ದಿನದ ಸುದ್ದಿ
ಇವರ ವಿವೇಕವಿಲ್ಲದ ವಿದ್ಯೆಗೆ ಬೆಂಕಿ ಬಿತ್ತು….ಛೇ !
- ಹಿರಿಯೂರು ಪ್ರಕಾಶ್
ವಿದ್ಯೆಗೂ ವಿವೇಕಕ್ಕೂ ಸಂಬಂಧವಿಲ್ಲವೆನ್ನುವುದು ಆಗಾಗ್ಗೆ ಸಾಬೀತಾಗುತ್ತಲೇ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ ಡಿಗ್ರಿಗಳನ್ನು ಪಡೆದು ವಿದ್ಯಾವಂತರಾದರಷ್ಟೇ ಸಾಲದು , ಅದಕ್ಕೆ ಪೂರಕವಾದ ಕಾಮನ್ ಸೆನ್ಸ್ ಹಾಗೂ ಸ್ವಲ್ಪಮಟ್ಟಿಗೆ ವಿವೇಕವನ್ನೂ ಬೆಳೆಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ನಿಮ್ಮ ಡಿಗ್ರಿ ಸರ್ಟಿಫಿಕೇಟ್ ಒಂಥರಾ ವೇಸ್ಟ್ ಪೇಪರ್ ಇದ್ದಂತೆ ಕಸದ ಬುಟ್ಟಿಗೂ ಅನ್ ಫ಼ಿಟ್ !
ಈ ವಿಷಯ ಈಗ್ಯಾಕೆ ಬಂತು ಅಂತೀರಾ..??
ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಇಬ್ಬರು ಸುಶಿಕ್ಷಿತ ಭೋಧಕ ದಂಪತಿಗಳು ಪರಾಕಾಷ್ಠೆಯ ಮೂಢನಂಬಿಕೆಗೆ ಮರುಳಾಗಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನವೇ ವಯಸ್ಸಿಗೆ ಬಂದ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭೀಭತ್ಸ ಘಟನೆಯನ್ನು ನೋಡಿದಾಗ ನಾನು ಮೇಲೆ ಉಲ್ಲೇಖಿಸಿರುವ ಮಾತುಗಳ ಸತ್ಯಾಸತ್ಯತೆ ತಿಳಿಯುತ್ತದೆ.
ಎಂತಹಾ ಪರಮ ನೀಚರು ಈ ಜನ ! ತಂದೆಯಾದ ಪುರುಷೋತ್ತಮ್ ನಾಯ್ಡು ಮದನಪಲ್ಲಿಯ ಮಹಿಳಾ ಪದವಿ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೆಯೇ ತಾಯಿಯಾದ ಪದ್ಮಜಾ ಸಹಾ ಗಣಿತದಲ್ಲಿ ಗೋಲ್ಡ್ ಮೆಡಲ್ ಪಡೆದ ಶಿಕ್ಷಕಿ ಹಾಗೂ ವೈಸ್ ಪ್ರಿನ್ಸಿಪಾಲ್ ಅಂತೆ. ಈ ನರಾಧಮರ ನೀಚ ಕೃತ್ಯಕ್ಕೆ ಕಾರಣವೆಂದರೆ, ಮೊನ್ನೆ ಭಾನುವಾರದಂದು ಕಲಿಯುಗ ಅಂತ್ಯವಾಗಿ ಮಾರನೆಯ ದಿನವೇ ಸತ್ಯಯುಗ ಆರಂಭವಾಗಿ ಆ ದಿನವೇ ತಮ್ಮ ಮಕ್ಕಳು ಮರುಹುಟ್ಟು ಪಡೆಯಲಿದ್ದಾರೆಂದು ಯಾವನೋ ನಫ಼್ತಟಾಲ್ ನಾಲಾಯಕ್ ನನ್ಮಗ ಹೇಳಿದ್ದ ಮೂಢನಂಬಿಕೆಯ ಭವಿಷ್ಯವನ್ನು ನಂಬಿದ ಈ ಅಯೋಗ್ಯ ಪೇರೆಂಟ್ಸ್ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಮನೆಯ ದೇವರಕೋಣೆಯಲ್ಲಿ ವಿವಸ್ತ್ರಗೊಳಿಸಿ ತ್ರಿಶೂಲದಿಂದ ಹಾಗೂ ಡಂಬಲ್ಸ್ನಿಂದ ಕೊಚ್ಚಿ ಕೊಂದಿದ್ದಾರೆಂದು ಆನಂತರ ಶವಗಳ ಮುಂದೆ ಅವರ ತಾಯಿ ನರ್ತಿಸಿದ್ದಾರೆಂದೂ ವರದಿಯಾಗಿದೆ. ಇಷ್ಟಾದ ಮೇಲೂ ಕಿಂಚಿತ್ತೂ ಪಾಪ ಪ್ರಜ್ಞೆ ಯಿರದ ಈ ಪಾಪಿಗಳು ಪೋಲೀಸರ ಮುಂದೆಯೂ ತಮ್ಮ ಮಕ್ಕಳಿಬ್ಬರೂ ಮರುಹುಟ್ಟು ಪಡೆದು ಬರುತ್ತಾರೆಂದು ಹೇಳಬೇಕಾದರೆ ಹಾಗೂ ಪೋಲೀಸರು ಇನ್ನರ್ಧ ಘಂಟೆ ತಡವಾಗಿ ಬಂದಿದ್ದರೆ ಮಕ್ಕಳು ಬದುಕಿಬರುತ್ತಿದ್ದರೆಂದೂ ತಾನು ಶಿವನ ಅವತಾರವೆಂದೂ ಬಡಬಡಿಸಬೇಕಾದಲ್ಲಿ ಇವರು ಇನ್ನೆಂತಹಾ ಮೂಢನಂಬಿಕೆಯ ಜಗ ಭಂಡರಿರಬಹುದು ?? ಎಲ್ಲಕ್ಕಿಂತ ವಿಪರ್ಯಾಸವೆಂದರೆ ತಂದೆಯಾದವನು ವಿಜ್ಞಾನದ ವಿಷಯ ಭೋದಿಸುವವನಾದರೆ ತಾಯಿ ಗಣಿತದ ಶಿಕ್ಷಕಿ !ಈ ದಂಪತಿಗಳು ಅಲ್ಲಿನ ಆಧ್ಯಾತ್ಮಿಕ ಗುರು ಮೆಹರ್ ಬಾಬಾನ ‘ಅನುನಾಯಿ”ಗಳಂತೆ !
ಈ ಘೋರ ಕೃತ್ಯಕ್ಕೆ ಬಲಿಯಾದ ಅಮಾಯಕ ಹೆಣ್ಣುಮಕ್ಕಳಾದ ಅಲೆಖ್ಯಾ ಹಾಗೂ ಸಾಯಿ ದಿವ್ಯಾ ಉದ್ಯೋಗ ನಿಮಿತ್ತ ಬೇರೆ ಊರುಗಳಲ್ಲಿದ್ದರೂ ಲಾಕ್ ಡೌನ್ ಕಾರಣದಿಂದ ತಂದೆ ತಾಯಿ ಜೊತೆಯಲ್ಲಿ ಇರಬೇಕಾಗಿದ್ದೇ ಮುಂದೆ ಅವರ ಹೀನಾಯ ಸಾವಿಗೆ ಕಾರಣವಾಗಬಹುದೆಂಬ ಅರಿವು ಅವರಿಗೆ ಇರಲಿಲ್ಲ ! ಈ ಜನ್ಮದಲ್ಲೇ ಅವರನ್ನು ಸುಖವಾಗಿರಿಸುವಂತಹಾ ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಸಹಜ ಯೋಚನೆ ಬಿಟ್ಟು, ಇಲ್ಲದ ಸತ್ಯಯುಗದ ಹಿಂದೆ ಬಿದ್ದು ಇಂತಹಾ ಬರ್ಬರ ಕೃತ್ಯವೆಸಗಿರುವ ಈ ನರರಕ್ಕಸರ ತಲೆಯೊಳಗೆ ಅವನ್ಯಾವನೋ ಬೇಕೂಫ಼ಾ ಇನ್ನೆಂತಹಾ ನಂಬಿಕೆಯ ವಿಷ ತುಂಬಿದ್ದಿರಬಹುದು..??
ಈಗ ಹೇಳಿ ! ಕಲಿಯುಗದಲ್ಲಿ ಇಂತಹಾ ಘನಕಾರ್ಯ ಮಾಡಿದ ವಿದ್ಯಾವಂತ ದಂಪತಿಗಳನ್ನು ಯಾವ ವರ್ಗಕ್ಕೆ ಸೇರಿಸುತ್ತೀರಿ ?? ಇವರಂತಹಾ ಅವಿವೇಕಿಗಳು, ಮೂಢರು, ದುಷ್ಟರು, ಅಯೋಗ್ಯರು, ಕ್ರೂರಿಗಳು, ನಿಷ್ಕರುಣಿಗಳು, ಪಾಪಿಗಳು, ಸ್ವಾರ್ಥಿಗಳು, ಎಜುಕೇಟೆಡ್ ಫ಼ೂಲ್ ಗಳು, ಪರಮ ಪಾಪಿಷ್ಠರು…. ಮತ್ತಾರಾದರೂ ಇದ್ದಾರೆಯೇ ?? ತಾವೇ ಜನ್ಮಕೊಟ್ಟು ಸಾಕಿ ಬೆಳೆಸಿದ ಮಕ್ಕಳನ್ನು, ಅದರಲ್ಲೂ ವಯಸ್ಸಿಗೆ ಬಂದ ಹೆಣ್ಣುಮಕ್ಕಳನ್ನು ಈ ರೀತಿ ಮೂಢನಂಬಿಕೆಗೆ ಬಲಿಯಾಗಿ ಅಮಾನವೀಯವಾಗಿ ಬಲಿ ತೆಗೆದುಕೊಂಡಿರುವ ಘಟನೆಯನ್ನು ಹಿಂದೆ ಎಂದಾದರೂ ಕೇಳಿದ್ದೀರಾ… ನೋಡಿದ್ದಿರಾ..! ಇದು ನನಗೆ ತಿಳಿದಂತೆ ಇಡೀ ನಾಡಿನಲ್ಲೇ ಅಪರೂಪದಲ್ಲಿ ಅಪರೂಪದ್ದು !
ಇವರ ಮನೆ ಕಾಯ್ ಹೋಗ ! ಕಲಿಯುಗ ಮುಗಿದು ಮತ್ತೇ ಸತ್ಯಯುಗದಲ್ಲಿ ಅದೇ ಮಕ್ಕಳು ಹುಟ್ಟುತ್ತಾರೆಂಬ ಇವರ ಕ್ಷುದ್ರ ನಂಬಿಕೆಯೇ ಅತ್ಯಂತ ಡೆಂಜರಸ್ ! ಹೇಳುವ ಮುಂಡೆಗಂಡರಿಗಂತೂ ಮೂರುಕಾಸಿನ ಬುದ್ದಿ ಇಲ್ಲ. ಕಾಸಿಗಾಗಿ ಏನೆಲ್ಲಾ ಕಥೆ ಹೇಳುತ್ತಾರೆ. ಆದರೆ ಕಾಲೇಜಿನಲ್ಲಿ ಪಾಠ ಮಾಡುವ, ಅದರಲ್ಲೂ ವಿಜ್ಞಾನ ಭೋಧಿಸುವ , ಅತ್ಯಂತ ಸುಶಿಕ್ಷಿತ ವರ್ಗಕ್ಕೆ ಸೇರಿದ ದಂಪತಿಗಳು ಇಂತಹವರ ಮಾತುಗಳನ್ನು ಕೇಳಿ ಈ ರೀತಿಯ ಭೀಭತ್ಸ ಕೃತ್ಯಕ್ಕೆ ಕೈ ಹಾಕುತ್ತಾರೆಂದರೆ ಅದಕ್ಕಿಂತ ದುರಂತ ಮತ್ತೊಂದಿದೆಯೇ ? ಅಲ್ಲಿಗೆ ಕಲಿತ ವಿದ್ಯೆಗೂ ತಲೆಯೊಳಗಿರಬೇಕಾದ ಕನಿಷ್ಠ ವಿವೇಕಕ್ಕೂ ಸಂಬಂಧವೇ ಇಲ್ಲದಂತಾಯಿತು !
ಮರೆಯುವ ಮುನ್ನ
ಮನುಷ್ಯ ಏನೆಲ್ಲಾ ಓದಿರಬಹುದು, ಎಷ್ಟೆಷ್ಟು ಡಿಗ್ರಿಗಳನ್ನು ಮೈಗೆಲ್ಲಾ ಮೆತ್ತಿಕೊಂಡಿರಬಹುದು, ಆಕಾಶದಲ್ಲೇ ಸದಾ ಹಾರಾಡುತ್ತಿರಬಹುದು, ಕರಗದಷ್ಟು ಆಸ್ತಿಯನ್ನೇ ಸಂಪಾದಿಸಿರಬಹುದು ಆದರೆ ಮನುಷ್ಯ ಅಂದಮೇಲೆ ಇರಲೇಬೇಕಾದ ಕಾಮನ್ ಮಿನಿಮಮ್ ಕಾಮನ್ ಸೆನ್ಸ್ ಅವನಲ್ಲಿ ಇಲ್ಲವೆಂದಮೇಲೆ ಅವನ ಓದಿಗೆ ವಿದ್ಯೆಗೆ ಬೆಂಕಿಬಿತ್ತು ! ಹೆತ್ತಮಕ್ಕಳನ್ನೇ ಈ ಲೆವೆಲ್ ನಲ್ಲಿ ಭಯಂಕರವಾಗಿ ಕೊಲೆ ಮಾಡುವ ಮನಸ್ಥಿತಿಯಿರುವವರು ತಮ್ಮ ವಿಧ್ಯಾರ್ಥಿಗಳಿಗೆ ಯಾವ ನೈತಿಕತೆಯ ಪಾಠವನ್ನು ಹೇಳಿಕೊಡಬಲ್ಲರು.? ಓದಿದ ಓದಿಗೂ, ಕಲಿತ ವಿದ್ಯೆಗೂ, ಮಾಡುವ ವೃತ್ತಿಗೂ ಈಗ ಅವರು ಎಸಗಿರುವ ಹೀನ ಕೃತ್ಯಕ್ಕೂ ಏನಾದರೂ ತಾಳೆ ಇದೆಯೇ ? ಇಂತಹಾ ಘಟನೆಗಳನ್ನೆಲ್ಲಾ ನೋಡಿದಾಗ ಮನುಷ್ಯನಷ್ಟು ವಿಷಕಾರಿ ಅಪಾಯಕಾರಿ ಜಂತು ಈ ಭೂಮಿಯಲ್ಲೇ ಇಲ್ಲವೇನೋ ಅನಿಸುತ್ತದೆ.
ಇಂತಹಾ ವಿಕ್ಷಿಪ್ತ ಮನಸ್ಥಿತಿಗೆ ಏನು ಕಾರಣವೋ ಗೊತ್ತಿಲ್ಲ. ಆದರೆ ಯಾವ್ಯಾವುದೋ ಹೆಸರಿನಲ್ಲಿ ಹುದುಗಿರುವ ಅತಿಯಾದ ಮೂಢನಂಬಿಕೆ , ಭ್ರಮಾತ್ಮಕ ಲೋಕ, ಮಾನವೀಯ ಮೌಲ್ಯಗಳ ಬೆಲೆಯರಿಯದ ಬದುಕು,
ಸ್ವಯಂಘೋಷಿತ ದೇವಮಾನವರು, ಬಾಬಾಗಳು , ಮಾಟ ಮಂತ್ರ ಮಾಡುವವರ ಮೇಲಿನ ಕುರುಡು ನಂಬಿಕೆ ಹಾಗೂ ಅಂತಹವರು ಹೇಳಿದ್ದೇ ವೇದವಾಕ್ಯವೆಂದು ನಂಬುವ ಅಜ್ಞಾನ…. ಈ ಎಲ್ಲವೂ ಕೆಲಮಟ್ಟಿಗೆ ಕಾರಣವಿರಲೂಬಹುದು..!
ಏನಾದರೂ ಇರಲಿ ! ಹೆತ್ತವರಿಂದಲೇ ಬರ್ಬರವಾಗಿ ಹತ್ಯೆಗೊಳಗಾಗಿ ನೆತ್ತರ ಮಡುವಲ್ಲಿ ಕೊನೆಯುಸಿರೆಳೆದ ಆ ಅಮಾಯಕ ಹೆಣ್ಣುಮಕ್ಕಳ ಆತ್ಮಕ್ಕೆ ಶಾಂತಿ ಕೋರುವುದು ಹಾಗೂ ಇಂತಹಾ ದುರ್ಘಟನೆಗಳು ಮತ್ತೇ ನೆಡೆಯದಿರಲಿ ಎಂದು ಪ್ರಾರ್ಥಿಸುವುದೊಂದೇ ಉಳಿದಿರುವ ದಾರಿ..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ5 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ


