ರಾಜಕೀಯ
ಮಾರ್ಚ್ 6 ರಂದು ‘ಕೈ’ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆ
ಸುದ್ದಿದಿನ,ಕೋಲಾರ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಉಮೇಶ್ ಜಾದವ್ ಅವರು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ಸ್ಪೀಕರ್ ರಮೇಶ್ ಕುಮಾರ್ ಮನೆಗೆ ಬೇಟಿ ನೀಡಿ ರಾಜೀನಾಮೆ ಸಲ್ಲಿಸಿದರು.
ಇಂದು ಬೆಳಿಗ್ಗೆ ರಾಜೀನಾಮೆ ನೀಡಿದ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾದವ್ ಅವರ ರಾಜೀನಾಮೆಯನ್ನು ಅಂಗೀಕರಿಸಿದರು ಸ್ಪೀಕರ್ ರಮೇಶ್ ಕುಮಾರ್.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಉಮೇಶ್ ಜಾದವ್ ವಿಚಾರ, ಕಳೆದ ರಾತ್ರಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನ ಪೋನ್ ಮೂಲಕ ಸಂಪರ್ಕಿಸಿದ ಶಾಸಕ ಉಮೇಶ್ ಜಾದವ್, ರಾಜಿನಾಮೆ ನೀಡುವ ವಿಚಾರ ಹೇಳಿದ ಹಿನ್ನಲೆ ಇಂದು ಸರ್ಕಾರಿ ರಜೆ ಇರುವುದರಿಂದ ತಮ್ಮ ನಿವಾಸದಲ್ಲೇ ಇರುವುದಾಗಿ ತಿಳಿಸಿದ್ದರು ಸ್ಪೀಕರ್ ರಮೇಶ್ ಕುಮಾರ್.
ಸ್ಪೀಕರ್ ರಮೇಶ್ ಕುಮಾರ್ ಗೆ ರಾಜಿನಾಮೆ ನೀಡಿ ಕೋಲಾರದಿಂದ ಕಲಬುರಗಿಯತ್ತ ಪಯಣ ಬೆಳೆಸಿದ್ದು, ಸಂಜೆ ಏಳು ಗಂಟೆ ಸುಮಾರಿಗೆ ಕಲಬುರಗಿಗೆ ಬಂದು ತಲುಪಲಿರುವ ಅವರು ,ನಾಳೆ ಚಿಂಚೋಳಿ ತಾಲೂಕಿನ ಪಂಗರಗಾ ಗ್ರಾಮದಲ್ಲಿ ಬಂಜಾರ ಸಮುದಾಯದ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಕಾರ್ಯಕರ್ತ ಸಭೆ ನಡೆಸಲಿರುವ ಜಾಧವ್ ಕಲಬುರಗಿಯಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶಕ್ಕೆ ಕಾರ್ಯಕರ್ತರು ಹಾಗೂ ಸಮುದಾಯ ಜನರಿಗೆ ಆಹ್ವಾನ ನೀಡಿದ್ದು, ಮಾರ್ಚ್ 6 ರಂದು ಮೋದಿ ಸಮ್ಮುಖದಲ್ಲಿ ಜಾಧವ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401