ದಿನದ ಸುದ್ದಿ
ಮಾರ್ವಾಡಿ ಮರ್ಡರ್..!
![](https://suddidina.com/wp-content/uploads/2018/10/Crime-tumkur-suddidina.jpg)
ಸುದ್ದಿದಿನ,ಚಿತ್ರದುರ್ಗ : ಆತ ದೂರದ ರಾಜಸ್ಥಾನದಿಂದ ಕರ್ನಾಟಕಕ್ಕೆ ಬಂದು ಬದುಕು ಕಟ್ಟಿಕೊಂಡಿದ್ದ, ಚಿನ್ನದ ಆಭರಣಗಳನ್ನ ಗಿರಿವಿ ಇಟ್ಟುಕೊಳ್ಳುವ ಲೇವಾದೇವಿ ವ್ಯವಹಾರ ಮಾಡುತ್ತಾ ಬದುಕು ಸಾಗಿಸುತ್ತಿದ್ದವನನ್ನ ರಾತ್ರಿ ಊಟಕ್ಕೆ ಕೂರುವ ಸಮಯಕ್ಕೆ ಸರಿಯಾಗಿ ಬಂದ ಯಾರೋ ದುಷ್ಕರ್ಮಿಗಳು, ಆತನನ್ನ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಅಷ್ಟಕ್ಕೂ ಆತನನ್ನ ಕೊಂದವರು ಯಾರು? ಯಾತಕ್ಕಾಗಿ ಆತನ ಕೊಲೆ ನಡೆದಿರಬಹುದು ಅನ್ನೋ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ.
ಮೂಲತಃ ರಾಜಸ್ಥಾನದ ಜೋಧ್ಪುರ್ ಜಿಲ್ಲೆ ಬಾರ್ನ್ ಗ್ರಾಮದ ಸುಮಾರು 58 ವರ್ಷ ವಯಸ್ಸಿನ ಕಲ್ಯಾಣ್ ಸಿಂಗ್, ಕರ್ನಾಟಕದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ರಾಮಗಿರಿ ಗ್ರಾಮದಲ್ಲಿ ಕಳೆದ ಹತ್ತಾರು ವರ್ಷಗಳಿಂದ ಗಿರವಿ ಅಂಗಡಿ ಇಟಕ್ಕೊಂಡು ಲೇವಾದೇವಿ ವ್ಯವಹಾರ ನಡೆಸುತ್ತಾ ಬದುಕು ಕಟ್ಟಿಕೊಂಡಿದ್ರು. ಕಳೆದ ಏಳೆಂಟು ವರ್ಷಗಳಿಂದ ಹೆಂಡಿತಿಯಿಂದ ದೂರಾಗಿ ರಾಮಗಿರಿಯಲ್ಲಿ ಏಕಾಂಗಿ ಜೀವನ ನಡೆಸುತ್ತಿದ್ದ ಕಲ್ಯಾಣ್ ಸಿಂಗ್ಗೆ ಇಬ್ಬರು ಗಂಡು ಮಕ್ಕಳಿದ್ದು, ಅವರೂ ಕೂಡ ಜೊತೆಯಲ್ಲಿಲ್ಲ. ಹೀಗಿರುವಾಗ ನಿನ್ನೆ ರಾತ್ರಿ ಊಟಕ್ಕೆ ಕುಳಿತುಕೊಳ್ಳುವ ಸಮಯಕ್ಕೆ ಸರಿಯಾಗಿ ಯಾರೋ ದುಷ್ಕರ್ಮಿಗಳು ಬಂದು ಕಲ್ಯಾಣ್ ಸಿಂಗ್ರನ್ನ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಇನ್ನೂ ಕೊಲೆ ನಡೆಯುವ ಮುನ್ನ ಕಲ್ಯಾಣ್ ಸಿಂಗ್ ಮನೆಯಲ್ಲಿ ಗಲಾಟೆ ನಡೆಯುತ್ತಿದ್ದ ಬಗ್ಗೆ ಅದೇಗೋ ಮಾಹಿತಿ ಕಲೆಹಾಕಿದ ಹೊಳಲ್ಕೆರೆ ಪೊಲೀಸರು, ಅದೇ ಗ್ರಾಮದಲ್ಲಿ ವಾಸವಿದ್ದ ಅವರದೇ ಜನಾಂಗದ ಜನರಿಗೆ ಮಾಹಿತಿ ನೀಡಿ ಕಲ್ಯಾಣ್ ಸಿಂಗ ಮನೆ ಬಳಿ ಹೋಗಿ ನೋಡುವಂತೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಸಂಬಂಧಿಕರ ಕಣ್ಣ ಮುಂದೆಯೇ ಬೈಕಿನಲ್ಲಿ ಬಂದಿದ್ದ ಮೂವರು ಹಂತಕರು ಪರಾರಿಯಾಗಿದ್ದಾರೆ. ತಕ್ಷಣ ಮನೆಯ ಒಳಹೊಕ್ಕು ನೋಡಿದಾಗ ಕಲ್ಯಾಣ್ ಸಿಂಗ್ ಬರ್ಬರವಾಗಿ ಹತ್ಯೆಯಾಗಿರೋದು ಕಂಡುಬಂದಿದೆ. ಹೀಗಾಗಿ ಕೌಟುಂಬಿಕ ಕಲಹದ ಕಾರಣದಿಂದಲೋ, ಅಥವಾ ಲೇವಾದೇವಿ ವ್ಯವಹಾರದಲ್ಲೋ ಈ ಕೊಲೆ ನಡೆದಿರಬಹುದು ಎಂದು ಅವರ ದೂರದ ಸಂಬಂಧಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ದೂರದ ರಾಜಸ್ಥಾನದಿಂದ ಬದುಕು ಹರಸಿ ಕರ್ನಾಟದಲ್ಲಿ ನೆಲೆಕಂಡಿದ್ದ ಚಿನ್ನದ ಲೇವಾದೇವಿ ವರ್ತಕ, ಕುಟುಂಬದಿಂದಲೂ ದೂರಾಗಿ ಏಕಾಂಗಿ ಜೀವನ ಸಾಗಿಸಿ ಇದೀಗ ಅನುಮನಾಸ್ಪದವಾಗಿ ಕೊಲೆಯಾಗಿದ್ದು, ಮೃತನ ಕುಟುಂದವರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹೊಳಲ್ಕೆರೆ ಠಾಣೆ ಪೊಲೀಸರು ಹಂತಕರ ಪತ್ತೆಗೆ ಜಾಲ ಬೀಸಿದ್ದು, ಪೊಲೀಸರ ತನಿಖೆಯಿಂದಷ್ಟೆ ಕೊಲೆಪಾತಕರು ಯಾರು? ಮತ್ತು ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬ ಸತ್ಯ ಹೊರಬೀಳಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!