ದಿನದ ಸುದ್ದಿ
ಮ್ಯಾಸ ನಾಯಕರ ಹಕ್ಕುಗಳ ಹರಣ : ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ನಡೆಗೆ ಮ್ಯಾಸ ಬೇಡ ಸಮಿತಿ ಖಂಡನೆ
ಸುದ್ದಿದಿನ, ಚಿತ್ರದುರ್ಗ : ಚಳ್ಳಕೆರೆ ಶಾಸಕ ಟಿ ರಘುಮೂರ್ತಿಯವರು ತಮ್ಮ ವೈಯಕ್ತಿಕ ರಾಜಕೀಯ ಲಾಭಕ್ಕಾಗಿ ಮ್ಯಾಸ ನಾಯಕ/ಮ್ಯಾಸ ಬೇಡ ಬುಡಕಟ್ಟು ಜನರ ಹಕ್ಕುಗಳನ್ನು ಹರಣ ಮಾಡಿ ಶೋಷಣೆ ಮಾಡುವ ಕ್ರಮವನ್ನು ವಿರೋಧಿಸಿ ಹಾಗೂ ಪರಿಶಿಷ್ಟ ಪಂಗಡದ ಕ್ಷೇತ್ರದಿಂದ ಆಯ್ಕೆಯಾಗಿ ಬುಡಕಟ್ಟು ಜನರ ಹಿತಾಸಕ್ತಿಯನ್ನು ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು ಈ ಕೂಡಲೇ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು ಎಂದು ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿಯ ಡಾ.ಕೆ.ಎ.ಓಬಳೇಶ್ ಆಗ್ರಹಿಸಿದರು.
ಶುಕ್ರವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜನಹಳ್ಳಿ ಪ್ರಸನ್ನಾನಂದ ಸ್ವಾಮಿ ಮತ್ತು ಬಿ.ಶ್ರೀರಾಮುಲು ಗುಂಪು ಹೇಗಾದರೂ ಮಾಡಿ ತಳವಾರ ಪರಿವಾರ ಎಸ್ ಟಿ ಸೇರ್ಪಡೆ ಮಾಡಿಸಲು ಪ್ರಯತ್ನಪಟ್ಟು 7.5 ಮೀಸಲಾತಿಯ ನಾಟಕವನ್ನು ಪ್ರಾರಂಭ ಮಾಡಿದರು ಈ ಪಾದಯಾತ್ರೆಯಲ್ಲಿ ರಘುಮೂರ್ತಿಯವರು ಸಹ ಹೆಜ್ಜೆಯನ್ನು ಹಾಕಿದರು.
ಈ ಪಾದಯಾತ್ರೆಯ ಜನರ ಗುಂಪುನ್ನು ತೋರಿಸಿ ಕೇಂದ್ರ ಸರ್ಕಾರಕ್ಕೆ ಬ್ಲಾಕ್ ಮೇಲ್ ಮಾಡಿ ಎಸ್ ಟಿ ಸೇರ್ಪಡೆ ಮಾಡಿದರು . ಆದರೆ 7.5 ಮೀಸಲಾತಿ ಹೋರಾಟ ಎಂದು ಹೇಳಿ ಜನರನ್ನು ದಾರಿತಪ್ಪಿಸಿ ರಘುಮೂರ್ತಿಯವರು ಪರಿವಾರ ತಳವಾರ ಜಾತಿಯನ್ನು ಎಸ್ ಟಿ ಸೇರ್ಪಡೆ ಮಾಡಿಸಲು ದೆಹಲಿಗೆ ಹೋಗಿ ದ್ವನಿ ಎತ್ತಿದರು ಆದರೆ ಮ್ಯಾಸ ನಾಯಕ ಎಂದು ಜಾತಿ ಪ್ರಮಾಣ ಪತ್ರವನ್ನು ಯಾರು ಪಡೆಯದಿದ್ದರು ಸಹ ಅದು ಒಬಿಸಿ ಪಟ್ಟಿಯಲ್ಲಿ ಇದೆ ಅದನ್ನು ತೆಗದು ಎಸ್ ಟಿ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿಯತನ ವಿಧಾನ ಸಭೆಯಲ್ಲಿ ದ್ವನಿಯನ್ನು ಎತ್ತಿಲ್ಲ.
ಮಾನ್ಯ ರಘುಮೂರ್ತಿಯವರು ತಳವಾರ ಪರಿವಾರದವರ ಹಕ್ಕುಗಳ ಪರ ಹೋರಾಟ ಮಾಡುತ್ತಿದ್ದಾರೆ ಮ್ಯಾಸ ನಾಯಕ ಬುಡಕಟ್ಟು ಜನಾಂಗದ ಹಕ್ಕುಗಳ ಪರ ಹೋರಾಟ ಮಾಡುತ್ತಿಲ್ಲ ಎಂದು ಆರೋಪಿಸಿದರು.
ನಾಯಕ ವಾಲ್ಮೀಕಿ ಸಮಾಜದ ಮುಖಂಡರು ಎಂದು ಹೇಳಿಕೊಂಡ ಮುಖಂಡರು ಹಾಗೂ ಜನ ಪ್ರತಿನಿಧಿಗಳು ತಮ್ಮ ವೈಯಕ್ತಿಕ ರಾಜಕೀಯ ಲಾಭಕ್ಕಾಗಿ ಜಾತ್ರೆಗಳನ್ನು ಸೃಷ್ಟಿಸಿಕೊಂಡು ಮೂಲ ಬುಡಕಟ್ಟು ಸಮುದಾಯಗಳ ಸಂಸ್ಕೃತಿಯನ್ನು ನಾಶ ಮಾಡುವ ಹುನ್ನಾರವನ್ನು ಹೊಂದಿದ್ದಾರೆ.
ಪರಿಶಿಷ್ಟ ಪಂಗಡದವರ ಅನುದಾನವನ್ನು ದುರ್ಭಳಕೆ ಮಾಡಿಕೊಂಡಿರುವ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ವಿರುದ್ದ ಸಾರ್ವಜನಿಕರು ದಾಖಲೆಗಳ ಸಮೇತ ಸರ್ಕಾರಕ್ಕೆ ದೂರನ್ನು ಸಹ ನೀಡಿರುತ್ತಾರೆ. ಸರ್ಕಾರವು ಬುಡಕಟ್ಟು ಜನರ ಅಭಿವೃದ್ದಿಗೆ ಮೀಸಲಿಟ್ಟ ಹಣವನ್ನು ವಾಲ್ಮೀಕಿ ಜಾತ್ರೆಗೆ ಬಿಡುಗಡೆ ಮಾಡಿರುವುದು ಸಂವಿಧಾನ ವಿರೋಧಿಯಾಗಿದೆ.
ಈ ವರ್ಷದ ಜಾತ್ರೆಗೆ ಟಿ ರಘುಮೂರ್ತಿಯವರು ಜಾತ್ರೆ ಸಮಿತಿ ಅಧ್ಯಕ್ಷರಾಗಿದ್ದಾರೆ. ಜಾತ್ರೆಯಿಂದ ಬುಡಕಟ್ಟು ಜನರ ಅಭಿವೃದ್ದಿಗೆ ಮೀಸಲಿಟ್ಟ ಹಣ ದುರ್ಭಳಕೆಯಾಗುತ್ತದೆ. ಜಾತ್ರೆ ಮಾಡುವವರಿಗೆ ಜನರ ಸಮಸ್ಯೆಗಳು ಹೇಗೆ ಅರ್ಥವಾಗುತ್ತವೆ ಜಾತ್ರೆ ಮಾಡುವ ಜನ ಪ್ರತಿನಿಧಿಗಳು ಜನರ ಸಮಸ್ಯೆಗಳನ್ನು ಅರಿತು ಕೆಲಸ ಮಾಡಲು ಸಾಧ್ಯವಿಲ್ಲ. ಈ ಕೂಡಲೇ ಶಾಸಕರಾದ ಟಿ ರಘುಮೂರ್ತಿಯವರು ಕರ್ನಾಟಕದ ಬುಡಕಟ್ಟು ಜನರ ಕ್ಷೇಮೆ ಕೇಳಿ ಶಾಸಕ ಸ್ಥಾನಕ್ಕೆ ರಾಜಿನಾಮೆಯನ್ನು ಕೊಟ್ಟು ಮನೆಗೆ ಹೋಗಬೇಕೆಂದು ಆಗ್ರಹಿಸುತ್ತೇವೆ ಎಂದರು.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿಯವರು ಮಠದ ಆಸ್ತಿಯನ್ನು ಹಾಗೂ ಸರ್ಕಾರದ ಅನುದಾನವನ್ನು ಬಳಸಿಕೊಂಡು ವೈಯಕ್ತಿವಾಗಿ ತನ್ನ ಹೆಸರಿನಲ್ಲಿ ಆಸ್ತಿ ಖರೀದಿ ಮಾಡಿ ಮಠದ ಭಕ್ತರಿಗೆ ಮೋಸ ಎಸಗಿರುತ್ತಾರೆ. ಈ ಸ್ವಾಮಿಯು ನೆಡೆಸುವ ಅವ್ಯಾವಹಾರದಲ್ಲಿ ಶಾಸಕ ಟಿ ರಘುಮೂರ್ತಿಯವರು ಭಾಗಿಯಾಗಿ ತನ್ನ ಕ್ಷೇತ್ರದ ಜನತೆಯ ಮತ್ತು ಕರ್ನಾಟಕದ ಮುಗ್ದ ಬುಡಕಟ್ಟು ಜನರ ನಂಬಿಕೆಗೆ ಮೋಸ ಮಾಡಲು ಮುಂದಾಗಿದ್ದಾರೆ.
ವಾಲ್ಮೀಕಿ ಸ್ವಾಮಿಜಿ ಹಾಗೂ ಸ್ವಾಮಿಜಿಯ ಕಾರ್ಯಗಳಿಗೆ ಬೆಂಬಲವಾಗಿ ನಿಂತಿರುವ ಶಾಸಕರಾದ ಟಿ ರಘುಮೂರ್ತಿಯವರ ಕುತಂತ್ರವನ್ನು ಕ್ಷೇತ್ರ ಜನತೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿಯು ಜಾಗೃತಿ ಅಭಿಯಾನವನ್ನು ಆಯೋಜಿಸುವ ಉದ್ದೇಶವನ್ನು ಹೊಂದಿದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮಿತಿಯ ಅದ್ಯಕ್ಷ ಡಾ.ಗೆರೆಗಲ್ ಪಾಪಯ್, ದೊಡ್ಡಮನಿ ಪ್ರಸಾದ್, ಓಬಣ್ಣ,ಬೋರಾ ನಾಯಕ, ಬೋಸಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
ದಿನದ ಸುದ್ದಿ19 hours agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ18 hours agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ4 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 hour agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

