ದಿನದ ಸುದ್ದಿ
ಮ್ಯಾಸಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಹೋರಾಟಗಾರರಿಗೆ ಕೊಲೆ ಬೆದರಿಕೆ ; ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ವಿರುದ್ಧ ದೂರು
ಸುದ್ದಿದಿನ,ಬಳ್ಳಾರಿ : ನಾಯಕ ಪಂಗಡದ ಮ್ಯಾಸಬೇಡ ಬುಡಕಟ್ಟು ಜನರ ಸಂವಿಧಾನ ಬದ್ದ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವವರ ಮೇಲೆ ಕಿರುಕುಳ ಮತ್ತು ಮಾನಸಿಕ ಹಿಂಸೆ ದೌರ್ಜನ್ಯ ಮಾಡಿ ಕೊಲೆ ಬೆದರಿಕೆಯ ಸುಪಾರಿಯನ್ನು ನೀಡಲಾಗಿದ್ದು, ಮೂಲ ಬುಡಕಟ್ಟು ಸಮುದಾಯದ ಮ್ಯಾಸ ಬೇಡರಿಗೆ ಮೋಸ ಮಾಡಿರುವ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮತ್ತು ಸ್ವಾಮೀಜಿಯ ಸಹಚರರನ್ನು ಕೊಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಕೋರಿ ದೂರು ಮತ್ತು ಮ್ಯಾಸ ಬೇಡ ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರರಿಗೆ ರಕ್ಷಣೆ ಕೊಡಲುಕೋರಿ ಮ್ಯಾಸ ಬೇಡ (ಮ್ಯಾಸ ನಾಯಕ) ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿಯು ಸೋಮವಾರ ನಗರದ ಐಜಿಪಿ ಎಂ.ನಂಜುಂಡಸ್ವಾಮಿ ಅವರಿಗೆ ದೂರು ಸಲ್ಲಿಸಿತು.
ದೂರಿನಲ್ಲೇನಿದೆ..!
ನಾವು ನಾಯಕ ವಾಲ್ಮೀಕಿ ಪಂಗಡದ ಮ್ಯಾಸ ನಾಯಕ ಬುಡಕಟ್ಟು ಜನಾಂಗಕ್ಕೆ ಸೇರಿರುತ್ತೇವೆ. ಮ್ಯಾಸ ಬೇಡ (ಮ್ಯಾಸ ನಾಯಕ) ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ(ರಿ)ಯಿಂದ ತಮಗೆ ಸಲ್ಲಿಸುತ್ತಿರುವ ದೂರು ಏನಂದರೆ, ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣೆ ಮತ್ತು ಬುಡಕಟ್ಟು ಜನರ ಸಂವಿಧಾನ ಬದ್ಧ ಹಕ್ಕುಗಳ ರಕ್ಷಣೆಗಾಗಿ ನಮ್ಮ ಸಮುದಾಯದ ಹಿರಿಯರು ಸಂಘಟನೆಯನ್ನು ಕಟ್ಟಿರುತ್ತಾರೆ.
ಈ ಸಂಘಟನೆಯಲ್ಲಿ ದೊಡ್ಡಮನಿ ಪ್ರಸಾದ್, ಕಾರ್ಯದರ್ಶಿ ಇರುತ್ತಾರೆ. ಮ್ಯಾಸ ಬೇಡರಿಗೆ ಆಗಿರುವ ಅನ್ಯಾಯದ ವಿರುದ್ಧ ಮತ್ತು ಮ್ಯಾಸ ಬೇಡರ ಸಂವಿಧಾನ ಬದ್ಧ ಹಕ್ಕುಗಳಿಗಾಗಿ ನಮ್ಮ ಸಮಿತಿಯ ವತಿಯಿಂದ ಕಾನೂನು ಚೌಕಟ್ಟಿನ ಅಡಿಯಲ್ಲಿ ಹೋರಾಟಗಳನ್ನು ಮಾಡುತ್ತಿರುವ ನಮ್ಮ ಸಮಿತಿಯ ಸದಸ್ಯರ ಮೇಲೆ ವಾಲ್ಮೀಕಿ ಎಂದು ಹೇಳಿಕೊಳ್ಳುವ ಹರಿಹರ ತಾಲ್ಲೂಕು, ರಾಜನಹಳ್ಳಿ, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯು ತನ್ನ ಸಮುದಾಯದ ಸಹಚರರಿಗೆ ಕುಮ್ಮಕ್ಕು ನೀಡಿ ಮ್ಯಾಸ ಬೇಡರ ಹಕ್ಕುಗಳನ್ನು ಹರಣ ಮಾಡುವ ದುರುದ್ದೇಶದಿಂದ ನಮ್ಮ ಮುಖಂಡರ ಮೇಲೆ ಸುಳ್ಳು ದೂರುಗಳನ್ನು ನೀಡುವುದರ ಮೂಲಕ ಬೆದರಿಸಿ ಮಾನಸಿಕ ಮತ್ತು ದೈಹಿಕವಾಗಿ ನಿರಂತರವಾಗಿ ಹಿಂಸೆ ನೀಡುತ್ತಾ ಬಂದಿರುತ್ತಾರೆ.
ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಈಗಾಗಲೇ ನಾವು ಸರ್ಕಾರಕ್ಕೂ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ದೂರನ್ನು ನೀಡಿರುತ್ತೇವೆ. ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಪಣಿಯಾಪುರ ಲಿಂಗರಾಜ, ಬಾಲೆನಹಳ್ಳಿ ಕೆಂಚನಗೌಡ, ದಾವಣಗೆರೆಯ ಆಂಜನೇಯ ಗುರುಜೀ, ಗುಮ್ಮನೂರು ಮಲ್ಲಿಕಾರ್ಜುನ, ಇನ್ನೂ ಇತರರು ನಮ್ಮ ಸಮಿತಿಯ ಮುಖಂಡರಿಗೆ ಮಾನಸಿಕ ಹಿಂಸೆಯನ್ನು ನೀಡಿ ದೊಡ್ಡಮನಿ ಪ್ರಸಾದ್ ರವರನ್ನು ಕೊಲೆ ಮಾಡಲು ಸುಫಾರಿ ಕೊಟ್ಟಿರುವ ಗುಮಾನಿಗಳು ಇರುತ್ತವೆ.
ಹಾಗಾಗಿ ಇವರನ್ನು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು. ಒಂದು ವೇಳೆ ಮ್ಯಾಸ ಬೇಡ ಬುಡಕಟ್ಟು ಸಮುದಾಯದ ಹೋರಾಟಗಾರರಿಗೆ ಜೀವಕ್ಕೆ ಹಾನಿ ಆದಲ್ಲಿಇವರೆ ಕಾರಣರಾಗಿರುತ್ತಾರೆ. ನಾಯ್ಕಡ ಸಮಾನಾರ್ಥಕ ನಾಯಕ ಬೇಡ ವಾಲ್ಮೀಕಿ ಪಂಗಡದ ಹೆಸರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಮೂಲತ: ಮ್ಯಾಸ ಬ್ಯಾಡ್ರ ಅಥವಾ ಮ್ಯಾಸ ಬೇಡ ಅಥವಾ ಮ್ಯಾಸ ನಾಯಕರು ಅಥವಾ ಮ್ಯಾಸರನ್ನು ಮಾತ್ರ. ‘ನಾಯಕ’ ಎಂಬ ಪದದ ಮೂಲಕ ಕೆಲವು ಜಾತಿಯ ಜನರು ತಮ್ಮನ್ನು ತಳವಾರ, ಊರುನಾಯಕ, ಪರಿವಾರ, ಬಾರ್ಕಿ ಮುಂತಾದ ಹೆಸರುಗಳಿಂದ ಕರೆಯಿಸಿಕೊಳ್ಳುತ್ತಿದ್ದರೂ ಇವರು ಮೂಲತ: ಗಂಗಾಮತ ಅಥವಾ ಅಂಬಿಗ ಅಥವಾ ಬೆಸ್ತ ಜಾತಿಯವರು.
ಇವರಿಗೂ ನಾಯಕ, ಬೇಡ, ವಾಲ್ಮೀಕಿ ಎಂದು ಕರೆಯಿಸಿಕೊಳ್ಳುತ್ತಿರುವ ಮ್ಯಾಸ ನಾಯಕ/ಮ್ಯಾಸ ಬೇಡ/ಮ್ಯಾಸ ಬ್ಯಾಡ್ರು ಪಂಗಡಕ್ಕೂ ಯಾವುದೇ ಸಂಬಂಧವಿಲ್ಲ.D.O. Letter No.8/1/93-SS(Gen) ದಿನಾಂಕ: 29.1.1993 ರಂದು ರಿಜಿಸ್ಟ್ರರ್ ಜನರಲ್ ಆಫ್ ಇಂಡಿಯಾ ವರದಿಯ ಪ್ರಕಾರ ಈ ‘ನಾಯಕ’ ಪಂಗಡದವರು ಮಧ್ಯ ಪ್ರದೇಶದ (ಗೋಂಡವಾನ) ‘ಬಿಲ್’ ಜನಾಂಗವನ್ನು ಹೋಲುತ್ತದೆ ಅವರನ್ನು ಈಗಾಗಲೇ ಎಸ್ ಟಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ ಎಂದು ಹೇಳಿದ್ದಾರೆ. ಮತ್ತು ಕರ್ನಾಟಕದಲ್ಲಿ ನಾಯಕ ಪಂಗಡ, ಮತ್ತು ನಾಯಕ ಜಾತಿ ಎಂದು ಎರಡು ವಿಧವಾದ ನಾಯಕ ಜನಾಂಗಗಳಿವೆ ಎಂದು ಹೇಳಿರುವುದು ಸತ್ಯದ ಸಂಗತಿ.
ಮ್ಯಾಸ ನಾಯಕರು ಇರುವ ಪ್ರದೇಶಗಳಲ್ಲಿ ತಳವಾರರು ತಮ್ಮನ್ನು ಊರುನಾಯಕರು ಎಂದು ಕರೆಯಿಸಿಕೊಳ್ಳುತ್ತಾರೆ. ಆದರೆ ಊರುನಾಯಕ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ ಇವರ ಮೂಲ ತಳವಾರ ಎಂದು ಇರುತ್ತದೆ. ಇದಕ್ಕೆ ಪೂರಕವಾಗಿ ತಳವಾರ ಮತ್ತು ಮ್ಯಾಸ ನಾಯಕರು ಇರುವ ಊರುಗಳ ಬ್ರಿಟಿಷ್ ಲ್ಯಾಂಡ್ ಸೇಟಲ್ ಮೆಂಟ್ ರಿಜಿಸ್ಟ್ರರ್ 1926 ರಲ್ಲಿ ಸ್ಪಷ್ಟವಾಗಿ ತಳವಾರರು ಮತ್ತು ಮ್ಯಾಸ ಬ್ಯಾಡರ ,ಮ್ಯಾಸರು ಎಂದು ಮತ್ತು ಮ್ಯಾಸ ಬ್ಯಾಡ್ರ ಇಲ್ಲದ ಊರುಗಳಲ್ಲಿ ತಳವಾರರು, ತಲಾರಿ ಎಂದು ಸ್ಪಷ್ಟವಾಗಿ ನಮೂದಾಗಿದೆ. ನಂತರ ಬಳ್ಳಾರಿ ಜಿಲ್ಲೆಯಲ್ಲಿ 1950ರಿಂದ 1963ನೇ ಸಾಲಿನಲ್ಲಿ ಶಾಲಾ ದಾಖಲಾತಿಗಳಲ್ಲಿ ತಳವಾರರು ಮತ್ತು ಮ್ಯಾಸ ನಾಯ್ಕರು ಎಂದು ನಮೂದು ಇರುತ್ತವೆ.
ವಾಲ್ಮೀಕಿ ಎಂದು ಬರೆಯುಸುವಂತೆ ಹೇಳಿರುವುದರ ಕುತಂತ್ರದ ಸಲಹೆ ಮೇರೆಗೆ ಮ್ಯಾಸ ನಾಯ್ಕರು ತಮ್ಮ ಜಾತಿ ಕಾಲಂನಲ್ಲಿ ವಾಲ್ಮೀಕಿ ಎಂದು ನಮೂದಿಸಲು ಪ್ರಾರಂಭಿಸಿದರು. ಮ್ಯಾಸ ನಾಯಕರ ರೀತಿಯಲ್ಲಿ ತಳವಾರರು ಸಹ ತಮ್ಮ ಜಾತಿ ಕಾಲಂನಲ್ಲಿ ತಳವಾರ ಬದಲಾಗಿ ವಾಲ್ಮೀಕಿ ಎಂದು ಬರೆಯಿಸುತ್ತಾರೆ. ಮತ್ತು ಮೂಲ ದಾಖಲಾತಿಯಲ್ಲಿ ತಳವಾರ ಎಂದು ಇರುವುದನ್ನು ತಿದ್ದಿ ವಾಲ್ಮೀಕಿ ಎಂದು ಬರೆಸುತ್ತಾರೆ. ಈ ರೀತಿ ದ್ವಂದ್ವ ಮತ್ತು ಗೊಂದಲವನ್ನು ಸೃಷ್ಟಿ ಮಾಡಿರುತ್ತಾರೆ.
1993 ರಿಜಿಸ್ಟ್ರರ್ ಜನರಲ್ ಆಫ್ ಇಂಡಿಯಾ ಯವರ ವರದಿಯಲ್ಲಿ ಪರಿವಾರದವರು ಮೈಸೂರು ಮಹಾರಾಜರ ಕಾಲದಲ್ಲಿ ಸೇವಕಾರಾಗಿದ್ದರು ಮತ್ತು ಇದೊಂದು ಜಾತಿಯಾಗಿರಲಿಲ್ಲ ಕಸುಬು ಆಗಿರುತ್ತದೆ. ತಳವಾರರ ಬಗ್ಗೆಯೂ ಸಹ ತಳವಾರರು ನಾಯಕ ಜನಾಂಗದ ಗುಣಲಕ್ಷಣಗಳನ್ನು ಹೊಂದಿರುವುದಿಲ್ಲ ಇವರು ಗ್ರಾಮದಲ್ಲಿ ಕಾವಲುಗಾರರಾಗಿದ್ದರು ಇವರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಲು ಅರ್ಹವಿರುವ ಯಾವುದೇ ಬುಡಕಟ್ಟು ಲಕ್ಷಣಗಳು ಇರುವುದಿಲ್ಲ ಎಂದು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು 2004 ರಲ್ಲಿ ಹಿಂದಿರುಗಿಸಿರುತ್ತಾರೆ.
ನಂತರ ರಾಜಕೀಯ ಅಧೀಕಾರವನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ವರದಿಯ ಆಧಾರದ ಮೇಲೆ 2020ರಲ್ಲಿ ಪರಿವಾರ, ತಳವಾರ ಜಾತಿಗಳನ್ನು ನಾಯಕ ಸಮಾನಾರ್ಥಕ ಪದಗಳೆಂದು ಎಸ್ ಟಿ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಅಂದರೆ ಇದರ ಅರ್ಥ ನಾಯಕ ಪಂಗಡದವರಿಗೆ ತಳವಾರ ಮತ್ತು ಪರಿವಾರ ಎಂದು ಕರೆಯುತ್ತಾರೆ ಅಷ್ಟೇ. ಇದು ಮೂಲ ತಳವಾರ ಮತ್ತು ಪರಿವಾರ ಜಾತಿಯವರು ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆಂದು ಪರಿಗಣಿಸಲು ಆಗುವುದಿಲ್ಲ.
ಇದು ಹೊಸದಾಗಿ ಒಂದು ಜಾತಿಯವರನ್ನು ಎಸ್.ಟಿ. ಪಟ್ಟಿಯಲ್ಲಿ ಸೇರಿಸಿದಂತೆ ಆಗುವುದಿಲ್ಲ. ಇದು ಮೂಲ ತಳವಾರ ಪರಿವಾರ ಜಾತಿಯವರಿಗೆʼ ನಾಯಕ ಬುಡಕಟ್ಟಿನವರೆಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯಲು ಅನುಕೂಲವಾಗುತ್ತದೆ ಅಷ್ಟೇ. ಈಗಾಗಲೇ ಪರಿಶಿಷ್ಟ ಪಂಗಡದ ನಾಯಕರಿಗೆ ತಳವಾರ ಪರಿವಾರದವರೆಂದು ಕರೆಯುತ್ತಾರೆ ಎಂದು ಶಾಸನ ಮಾಡಿದರೆ ಈ ಹೆಸರುಗಳು ಮಾತ್ರ ಎಸ್ ಟಿ ಪಟ್ಟಿಯಲ್ಲಿರುತ್ತವೆ ಆದರೆ ಈ ಜಾತಿಯವರಲ್ಲ.
ಉದಾಹರಣೆ:- ತಿಮ್ಮಪ್ಪ ಎಂಬ ಧನಿಕನಿಗೆ ಮೂರು ಜನ ಮಕ್ಕಳಿರುತ್ತಾರೆ. ಕಲ್ಲಪ್ಪ ಎಂಬಇನ್ನೊಬ್ಬನಿಗೂ ಮೂರು ಜನ ಮಕ್ಕಳಿರುತ್ತಾರೆ. ತಿಮ್ಮಪ್ಪನಿಗೆ ಕಲ್ಲಪ್ಪ ಎಂದೂ ಕರೆಯುತ್ತಾರೆ ಎಂದರೆ, ತಿಮ್ಮಪ್ಜನ ಆಸ್ತಿಯಲ್ಲಿ ಕಲ್ಲಪ್ಪನ ಮಕ್ಕಳಿಗೆ ಪಾಲುಸಿಗುತ್ತದೆಯೇ? ಇದು ತಳವಾರ ಪರಿವಾರ ಜಾತಿಯವರ ಪರಿಸ್ಥಿತಿ. ಆದ್ದರಿಂದ ಮೂಲ ತಳವಾರ ಪರಿವಾರ ಜಾತಿ ಜನಾಂಗವು ಎಸ್ಟಿ ಪಟ್ಟಿಯಲ್ಲಿ ಇಲ್ಲ. ತಳವಾರ ಪರಿವಾರ ಜಾತಿಯವರು ಬುಡಕಟ್ಟು ಜನರೇ ಅಲ್ಲ.
ಕನ್ನಡ ವಿಶ್ವ ವಿದ್ಯಾಲಯದಲ್ಲಿರುವ ತಳವಾರ ಅಥಾವ ತಲಾರಿ ಜಾತಿಯ ಪ್ರಧ್ಯಾಪಕ ಮಂಜುನಾಥ ಬೇವಿನಕಟ್ಟಿ ಮ್ಯಾಸ ನಾಯಕರನ್ನು ಅವಹೇಳನ ಮಾಡುವ ಪುಸ್ತಕಗಳನ್ನು ಬರೆಯಿಸುತ್ತಾರೆ. ಎಂ.ಪಿ.ವೀಣಾ ಎಂಬುವರು ಮನೆ ಸಮಾಜ ಸಂಸ್ಕೃತಿ ಮ್ಯಾಸ ನಾಯಕರು ಹಾಗೂ ಊರುನಾಯಕರು ಅಧ್ಯಾಯನ ಎಂಬ ತಮ್ಮ ಎಂಪಿಲ್ ಪ್ರಬಂಧದಲ್ಲಿ ಈ ರೀತಿ ಬರೆದಿರುತ್ತಾರೆ:-ವಾಲ್ಮೀಕಿಯು ಒಮ್ಮೆ ಬೇಟೆಗೆ ಹೋಗಿದ್ದಾಗ ಕಾಡಿನಲ್ಲಿ ಸುಂದರವಾದ ಬೇಡತಿಯನ್ನು ಮೋಹಿಸಿದನಂತೆ. ಈ ಬೇಡತಿಗೆ ಅಡವಿಯಲ್ಲಿ ಹುಟ್ಟಿದ ಮಕ್ಕಳು ಮ್ಯಾಸರಂತೆ.
ಊರಿನಲ್ಲಿ ವಾಲ್ಮೀಕಿ ಹೆಂಡತಿಗೆ ಹುಟ್ಟಿದ ಮಕ್ಕಳು ಊರುನಾಯಕರಂತೆ“ (ಒಂದೆ ತಂದೆಗೆ ಹೆಂಡತಿಯಲ್ಲಿ ಹುಟ್ಟಿದವರು ಊರ ಬೇಡರು, ಸೂಳೆಗೆ ಹುಟ್ಟಿದವರು ಮ್ಯಾಸ ಬೇಡರು) ಎಂದು ಅವಹೇಳನ ಮಾಡಿ ನಮ್ಮ ಮ್ಯಾಸ ಬೇಡ ಬುಡಕಟ್ಟು ಜನಾಂಗವನ್ನು ಶೋಷಣೆ ಮಾಡಿರುತ್ತಾರೆ. ಅವಹೇಳನ ಮಾಡಿರುವದರ ವಿರುದ್ದವಾಗಿ ಸರ್ಕಾರಕ್ಕೆ ಮತ್ತು ಕನ್ನಡ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದು ಕ್ರಮಕೈಗೊಳ್ಳುವಂತೆ ಕೋರಿರುತ್ತೇವೆ. ಕನ್ನಡ ವಿಶ್ವವಿದ್ಯಾಲಯವು ಇವರ ಮೇಲೆ ಕ್ರಮಕೈಗೊಂಡಿರುತ್ತದೆ.
ನಂತರ ಮೂಲ ಲೇಖಕರು ಮ್ಯಾಸ ಬೇಡ ಸಮುದಾಯಕ್ಕೆ ವಿಷಾದವನ್ನು ವ್ಯಕ್ತಪಡಿಸಿ ಕನ್ನಡ ವಿವಿಗೆ ಪತ್ರ ಬರೆದಿರುತ್ತಾರೆ. ಮೂಲ ಬುಡಕಟ್ಟು ಹಿನ್ನೆಲೆಯನ್ನು ಹೊಂದಿರುವ ಮ್ಯಾಸ ಬೇಡರನ್ನು ಒಗ್ಗೂಡದಂತೆ ಮಾಡಲು ಮತ್ತು ಅವರನ್ನು ತಳವಾರ ಪರಿವಾರದ ಜೊತೆ ಹೊಂದಾಣಿಕೆ ಮಾಡಲು ಮತ್ತು ಮ್ಯಾಸ ಬೇಡರ ಅನಾದಿಕಾಲದಿಂದ ಉಳಿಸಿಕೊಂಡು ಬಂದಿರುವ ಬುಡಕಟ್ಟು ಸಂಸ್ಕೃತಿಯನ್ನು ನಾಶ ಮಾಡಲು ಹಾಗೂ ಮ್ಯಾಸ ಬೇಡರ ಹಕ್ಕುಗಳನ್ನು ಕದಿಯುವ ವಂಚಿಸುವ ಉದ್ದೇಶದಿಂದ ತಳವಾರರು 1998 ರಲ್ಲಿ ರಾಜನಹಳ್ಳಿಯಲ್ಲಿ ಶ್ರೀ ಮಹರ್ಷ ವಾಲ್ಮೀಕಿ ಮಠವನ್ನು ಮ್ಯಾಸ ನಾಯಕರ ಹಿರಿಯರಾದ ಮಾಜಿ ಮಂತ್ರಿಗಳು ದಿ.ಶ್ರೀತಿಪ್ಪೇಸ್ವಾಮಿ, ಚಳ್ಳಕೆರೆ ಮತ್ತು ಮಾಜಿ ಶಾಸಕರುಗಳಾದ ಎನ.ಟಿ.ಬೊಮ್ಮಣ್ಣ, ಎಂ.ಬಸಪ್ಪರವರು ನೇತೃತ್ವದಲ್ಲಿ ಸ್ಥಾಪಿಸಿಕೊಂಡು ಮಠ ಅಭಿವೃದ್ದಿಯಾಗುವವರೆಗೂ ಮ್ಯಾಸ ಬೇಡ ಮುಖಂಡರ ನಿಯಂತ್ರಣದಲ್ಲಿ ಇದ್ದ ವಾಲ್ಮೀಕಿ ಮಠ ಈಗ ಮಠದ ಸಂಪೂರ್ಣ ಆಡಳಿತ ತಳವಾರ ಪರಿವಾರದವರ ನಿಯಂತ್ರಣದಲ್ಲಿರುತ್ತದೆ.
ಈ ರಾಜನಹಳ್ಳಿ ವಾಲ್ಮೀಕಿ ಮಠ ಮ್ಯಾಸ ಬೇಡರ ಹಕ್ಕುಗಳನ್ನು ಕದಿಯಲು ಹಾಕಿರುವ ಬಲೆಯಾಗಿದೆ. ದಿನಾಂಕ:-28-04-2016ರಂದು ಶ್ರೀಪ್ರಸನ್ನಾನಂದಪುರಿಸ್ವಾಮೀಜಿ ಹೊಂಬಳಗಟ್ಟಿಗ್ರಾಮಕ್ಕೆ ಬಂದಾಗ ಬೇವಿನಕಟ್ಟಿಯವರು ಮ್ಯಾಸಬೇಡರ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದಾರೆ ಅದರ ಬಗ್ಗೆ ನೀವು ಏನು ಕ್ರಮ ಕೈಗೊಂಡಿರುವಿರಿ ಎಂದು ನಮ್ಮ ಮ್ಯಾಸ ಬೇಡರು ಕೇಳಿರುತ್ತಾರೆ. ಆಗ ಸ್ವಾಮೀಜಿ ಇದು ನನಗೆ ಗೊತ್ತಿಲ್ಲ, ಇದರ ಬಗ್ಗೆ ಯಾರು ನನಗೆ ಹೇಳಿಲ್ಲ ಎಂದು ಹಾರಿಕೆಯ ಉತ್ತರವನ್ನು ನೀಡಿದ್ದು ಇರುತ್ತದೆ.
ನಂತರ ಮ್ಯಾಸ ನಾಯಕರ ಐತಿಹಾಸಿಕ ಹಿನ್ನೇಲೆಯನ್ನು ಹೇಳುವುದರ ಮೂಲಕ “ಏ ಇಲ್ಲಿ ಕೇಳ್ರೊ ಇವತ್ತು ಎಸ್ ಟಿ ಗೆ ಸೇರಿದ್ದು ಯಾರಿಂದ ಊರುನಾಯಕರಿಂದ ಅಲ್ಲ, ಮ್ಯಾಸ ನಾಯಕರನ್ನ ಹಿಡುಕೊಂಡು ಊರುನಾಯಕರು ಎಸ್ ಟಿ ಸೇರಿದ್ದುʼ ಎಂದು ಹೇಳಿದ್ದಾರೆ. ಹಾಗಾದರೆ ನಾಯಕ ಪಂಗಡದ ಮೂಲ ಬುಡಕಟ್ಟು ಜನಾಂಗದ ಸಮನಾರ್ಥಕ ಪದವನ್ನುಕೇಂದ್ರ ಸರ್ಕಾರದ ಜಾತಿಪಟ್ಟಿಯಲ್ಲಿ 2011ರ ವರೆಗೂ ಇಲ್ಲದ ಮ್ಯಾಸ ನಾಯಕ ಪದವನ್ನು ದಿನಾಂಕ:16-06-2011ರಂದು ಕೇಂದ್ರದ ಹಿಂದುಳಿದ ಜಾತಿಪಟ್ಟಿಗೆ ಸೇರ್ಪಡೆ ಮಾಡಿ ನಮ್ಮ ಬುಡಕಟ್ಟು ಜನಾಂಗಕ್ಕೆ ಕಾನೂನಿನ ತೊಡಕು ಉಂಟುಮಾಡಿದ್ದು ಈ ರಾಜನಹಳ್ಳಿ ವಾಲ್ಮೀಕಿ ಮಠವೇ.
ಮ್ಯಾಸ ನಾಯಕ ಬುಡಕಟ್ಟಿನ ಕೆಲವು ರಾಜಕಾರಣಿಗಳಿಗೆ ಮತ್ತು ಮುಖಂಡರಿಗೆ ಆಮಿಷ ತೋರಿಸಿ ತಮ್ಮ ಕಡೆ ಸೆಳೆದುಕೊಂಡು ನಮ್ಮಆದಿವಾಸಿಗಳ ಒಗ್ಗಟ್ಟನ್ನು ಹಾಳುಮಾಡಿದ್ದಾರೆ. ಎಲ್ಲಾ ಒಂದೆ ಎಂದು ಸುಳ್ಳು ಹೇಳಿ ನಮಗೆ ಮೋಸ ಮಾಡಿರುತ್ತಾರೆ. 2013ನೇ ಇಸವಿಯ ಕರ್ನಾಟಕ ಬುಡಕಟ್ಟು ಸಚಿತ್ರ ಕೋಶದಲ್ಲಿ ಪರಿವಾರ ತಳವಾರ 1991ರಲ್ಲಿ ಎಸ್ ಟಿ ಸೇರ್ಪಡೆಯಾಗಿದೆ ಎಂದು ಸುಳ್ಳು ಬರೆಸುತ್ತಾರೆ. ವಾಲ್ಮೀಕಿ ಸ್ವಾಮೀಜಿ ಮತ್ತು ಸ್ವಾಮೀಜಿಯ ಸಹಚರರು ಮ್ಯಾಸ ಬೇಡ ಬುಡಕಟ್ಟು ಜನಾಂಗಕ್ಕೆ ಸಂಬಂಧವಿಲ್ಲದವರು.
ಇವರು ರಾಜಕೀಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಸಂವಿಧಾನದ ನಿಯಮಗಳನ್ನು ಮಣ್ಣು ಪಾಲು ಮಾಡಿ ನಮ್ಮ ಬುಡಕಟ್ಟು ಜನಾಂಗದ ಹಣ, ಆಸ್ತಿ ಮತ್ತು ಹೆಸರನ್ನು ಅಕ್ರಮವಾಗಿ ಕಬಳಿಸಿ ವಂಚಿಸಿರುತ್ತಾರೆ.
ನಮಗೆ ಬೆದರಿಸಿ ಎಲ್ಲಾ ಒಂದೆ ಎನ್ನುವುದರ ಮೂಲಕ ಈ ಹಿಂದಿನಿಂದಲೂ ಸುಳ್ಳು ಎಸ್ ಟಿ ಪ್ರಮಾಣ ಪತ್ರಪಡೆದು ಸರ್ಕಾರಕ್ಕೆ ಸಾವಿರಾರು ಕೋಟಿ ವಂಚಿಸಿ ಲಪಾಟಯಿಸಿದ್ದಲ್ಲದೆ, ಅಧಿಕಾರ ದುರ್ಬಳಕೆ ಮಾಡಿಕೊಂಡು ಮೋಸಮಾಡಿ ನಮ್ಮ ಮೇಲೆ ಗುಂಡಾಗಿರಿ ಮತ್ತು ದಬ್ಬಾಳಿಕೆಯನ್ನು ಮತ್ತು ಕೋಲೆಯಂತಹ ಸಂಚುಗಳನ್ನು ರೂಪಿಸಿ ಸುಪಾರಿ ನೀಡುವುದರ ಮೂಲಕ ಕಿರುಕುಳ ಮತ್ತು ಮಾನಸಿಕ ಹಿಂಸೆಯನ್ನು ನೀಡುವ ಇವರ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ಸೂಕ್ತ ಕಾನೂನು ಕ್ರಮಕೈಗೊಂಡು ಮ್ಯಾಸ ಬೇಡ ಮುಖಂಡರಾದ ದೊಡ್ಡಮನಿ ಪ್ರಸಾದ್ ಮತ್ತು ಸಮಿತಿಯ ಸದಸ್ಯರ ಪ್ರಾಣ ರಕ್ಷಣೆ ಮಾಡಬೇಕೆಂದು ಈ ಮೂಲಕ ತಮಗೆ ಈ ದೂರನ್ನು ಸಲ್ಲಿಸುತ್ತಿದ್ದೇವೆ.
ನಮ್ಮ ಸಂವಿಧಾನ ಬದ್ಧ ಹಕ್ಕನ್ನು ನಮ್ಮ ಬುಡಕಟ್ಟು ಸಮುದಾಯದ ಜನರಿಂದ ವಂಚಿಸಿ ನಮ್ಮ ನಾಯಕ ಪಂಗಡದ ಸಮಾನಾರ್ಥಕ ಮ್ಯಾಸ ನಾಯಕ ಪದವನ್ನು ಓಬಿಸಿ ಪಟ್ಟಿಗೆ ಸೇರ್ಪಡೆ ಮಾಡಿ ನಾವೆ ಪರಿಶಿಷ್ಟ ಪಂಗಡದವರೆಂದು ಜಾತಿ ಪ್ರಮಾಣ ಪತ್ರಪಡೆಯುತ್ತಿರುವ ಇವರು ಸಂವಿಧಾನಕ್ಕೆ ವಂಚನೆ ಮಾಡಿದ್ದಾರೆ. ಶೋಷಣೆಯ ಮತ್ತು ಅನ್ಯಾಯದ ವಿರುದ್ಧ ಪ್ರತಿಭಟಿಸುವ ನಮ್ಮ ಸಂವಿಧಾನದ ವಿಧಿ-23, 24 ಮತ್ತು 32 ಪ್ರಕಾರ ನಮಗಿರುವ ಹಕ್ಕುಗಳನ್ನು ಸುಳ್ಳು ದೂರುಗಳನ್ನು ನೀಡಿ ಬೆದರಿಸಿ ಧಮನ ಮಾಡಲು ಪೋಲೀಸ್ ಇಲಾಖೆಯನ್ನು ಮತ್ತು ರಾಜಕೀಯ ಪ್ರಾಭಲ್ಯವನ್ನು ಬಳಸಿಕೊಳ್ಳಲು ಪ್ರಯತ್ನಿಸಿರುತ್ತಾರೆ.
ಆದ್ದರಿಂದ ಸದರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮಿ, ಹರಪನಹಳ್ಳಿಯ ಫಣಿಯಾಪುರ ಲಿಂಗರಾಜ, ಬಾಲೆನಹಳ್ಳಿ ಕೆಂಚನಗೌಡ, ದಾವಣಗೆರೆಯ ಆಂಜನೇಯ ಗುರುಜೀ, ಗುಮ್ಮನೂರು ಮಲ್ಲಿಕಾರ್ಜುನ, ಇವರುಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವಿನಂತಿಸುತ್ತೇವೆ.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಡಾ.ಗೆರೆಗಲ್ಪಾಪಯ್ಯ, ಉಪಾಧ್ಯಕ್ಷರಾದ ಎಂ.ಕೆ.ಬೋಸಪ್ಪ, ಡಾ.ಓಬಳೇಶ್ ಹಾಗೂ ಸಮಿತಿಯ ಸದಸ್ಯರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ
ಸುದ್ದಿದಿನ,ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅವಕಾಶ ಕಲ್ಪಿಸಲು ಸಜ್ಜಾಗಿದೆ. ವಿವಿಧ ಇಲಾಖೆಗಳಲ್ಲಿನ ಒಟ್ಟು 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲೇ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆದಿದೆ. ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಸುವ ಸಾಧ್ಯತೆಯೂ ಇದ್ದು, ಅಭ್ಯರ್ಥಿಗಳು ಈಗಿನಿಂದಲೇ ಅಧ್ಯಯನ ಆರಂಭಿಸುವುದು ಸೂಕ್ತವಾಗಿದೆ.
| ಹೈಲೈಟ್ಸ್: 4,744 ಹುದ್ದೆಗಳಿಗೆ ನೇಮಕಾತಿ |
|
http://Visit : www.suddidina.com
ಪದವಿ ಮಟ್ಟದಲ್ಲಿ 2,421 ಹುದ್ದೆಗಳು
ಈ ಬೃಹತ್ ನೇಮಕಾತಿಯಲ್ಲಿ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ. ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಇದ್ದು, ವಿವಿಧ ಸರಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.
ಪದವಿ ಪೂರ್ಣಗೊಳಿಸಿರುವ ಉದ್ಯೋಗಾಕಾಂಕ್ಷಿಗಳು ಯಾವ ಇಲಾಖೆಯಲ್ಲಿ ಯಾವ ಹುದ್ದೆಗಳು ಲಭ್ಯವಿರಲಿವೆ, ಹುದ್ದೆವಾರು ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಸೇರಿದಂತೆ ಅಧಿಸೂಚನೆಯಲ್ಲಿ ಪ್ರಕಟವಾಗುವ ಸಂಪೂರ್ಣ ವಿವರಗಳನ್ನು ಗಮನಿಸಬೇಕು.
ಪಿಯುಸಿ ಅಭ್ಯರ್ಥಿಗಳಿಗೂ ಅವಕಾಶ
ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರಿಗೂ ಈ ನೇಮಕಾತಿಯಲ್ಲಿ ಉತ್ತಮ ಅವಕಾಶವಿದೆ. ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,062 ಇವೆ. ಹೀಗಾಗಿ ಪದವಿ ಮಾತ್ರವಲ್ಲದೆ ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳೂ ಈ ನೇಮಕಾತಿಯ ಮೇಲೆ ಕಣ್ಣಿಟ್ಟಿದ್ದಾರೆ.
ಪಿಯುಸಿ ಹಂತದ ಹುದ್ದೆಗಳಿಗೆ ಅರ್ಹರಾಗಿರುವವರು ಅಧಿಸೂಚನೆ ಪ್ರಕಟವಾದ ನಂತರ ತಮ್ಮ ವಿದ್ಯಾರ್ಹತೆಗೆ ಹೊಂದುವ ಹುದ್ದೆಗಳನ್ನು ಗುರುತಿಸಿ ಅರ್ಜಿ ಸಲ್ಲಿಸಬಹುದು.
ತಾಂತ್ರಿಕ ವಿಭಾಗದಲ್ಲಿಯೂ 261 ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆದಿದೆ. ತಾಂತ್ರಿಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ಹುದ್ದೆಗಳನ್ನು ಪರಿಶೀಲಿಸಬೇಕಾಗಿದೆ.
ಒಟ್ಟು 4,744 ಹುದ್ದೆಗಳ ಪೈಕಿ 2,421 ಪದವಿ ಮಟ್ಟದ ತಾಂತ್ರಿಕೇತರ, 2,062 ಪಿಯುಸಿ ಮಟ್ಟದ ತಾಂತ್ರಿಕೇತರ ಹಾಗೂ 261 ತಾಂತ್ರಿಕ ಹುದ್ದೆಗಳು ಸೇರಿವೆ. ಈ ಮೂಲಕ ವಿವಿಧ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಸಿಗಲಿದೆ.
ಇನ್ನಷ್ಟು ಹುದ್ದೆಗಳು ಸೇರುವ ಸಾಧ್ಯತೆ
ಪ್ರಸ್ತುತ ಪ್ರಕಟಿಸಿರುವ ಹುದ್ದೆಗಳ ಸಂಖ್ಯೆಯೇ ಅಂತಿಮವಾಗಿಲ್ಲ ಎಂಬುದು ಗಮನಾರ್ಹ. ನಂತರದ ದಿನಗಳಲ್ಲಿ ಇನ್ನಷ್ಟು ಹೊಸ ಇಲಾಖೆಗಳು ಮತ್ತು ಹುದ್ದೆಗಳು ನೇಮಕಾತಿ ಪಟ್ಟಿಗೆ ಸೇರುವ ಸಾಧ್ಯತೆ ಇದೆ. ಹೀಗಾಗಿ ಅಭ್ಯರ್ಥಿಗಳು ಕೇವಲ ಈಗಿರುವ ಹುದ್ದೆಗಳನ್ನಷ್ಟೇ ಗಮನಿಸದೆ, ಅಧಿಕೃತ ಅಧಿಸೂಚನೆ ಹೊರಬರುವವರೆಗೆ KEA ಪ್ರಕಟಣೆಗಳನ್ನು ನಿರಂತರವಾಗಿ ಪರಿಶೀಲಿಸಬೇಕು.
ಪರೀಕ್ಷೆಗೆ ಈಗಿನಿಂದಲೇ ತಯಾರಿ
ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ಲಿಖಿತ ಪರೀಕ್ಷೆ ನಡೆಸಲು ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ತಯಾರಿಗೆ ಸಮಯ ಸೀಮಿತವಾಗಿರಲಿದೆ. ನೇಮಕಾತಿಯ ಪಠ್ಯಕ್ರಮದ ವಿವರಗಳನ್ನೂ ಮುಂಚಿತವಾಗಿ ಪರಿಶೀಲಿಸಿ, ವಿಷಯವಾರು ಅಧ್ಯಯನ ಆರಂಭಿಸುವುದು ಉತ್ತಮ.
ಅಂತಿಮವಾಗಿ, ಹುದ್ದೆಗಳ ಸಂಖ್ಯೆ, ಇಲಾಖೆಗಳ ವಿವರ, ವಿದ್ಯಾರ್ಹತೆ, ಪರೀಕ್ಷಾ ವಿಧಾನ, ಪಠ್ಯಕ್ರಮ, ವಯೋಮಿತಿ ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕ ಸೇರಿದಂತೆ ಪೂರ್ಣ ಹಾಗೂ ಅಧಿಕೃತ ಮಾಹಿತಿಯನ್ನು ಅಧಿಸೂಚನೆ ಪ್ರಕಟವಾದ ಬಳಿಕವೇ ಖಚಿತಪಡಿಸಿಕೊಳ್ಳಬೇಕು. ಅಭ್ಯರ್ಥಿಗಳು ಪ್ರಕಟಣೆಯ ಲಿಂಕ್ ಪರಿಶೀಲಿಸಿ, ತಮ್ಮ ಅರ್ಹತೆಗೆ ಹೊಂದುವ ಹುದ್ದೆಗಳ ವಿವರಗಳನ್ನು ತಿಳಿದುಕೊಂಡು ಸಿದ್ಧತೆ ಆರಂಭಿಸಬಹುದು.

ದಿನದ ಸುದ್ದಿ
ಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.
http://Visit : www.suddidina.com
ಗುಟ್ಕಾ, ಪಾನ್ ಮಸಾಲಾ ನಿಷೇಧಕ್ಕೂ ಆಗ್ರಹ
ಬಂದ್ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.
ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.
https://x.com/ians_india/status/2094602342230528256
ಟೈರ್ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ
ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.
ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.
ಬಂದ್ಗೆ ವ್ಯಾಪಾರಸ್ಥರ ಬೆಂಬಲ?
ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.
ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.
ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

ದಿನದ ಸುದ್ದಿ
ಅಪೌಷ್ಟಿಕತೆ ನಿವಾರಣೆಗೆ ಹೊಸ ಹೆಜ್ಜೆ; ಶಾಲೆ ಮುಗಿಯುವ ಮುನ್ನ ಮಕ್ಕಳಿಗೆ ಪೌಷ್ಟಿಕ ತಿನಿಸು
ಸುದ್ದಿದಿನ,ಹೂವಿನಹಡಗಲಿ: ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಸುಧಾರಣೆಗೆ ಕರ್ನಾಟಕ ಗಣಿ ಮತ್ತು ಪರಿಸರ ಪುನಸ್ಥಾಪನೆ ನಿಗಮ (ಕೆಎಂಆರ್ಸಿಇ) ಹೊಸ ಹೆಜ್ಜೆ ಇಟ್ಟಿದೆ. ವಿಜಯನಗರ, ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಶೀಘ್ರದಲ್ಲೇ ಸಂಜೆ ಸ್ನ್ಯಾಕ್ಸ್ ವಿತರಿಸುವ ಯೋಜನೆ ರೂಪಿಸಲಾಗಿದೆ.
ಈ ಸಂಬಂಧ ನಾಲ್ಕು ಜಿಲ್ಲೆಗಳ ಜಿಲ್ಲಾ ಪಂಚಾಯಿತಿಗಳ ಮೂಲಕ ಸಂಬಂಧಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ರವಾನೆಯಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸಲು ಸಿದ್ಧತೆ ಆರಂಭಿಸಲಾಗಿದೆ. ಹೂವಿನಹಡಗಲಿ ತಾಲೂಕಿನಲ್ಲಿ ಈಗಾಗಲೇ ಮುಖ್ಯಗುರುಗಳ ಸಭೆ ನಡೆಸಿ ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಗಿದೆ.
http://Visit : www.suddidina.com
ಅಪೌಷ್ಟಿಕತೆ ತಡೆಗೆ ಪೌಷ್ಟಿಕ ಆಹಾರ
ಗಣಿ ಬಾಧಿತ ಪ್ರದೇಶಗಳಲ್ಲಿ ಮಕ್ಕಳಿಗೆ ಹೆಚ್ಚುವರಿ ಪೌಷ್ಟಿಕ ಆಹಾರ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಸಂಜೆ ಸಮಯದಲ್ಲಿ ಮಕ್ಕಳಿಗೆ ನೆನೆಸಿದ ಶೇಂಗಾ, ಮೊಳಕೆಯೊಡೆದ ಹೆಸರುಕಾಳು, ಚಕ್ಕಿ ಸೇರಿದಂತೆ ವಿವಿಧ ಪೌಷ್ಟಿಕ ಆಹಾರಗಳನ್ನು ನೀಡಲು ಉದ್ದೇಶಿಸಲಾಗಿದೆ. ಕೆಲವು ದಿನಗಳಲ್ಲಿ ಮೂಸಂಬಿ, ಕಿತ್ತಳೆ, ಸಪೋಟ ಮತ್ತಿತರ ಹಣ್ಣುಗಳನ್ನೂ ವಿತರಿಸುವ ವ್ಯವಸ್ಥೆ ಇರಲಿದೆ.
ಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಟಿಕತೆ ಹಾಗೂ ಪೌಷ್ಟಿಕಾಂಶದ ಕೊರತೆ ನಿವಾರಣೆಗೆ ಪೂರಕವಾಗುವಂತೆ ಈ ಯೋಜನೆ ರೂಪಿಸಲಾಗಿದೆ. ಶಾಲೆಯಲ್ಲಿ ಶಿಕ್ಷಣದ ಜತೆಗೆ ಮಕ್ಕಳ ಆರೋಗ್ಯಕ್ಕೂ ಆದ್ಯತೆ ನೀಡುವ ಪ್ರಯತ್ನ ಇದಾಗಿದೆ.
24,352 ಮಕ್ಕಳಿಗೆ ಪ್ರಯೋಜನ
ಹೂವಿನಹಡಗಲಿ ತಾಲೂಕಿನಲ್ಲಿ 138 ಸರ್ಕಾರಿ ಪ್ರಾಥಮಿಕ ಹಾಗೂ 27 ಪ್ರೌಢಶಾಲೆಗಳ ಒಟ್ಟು 24,352 ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಯೋಜನೆಗಾಗಿ ಕೆಎಂಆರ್ಸಿಇ ವತಿಯಿಂದ ₹10.64 ಕೋಟಿಗೂ ಹೆಚ್ಚು ಮೊತ್ತದ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಮೂರು ವರ್ಷಗಳ ಅವಧಿಗೆ ಒಟ್ಟು ಸುಮಾರು ₹33 ಕೋಟಿ ಆಡಳಿತಾತ್ಮಕ ಮಂಜೂರಾತಿ ದೊರೆತಿದ್ದು, ಅಡುಗೆದಾರರು ಮತ್ತು ಸಹಾಯಕಿಯರ ವೆಚ್ಚಕ್ಕೂ ಪ್ರತ್ಯೇಕ ಅನುದಾನ ಮೀಸಲಿಡಲಾಗಿದೆ. ಇದರಿಂದ ಯೋಜನೆ ಕೇವಲ ತಾತ್ಕಾಲಿಕ ಕ್ರಮವಾಗದೆ ನಿರಂತರವಾಗಿ ನಡೆಯುವ ನಿರೀಕ್ಷೆ ಮೂಡಿದೆ.
SATS ಮಾಹಿತಿ ಅಪ್ಡೇಟ್ ಸವಾಲು
ಆದರೆ ಯೋಜನೆ ಅನುಷ್ಠಾನಕ್ಕೆ ವಿದ್ಯಾರ್ಥಿಗಳ ನಿಖರ ಸಂಖ್ಯೆಯೇ ಪ್ರಮುಖ ಆಧಾರವಾಗಿದ್ದು, SATS ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಮಾಹಿತಿ ಅಪ್ಡೇಟ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೊಸ ಪ್ರವೇಶ, ಶಾಲೆ ಬದಲಾವಣೆ ಸೇರಿದಂತೆ ಹಲವು ಕಾರಣಗಳಿಂದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಬದಲಾವಣೆಯಾಗಿರುವುದರಿಂದ ಅಂತಿಮ ಪಟ್ಟಿ ಸಿದ್ಧಪಡಿಸುವುದು ಸವಾಲಾಗಿದೆ.
ಸೆಪ್ಟೆಂಬರ್ 5ರೊಳಗೆ ಮಾಹಿತಿ ನವೀಕರಣ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ನಂತರ ಸಂಜೆ ಸ್ನ್ಯಾಕ್ಸ್ ವಿತರಣೆಗೆ ವೇಗ ಸಿಗುವ ಸಾಧ್ಯತೆಯಿದೆ.
ಶಿಕ್ಷಕರಿಗೆ ಹೆಚ್ಚುವರಿ ಹೊರೆ?
ಯೋಜನೆಯ ಉದ್ದೇಶ ಉತ್ತಮವಾಗಿದ್ದರೂ, ಅನುಷ್ಠಾನದ ಹೊಣೆಗಾರಿಕೆ ಶಿಕ್ಷಕರ ಮೇಲೆಯೇ ಹೆಚ್ಚಾಗುವ ಆತಂಕವೂ ವ್ಯಕ್ತವಾಗಿದೆ. ಈಗಾಗಲೇ ಎಐ ಹಾಜರಾತಿ, ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು ಹಾಗೂ ವಿವಿಧ ಡಿಜಿಟಲ್ ದಾಖಲೆಗಳ ನಿರ್ವಹಣೆಯಲ್ಲಿ ಶಿಕ್ಷಕರು ನಿರತರಾಗಿದ್ದಾರೆ. ನೆಟ್ವರ್ಕ್ ಸಮಸ್ಯೆಯೂ ಕೆಲವೊಮ್ಮೆ ತೊಂದರೆ ನೀಡುತ್ತಿದೆ.
ಶಾಲೆ ಮುಗಿಯುವ ವೇಳೆಯಲ್ಲಿ ಸ್ನ್ಯಾಕ್ಸ್ ವಿತರಣೆ, ದಾಖಲಾತಿ ಮತ್ತು ಮೇಲ್ವಿಚಾರಣೆ ಮತ್ತೊಂದು ಜವಾಬ್ದಾರಿಯಾಗಬಹುದು ಎಂಬುದು ಶಿಕ್ಷಕರ ಅಭಿಪ್ರಾಯ. ಹೀಗಾಗಿ ಮಕ್ಕಳಿಗೆ ಪೌಷ್ಟಿಕ ಆಹಾರ ತಲುಪಿಸುವ ಯೋಜನೆಯ ಜತೆಗೆ ಶಿಕ್ಷಕರ ಮೇಲಿನ ಆಡಳಿತಾತ್ಮಕ ಒತ್ತಡ ಕಡಿಮೆ ಮಾಡುವ ವ್ಯವಸ್ಥೆಯೂ ಅಗತ್ಯವಾಗಿದೆ.
ವಾರದ ಆರು ದಿನಗಳಲ್ಲಿ ವಿವಿಧ ಪೌಷ್ಟಿಕ ತಿನಿಸುಗಳು ಹಾಗೂ ಶನಿವಾರ ಹಣ್ಣು ವಿತರಿಸುವ ಉದ್ದೇಶವಿದ್ದು, ಸರಕಾರದ ಅಂತಿಮ ಸೂಚನೆ ಬಂದ ಬಳಿಕ ಯೋಜನೆಗೆ ಚಾಲನೆ ಸಿಗಲಿದೆ.

-
ದಿನದ ಸುದ್ದಿ7 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ7 days agoಡಾಲಿಯ ಕನಸು ಒಂದೇ ಹೀರೋ ಆಗೋದು
-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ3 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ3 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ3 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!





