Connect with us

ದಿನದ ಸುದ್ದಿ

ಮ್ಯಾಸ ನಾಯಕರ ಹಕ್ಕುಗಳ ಹರಣ : ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ನಡೆಗೆ ಮ್ಯಾಸ ಬೇಡ ಸಮಿತಿ ಖಂಡನೆ

Published

on

ಸುದ್ದಿದಿನ, ಚಿತ್ರದುರ್ಗ : ಚಳ್ಳಕೆರೆ ಶಾಸಕ ಟಿ ರಘುಮೂರ್ತಿಯವರು ತಮ್ಮ ವೈಯಕ್ತಿಕ ರಾಜಕೀಯ ಲಾಭಕ್ಕಾಗಿ ಮ್ಯಾಸ ನಾಯಕ/ಮ್ಯಾಸ ಬೇಡ ಬುಡಕಟ್ಟು ಜನರ ಹಕ್ಕುಗಳನ್ನು ಹರಣ ಮಾಡಿ ಶೋಷಣೆ ಮಾಡುವ ಕ್ರಮವನ್ನು ವಿರೋಧಿಸಿ ಹಾಗೂ ಪರಿಶಿಷ್ಟ ಪಂಗಡದ ಕ್ಷೇತ್ರದಿಂದ ಆಯ್ಕೆಯಾಗಿ ಬುಡಕಟ್ಟು ಜನರ ಹಿತಾಸಕ್ತಿಯನ್ನು ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು ಈ ಕೂಡಲೇ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು ಎಂದು ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿಯ ಡಾ.ಕೆ.ಎ.ಓಬಳೇಶ್ ಆಗ್ರಹಿಸಿದರು.

ಶುಕ್ರವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜನಹಳ್ಳಿ ಪ್ರಸನ್ನಾನಂದ ಸ್ವಾಮಿ ಮತ್ತು ಬಿ.ಶ್ರೀರಾಮುಲು ಗುಂಪು ಹೇಗಾದರೂ ಮಾಡಿ ತಳವಾರ ಪರಿವಾರ ಎಸ್‌ ಟಿ ಸೇರ್ಪಡೆ ಮಾಡಿಸಲು ಪ್ರಯತ್ನಪಟ್ಟು 7.5 ಮೀಸಲಾತಿಯ ನಾಟಕವನ್ನು ಪ್ರಾರಂಭ ಮಾಡಿದರು ಈ ಪಾದಯಾತ್ರೆಯಲ್ಲಿ ರಘುಮೂರ್ತಿಯವರು ಸಹ ಹೆಜ್ಜೆಯನ್ನು ಹಾಕಿದರು.

ಈ ಪಾದಯಾತ್ರೆಯ ಜನರ ಗುಂಪುನ್ನು ತೋರಿಸಿ ಕೇಂದ್ರ ಸರ್ಕಾರಕ್ಕೆ ಬ್ಲಾಕ್‌ ಮೇಲ್‌ ಮಾಡಿ ಎಸ್‌ ಟಿ ಸೇರ್ಪಡೆ ಮಾಡಿದರು . ಆದರೆ 7.5 ಮೀಸಲಾತಿ ಹೋರಾಟ ಎಂದು ಹೇಳಿ ಜನರನ್ನು ದಾರಿತಪ್ಪಿಸಿ ರಘುಮೂರ್ತಿಯವರು ಪರಿವಾರ ತಳವಾರ ಜಾತಿಯನ್ನು ಎಸ್‌ ಟಿ ಸೇರ್ಪಡೆ ಮಾಡಿಸಲು ದೆಹಲಿಗೆ ಹೋಗಿ ದ್ವನಿ ಎತ್ತಿದರು ಆದರೆ ಮ್ಯಾಸ ನಾಯಕ ಎಂದು ಜಾತಿ ಪ್ರಮಾಣ ಪತ್ರವನ್ನು ಯಾರು ಪಡೆಯದಿದ್ದರು ಸಹ ಅದು ಒಬಿಸಿ ಪಟ್ಟಿಯಲ್ಲಿ ಇದೆ ಅದನ್ನು ತೆಗದು ಎಸ್ ಟಿ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿಯತನ ವಿಧಾನ ಸಭೆಯಲ್ಲಿ ದ್ವನಿಯನ್ನು ಎತ್ತಿಲ್ಲ.

ಮಾನ್ಯ ರಘುಮೂರ್ತಿಯವರು ತಳವಾರ ಪರಿವಾರದವರ ಹಕ್ಕುಗಳ ಪರ ಹೋರಾಟ ಮಾಡುತ್ತಿದ್ದಾರೆ ಮ್ಯಾಸ ನಾಯಕ ಬುಡಕಟ್ಟು ಜನಾಂಗದ ಹಕ್ಕುಗಳ ಪರ ಹೋರಾಟ ಮಾಡುತ್ತಿಲ್ಲ ಎಂದು ಆರೋಪಿಸಿದರು.

ನಾಯಕ ವಾಲ್ಮೀಕಿ ಸಮಾಜದ ಮುಖಂಡರು ಎಂದು ಹೇಳಿಕೊಂಡ ಮುಖಂಡರು ಹಾಗೂ ಜನ ಪ್ರತಿನಿಧಿಗಳು ತಮ್ಮ ವೈಯಕ್ತಿಕ ರಾಜಕೀಯ ಲಾಭಕ್ಕಾಗಿ ಜಾತ್ರೆಗಳನ್ನು ಸೃಷ್ಟಿಸಿಕೊಂಡು ಮೂಲ ಬುಡಕಟ್ಟು ಸಮುದಾಯಗಳ ಸಂಸ್ಕೃತಿಯನ್ನು ನಾಶ ಮಾಡುವ ಹುನ್ನಾರವನ್ನು ಹೊಂದಿದ್ದಾರೆ.

ಪರಿಶಿಷ್ಟ ಪಂಗಡದವರ ಅನುದಾನವನ್ನು ದುರ್ಭಳಕೆ ಮಾಡಿಕೊಂಡಿರುವ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ವಿರುದ್ದ ಸಾರ್ವಜನಿಕರು ದಾಖಲೆಗಳ ಸಮೇತ ಸರ್ಕಾರಕ್ಕೆ ದೂರನ್ನು ಸಹ ನೀಡಿರುತ್ತಾರೆ. ಸರ್ಕಾರವು ಬುಡಕಟ್ಟು ಜನರ ಅಭಿವೃದ್ದಿಗೆ ಮೀಸಲಿಟ್ಟ ಹಣವನ್ನು ವಾಲ್ಮೀಕಿ ಜಾತ್ರೆಗೆ ಬಿಡುಗಡೆ ಮಾಡಿರುವುದು ಸಂವಿಧಾನ ವಿರೋಧಿಯಾಗಿದೆ.

ಈ ವರ್ಷದ ಜಾತ್ರೆಗೆ ಟಿ ರಘುಮೂರ್ತಿಯವರು ಜಾತ್ರೆ ಸಮಿತಿ ಅಧ್ಯಕ್ಷರಾಗಿದ್ದಾರೆ. ಜಾತ್ರೆಯಿಂದ ಬುಡಕಟ್ಟು ಜನರ ಅಭಿವೃದ್ದಿಗೆ ಮೀಸಲಿಟ್ಟ ಹಣ ದುರ್ಭಳಕೆಯಾಗುತ್ತದೆ. ಜಾತ್ರೆ ಮಾಡುವವರಿಗೆ ಜನರ ಸಮಸ್ಯೆಗಳು ಹೇಗೆ ಅರ್ಥವಾಗುತ್ತವೆ ಜಾತ್ರೆ ಮಾಡುವ ಜನ ಪ್ರತಿನಿಧಿಗಳು ಜನರ ಸಮಸ್ಯೆಗಳನ್ನು ಅರಿತು ಕೆಲಸ ಮಾಡಲು ಸಾಧ್ಯವಿಲ್ಲ. ಈ ಕೂಡಲೇ ಶಾಸಕರಾದ ಟಿ ರಘುಮೂರ್ತಿಯವರು ಕರ್ನಾಟಕದ ಬುಡಕಟ್ಟು ಜನರ ಕ್ಷೇಮೆ ಕೇಳಿ ಶಾಸಕ ಸ್ಥಾನಕ್ಕೆ ರಾಜಿನಾಮೆಯನ್ನು ಕೊಟ್ಟು ಮನೆಗೆ ಹೋಗಬೇಕೆಂದು ಆಗ್ರಹಿಸುತ್ತೇವೆ ಎಂದರು.

ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿಯವರು ಮಠದ ಆಸ್ತಿಯನ್ನು ಹಾಗೂ ಸರ್ಕಾರದ ಅನುದಾನವನ್ನು ಬಳಸಿಕೊಂಡು ವೈಯಕ್ತಿವಾಗಿ ತನ್ನ ಹೆಸರಿನಲ್ಲಿ ಆಸ್ತಿ ಖರೀದಿ ಮಾಡಿ ಮಠದ ಭಕ್ತರಿಗೆ ಮೋಸ ಎಸಗಿರುತ್ತಾರೆ. ಈ ಸ್ವಾಮಿಯು ನೆಡೆಸುವ ಅವ್ಯಾವಹಾರದಲ್ಲಿ ಶಾಸಕ ಟಿ ರಘುಮೂರ್ತಿಯವರು ಭಾಗಿಯಾಗಿ ತನ್ನ ಕ್ಷೇತ್ರದ ಜನತೆಯ ಮತ್ತು ಕರ್ನಾಟಕದ ಮುಗ್ದ ಬುಡಕಟ್ಟು ಜನರ ನಂಬಿಕೆಗೆ ಮೋಸ ಮಾಡಲು ಮುಂದಾಗಿದ್ದಾರೆ.

ವಾಲ್ಮೀಕಿ ಸ್ವಾಮಿಜಿ ಹಾಗೂ ಸ್ವಾಮಿಜಿಯ ಕಾರ್ಯಗಳಿಗೆ ಬೆಂಬಲವಾಗಿ ನಿಂತಿರುವ ಶಾಸಕರಾದ ಟಿ ರಘುಮೂರ್ತಿಯವರ ಕುತಂತ್ರವನ್ನು ಕ್ಷೇತ್ರ ಜನತೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿಯು ಜಾಗೃತಿ ಅಭಿಯಾನವನ್ನು ಆಯೋಜಿಸುವ ಉದ್ದೇಶವನ್ನು ಹೊಂದಿದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಅದ್ಯಕ್ಷ ಡಾ.ಗೆರೆಗಲ್‌ ಪಾಪಯ್, ದೊಡ್ಡಮನಿ‌ ಪ್ರಸಾದ್, ಓಬಣ್ಣ,ಬೋರಾ ನಾಯಕ, ಬೋಸಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.

ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

Trending