Connect with us

ದಿನದ ಸುದ್ದಿ

ಇವರ ವಿವೇಕವಿಲ್ಲದ ವಿದ್ಯೆಗೆ ಬೆಂಕಿ ಬಿತ್ತು….‌ಛೇ !

Published

on

  • ಹಿರಿಯೂರು ಪ್ರಕಾಶ್

ವಿದ್ಯೆಗೂ ವಿವೇಕಕ್ಕೂ ಸಂಬಂಧವಿಲ್ಲವೆನ್ನುವುದು ಆಗಾಗ್ಗೆ ಸಾಬೀತಾಗುತ್ತಲೇ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ ಡಿಗ್ರಿಗಳನ್ನು ಪಡೆದು ವಿದ್ಯಾವಂತರಾದರಷ್ಟೇ ಸಾಲದು , ಅದಕ್ಕೆ ಪೂರಕವಾದ ಕಾಮನ್ ಸೆನ್ಸ್ ಹಾಗೂ ಸ್ವಲ್ಪಮಟ್ಟಿಗೆ ವಿವೇಕವನ್ನೂ ಬೆಳೆಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ನಿಮ್ಮ ಡಿಗ್ರಿ ಸರ್ಟಿಫಿಕೇಟ್ ಒಂಥರಾ ವೇಸ್ಟ್ ಪೇಪರ್ ಇದ್ದಂತೆ ಕಸದ ಬುಟ್ಟಿಗೂ ಅನ್ ಫ಼ಿಟ್ !

ಈ ವಿಷಯ ಈಗ್ಯಾಕೆ ಬಂತು ಅಂತೀರಾ..??

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಇಬ್ಬರು ಸುಶಿಕ್ಷಿತ ಭೋಧಕ ದಂಪತಿಗಳು ಪರಾಕಾಷ್ಠೆಯ ಮೂಢನಂಬಿಕೆಗೆ ಮರುಳಾಗಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನವೇ ವಯಸ್ಸಿಗೆ ಬಂದ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭೀಭತ್ಸ ಘಟನೆಯನ್ನು ನೋಡಿದಾಗ ನಾನು ಮೇಲೆ ಉಲ್ಲೇಖಿಸಿರುವ ಮಾತುಗಳ ಸತ್ಯಾಸತ್ಯತೆ ತಿಳಿಯುತ್ತದೆ.

ಎಂತಹಾ ಪರಮ ನೀಚರು ಈ ಜನ ! ತಂದೆಯಾದ ಪುರುಷೋತ್ತಮ್ ನಾಯ್ಡು ಮದನಪಲ್ಲಿಯ ಮಹಿಳಾ ಪದವಿ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೆಯೇ ತಾಯಿಯಾದ ಪದ್ಮಜಾ ಸಹಾ ಗಣಿತದಲ್ಲಿ ಗೋಲ್ಡ್ ಮೆಡಲ್ ಪಡೆದ ಶಿಕ್ಷಕಿ ಹಾಗೂ ವೈಸ್ ಪ್ರಿನ್ಸಿಪಾಲ್ ಅಂತೆ. ಈ ನರಾಧಮರ ನೀಚ ಕೃತ್ಯಕ್ಕೆ ಕಾರಣವೆಂದರೆ, ಮೊನ್ನೆ‌ ಭಾನುವಾರದಂದು ಕಲಿಯುಗ ಅಂತ್ಯವಾಗಿ ಮಾರನೆಯ ದಿನವೇ ಸತ್ಯಯುಗ ಆರಂಭವಾಗಿ ಆ ದಿನವೇ ತಮ್ಮ ಮಕ್ಕಳು‌ ಮರುಹುಟ್ಟು ಪಡೆಯಲಿದ್ದಾರೆಂದು ಯಾವನೋ ನಫ಼್ತಟಾಲ್ ನಾಲಾಯಕ್ ನನ್ಮಗ ಹೇಳಿದ್ದ ಮೂಢನಂಬಿಕೆಯ ಭವಿಷ್ಯವನ್ನು ನಂಬಿದ ಈ ಅಯೋಗ್ಯ ಪೇರೆಂಟ್ಸ್ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಮನೆಯ ದೇವರಕೋಣೆಯಲ್ಲಿ ವಿವಸ್ತ್ರಗೊಳಿಸಿ ತ್ರಿಶೂಲದಿಂದ ಹಾಗೂ ಡಂಬಲ್ಸ್‌ನಿಂದ ಕೊಚ್ಚಿ ಕೊಂದಿದ್ದಾರೆಂದು ಆನಂತರ ಶವಗಳ ಮುಂದೆ ಅವರ ತಾಯಿ ನರ್ತಿಸಿದ್ದಾರೆಂದೂ ವರದಿಯಾಗಿದೆ. ಇಷ್ಟಾದ ಮೇಲೂ ಕಿಂಚಿತ್ತೂ ಪಾಪ ಪ್ರಜ್ಞೆ ಯಿರದ ಈ ಪಾಪಿಗಳು ಪೋಲೀಸರ ಮುಂದೆಯೂ ತಮ್ಮ ಮಕ್ಕಳಿಬ್ಬರೂ ಮರುಹುಟ್ಟು ಪಡೆದು ಬರುತ್ತಾರೆಂದು ಹೇಳಬೇಕಾದರೆ ಹಾಗೂ ಪೋಲೀಸರು ಇನ್ನರ್ಧ ಘಂಟೆ ತಡವಾಗಿ ಬಂದಿದ್ದರೆ ಮಕ್ಕಳು ಬದುಕಿಬರುತ್ತಿದ್ದರೆಂದೂ ತಾನು ಶಿವನ ಅವತಾರವೆಂದೂ ಬಡಬಡಿಸಬೇಕಾದಲ್ಲಿ ಇವರು ಇನ್ನೆಂತಹಾ ಮೂಢನಂಬಿಕೆಯ ಜಗ ಭಂಡರಿರಬಹುದು ?? ಎಲ್ಲಕ್ಕಿಂತ ವಿಪರ್ಯಾಸವೆಂದರೆ ತಂದೆಯಾದವನು ವಿಜ್ಞಾನದ ವಿಷಯ ಭೋದಿಸುವವನಾದರೆ ತಾಯಿ ಗಣಿತದ ಶಿಕ್ಷಕಿ !ಈ ದಂಪತಿಗಳು ಅಲ್ಲಿನ ಆಧ್ಯಾತ್ಮಿಕ ಗುರು ಮೆಹರ್ ಬಾಬಾನ‌ ‘ಅನುನಾಯಿ”ಗಳಂತೆ !

ಈ ಘೋರ ಕೃತ್ಯಕ್ಕೆ ಬಲಿಯಾದ ಅಮಾಯಕ ಹೆಣ್ಣುಮಕ್ಕಳಾದ ಅಲೆಖ್ಯಾ ಹಾಗೂ ಸಾಯಿ ದಿವ್ಯಾ ಉದ್ಯೋಗ ನಿಮಿತ್ತ ಬೇರೆ ಊರುಗಳಲ್ಲಿದ್ದರೂ ಲಾಕ್ ಡೌನ್ ಕಾರಣದಿಂದ ತಂದೆ ತಾಯಿ ಜೊತೆಯಲ್ಲಿ ಇರಬೇಕಾಗಿದ್ದೇ ಮುಂದೆ ಅವರ ಹೀನಾಯ ಸಾವಿಗೆ ಕಾರಣವಾಗಬಹುದೆಂಬ ಅರಿವು ಅವರಿಗೆ ಇರಲಿಲ್ಲ ! ಈ ಜನ್ಮದಲ್ಲೇ ಅವರನ್ನು ಸುಖವಾಗಿರಿಸುವಂತಹಾ ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಸಹಜ ಯೋಚನೆ‌ ಬಿಟ್ಟು, ಇಲ್ಲದ ಸತ್ಯಯುಗದ ಹಿಂದೆ ಬಿದ್ದು ಇಂತಹಾ ಬರ್ಬರ ಕೃತ್ಯವೆಸಗಿರುವ ಈ ನರರಕ್ಕಸರ ತಲೆಯೊಳಗೆ ಅವನ್ಯಾವನೋ ಬೇಕೂಫ಼ಾ ಇನ್ನೆಂತಹಾ ನಂಬಿಕೆಯ ವಿಷ ತುಂಬಿದ್ದಿರಬಹುದು..??

ಈಗ ಹೇಳಿ ! ಕಲಿಯುಗದಲ್ಲಿ ಇಂತಹಾ ಘನಕಾರ್ಯ ಮಾಡಿದ ವಿದ್ಯಾವಂತ ದಂಪತಿಗಳನ್ನು ಯಾವ ವರ್ಗಕ್ಕೆ ಸೇರಿಸುತ್ತೀರಿ ?? ಇವರಂತಹಾ ಅವಿವೇಕಿಗಳು, ಮೂಢರು, ದುಷ್ಟರು, ಅಯೋಗ್ಯರು, ಕ್ರೂರಿಗಳು, ನಿಷ್ಕರುಣಿಗಳು, ಪಾಪಿಗಳು, ಸ್ವಾರ್ಥಿಗಳು, ಎಜುಕೇಟೆಡ್ ಫ಼ೂಲ್ ಗಳು, ಪರಮ ಪಾಪಿಷ್ಠರು…. ಮತ್ತಾರಾದರೂ ಇದ್ದಾರೆಯೇ ?? ತಾವೇ ಜನ್ಮಕೊಟ್ಟು ಸಾಕಿ ಬೆಳೆಸಿದ ಮಕ್ಕಳನ್ನು, ಅದರಲ್ಲೂ ವಯಸ್ಸಿಗೆ ಬಂದ ಹೆಣ್ಣುಮಕ್ಕಳನ್ನು ಈ ರೀತಿ ಮೂಢನಂಬಿಕೆಗೆ‌ ಬಲಿಯಾಗಿ ಅಮಾನವೀಯವಾಗಿ ಬಲಿ ತೆಗೆದುಕೊಂಡಿರುವ ಘಟನೆಯನ್ನು ಹಿಂದೆ ಎಂದಾದರೂ ಕೇಳಿದ್ದೀರಾ… ನೋಡಿದ್ದಿರಾ..! ಇದು ನನಗೆ ತಿಳಿದಂತೆ ‌ಇಡೀ ನಾಡಿನಲ್ಲೇ ಅಪರೂಪದಲ್ಲಿ ಅಪರೂಪದ್ದು !

ಇವರ ಮನೆ ಕಾಯ್ ಹೋಗ ! ಕಲಿಯುಗ ಮುಗಿದು‌ ಮತ್ತೇ ಸತ್ಯಯುಗದಲ್ಲಿ ಅದೇ ಮಕ್ಕಳು‌ ಹುಟ್ಟುತ್ತಾರೆಂಬ ಇವರ ಕ್ಷುದ್ರ ನಂಬಿಕೆಯೇ ಅತ್ಯಂತ ಡೆಂಜರಸ್ ! ಹೇಳುವ ಮುಂಡೆಗಂಡರಿಗಂತೂ ಮೂರುಕಾಸಿನ ಬುದ್ದಿ ಇಲ್ಲ. ಕಾಸಿಗಾಗಿ ಏನೆಲ್ಲಾ ಕಥೆ ಹೇಳುತ್ತಾರೆ. ಆದರೆ ಕಾಲೇಜಿನಲ್ಲಿ‌ ಪಾಠ ಮಾಡುವ, ಅದರಲ್ಲೂ ವಿಜ್ಞಾನ ಭೋಧಿಸುವ , ಅತ್ಯಂತ ಸುಶಿಕ್ಷಿತ ವರ್ಗಕ್ಕೆ ಸೇರಿದ ದಂಪತಿಗಳು ಇಂತಹವರ ಮಾತುಗಳನ್ನು ಕೇಳಿ ಈ ರೀತಿಯ ಭೀಭತ್ಸ ಕೃತ್ಯಕ್ಕೆ ಕೈ ಹಾಕುತ್ತಾರೆಂದರೆ ಅದಕ್ಕಿಂತ ದುರಂತ ಮತ್ತೊಂದಿದೆಯೇ ? ಅಲ್ಲಿಗೆ ಕಲಿತ ವಿದ್ಯೆಗೂ ತಲೆಯೊಳಗಿರಬೇಕಾದ ಕನಿಷ್ಠ ವಿವೇಕಕ್ಕೂ ಸಂಬಂಧವೇ ಇಲ್ಲದಂತಾಯಿತು !

ಮರೆಯುವ ಮುನ್ನ 

ಮನುಷ್ಯ ಏನೆಲ್ಲಾ ಓದಿರಬಹುದು, ಎಷ್ಟೆಷ್ಟು ಡಿಗ್ರಿಗಳನ್ನು ಮೈಗೆಲ್ಲಾ ಮೆತ್ತಿಕೊಂಡಿರಬಹುದು, ಆಕಾಶದಲ್ಲೇ ಸದಾ ಹಾರಾಡುತ್ತಿರಬಹುದು, ಕರಗದಷ್ಟು ಆಸ್ತಿಯನ್ನೇ ಸಂಪಾದಿಸಿರಬಹುದು ಆದರೆ ಮನುಷ್ಯ ಅಂದಮೇಲೆ ಇರಲೇಬೇಕಾದ ಕಾಮನ್ ಮಿನಿಮಮ್ ಕಾಮನ್ ಸೆನ್ಸ್ ಅವನಲ್ಲಿ ಇಲ್ಲವೆಂದಮೇಲೆ ಅವನ ಓದಿಗೆ ವಿದ್ಯೆಗೆ ಬೆಂಕಿ‌ಬಿತ್ತು ! ಹೆತ್ತಮಕ್ಕಳನ್ನೇ ಈ ಲೆವೆಲ್ ನಲ್ಲಿ ಭಯಂಕರವಾಗಿ ಕೊಲೆ ಮಾಡುವ ಮನಸ್ಥಿತಿಯಿರುವವರು ತಮ್ಮ ವಿಧ್ಯಾರ್ಥಿಗಳಿಗೆ ಯಾವ ನೈತಿಕತೆಯ ಪಾಠವನ್ನು ಹೇಳಿಕೊಡಬಲ್ಲರು.? ಓದಿದ ಓದಿಗೂ, ಕಲಿತ ವಿದ್ಯೆಗೂ, ಮಾಡುವ ವೃತ್ತಿಗೂ ಈಗ ಅವರು ಎಸಗಿರುವ ಹೀನ ಕೃತ್ಯಕ್ಕೂ ಏನಾದರೂ ತಾಳೆ ಇದೆಯೇ ? ಇಂತಹಾ ಘಟನೆಗಳನ್ನೆಲ್ಲಾ ನೋಡಿದಾಗ ಮನುಷ್ಯನಷ್ಟು ವಿಷಕಾರಿ ಅಪಾಯಕಾರಿ ಜಂತು ಈ ಭೂಮಿಯಲ್ಲೇ ಇಲ್ಲವೇನೋ ಅನಿಸುತ್ತದೆ.

ಇಂತಹಾ ವಿಕ್ಷಿಪ್ತ ಮನಸ್ಥಿತಿಗೆ ಏನು ಕಾರಣವೋ ಗೊತ್ತಿಲ್ಲ. ಆದರೆ ಯಾವ್ಯಾವುದೋ ಹೆಸರಿನಲ್ಲಿ ಹುದುಗಿರುವ ಅತಿಯಾದ ಮೂಢನಂಬಿಕೆ , ಭ್ರಮಾತ್ಮಕ ಲೋಕ, ಮಾನವೀಯ ಮೌಲ್ಯಗಳ ಬೆಲೆಯರಿಯದ ಬದುಕು,
ಸ್ವಯಂಘೋಷಿತ ದೇವಮಾನವರು, ಬಾಬಾಗಳು , ಮಾಟ ಮಂತ್ರ ಮಾಡುವವರ ಮೇಲಿನ ಕುರುಡು ನಂಬಿಕೆ ಹಾಗೂ ಅಂತಹವರು ಹೇಳಿದ್ದೇ ವೇದವಾಕ್ಯವೆಂದು ನಂಬುವ ಅಜ್ಞಾನ…. ಈ ಎಲ್ಲವೂ ಕೆಲಮಟ್ಟಿಗೆ ಕಾರಣವಿರಲೂಬಹುದು..!

ಏನಾದರೂ ಇರಲಿ ! ಹೆತ್ತವರಿಂದಲೇ ಬರ್ಬರವಾಗಿ ಹತ್ಯೆಗೊಳಗಾಗಿ ನೆತ್ತರ ಮಡುವಲ್ಲಿ ಕೊನೆಯುಸಿರೆಳೆದ ಆ ಅಮಾಯಕ ಹೆಣ್ಣುಮಕ್ಕಳ ಆತ್ಮಕ್ಕೆ ಶಾಂತಿ ಕೋರುವುದು ಹಾಗೂ ಇಂತಹಾ ದುರ್ಘಟನೆಗಳು ಮತ್ತೇ ನೆಡೆಯದಿರಲಿ ಎಂದು ಪ್ರಾರ್ಥಿಸುವುದೊಂದೇ ಉಳಿದಿರುವ ದಾರಿ..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.

ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ

ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.

ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ

ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.

ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ

ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.

ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ

ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.

ಭವಿಷ್ಯದ ಆಶಯ

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending