ಲೈಫ್ ಸ್ಟೈಲ್
ನಮ್ಮ ಮೆದುಳಿನಲ್ಲಿ ಕನ್ನಡಿ ಉಂಟು ಗೊತ್ತಾ..!

ಯಾರಾದರೂ ಆಕಳಿಸಿದ್ದನ್ನು ನೋಡಿದಾಗ ನಿಮಗೂ ಸಹ ಆಕಳಿಕೆ ಬಂದಿದೆಯೇ? ಟಿ.ವಿ. ಅಥವಾ ಚಲನಚಿತ್ರವನ್ನು ನೋಡುವಾಗ ಅದರಲ್ಲಿ ಬರುವ ಪಾತ್ರಧಾರಿಗಳು ನಕ್ಕಾಗ ನೀವೂ ಕೂಡ ನಿಮಗರಿವಿಲ್ಲದೆಯೇ, ನಗುವುದು, ಅತ್ತಾಗ ಅಳುವುದು, ಭಯಪಟ್ಟರೆ ಭಯಪಡುವುದು ಇವೆಲ್ಲ ನಿಮ್ಮ ಅನುಭವಕ್ಕೆ ಬಂದಿದೆಯೇ? ನಿಮ್ಮ ಮಗ/ಮಗಳು ಅವರಿಗೆ ಅರಿವಿಲ್ಲದೆಯೇ ನಿಮ್ಮ ಮಾತು, ನಡೆ, ಭಾವ, ಭಂಗಿ ಇತ್ಯಾದಿಗಳನ್ನು ಅನುಕರಣೆ ಮಾಡುತ್ತಿದ್ದಾರೆ ಎಂದು ಅನಿಸಿದೆಯೇ? ಇತರರ ಭಾವನೆಗಳನ್ನು, ಸನ್ನೆಗಳನ್ನು, ಭಂಗಿಗಳನ್ನು ನಾವು ನಮಗೆ ಅರಿವಿಲ್ಲದೆ ಹೇಗೆ ಅನುಕರಣೆ ಮಾಡಲು ಸಾಧ್ಯ? ಇದಕ್ಕೆಲ್ಲ ಕಾರಣ ಮಿರರ್ ನ್ಯೂರಾನ್ಗಳು.
ಏನಿದು ಮಿರರ್ ನ್ಯೂರಾನ್ಗಳು? ಇವು ನಮ್ಮ ಮೆದುಳಿನಲ್ಲಿ ಇರುವ ನರಕೋಶಗಳು. ನಮ್ಮ ಮೆದುಳಿನಲ್ಲಿ ನೂರಾರು ನರಕೋಶಗಳು ಇರುತ್ತವೆ. ಈ ಮಿರರ್ ನ್ಯೂರಾನ್ಗಳ ಕಾರಣದಿಂದಾಗಿ, ನಮ್ಮೆದುರಿಗಿನ ವ್ಯಕ್ತಿಯ ವರ್ತನೆ, ಭಾವನೆಗಳು, ಭಂಗಿಗಳನ್ನು ನಮಗರಿವಿಲ್ಲದ ಹಾಗೇಯೇ ಅಪ್ರಜ್ಞಾಪೂರ್ವಕವಾಗಿ ಅನುಕರಣೆ ಮಾಡುತ್ತೇವೆ. ಈ ಮಿರರ್ ನ್ಯೂರಾನ್ಗಳು“ಪರಾನುಭೂತಿ”ಯ ಮೇಲೆ ಆಧಾರಿತವಾಗಿವೆ. ಪರಾನುಭೂತಿ ಎಂದರೆ “ನಾವು ಬೇರೆಯವರ ಭಾವನೆಗಳನ್ನು ಆ ಸಂದರ್ಭದಲ್ಲಿ ನಮಗೇ ಅನುಭವ ಆಗುತ್ತಿರುವ ಹಾಗೆ ಅನುಭವಿಸುವ ಅಥವಾ ಕಲ್ಪಿಸಿಕೊಳ್ಳುವ ಸಾಮಥ್ರ್ಯ”. ಈ ಮಿರರ್ ನ್ಯೂರಾನ್ಗಳಿರುವ ಕಾರಣ, ನಾವು ನಮಗೆ ಅರಿವಿಲ್ಲದಂತೆಯೇ ಎಷ್ಟೋ ಚಟುವಟಿಕೆಗಳನ್ನು ಮಾಡುತ್ತೇವೆ. ಮಕ್ಕಳು ಚಿಕ್ಕವಯಸ್ಸಿನಿಂದ ಬೆಳೆಯುವವರೆಗೂ, ದೊಡ್ಡವರು ಹಾಗೂ ಸುತ್ತ ಮುತ್ತಲಿನ ಪರಿಸರದಲ್ಲಿ ಇರುವುದನ್ನು ನೋಡಿ ಅವರ ಭಾವ, ಭಂಗಿ, ಮಾತು ಎಲ್ಲವನ್ನೂ ಅನುಕರಣೆ ಮಾಡುತ್ತಾ ಬೆಳೆಯುತ್ತಾರೆ. ಈ ನ್ಯೂರಾನ್ಗಳನ್ನು ನಾವು ಪ್ರಜ್ಞಾಪೂರ್ವಕವಾಗಿ ನಿಯಂತ್ರಣ ಮಾಡಲು ಸಾಧ್ಯವಿಲ್ಲ.
ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಮಿರರ್ ನ್ಯೂರಾನ್ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವಾಗ ‘ಆಟಿಸಂ’[ಸ್ವಲೀನತೆ] ಎಂಬ ಕಾಯಿಲೆ ಬರುತ್ತದೆ. ಆಟಿಸಂ ಎಂದರೆ ಮೆದುಳಿನಲ್ಲಿರುವ ನರಗಳಿಗೆ ಸಂಬಂಧಪಟ್ಟಂತೆ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ. ಎದುರಿಗಿರುವ ವ್ಯಕ್ತಿ ಹೇಳುವ ವಿಚಾರ ಮಗುವಿಗೆ ಅರ್ಥವಾಗುತ್ತದೆ. ಆದರೆ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ಇವರು ಸಂವಹನ ಕೊರತೆ ಎದುರಿಸುತ್ತಾರೆ ಮತ್ತು ಯಾರೊಂದಿಗೂ ಬೆರೆಯಲು ಹಿಂಜರಿಯುತ್ತಾರೆ. ಮಿರರ್ ನ್ಯೂರಾನ್ಗಳನ್ನು ಸಕ್ರಿಯಗೊಳಿಸುವುದರಿಂದ ಆಟಿಸಂ ಅನ್ನು ಗುಣಪಡಿಸಬಹುದು. ಮಿರರ್ ನ್ಯೂರಾನ್ಗಳನ್ನು ನಿಯಂತ್ರಿಸಬಹುದೇ? ಇದಕ್ಕೆ ಉತ್ತರ “ಸಾಧ್ಯವಿಲ್ಲ”. ಆದರೆ, ಈ ನ್ಯೂರಾನ್ಗಳಿಂದ ನಾವು ಒಳ್ಳೆಯದನ್ನು ಕಲಿಯಬಹುದು ಅಥವಾ ಕೆಟ್ಟದನ್ನು ಸಹಾ ಕಲಿಯಬಹುದು. ಅದುದರಿಂದ ನಾವು ನಮ್ಮ ಸುತ್ತಮುತ್ತಲಿನ ವ್ಯಕ್ತಿಗಳನ್ನು ಹಾಗು ಪರಿಸರವನ್ನು ಸರಿಯಾದ ರೀತಿಯಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಸರಿಯಾದ ರೀತಿ ಎಂದರೇ ಸದಾ ಸಂತೋಷದಿಂದ, ಪಾಸಿಟಿವ್ [ಸಕಾರಾತ್ಮಕ]ವಾಗಿ ಯೋಚನೆ ಮಾಡುವವರ ಜೊತೆ ಬೆರೆಯಬೇಕು.
ಹಾಗೇಯೆ, ಸದಾ ದುಖ:ದಿಂದ ಇರುವವರಿಗೆ, ನೆಗೆಟಿವ್ [ನಕಾರಾತ್ಮಕ]ವಾಗಿ ಯೋಚನೆ ಮಾಡುವವರಿಗೆ, ಅಪರಾಧಿಗಳಿಗೆ, ಮಿರರ್ ನ್ಯೂರಾನ್ಗಳ ಮುಖಾಂತರ ಸಕಾರಾತ್ಮಕವಾವಾಗಿ ಯೋಚನೆ ಮಾಡುವ ಹಾಗೆ ಸಹಾ ಮಾಡಬಹುದು. ಮಾನವ ಸಂಘಜೀವಿ, ತನ್ನ ಜೊತೆಯಲ್ಲಿರುವವರು ದಾರಿ ತಪ್ಪಿರುವಾಗ, ಕಷ್ಟದಲ್ಲಿದ್ದಾಗ, ಅವರನ್ನು ಮುಖ್ಯವಾಹಿನಿಗೆ ತರಲು ನಮ್ಮ ಕೈಲಾದ ಸಹಾಯವನ್ನು ಮಾಡಬಹುದು.
ನಮ್ಮನ್ನು ನೋಡಿ ಕಲಿಯುವ ಮಕ್ಕಳಿಗೆ, ನಾವು ಅದಷ್ಟೂ ಒಳ್ಳೆಯ ವಿಚಾರಗಳನ್ನು ಹೇಳಿ ಕೊಟ್ಟರೇ, ಆ ಮಕ್ಕಳು ಒಳ್ಳೆ ರೀತಿಯಲ್ಲಿ ಬೆಳೆದು ಸತ್ಪ್ರಜೆಗಳಾಗುವುದರಿಂದ, ದೇಶದ ಪ್ರಗತಿಗೆ ಪರೋಕ್ಷವಾಗಿ ಸೇವೆ ಮಾಡಬಹುದಾಗಿದೆ.
-ಸೌಮ್ಯ ಅಶೋಕ್
ಬೆಂಗಳೂರು

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ3 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ2 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ3 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ17 hours ago
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ
-
ದಿನದ ಸುದ್ದಿ3 days ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ2 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ