ದಿನದ ಸುದ್ದಿ
ಎಂಟರ ಈ ಪುಟ್ಟ ಪೋರಿಯ ಬಹುಮಖ ಪ್ರತಿಭೆಯ ಲಿಸ್ಟ್ ಕಳಿದ್ರೆ ನೀವು ದಂಗಾಗುತ್ತೀರ..!
![](https://suddidina.com/wp-content/uploads/2018/06/Manya-suddidina3.jpg)
ಸುದ್ದಿದಿನ,ವಿಶೇಷ : ಸಿಂಡ್ರೆಲ್ಲಾ ಸಿಂಡ್ರೆಲ್ಲಾ ಅಂತ ಸಖತ್ತಾಗಿ ಹೆಜ್ಜೆ ಹಾಕುತ್ತಾ ಜೂ.ಬೊಂಬೆ ಮಾನ್ಯ. ಅನಿಸಿಕೊಂಡಿರುವ ಈ ಬಾಲೆ ತನ್ನ ಡ್ಯಾನ್ಸ್ ಪ್ರತಿಭೆ ಇಂದ ಹಲವಾರು ಪ್ರಶಸ್ತಿಗಳನ್ನ ತನ್ನ ಗರಿಗೇರಿಸಿಕೊಂಡಿದ್ದಾಳೆ. ಅಷ್ಟೇ ಅಲ್ಲ, ಬಿಗ್ ಬಾಸ್ ಖ್ಯಾತಿಯ ಕನ್ನಡ ರಾಪರ್ ಚಂದನ್ ಶೆಟ್ಟಿ ಅವರ ಮೇಲೇ ಒಂದು ರಾಪ್ ಸಾಂಗ್ ಮಾಡಿ ಸಖತ್ ಫೇಮಸ್ ಆದ್ಲು ಈ ಹುಡುಗಿ. ಇಷ್ಟಕ್ಕೇ ಈ ಮಾನ್ಯ ಳ ಪ್ರತಿಭೆ ನಿಂತಿಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಚಾಲಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬಕ್ಕೆ ಒಂದು ರಾಪ್ ಸಾಂಗ್ ಡೆಡಿಕೇಟ್ ಮಾಡಿದ್ದಳು.
ಡಬ್ ಸ್ಮಾಷ್ ಮಾಡುವ ಕ್ರೇಜ್ ಇರುವ ಈ ಹುಡುಗಿ ಗೆ ನಿವೇದಿತಾ ಗೌಡ -ಚಂದನ್ ಶೆಟ್ಟಿ ಎಂದರೆ ಪಂಚಪ್ರಾಣ. ನೋಡೋಕೆ ಅಚ್ಚು ನಿವೇದಿತಾ ಳಂತೆ ಸಿಂಗರಿಸಿ ಕೊಂಡು ಈಕೆ ಮಾಡಿದ ಡಬ್ ಸ್ಮಾಷ್ ಫುಲ್ ವೈರಲ್! ಜೂ.ನಿವೇದಿತಾ ಗೌಡ ಎಂದೇ ಖ್ಯಾತಿ ಪಡೆದಿರುವ ಈ ಹುಡುಗಿಯ ಟ್ಯಾಂಲೆಂಟ್ ಲಿಸ್ಟ್ ಇನ್ನೂ ಮುಗಿದಿಲ್ಲ!
ಯಾರು ಈ ಮಾನ್ಯ ?
ಜೆಪಿ ನಗರ ನಿವಾಸಿ ಚಿತ್ರಶ್ರೀ ಹರ್ಷ ಮತ್ತು ಹರ್ಷ ಬಿ.ಎಸ್. ಅವರ ಮುದ್ದು ಮಗಳು ಮಾನ್ಯ. ಎಂಟು ವರ್ಷದ ಮಾನ್ಯ ವಿಬ್ಗಯಾರ್ ಶಾಲೆಯ ಮೂರನೇ ತರಗತಿಯಲ್ಲಿ ಓದುತ್ತಿಯುವತಿಯರು ಪ್ರತಿಭಾನ್ವಿತ ವಿದ್ಯಾರ್ಥಿನಿ. ಓದುವುದು ಜೊತೆಗೆ ಸಾಂಸ್ಕೃತಿಕ ಚಟುವಟಿಕೆ ಯಲ್ಲೂ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಡ್ಯಾನ್ಸ್, ಹಾಡು, ಮಿಮಿಕ್ರೀ, ಫ್ಯಾಷನ್, ಕ್ರೀಡೆ, ಕವನ,ಪರಿಸರ ಪ್ರೇಮ , ಎಲ್ಲದರಲ್ಲೂ ಮುಂಚೂಣಿಯಲ್ಲಿದ್ದಾರೆ.
ಬಹುಮುಖ್ಯ ಪ್ರತಿಭೆ!
ಮಾನ್ಯ ಕರಾಟೆ ಕೂಡಾ ಕಲಿಯುತ್ತಿದ್ದಾಳೆ. ಸದ್ಯ ಗ್ರೀನ್ ಬೆಲ್ಟ್ ಆಗಿದ್ದು ಓ .ಸ್.ಕೆ ಫೆಡರೇಷನ್ ನ ರಾಜ್ಯ ಮಟ್ಟದ ಕರಾಟೆ ಪಂದ್ಯದಲ್ಲಿ ರನ್ನರ್ ಅಪ್ ಆಗಿ ಗೆದ್ದಿದ್ದಾಳೆ. ಸ್ವಿಮ್ಮಿಂಗ್, ಸ್ಕೇಟಿಂಗ್ ನಲ್ಲೂ ಆಸಕ್ತಿ ಹೊಂದಿರುವ ಮಾನ್ಯ ಹಲವಾರು ಪ್ರಶಸ್ತಿಗಳನ್ನ ಇದ್ದಿದ್ದು, ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾಳೆ.
ಪರಿಸರ ಪ್ರೇಮಿ
ಈ ಪುಟಾಣಿ, ಇಂಗ್ಲಿಷ್ ನಲ್ಲಿ ಪದ್ಯಗಳನ್ನು ಕೂಡಾ ಬರೆಯುತ್ತಾಳೆ. 2018ರ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ ಈಕೆ ತನ್ನ ಸ್ನೇಹಿತ ರೊಂದಿಗೆ ಸೇರಿ, “ಜಲ ಸಂರಕ್ಷಣಾ ಜಾತಾ” ನಡೆಸಿದಳು. ಈ ಪೋರಿಯರು ಕೂಗಿಗೆ ಓಗೊಟ್ಟ ನೂರಾರು ಮಕ್ಕಳು ಮತ್ತು ಮಹಿಳೆಯರು, ಮಕ್ಕಳೇ ಆಯೋಜಿಸಿದ್ದ ಈ ಜಾತಾದಲ್ಲಿ ಭಾಗವಹಿಸಿದ್ದರು.ಪುಟ್ಟೇನಹಳ್ಳಿಯ ಕೆರೆಯಲ್ಲಿ ಗಿಡಗಳನ್ನು ನಡೆವುದರೊಂದಿಗೆ ಈ ಜಾತಾ ಮುಕ್ತಾಯ ವಾಯಿತು.
ಫ್ಯಾಷನ್ ಲೋಕದಲ್ಲೂ ಮಿಂಚುತ್ತಿರುವ ಮಾನ್ಯ, 2018ರ ಕಿಡ್ಸ್ ಫ್ಯಾಷನ್ ವೀಕ್ ನ ಶೋ ಸ್ಟಾಪರ್ ಆಗಿ ಮಿಂಚಿದ್ದಾಳೆ. ಇತ್ತೀಚೆಗೆ ನಡೆದ ಸ್ಟೈಲಿಶ್ ಕಿಡ್ಸ್ ಸ್ಪರ್ಧೆ ಯಲ್ಲಿ “ಮಿಸ್ ಬ್ಯೂಟಿಫುಲ್” ಎಂಬ ಟೈಟಲ್ ತನ್ನ ಗರಿಗೇರಿಸಿಕೊಂಡಿದ್ದಾಳೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!