಸ್ಟಿಕ್ ನಮ್ಮಗೆ ಎಷ್ಟು ಉಪಯೋಗವೊ ಅದಕ್ಕಿಂತ ಹೆಚ್ಚು ಅಪಯಾಕಾರಿಯು ಹೌದು. ಈ ನೀರಿನ ಬಾಟಲ್, ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಲೋಟಗಳು, ಇನ್ನೂ ಹಲವು ಪ್ಲಾಸ್ಟಿಕ್ಗಳನ್ನು ನಾವು ಮರುಬಳಕೆ ಮಾಡಲು ಆಗುವುದಿಲ್ಲ. ಅವನ್ನೂ ಜನ ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದು ನಗರದಲ್ಲಿ ಹೆಚ್ಚು ಹಳ್ಳಿ ಹಾಗೂ ಪಟ್ಟಣದಲು ಕೂಡ ಹೆಚ್ಚಾಗುತ್ತಿದೆ.
ಈಗಾಗಲೇ ಹಸುಗಳು, ಜಲಚರ ಪ್ರಾಣಿಗಳ ಮತ್ತು ಇನ್ನೂ ಇತರ ಪ್ರಾಣಿಗಳ ಹೊಟ್ಟೆ ಸೇರಿ ಈ ಪ್ಲಾಸ್ಟಿಕ್ ಎಲ್ಲವನ್ನೂ ಬಲಿತೆಗೆದು ಕೊಳ್ಳುತ್ತಿದೆ. ಈಗ ಅದು ಮನುಷ್ಯರಾದ ನಮ್ಮ ಸರದಿ. ನೇರವಾಗಿ ಹಾನಿಯಾಗದಿದರು ಅದರಿಂದ ತುಂಬಾನೆ ಅಪಾಯವಂತು ಇದೇ.
ಈ ಪ್ಲಾಸ್ಟಿಕ್ ನಮ್ಮ ದೇಹಕ್ಕೆ ಹೇಗೆ ಸೇರುತ್ತದೆ? ನಮ್ಮನ್ನು ಹೇಗೆ ಬಲಿ ತೆಗೆದುಕೊಂಡಿತು ಎಂದು ಪ್ರಶ್ನೆ? ನಗರ, ಪಟ್ಟಣ, ಹಳ್ಳಿಗಳಲ್ಲಿನ ಪ್ಲಾಸ್ಟಿಕ್ ಕೆಲ ಪ್ರಾಣಿಗಳನ್ನು ಬಲಿ ತೆಗೆದುಕೊಂಡರೆ, ಈ ನಗರ,ಪಟ್ಟಣ,ಹಳ್ಳಿಗಳಿಂದ ನದಿ, ಸಮುದ್ರ, ಸಾಗರಕ್ಕೆ ಸೇರುತ್ತಿರುವ ಪ್ಲಾಸ್ಟಿಕ್ ಇಡೀ ಮನುಕುಲಕ್ಕೆ ಹಾನಿಯನ್ನು ಉಂಟುಮಾಡುತ್ತಿದೆ.
ಹೇಗೆ ಪ್ಲಾಸ್ಟಿಕ್ ಸಾಗರದವರೆಗು ಸೇರುತ್ತದೆ ಎಂದರೆ ಮುಖ್ಯವಾಗಿ ಕಾರ್ಖಾನೆಗಳಿಂದ, ಬಟ್ಟೆ ತೊಳೆಯುವುದರಿಂದ, ಇನ್ನೂ ಮುಖ್ಯವಾಗಿ ಮನುಷ್ಯ ನದಿಗೆ ಹಾಕುವ ಕಸದಿಂದ, ಮಳೆ ಬಂದಾಗ ಭೂಮಿಯಲ್ಲಿನ ಪ್ಲಾಸ್ಟಿಕ್ ನದಿ ಸೇರಿ, ನದಿಯಿಂದ ಸಮುದ್ರಕ್ಕೆ, ಸಮುದ್ರದಿಂದ ಸಾಗರಕ್ಕೆ ಸೇರುತ್ತಿದೆ.
ಈ ಪ್ಲಾಸ್ಟಿಕ್ ಸಂಪೂರ್ಣವಾಗಿ ಕರಗದೆ ಕ್ರಮೇಣವಾಗಿ ಚಿಕ್ಕ ಚಿಕ್ಕ ಮೈಕ್ರೋಪ್ಲಾಸ್ಟಿಕ್ ಅಗಿ ಬದಲಾಗಿ ಎಲ್ಲಾ ಜಲಚರ ಪ್ರಾಣಿಗಳಿಗೆ ಸೇರುತ್ತಿದೆ. ಆಹಾರ ಕೊಂಡಿಯ ಮೂಲಕ ಜಲಚರ ಪ್ರಾಣಿಗಳು ಹಾಗೂ ಸಮುದ್ರದ ನೀರಿನಲ್ಲಿ ಸೇರಿ ಅದು ಮನುಷ್ಯನ ದೇಹ ಸೇರುತ್ತಿದೆ. ಅಬ್ಬಾ ಅದು ಬರಿ ಮಾಂಸಾಹಾರಿಗಳಿಗೆ ಮಾತ್ರ ಸೇರುತೆ ನಮಗಲ್ಲ ಎಂದು ಸಸ್ಯಹಾರಿಗಳ ಭಾವನೆ. ಆದರೆ ಈಗ ಅದು ಸಸ್ಯಹಾರಿಗಳಿಗು ಉಪ್ಪು ಹಾಗೂ ಮಿನರಲ್ ವಾಟರ್ ಈ ಎರಡು ಬಗ್ಗೆ ಯಾಗಿ ಸೇರುತ್ತಿದೆ.
ಹೌದು ,ಐಐಟಿ ಬಾಂಬೆಯವರು ಭಾರತದ ಉಪ್ಪಿನ ಬ್ರಾಂಡ್ಗಳ ಸುಮಾರು 24 ಕೆ.ಜಿ.ಉಪ್ಪನ್ನು ಪರೀಕ್ಷೆ ಮಾಡಿದಾಗ ಅದರಲ್ಲಿ ಸಾಮಾನ್ಯ ಉಪ್ಪಿನಲ್ಲಿ 63% ರಷ್ಟು, ಬ್ರಾಂಡೆಡ್ ಉಪ್ಪಿನಲ್ಲಿ 37%ರಷ್ಟು ಮೈಕ್ರೋಪ್ಲಾಸ್ಟಿಕ್ ಪತ್ತೆಯಾಗಿದೆ. ಇನ್ನೂ ಎರಡನೆಯದು ನಾವು ಶುದ್ಧ , ಖನಿಜಯುಕ್ತ ಎಂದು ಭಾವಿಸಿ ಕುಡಿಯುವ ಬಾಟಲ್ ನೀರಿನಲ್ಲಿ ಈ ಮೈಕ್ರೋಪ್ಲಾಸ್ಟಿಕ್ ಇದೇ. ಪ್ರೆಡೋನಿಯಾದ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕಿನ ವಿಜ್ಞಾನಿಗಳು ಅಮೆರಿಕ, ಭಾರತ, ಚೀನಾ, ಇಂಡೋನೇಷ್ಯಾ, ಮೆಕ್ಸಿಕೊ, ಲೆಬನಾನ್, ಕೀನ್ಯಾ ದೇಶಗಳ 19 ಭಿನ್ನ ಪ್ರದೇಶಗಳಿಂದ 11 ವಿವಿಧ ಕಂಪನಿಗಳ 259 ಬಾಟಲ್ ನೀರು ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಕೇವಲ17 ಬಾಟಲಿಗಳಲ್ಲಿದ್ದ ನೀರು ಕುಡಿಯಲು ಯೋಗ್ಯ ಮತ್ತು ಸುರಕ್ಷಿತ ಎಂದು ಪತ್ತೆ ಹಚ್ಚಿದಾರೆ.
ಮುಖ್ಯವಾಗಿ, ಪಾಲಿಪ್ರೊಪಲಿನ್ ಎಂಬ ಪ್ಲಾಸ್ಟಿಕ್ ಕಣಗಳು ಈ ಬಾಟಲ್ ನೀರಿನ ಪ್ರತಿ ಲೀಟರಿಗೆ ಸರಾಸರಿ 58.6 ಪ್ಲಾಸ್ಟಿಕ್ ಫೈಬರ್ ಪತ್ತೆಯಾಗಿದೆ.
ಈ ಮೈಕ್ರೋಪ್ಲಾಸ್ಟಿಕ್ ನಮ್ಮ ದೇಹಕ್ಕೆ ಸೇರಿ ಹಲವು ಕಾಯಿಲೆಗಳಿಗೆ ಕಾರಣವಾಗಿದೆ. ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಕಾರಣವಾಗಿದೆ. ನರ ಸಂಬಂಧಿಸಿದ ಕಾಯಿಲೆ, ಥೈರಾಯಿಡ್ ತೊಂದರೆ, ಕ್ಯಾನ್ಸರ್, ಆಸ್ತಮಾ ಹಾಗೂ ಹೃದಯ ಕಾಯಿಲೆಗಳು, ಲೈಂಗಿಕ ದೌರ್ಬಲ್ಯ, ಜತಗೆ ಕೂದಲು ಮತ್ತು ಚರ್ಮ ಸಮಸ್ಯೆಗಳಿಗೆ ಈ ಮೈಕ್ರೋಪ್ಲಾಸ್ಟಿಕ್ ಕಾರಣವಾಗಿದೆ. ಇನ್ನೂ ಇದರಿಂದಾಗುವ ಅಗುತ್ತಿರುವ ತೊಂದರೆಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದಾರೆ. ಇಂದು ನಮ್ಮ ಮಹಾ ಸಾಗರಗಳು ಅಂದಾಜು 15 ಕೋಟಿ ಟನ್ನಿನಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಒಳಗಿರಿಸಿಕೊಂಡಿದೆ ಎಂದು ವರದಿಯಾಗಿದೆ.
ನಾವು ಈಗ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ಬಳಕೆ ಮಾಡದಿರಲು ಸಾಧ್ಯವಿಲ್ಲ ಅದರೇ ನಮ್ಮಲ್ಲಿ ಒಂದು ಚಿಕ್ಕ ಜಾಗೃತಿ ಮೂಡಿದರೆ ಮುಂದೆ ಅಗುವಾ ಈ ದೊಡ್ಡ ಪ್ಲಾಸ್ಟಿಕ್ ಸಮಸ್ಯೆಯನ್ನು ಸ್ವಲ್ಪವಾದರೂ ತಡೆಯಬಹುದು.ದೊಡ್ಡ ದೊಡ್ಡ ಆಹಾರ , ಎಣ್ಣೆ, ಪಾನಿಯಾ ಕಂಪನಿಗಳು ನೈಸರ್ಗಿಕವಾಗಿ ಬೇಗ ಕರಗುವಂತವುದರಲ್ಲಿ ಪ್ಯಾಕಿಂಗ್ ಮಾಡಿದರೆ ಎಷ್ಟೋ ಪ್ಲಾಸ್ಟಿಕ್ ಸಮಸ್ಯೆ ಬಗ್ಗೆ ಹರಿಯುತ್ತದೆ. ಸರ್ಕಾರ ಅವರು ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಿದರು ಅದು ಕಾರ್ಯ ರೂಪದಲ್ಲಿ ನೆಡೆಯುತ್ತಿಲ್ಲ. ಅದುದರಿಂದ ಇದು ನಮ್ಮಲ್ಲೆ ಜಾಗೃತಿ ಮೂಡಿದರೆ ಮಾತ್ರ ಸಾಧ್ಯ.
ಪ್ಲಾಸ್ಟಿಕ್ ಯಿಂದ ಅಗುವ ತೊಂದರೆ ಬಗ್ಗೆ ಅರಿವು ಮೂಡಿಸಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ.
-ಸೌಮ್ಯ ಅಶೋಕ್
ಬೆಂಗಳೂರು
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243




