Connect with us

ದಿನದ ಸುದ್ದಿ

ಕುಂದುವಾಡ | ಬೋನಿಗೆ ಬಿತ್ತು ರೌಡಿ ಕೋತಿ..! ಇಲ್ಲಿದೆ ವಿಡಿಯೋ

Published

on

ಸುದ್ದಿದಿನ,ದಾವಣಗೆರೆ: ಅದು ರೌಡಿ ಕೋತಿ, ಸಿಕ್ಕ ಸಿಕ್ಕವರ ಮೇಲೆ ಎಗರುತ್ತಾ ಕಚ್ಚಿ, ದೂಡಿ ಹೋಗುತ್ತಿತ್ತು, ಕೋತಿಯ ಉಪಟಳಕ್ಕೆ ಜನರು ಬೇಸತ್ತು ಹೋಗಿದ್ದರು, ನಿನ್ನೆ ಬೋನಿನೊಳಗೆ ಬಂದು ಜಸ್ಟ್ ಮಿಸ್ ಆಗಿ ತಪ್ಪಿಸಿಕೊಂಡು ಹೋಗಿದ್ದ ಕೋತಿ ಇಂದು ಬೋನಿಗೆ ಬಿದ್ದು ಲಾಕ್ ಆಗಿದೆ.

ಹೌದು.. ಈ ಘಟನೆ ನಡೆದಿದ್ದು ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ, ಇಪ್ಪತ್ತಕ್ಕೂ ಹೆಚ್ಚು ಜನರಿಗೆ, ಮಕ್ಕಳಿಗೆ ಕಚ್ಚಿ ಘಾಸಿಗೊಳಿಸಿತ್ತು, ಮಕ್ಕಳು ಶಾಲೆಗೆ ಹೋಗಲು, ವಾಪಾಸ್ ಮನೆಗೆ ತೆರಳಲು ಭಯಪಡಿತ್ತಿದ್ದರು, ಕೋತಿ ಬೈಕ್ ಸವಾರರನ್ನೆ ಹೆಚ್ಚು ಟಾರ್ಗೆಟ್ ಮಾಡುತ್ತಿತ್ತು, ಬೈಕ್ ನಲ್ಲಿ ಹೋಗುತ್ತಿದ್ದವರ ಹೆಗಲ ಮೇಲೆ ಓಡಿ ಬಂದು ಕೂತು ಕಚ್ಚುತ್ತಿತ್ತು, ಇದರಿಂದ ಹೆದರಿ ಎಷ್ಟೊ ಜನ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದರು, ನಿಂತಿದ್ದ ಬೈಕ್ ಗಳನ್ನು ಕಾಲಿನಿಂದ ದೂಡಿ ಬೀಳಿಸುತ್ತಿತ್ತು, ಮುಷ್ಯನ ಕೀಟಲೆಯಿಂದ ಜನರು ಬೇಸತ್ತು ಹೋಗಿದ್ದರು.

ಈ ಹಿನ್ನಲೆ ಜನರು ಅರಣ್ಯ ಇಲಾಖೆ ಉಪಸಂರಕ್ಷಣಾ ಅಧಿಕಾರಿ ಶಶಿಧರ್ ಅವರಿಗೆ ದೂರು ನೀಡಿದ್ದರು, ದೂರು ಹಿನ್ನಲೆ ಕಾರ್ಯಾಚರಣೆಗೆ ಇಳಿದಿದ್ದ ಅರಣ್ಯ ಇಲಾಖೆ ನಾಲ್ಕೈದು ದಿನದಿಂದ ಬೋನಿಟ್ಟು ಕಾದಿತ್ತು, ಬೋನಿನೊಳಗೆ ಬಾಳೆಹಣ್ಣು, ಬಿಸ್ಕೆಟ್ ಇಡಲಾಗಿತ್ತು, ನಿನ್ನೆ ಬಾಳೆಹಣ್ಣು ತಿನ್ನುತ್ತಾ ಬೋನಿನೊಳಗೆ ಕೋತಿ ಹೋಗಿತ್ತು, ಆದರೆ ಕೂಡಲೇ ಎಚ್ಚೆತ್ತ ಕೋತಿ ಲಾಕ್ ಬೀಳುವ ಮೊದಲೇ ಎಸ್ಕೇಪ್ ಆಗಿ ಓಡಿ ಹೋಗಿತ್ತು..

ಮತ್ತೆ ಇಂದು ಬೆಳಿಗ್ಗೆ ಅರಣ್ಯ ಇಲಾಖೆಗೆ ಕರೆ ಮಾಡಿ ಹೆಚ್ಚಿನ ಸಿಬ್ಬಂದಿ ಕಳುಹಿಸುವಂತೆ ಮನವಿ ಮಾಡಿದ ಹಿನ್ನಲೆ ಕೋರಿಕೆಗೆ ಸ್ಪಂದಿಸಿದ ಇಲಾಖೆ, ನಾಲ್ಕು ಜನರ ತಂಡವನ್ನ ಕಳುಹಿಸಿತ್ತು, ಒಂದು ಭಾರೀ ತಪ್ಪಿಸಿಕೊಂಡು ಹೋಗಿದ್ದರಿಂದ ಆ ಒಂದು ಸ್ಥಳದಲ್ಲಿ ಕೋತಿ ಸುಳಿದಿರಲಿಲ್ಲ, ಹೀಗಾಗಿ ಇನ್ನೊಂದು ಪ್ರದೇಶದಲ್ಲಿ ಬೋನಿಟ್ಟು ಮತ್ತೆ ಹಣ್ಣುಗಳನ್ನು ಇಟ್ಟು ಜೊತೆಗೆ ಮಿರರ್ ಇಡಲಾಗಿತ್ತು.

ಇಂದು ಕೋತಿಗೆ ಗ್ರಹಚಾರ ಬೋನಿನ ಮೂಲಕ ಕಾದು ಕೂತಿತ್ತೇನೋ, ಹಣ್ಣು ತಿನ್ನುತ್ತಾ ಬೋನಿನ ಒಳಗೆ ಹೋದ ತಕ್ಷಣ ಸಿಬ್ಬಂದಿ ಬೋನ್ ಲಾಕ್ ಮಾಡಿದ್ದು, ಕೊನೆಗೂ ಬೋನಿಗೆ ಮುಷ್ಯ ಬಿದ್ದಿದೆ, ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದು ಅರಣ್ಯ ಇಲಾಖೆಗೆ ಹಳೇ ಕುಂದುವಾಡ ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ. ಇನ್ನೂ ಸೆರೆಸಿಕ್ಕ ಕೋತಿಯನ್ನ ಕಾಡಿಗೆ ಬಿಡಲು ಸಿದ್ದತೆ ನಡೆಸಲಾಗಿದೆ, ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಇದಾಯಿತ್, ಹರೀಶ್, ಮರುಳಸಿದ್ದಪ್ಪ, ದೇವರಾಜ್, ಶರಣಪ್ಪ ಸೇರಿದಂತೆ ಮತ್ತಿತರರು ಭಾಗೀಯಾಗಿದ್ದರು.

ವಿಡಿಯೋ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending