Connect with us

ದಿನದ ಸುದ್ದಿ

ಆತ್ಮೀಯ ಮುಸ್ಲಿಂ ಗೆಳೆಯರಿಗಾಗಿ, ಗೌರವಪೂರ್ವಕವಾಗಿ..!

Published

on

  • ವಿವೇಕಾನಂದ. ಹೆಚ್.ಕೆ.

ಹೌದು, ನಿಮಗೆ ತ್ರಿವಳಿ ತಲ್ಲಾಖ್ ವಿಷಯದಲ್ಲಿ, ಬಾಬರಿ ಮಸೀದಿ ವಿವಾದದ ತೀರ್ಪಿನ ವಿಷಯದಲ್ಲಿ, ಗೋ ಮಾಂಸ ನಿಷೇಧದ ವಿಚಾರದಲ್ಲಿ, ಸಿಎಎ – ಎನ್ ಆರ್ ಸಿ ತಿದ್ದುಪಡಿಯಲ್ಲಿ ಒಟ್ಟಾರೆಯಾಗಿ ಭಾರತದ ಈಗಿನ ಸರ್ಕಾರದ ಧೋರಣೆಯ ಬಗ್ಗೆ ಅಸಮಾಧಾನ ಇರಬಹುದು ಅಥವಾ ಇದೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಅದರ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ಸಹ ಇತ್ತೀಚಿನ ವರೆಗೂ ನಡೆಯುತ್ತಿತ್ತು. ಅದು ನಿಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕು.

ಆದರೆ ಈ ನಡುವೆ ಅನಿರೀಕ್ಷಿತವಾಗಿ ಕೊರೋನಾ ವೈರಸ್ ಇಡೀ ದೇಶವನ್ನು ಆಕ್ರಮಿಸಿ ಜೀವ ಉಳಿಸಿಕೊಳ್ಳುವುದೇ ಒಂದು ದೊಡ್ಡ ಸಾಹಸವಾಗಿದೆ. ಜಾತಿ ಧರ್ಮ ಭಾಷೆ ಪಕ್ಷ ಪಂಥ ದೇವರು ಎಲ್ಲವೂ ಹಿನ್ನೆಲೆಗೆ ಸರಿದಿದೆ ಮತ್ತು ಸರಿಯಲೇಬೇಕು.

ಮಾಧ್ಯಮಗಳಲ್ಲಿ ಸ್ವಲ್ಪ ಪಕ್ಷಪಾತ, ದುಡುಕುತನ, ಅತಿರಂಜಿತ ವರದಿಗಳು ಇದೆ ಎಂದೇ ಭಾವಿಸಿದರೂ,ಇತರೆ ಧರ್ಮದ ಕೆಲವು ಕಾರ್ಯಕ್ರಮಗಳು ಸಹ ನಡೆದವು ಎಂಬುದು ನಿಜವಾದರೂ ಇಲ್ಲಿ ಯಾವುದೇ ನೆಪ ಹೇಳದೆ, ಯಾವುದೇ ಕಾರಣ ನೀಡದೆ ವೈದ್ಯಕೀಯ ಕ್ಷೇತ್ರದ ಸಲಹೆಯಂತೆ ಸರ್ಕಾರಗಳು ತೆಗೆದುಕೊಳ್ಳುವ ತೀರ್ಮಾನಗಳನ್ನು ಸಂಪೂರ್ಣ ಬೆಂಬಲಿಸುವ ಕರ್ತವ್ಯ ಮತ್ತು ಜವಾಬ್ದಾರಿ ಎಲ್ಲರಿಗೂ ಇದೆ.

ವಿರೋಧಿ ಗುಂಪಿನವರು ಒಂದಷ್ಟು ರಾಜಕೀಯ ಗೊಳಿಸುವುದು, ಪ್ರಚೋದಿಸುವುದು ಇದ್ದರೂ ಅದಕ್ಕೆ ಈಗ ಹೆಚ್ಚಿನ ಮಹತ್ವ ಕೊಡಬಾರದು. ಈ ದೇಶದ ಹಕ್ಕು ಮತ್ತು ಕರ್ತವ್ಯಗಳು ನಿಮಗೂ ಸಹ ಸಮ ಪ್ರಮಾಣದಲ್ಲಿ ಇದೆ. ಇದನ್ನು ಈಗ ಏಕೆ ಹೇಳಬೇಕಾಯಿತೆಂದರೆ ಮಸೀದಿಗಳಲ್ಲಿ ಈಗಲೂ ಸಾಮೂಹಿಕ ಪ್ರಾರ್ಥನೆಯ‌ ವರದಿಗಳು ಅಲ್ಲಲ್ಲಿ‌ ಕೇಳಿ ಬರುತ್ತಿರುವುದರಿಂದ.

ಇದು ಸಾವು ಬದುಕಿನ ಮತ್ತು ಹಸಿವು ಅಸ್ತಿತ್ವದ ಪ್ರಶ್ನೆ. ಇಡೀ ಭಾರತೀಯ ಜನ ಸಮುದಾಯ ಆತಂಕದಿಂದ ಇದ್ದು ಪ್ರತಿ ಕ್ಷಣವನ್ನೂ ತುಂಬಾ ಎಚ್ಚರಿಕೆಯಿಂದ ಗಮನಿಸುತ್ತಿದೆ. ಈಗ ಇಡುವ ಪ್ರತಿ ಹೆಜ್ಜೆಯೂ ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತದೆ ಮತ್ತು ಜನರ ಮನಸ್ಸಿನಲ್ಲಿ ಉಳಿಯುತ್ತದೆ.

ಈಗಾಗಲೇ ಮನಸ್ಸುಗಳು ಒಡೆದಿವೆ. ಎರಡೂ ಕಡೆ ಪ್ರಚೋದನಾತ್ಮಕ ಮಾತುಗಳು ಪರಿಸ್ಥಿತಿ ಕೈ ಮೀರುವಂತೆ ಮಾಡಿದೆ. ಧರ್ಮ, ರಾಜಕೀಯ ಮನೆಯೊಳಗೆ ಮನಸ್ಸುಗಳೊಳಗೆ ಬಂದಾಗಿದೆ. ಧರ್ಮಾಂಧತೆ ದೇಶವನ್ನು ಆಕ್ರಮಿಸಿಕೊಂಡಿದೆ. ಮೊದಲಿನಿಂದಲೂ ಇದ್ದ ಹಿಂದೂ ಮುಸ್ಲಿಂ ವೈಮನಸ್ಯ ಈಗ ಇನ್ನೂ ದೊಡ್ಡದಾಗಿದೆ.

ಮುಸ್ಲಿಂ ಭಾಂಧವರೆ ನಿಮ್ಮ ಆತ್ಮಾವಲೋಕನಕ್ಕಾಗಿ ಇತ್ತೀಚಿನ ಒಂದು ವರದಿ

38.40 ಲಕ್ಷ ಜನರ ಸಾವು. ಕೇವಲ 9 ವರ್ಷಗಳಲ್ಲಿ.2011 ರಿಂದ ಇಲ್ಲಿಯವರೆಗೆ.ಸಿರಿಯಾ ದೇಶದ ಆಂತರಿಕ ಯುದ್ಧದಿಂದಾಗಿ.ಗಂಡಸರೆಷ್ಟೋ, ಹೆಂಗಸರೆಷ್ಟೋ, ಮಕ್ಕಳೆಷ್ಟೋ,.ಯಾವ ಯಾವ ಭೀಕರ ರೀತಿಯಲ್ಲಿ ಯಾತನೆ ಅನುಭವಿಸಿ ಸತ್ತರೋ. ಬಹುತೇಕ ತಮ್ಮ ಅರ್ಧ ಆಯಸ್ಸನ್ನೂ ಮುಗಿಸದೇ ತೀರಿ ಹೋದರು.ಅವರನ್ನು ಅಲ್ಲಾ ಎಂಬ ದೇವರು ಸೃಷ್ಟಿಸಿದ್ದರು, ಇಸ್ಲಾಂ ಎಂಬ ಧರ್ಮ ಬೆಳೆಸಿತ್ತು, ಷಿಯಾ ಸುನ್ನಿ ಖುರ್ದ್ ಎಂಬ ಹೆಸರುಗಳು ವಿಭಜಿಸಿದ್ದವು ಎಂದು ನಂಬಲಾಗುತ್ತದೆ. ಆದರೆ ಯಾವುದೂ ಅವರ ರಕ್ಷಣೆಗೆ ಬರಲಿಲ್ಲ, ಕೇವಲ ಸುಮಾರು 1.80 ಕೋಟಿ ಜನಸಂಖ್ಯೆಯ ದೇಶದಲ್ಲಿ ಘರ್ಷಣೆಗೆ ಸತ್ತವರು 38.40 ಲಕ್ಷ ಜನರು.

ನನಗವರು ಮನುಷ್ಯರು ಮಾತ್ರ

ಸೃಷ್ಟಿಯಲ್ಲಿ ಗಂಡು ಹೆಣ್ಣಿನ ಮಿಲನದಿಂದ ಮತ್ತೊಂದು ಜೀವ ಜನ್ಮ ತಾಳುತ್ತದೆ.‌ಸಿರಿಯಾದಲ್ಲಿ ಮಗು ಜನಸಿದರೆ ಮುಸ್ಲಿಂ ಎನ್ನುತ್ತಾರೆ. ಇಂಗ್ಲೆಂಡ್ ನಲ್ಲಿ ಜನಸಿದರೆ ಕ್ರಿಶ್ಚಿಯನ್, ಇಸ್ರೇಲ್ ನಲ್ಲಿ ಯಹೂದಿ, ಜಪಾನ್ ನಲ್ಲಿ ಬೌದ್ದ, ಭಾರತದಲ್ಲಿ ಹಿಂದೂ ಎಂದು ಸಾಮಾನ್ಯವಾಗಿ ಕರೆಯಲಾಗುತ್ತದೆ .ಈ ವ್ಯತ್ಯಾಸಗಳೇ ಮಾನವ ಕುಲಕ್ಕೆ ಶಾಪವಾಗಿ ಪರಿಣಮಿಸಿದೆ.

ಹಿಂದೆ ಕ್ರಿಶ್ಚಿಯನ್ ಧರ್ಮದ ಯೂರೋಪಿಯನ್ ದೇಶಗಳಲ್ಲೂ ಇದಕ್ಕಿಂತ ಭಯಂಕರ ಮಾನವ ಹತ್ಯಾಕಾಂಡಗಳು ನಡೆದಿವೆ.ಫ್ರೆಂಚ್‌ ಕ್ರಾಂತಿಯ ರಕ್ತಪಾತ, ಎರಡು ಮಹಾಯುದ್ಧಗಳು, ಇಟಲಿ ದಂಗೆ, ಹಿಟ್ಲರನ ಸಾವಿನ ಶಿಬಿರಗಳು, ರಷ್ಯಾ ದೌರ್ಜನ್ಯ ಎಲ್ಲವೂ ಇತಿಹಾಸದಲ್ಲಿ ದಾಖಲಾಗಿದೆ.

ಹಾಗೆಯೇ ಹಿಂದೂ ಜೀವನಶೈಲಿಯ ಭಾರತದಲ್ಲೂ ಹಿಂಸೆಯ ಪ್ರಮಾಣ ಕಡಿಮೆ ಏನಿಲ್ಲ. ಕ್ರಿಸ್ತ ಪೂರ್ವದಲ್ಲೇ ಬುದ್ದ ಮಹಾವೀರರು ಅಹಿಂಸೆಯ ಬಗ್ಗೆ ಗಂಭೀರವಾಗಿ ಮಾತನಾಡಿದ್ದಾರೆ ಎಂದರೆ ಆಗಲೇ ಹಿಂಸೆಯ ಪ್ರಮಾಣ ಎಷ್ಟಿತ್ತು ಎಂದು ಊಹಿಸಬಹುದು.

ಕಾರಣಗಳು ಏನೇ ಇರಲಿ
ಈ ಕ್ಷಣದಲ್ಲಿ ಪಾಕಿಸ್ತಾನ, ಇರಾನ್, ಇರಾಕ್, ಸಿರಿಯಾ, ಆಪ್ಘನಿಸ್ತಾನ, ಯೆಮೆನ್, ಟರ್ಕಿ ಮುಂತಾದ ಇಸ್ಲಾಮಿಕ್ ದೇಶಗಳೇ ಹೆಚ್ಚು ಸಾವು ನೋವಿಗೆ, ಆಂತರಿಕ ಕಲಹಗಳಿಗೆ ತುತ್ತಾಗುತ್ತಿವೆ.

ಈಗ ಗಂಭೀರವಾಗಿ ಯೋಚಿಸುವ ಸಮಯ ಬಂದಿದೆ. ಎಲ್ಲಾ ಧರ್ಮಗಳ ಮೂಲ ಆಶಯ ಮೂಲೆಗುಂಪಾಗಿ ಕೇವಲ ಆಚರಣೆಗಳು ಮಾತ್ರ ಜಾರಿಯಲ್ಲಿವೆ. ಇದಕ್ಕೆ ಇಸ್ಲಾಂ ಸಹ ಹೊರತಲ್ಲ.

ಹೌದು, ಭಾರತೀಯ ಮುಸ್ಲಿಮರಲ್ಲಿ ಬಡತನ ಅಜ್ಞಾನ ಗಾಢ ಧಾರ್ಮಿಕ ನಂಬಿಕೆಗಳು ಮನೆ ಮಾಡಿವೆ. ಧರ್ಮ ಗುರುಗಳ ಮಾತಿಗೆ ಅತಿ ಹೆಚ್ಚಿನ ಮಹತ್ವ ನೀಡುತ್ತಾರೆ. ಪ್ರಚೋದನಕಾರಿಯಾಗಿ ಮಾತನಾಡುವ ಹಿಂದೂಗಳು ಸಹ ಇದನ್ನು ಗಮನಿಸಬೇಕು. ಆತಂಕದಿಂದ ಎಲ್ಲಾ ತಪ್ಪುಗಳನ್ನು ಒಂದು ಸಮುದಾಯದ ತಲೆಗೆ ಕಟ್ಟಬಾರದು. ಸಂಯಮ ಅಗತ್ಯ.

ವಿವೇಚನೆ ಅಗತ್ಯ. ಕರೋನ ಬಂದಿದೆ ಎಂಬ ಒಂದೇ ಕಾರಣದಿಂದ ದಿನ ಬೆಳಗಾಗುವುದರಲ್ಲಿ ಎಲ್ಲರಲ್ಲೂ ದಿಡೀರನೇ ಪ್ರಬುದ್ದತೆ ನಿರೀಕ್ಷಿಸಲಾಗುವುದಿಲ್ಲ. ಸಬ್ ಕಾ ಸಾಥ್ ಸಬ್ ವಿಕಾಸ್ ಕೇವಲ ಘೋಷಣೆಯಾಗಬಾರದು. ಅದು ನಡವಳಿಕೆಯಾಗಬೇಕು. ಮಾಧ್ಯಮಗಳಂತೆ ವಿವೇಚನಾರಹಿತವಾಗಿ ಕೂಗಾಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳನ್ನು ಹರಡಬಾರದು. ಅದರಿಂದ ದೇಶಕ್ಕೆ ಅಪಾಯವೇ ಹೆಚ್ಚು.

ಎಲ್ಲಾ ಅಲ್ಪಸಂಖ್ಯಾತರಿಗೆ ಇರುವ ಅಭದ್ರತೆಯ ನಡುವೆಯೂ, ಮುಸ್ಲಿಂ ಸಮುದಾಯದಲ್ಲಿ ಪ್ರಗತಿಪರ ಚಿಂತನೆಗಳು ಸಮೂಹ ಪ್ರಜ್ಞೆಯಾಗಿ ಜಾಗೃತವಾಗಬೇಕು. ಧರ್ಮದ ಮೇಲಿನ ಅವಲಂಬಿನೆ ಕಡಿಮೆಯಾಗಬೇಕಿದೆ. ಅದಕ್ಕೆ ಹಿಂದೂಗಳು ಸಹ ಪ್ರೇರಣೆಯಾಗಬೇಕೆ ಹೊರತು ಪ್ರಚೋದಕರಾಗಬಾರದು. ಸುಮಾರು 18 ಕೋಟಿ ಜನಸಂಖ್ಯೆಯ ಒಂದು ಸಮುದಾಯವನ್ನು ಅಭದ್ರತೆಗೆ ತಳ್ಳಿ ದೇಶದ ಅಭಿವೃದ್ಧಿ ಶಾಂತಿ ಸಾಧ್ಯವೇ ಇಲ್ಲ.

ಎರಡೂ ಧರ್ಮಗಳಲ್ಲಿ ಕ್ರಿಯೆ ಪ್ರತಿಕ್ರಿಯೆಗಳು ಪ್ರಚೋದನಾತ್ಮಕವಾಗಿದ್ದು ಇದೇ ಕಾರಣದಿಂದ ಧೈರ್ಯವಾಗಿ ಮಾತನಾಡುವ ಖಂಡಿಸುವ ಸತ್ಯವನ್ನು ಬಯಲಿಗೆ ಎಳೆಯುವ ಜನರು ಕಡಿಮೆಯಾಗಿದ್ದಾರೆ. ಧರ್ಮ ಒಂದು ಸೂಕ್ಷ್ಮ ವಿಷಯ ಎಂಬ ನೆಪದಿಂದ ಮಾತನಾಡಲು ಹೆದರುತ್ತಾರೆ. ತಮ್ಮ ತಮ್ಮ ‌ಧರ್ಮ ದೇವರು ಗ್ರಂಥಗಳಲ್ಲಿ ಅಡಗಿರುವವರನ್ನು ನಾಗರಿಕ ಪ್ರಜ್ಞೆಗೆ ಎಳೆದು ತರಬೇಕಿದೆ. ಇದು ತುಂಬಾ ಕಷ್ಟ. ಆದರೂ ಮನುಷ್ಯನ ಉಳಿವಿಗಾಗಿ ನಿಂತ ನೀರಾಗಿ ಕೊಳೆತು ನಾರುತ್ತಿರುವ ಧಾರ್ಮಿಕತೆಯನ್ನು ಬಯಲಿಗೆ ಎಳೆಯಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳು ಇನ್ನಷ್ಟು ಭಯಂಕರ ಸ್ಥಿತಿ ತಲುಪುತ್ತದೆ. ಬಲವೇ ನ್ಯಾಯ ಎಂಬ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending