Connect with us

ಲೈಫ್ ಸ್ಟೈಲ್

ಪ್ಲಾಸ್ಟಿಕ್ ಬಳಕೆಯಿಂದ ಆಗುವ ಪರಿಣಾಮ ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ..!

Published

on

Leo Henricus Arthur Baekland ಅವರು 1907ರಲ್ಲಿ Bakellite ಎಂಬ synethic ವಸ್ತುವಿನಿಂದ ಪ್ಲಾಸ್ಟಿಕ್ ಅನ್ನು ಕಂಡುಹಿಡಿದರು. ಇದನ್ನು ಕಂಡು ಹಿಡಿದ ಮೇಲೆ ಜನಕ್ಕೆ ಪ್ರತಿದಿನ ತುಂಬ ಉಪಯೋಗವಾಗಲು ಶುರುವಾಯಿತು. ವರ್ಷ ಕಳೆದಂತೆ ಜನಗಳಿಗೆ ಪ್ಲಾಸ್ಟಿಕ್ ಇಲ್ಲದೇ ದಿನವೇ ಸಾಗದಂತೆ ಆಗಿದೆ. ಈ ಪ್ಲಾಸ್ಟಿಕ್ ಮನುಷ್ಯರ ದೇಹದ ಅಂಗಗಳ ರೀತಿಯಲ್ಲಿ ಒಂದು ಅಂಗವಾಗಿದೆ. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ವರೆಗು ಒಂದಲ್ಲ ಒಂದು ರೀತಿಯಲ್ಲಿ ಪ್ಲಾಸ್ಟಿಕ್ ಅನ್ನು ಬಳಸುತ್ತೇವೆ. ಪ್ಲಾಸ್ಟಿಕ್ ಕಂಡು ಹಿಡಿದು ಇಲ್ಲಿಗೆ 111 ವರ್ಷವಾಗಿದೆ. ಅದರೆ ನಮ್ಮ ಜನರಿಗೆ ಇದು ಪ್ರಪಂಚ ಹುಟ್ಟಿದಾಗಿನಿಂದ ಈ ಪ್ಲಾಸ್ಟಿಕ್ ಇತ್ತೇನೊ ಅನ್ನೊ ಮಟ್ಟಿಗೆ ಅದನ್ನು ಅವಲಂಬಿಸಿದ್ದಾರೆ.

ಈ ಪ್ಲಾಸ್ಟಿಕ್ ಎಲ್ಲರಿಗೂ ಕಡಿಮೆ ಬೆಲೆಯಲ್ಲಿ ಸಿಗುವ ವಸ್ತು. ಆರಾಮವಾಗಿ ಎಲ್ಲಾ ಕಡೆ ಸಿಗುತ್ತದೆ ಮತ್ತು ಕೊಂಡೊಯ್ಯಲು ಸುಲಭ ಎಂದು ಜನರ ನಂಬಿಕೆ. ಪ್ಲಾಸ್ಟಿಕ್ ಅನ್ನು ಮರುಬಳಕೆ ಮಾಡಬಹುದು ,ಇದರಿಂದ ತೊಂದರೆ ಆಗುವುದಿಲ್ಲ ಎಂದು ತಿಳಿದಿದರು. ಆದರೆ ಎಲ್ಲಾ ಪ್ಲಾಸ್ಟಿಕ್ ಅನ್ನು ನಾವು ಮರುಬಳಕೆ ಮಾಡಲು ಆಗುವುದಿಲ್ಲ ಎಂದು ಈಗ ನಮಗೆ ತಿಳಿದಿರುವ ವಿಷಯ. 20% ಅಷ್ಟೇ ಪ್ಲಾಸ್ಟಿಕ್ ಅನ್ನು ಮಾತ್ರ ಮರುಬಳಕೆ ಮಾಡಬಹುದು. ಇನ್ನೂ ಸ್ವಲ್ಪ ಸುಟ್ಟು ಹಾಕುತ್ತಾರೆ.

ಈ ಪ್ಲಾಸ್ಟಿಕ್ ನಮ್ಮಗೆ ಎಷ್ಟು ಉಪಯೋಗವೊ ಅದಕ್ಕಿಂತ ಹೆಚ್ಚು ಅಪಯಾಕಾರಿಯು ಹೌದು. ಈ ನೀರಿನ ಬಾಟಲ್, ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಲೋಟಗಳು, ಇನ್ನೂ ಹಲವು ಪ್ಲಾಸ್ಟಿಕ್‌ಗಳನ್ನು ನಾವು ಮರುಬಳಕೆ ಮಾಡಲು ಆಗುವುದಿಲ್ಲ. ಅವನ್ನೂ ಜನ ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದು ನಗರದಲ್ಲಿ ಹೆಚ್ಚು ಹಳ್ಳಿ ಹಾಗೂ ಪಟ್ಟಣದಲು ಕೂಡ ಹೆಚ್ಚಾಗುತ್ತಿದೆ.
ಈಗಾಗಲೇ ಹಸುಗಳು, ಜಲಚರ ಪ್ರಾಣಿಗಳ ಮತ್ತು ಇನ್ನೂ ಇತರ ಪ್ರಾಣಿಗಳ ಹೊಟ್ಟೆ ಸೇರಿ ಈ ಪ್ಲಾಸ್ಟಿಕ್ ಎಲ್ಲವನ್ನೂ ಬಲಿತೆಗೆದು ಕೊಳ್ಳುತ್ತಿದೆ. ಈಗ ಅದು ಮನುಷ್ಯರಾದ ನಮ್ಮ ಸರದಿ. ನೇರವಾಗಿ ಹಾನಿಯಾಗದಿದರು ಅದರಿಂದ ತುಂಬಾನೆ ಅಪಾಯವಂತು ಇದೇ.

ಈ ಪ್ಲಾಸ್ಟಿಕ್ ನಮ್ಮ ದೇಹಕ್ಕೆ ಹೇಗೆ ಸೇರುತ್ತದೆ? ನಮ್ಮನ್ನು ಹೇಗೆ ಬಲಿ ತೆಗೆದುಕೊಂಡಿತು ಎಂದು ಪ್ರಶ್ನೆ? ನಗರ, ಪಟ್ಟಣ, ಹಳ್ಳಿಗಳಲ್ಲಿನ ಪ್ಲಾಸ್ಟಿಕ್ ಕೆಲ ಪ್ರಾಣಿಗಳನ್ನು ಬಲಿ ತೆಗೆದುಕೊಂಡರೆ, ಈ ನಗರ,ಪಟ್ಟಣ,ಹಳ್ಳಿಗಳಿಂದ ನದಿ, ಸಮುದ್ರ, ಸಾಗರಕ್ಕೆ ಸೇರುತ್ತಿರುವ ಪ್ಲಾಸ್ಟಿಕ್ ಇಡೀ ಮನುಕುಲಕ್ಕೆ ಹಾನಿಯನ್ನು ಉಂಟುಮಾಡುತ್ತಿದೆ.
ಹೇಗೆ ಪ್ಲಾಸ್ಟಿಕ್ ಸಾಗರದವರೆಗು ಸೇರುತ್ತದೆ ಎಂದರೆ ಮುಖ್ಯವಾಗಿ ಕಾರ್ಖಾನೆಗಳಿಂದ, ಬಟ್ಟೆ ತೊಳೆಯುವುದರಿಂದ, ಇನ್ನೂ ಮುಖ್ಯವಾಗಿ ಮನುಷ್ಯ ನದಿಗೆ ಹಾಕುವ ಕಸದಿಂದ, ಮಳೆ ಬಂದಾಗ ಭೂಮಿಯಲ್ಲಿನ ಪ್ಲಾಸ್ಟಿಕ್ ನದಿ ಸೇರಿ, ನದಿಯಿಂದ ಸಮುದ್ರಕ್ಕೆ, ಸಮುದ್ರದಿಂದ ಸಾಗರಕ್ಕೆ ಸೇರುತ್ತಿದೆ.

ಈ ಪ್ಲಾಸ್ಟಿಕ್ ಸಂಪೂರ್ಣವಾಗಿ ಕರಗದೆ ಕ್ರಮೇಣವಾಗಿ ಚಿಕ್ಕ ಚಿಕ್ಕ ಮೈಕ್ರೋಪ್ಲಾಸ್ಟಿಕ್ ಅಗಿ ಬದಲಾಗಿ ಎಲ್ಲಾ ಜಲಚರ ಪ್ರಾಣಿಗಳಿಗೆ ಸೇರುತ್ತಿದೆ. ಆಹಾರ ಕೊಂಡಿಯ ಮೂಲಕ ಜಲಚರ ಪ್ರಾಣಿಗಳು ಹಾಗೂ ಸಮುದ್ರದ ನೀರಿನಲ್ಲಿ ಸೇರಿ ಅದು ಮನುಷ್ಯನ ದೇಹ ಸೇರುತ್ತಿದೆ. ಅಬ್ಬಾ ಅದು ಬರಿ ಮಾಂಸಾಹಾರಿಗಳಿಗೆ ಮಾತ್ರ ಸೇರುತೆ ನಮಗಲ್ಲ ಎಂದು ಸಸ್ಯಹಾರಿಗಳ ಭಾವನೆ. ಆದರೆ ಈಗ ಅದು ಸಸ್ಯಹಾರಿಗಳಿಗು ಉಪ್ಪು ಹಾಗೂ ಮಿನರಲ್ ವಾಟರ್ ಈ ಎರಡು ಬಗ್ಗೆ ಯಾಗಿ ಸೇರುತ್ತಿದೆ.

ಹೌದು ,ಐಐಟಿ ಬಾಂಬೆಯವರು ಭಾರತದ ಉಪ್ಪಿನ ಬ್ರಾಂಡ್‌ಗಳ ಸುಮಾರು 24 ಕೆ.ಜಿ.ಉಪ್ಪನ್ನು ಪರೀಕ್ಷೆ ಮಾಡಿದಾಗ ಅದರಲ್ಲಿ ಸಾಮಾನ್ಯ ಉಪ್ಪಿನಲ್ಲಿ 63% ರಷ್ಟು, ಬ್ರಾಂಡೆಡ್ ಉಪ್ಪಿನಲ್ಲಿ 37%ರಷ್ಟು ಮೈಕ್ರೋಪ್ಲಾಸ್ಟಿಕ್ ಪತ್ತೆಯಾಗಿದೆ. ಇನ್ನೂ ಎರಡನೆಯದು ನಾವು ಶುದ್ಧ , ಖನಿಜಯುಕ್ತ ಎಂದು ಭಾವಿಸಿ ಕುಡಿಯುವ ಬಾಟಲ್ ನೀರಿನಲ್ಲಿ ಈ ಮೈಕ್ರೋಪ್ಲಾಸ್ಟಿಕ್ ಇದೇ. ಪ್ರೆಡೋನಿಯಾದ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕಿನ ವಿಜ್ಞಾನಿಗಳು ಅಮೆರಿಕ, ಭಾರತ, ಚೀನಾ, ಇಂಡೋನೇಷ್ಯಾ, ಮೆಕ್ಸಿಕೊ, ಲೆಬನಾನ್, ಕೀನ್ಯಾ ದೇಶಗಳ 19 ಭಿನ್ನ ಪ್ರದೇಶಗಳಿಂದ 11 ವಿವಿಧ ಕಂಪನಿಗಳ 259 ಬಾಟಲ್ ನೀರು ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಕೇವಲ17 ಬಾಟಲಿಗಳಲ್ಲಿದ್ದ ನೀರು ಕುಡಿಯಲು ಯೋಗ್ಯ ಮತ್ತು ಸುರಕ್ಷಿತ ಎಂದು ಪತ್ತೆ ಹಚ್ಚಿದಾರೆ.
ಮುಖ್ಯವಾಗಿ, ಪಾಲಿಪ್ರೊಪಲಿನ್ ಎಂಬ ಪ್ಲಾಸ್ಟಿಕ್ ಕಣಗಳು ಈ ಬಾಟಲ್ ನೀರಿನ ಪ್ರತಿ ಲೀಟರಿಗೆ ಸರಾಸರಿ 58.6 ಪ್ಲಾಸ್ಟಿಕ್ ಫೈಬರ್ ಪತ್ತೆಯಾಗಿದೆ.

ಈ ಮೈಕ್ರೋಪ್ಲಾಸ್ಟಿಕ್ ನಮ್ಮ ದೇಹಕ್ಕೆ ಸೇರಿ ಹಲವು ಕಾಯಿಲೆಗಳಿಗೆ ಕಾರಣವಾಗಿದೆ. ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಕಾರಣವಾಗಿದೆ. ನರ ಸಂಬಂಧಿಸಿದ ಕಾಯಿಲೆ, ಥೈರಾಯಿಡ್ ತೊಂದರೆ, ಕ್ಯಾನ್ಸರ್, ಆಸ್ತಮಾ ಹಾಗೂ ಹೃದಯ ಕಾಯಿಲೆಗಳು, ಲೈಂಗಿಕ ದೌರ್ಬಲ್ಯ, ಜತಗೆ ಕೂದಲು ಮತ್ತು ಚರ್ಮ ಸಮಸ್ಯೆಗಳಿಗೆ ಈ ಮೈಕ್ರೋಪ್ಲಾಸ್ಟಿಕ್ ಕಾರಣವಾಗಿದೆ. ಇನ್ನೂ ಇದರಿಂದಾಗುವ ಅಗುತ್ತಿರುವ ತೊಂದರೆಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದಾರೆ. ಇಂದು ನಮ್ಮ ಮಹಾ ಸಾಗರಗಳು ಅಂದಾಜು 15 ಕೋಟಿ ಟನ್ನಿನಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಒಳಗಿರಿಸಿಕೊಂಡಿದೆ ಎಂದು ವರದಿಯಾಗಿದೆ.

ನಾವು ಈಗ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ಬಳಕೆ ಮಾಡದಿರಲು ಸಾಧ್ಯವಿಲ್ಲ ಅದರೇ ನಮ್ಮಲ್ಲಿ ಒಂದು ಚಿಕ್ಕ ಜಾಗೃತಿ ಮೂಡಿದರೆ ಮುಂದೆ ಅಗುವಾ ಈ ದೊಡ್ಡ ಪ್ಲಾಸ್ಟಿಕ್ ಸಮಸ್ಯೆಯನ್ನು ಸ್ವಲ್ಪವಾದರೂ ತಡೆಯಬಹುದು.ದೊಡ್ಡ ದೊಡ್ಡ ಆಹಾರ , ಎಣ್ಣೆ, ಪಾನಿಯಾ ಕಂಪನಿಗಳು ನೈಸರ್ಗಿಕವಾಗಿ ಬೇಗ ಕರಗುವಂತವುದರಲ್ಲಿ ಪ್ಯಾಕಿಂಗ್ ಮಾಡಿದರೆ ಎಷ್ಟೋ ಪ್ಲಾಸ್ಟಿಕ್ ಸಮಸ್ಯೆ ಬಗ್ಗೆ ಹರಿಯುತ್ತದೆ. ಸರ್ಕಾರ ಅವರು ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಿದರು ಅದು ಕಾರ್ಯ ರೂಪದಲ್ಲಿ ನೆಡೆಯುತ್ತಿಲ್ಲ. ಅದುದರಿಂದ ಇದು ನಮ್ಮಲ್ಲೆ ಜಾಗೃತಿ ಮೂಡಿದರೆ ಮಾತ್ರ ಸಾಧ್ಯ.
ಪ್ಲಾಸ್ಟಿಕ್ ಯಿಂದ ಅಗುವ ತೊಂದರೆ ಬಗ್ಗೆ ಅರಿವು ಮೂಡಿಸಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ.

-ಸೌಮ್ಯ ಅಶೋಕ್
ಬೆಂಗಳೂರು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 hours ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ2 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ4 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ4 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ6 days ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ1 week ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ2 weeks ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

Trending