ದಿನದ ಸುದ್ದಿ
ಎಂಟರ ಈ ಪುಟ್ಟ ಪೋರಿಯ ಬಹುಮಖ ಪ್ರತಿಭೆಯ ಲಿಸ್ಟ್ ಕಳಿದ್ರೆ ನೀವು ದಂಗಾಗುತ್ತೀರ..!

ಸುದ್ದಿದಿನ,ವಿಶೇಷ : ಸಿಂಡ್ರೆಲ್ಲಾ ಸಿಂಡ್ರೆಲ್ಲಾ ಅಂತ ಸಖತ್ತಾಗಿ ಹೆಜ್ಜೆ ಹಾಕುತ್ತಾ ಜೂ.ಬೊಂಬೆ ಮಾನ್ಯ. ಅನಿಸಿಕೊಂಡಿರುವ ಈ ಬಾಲೆ ತನ್ನ ಡ್ಯಾನ್ಸ್ ಪ್ರತಿಭೆ ಇಂದ ಹಲವಾರು ಪ್ರಶಸ್ತಿಗಳನ್ನ ತನ್ನ ಗರಿಗೇರಿಸಿಕೊಂಡಿದ್ದಾಳೆ. ಅಷ್ಟೇ ಅಲ್ಲ, ಬಿಗ್ ಬಾಸ್ ಖ್ಯಾತಿಯ ಕನ್ನಡ ರಾಪರ್ ಚಂದನ್ ಶೆಟ್ಟಿ ಅವರ ಮೇಲೇ ಒಂದು ರಾಪ್ ಸಾಂಗ್ ಮಾಡಿ ಸಖತ್ ಫೇಮಸ್ ಆದ್ಲು ಈ ಹುಡುಗಿ. ಇಷ್ಟಕ್ಕೇ ಈ ಮಾನ್ಯ ಳ ಪ್ರತಿಭೆ ನಿಂತಿಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಚಾಲಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬಕ್ಕೆ ಒಂದು ರಾಪ್ ಸಾಂಗ್ ಡೆಡಿಕೇಟ್ ಮಾಡಿದ್ದಳು.
ಡಬ್ ಸ್ಮಾಷ್ ಮಾಡುವ ಕ್ರೇಜ್ ಇರುವ ಈ ಹುಡುಗಿ ಗೆ ನಿವೇದಿತಾ ಗೌಡ -ಚಂದನ್ ಶೆಟ್ಟಿ ಎಂದರೆ ಪಂಚಪ್ರಾಣ. ನೋಡೋಕೆ ಅಚ್ಚು ನಿವೇದಿತಾ ಳಂತೆ ಸಿಂಗರಿಸಿ ಕೊಂಡು ಈಕೆ ಮಾಡಿದ ಡಬ್ ಸ್ಮಾಷ್ ಫುಲ್ ವೈರಲ್! ಜೂ.ನಿವೇದಿತಾ ಗೌಡ ಎಂದೇ ಖ್ಯಾತಿ ಪಡೆದಿರುವ ಈ ಹುಡುಗಿಯ ಟ್ಯಾಂಲೆಂಟ್ ಲಿಸ್ಟ್ ಇನ್ನೂ ಮುಗಿದಿಲ್ಲ!
ಯಾರು ಈ ಮಾನ್ಯ ?
ಜೆಪಿ ನಗರ ನಿವಾಸಿ ಚಿತ್ರಶ್ರೀ ಹರ್ಷ ಮತ್ತು ಹರ್ಷ ಬಿ.ಎಸ್. ಅವರ ಮುದ್ದು ಮಗಳು ಮಾನ್ಯ. ಎಂಟು ವರ್ಷದ ಮಾನ್ಯ ವಿಬ್ಗಯಾರ್ ಶಾಲೆಯ ಮೂರನೇ ತರಗತಿಯಲ್ಲಿ ಓದುತ್ತಿಯುವತಿಯರು ಪ್ರತಿಭಾನ್ವಿತ ವಿದ್ಯಾರ್ಥಿನಿ. ಓದುವುದು ಜೊತೆಗೆ ಸಾಂಸ್ಕೃತಿಕ ಚಟುವಟಿಕೆ ಯಲ್ಲೂ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಡ್ಯಾನ್ಸ್, ಹಾಡು, ಮಿಮಿಕ್ರೀ, ಫ್ಯಾಷನ್, ಕ್ರೀಡೆ, ಕವನ,ಪರಿಸರ ಪ್ರೇಮ , ಎಲ್ಲದರಲ್ಲೂ ಮುಂಚೂಣಿಯಲ್ಲಿದ್ದಾರೆ.
ಬಹುಮುಖ್ಯ ಪ್ರತಿಭೆ!
ಮಾನ್ಯ ಕರಾಟೆ ಕೂಡಾ ಕಲಿಯುತ್ತಿದ್ದಾಳೆ. ಸದ್ಯ ಗ್ರೀನ್ ಬೆಲ್ಟ್ ಆಗಿದ್ದು ಓ .ಸ್.ಕೆ ಫೆಡರೇಷನ್ ನ ರಾಜ್ಯ ಮಟ್ಟದ ಕರಾಟೆ ಪಂದ್ಯದಲ್ಲಿ ರನ್ನರ್ ಅಪ್ ಆಗಿ ಗೆದ್ದಿದ್ದಾಳೆ. ಸ್ವಿಮ್ಮಿಂಗ್, ಸ್ಕೇಟಿಂಗ್ ನಲ್ಲೂ ಆಸಕ್ತಿ ಹೊಂದಿರುವ ಮಾನ್ಯ ಹಲವಾರು ಪ್ರಶಸ್ತಿಗಳನ್ನ ಇದ್ದಿದ್ದು, ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾಳೆ.
ಪರಿಸರ ಪ್ರೇಮಿ
ಈ ಪುಟಾಣಿ, ಇಂಗ್ಲಿಷ್ ನಲ್ಲಿ ಪದ್ಯಗಳನ್ನು ಕೂಡಾ ಬರೆಯುತ್ತಾಳೆ. 2018ರ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ ಈಕೆ ತನ್ನ ಸ್ನೇಹಿತ ರೊಂದಿಗೆ ಸೇರಿ, “ಜಲ ಸಂರಕ್ಷಣಾ ಜಾತಾ” ನಡೆಸಿದಳು. ಈ ಪೋರಿಯರು ಕೂಗಿಗೆ ಓಗೊಟ್ಟ ನೂರಾರು ಮಕ್ಕಳು ಮತ್ತು ಮಹಿಳೆಯರು, ಮಕ್ಕಳೇ ಆಯೋಜಿಸಿದ್ದ ಈ ಜಾತಾದಲ್ಲಿ ಭಾಗವಹಿಸಿದ್ದರು.ಪುಟ್ಟೇನಹಳ್ಳಿಯ ಕೆರೆಯಲ್ಲಿ ಗಿಡಗಳನ್ನು ನಡೆವುದರೊಂದಿಗೆ ಈ ಜಾತಾ ಮುಕ್ತಾಯ ವಾಯಿತು.
ಫ್ಯಾಷನ್ ಲೋಕದಲ್ಲೂ ಮಿಂಚುತ್ತಿರುವ ಮಾನ್ಯ, 2018ರ ಕಿಡ್ಸ್ ಫ್ಯಾಷನ್ ವೀಕ್ ನ ಶೋ ಸ್ಟಾಪರ್ ಆಗಿ ಮಿಂಚಿದ್ದಾಳೆ. ಇತ್ತೀಚೆಗೆ ನಡೆದ ಸ್ಟೈಲಿಶ್ ಕಿಡ್ಸ್ ಸ್ಪರ್ಧೆ ಯಲ್ಲಿ “ಮಿಸ್ ಬ್ಯೂಟಿಫುಲ್” ಎಂಬ ಟೈಟಲ್ ತನ್ನ ಗರಿಗೇರಿಸಿಕೊಂಡಿದ್ದಾಳೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿಯು 51 ಸಾವಿರ ರೂಪಾಯಿ ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಮಿತಿ ಅನುಮೋದಿಸಿದೆ.
ಸಾಮಾನ್ಯ ದರ್ಜೆ ಭತ್ತಕ್ಕೆ ಕ್ವಿಂಟಲ್ಗೆ 2 ಸಾವಿರದ 40 ರೂಪಾಯಿಯಿಂದ 2ಸಾವಿರದ 183 ರೂಪಾಯಿಗೆ ಹಾಗೂ ’ಎ’ ದರ್ಜೆ ಭತ್ತಕ್ಕೆ 2 ಸಾವಿರದ 60 ರಿಂದ 2 ಸಾವಿರದ 203 ರೂಪಾಯಿಗೆ ಹೆಚ್ಚಿಸಲಾಗಿದೆ.
ರಾಗಿಗೆ ಪ್ರತಿ ಕ್ವಿಂಟಲ್ಗೆ 3 ಸಾವಿರದ 578 ರೂಪಾಯಿಯಿಂದ 3 ಸಾವಿರದ 846 ರೂಪಾಯಿಗೆ ಹೆಚ್ಚಿಸಲಾಗಿದೆ. ತೊಗರಿಗೆ ಪ್ರತಿ ಕ್ವಿಂಟಲ್ಗೆ 6 ಸಾವಿರದ 600 ರಿಂದ 7 ಸಾವಿರ ರೂಪಾಯಿಗೆ, ಹೆಸರು ಕಾಳಿಗೆ ಪ್ರತಿ ಕ್ವಿಂಟಲ್ಗೆ 7 ಸಾವಿರದ 755 ರಿಂದ 8 ಸಾವಿರದ 558 ರೂಪಾಯಿಗೆ, ಪ್ರತಿ ಕ್ವಿಂಟಲ್ ಉದ್ದಿಗೆ 6 ಸಾವಿರದ 600 ರಿಂದ 6 ಸಾವಿರದ 950 ರೂಪಾಯಿಗೆ ಹೆಚ್ಚಿಸಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ 2022-23ನೇ ಸಾಲಿಗೆ 330.5 ದಶಲಕ್ಷ ಟನ್ನಷ್ಟು ಆಹಾರ ಧಾನ್ಯ ಉತ್ಪಾದನೆ ಅಂದಾಜಿಸಲಾಗದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ6 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ಲೈಫ್ ಸ್ಟೈಲ್4 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ6 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ6 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ