Connect with us

ಲೈಫ್ ಸ್ಟೈಲ್

ಸಾವಯವ ಕೃಷಿಯಲ್ಲಿ ಸೈ ಎನಿಸಿಕೊಂಡ ‘ಶಂಕರೇಗೌಡ’..!

Published

on

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೇವಗಳ್ಳಿ ಗ್ರಾಮದ ಶಂಕರೇಗೌಡ ಅವರು ಒಟ್ಟು 5 ಎಕರೆ ಜಮೀನನ್ನು ಹೊಂದಿರುತ್ತಾರೆ. ಆದರೆ ಇವರು ಪ್ರಾರಂಭದಲ್ಲಿ ವ್ಯವಸಾಯವನ್ನು ಮಾಡದೆ ತನ್ನ ಬಳಿ ಇದ್ದ ಒಂದು ಟ್ರ್ಯಾಕ್ಟರನಲ್ಲಿ ಸುತ್ತಮುತ್ತಲಿನ ಜಮೀನನಲ್ಲಿ ಬಾಡಿಗೆಯನ್ನು ಹೊಡೆಯುವ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಕ್ರಮೇಣ ವ್ಯವಸಾಯದಿಂದಲೆ ನನ್ನ ಜೀವನ ಮುಂದುವರೆಯಬೇಕು ಎಂಬ ಆಚಲ ಮನಸ್ಸು ಮಾಡಿದ್ದು ಇಂದು ಇವರು ಸಾವಯವ ಕೃಷಿಯಲ್ಲಿ ಉತ್ತಮ ಆದಾಯ ಗಳಿಸಲು ಕಾರಣವಾಯಿತು.
’’ಆರಂಭ ಆರಾಮಗಿರಬೇಕು’’ ಎಂದು ವ್ಯವಸಾಯವನ್ನು ಪ್ರಾರಂಭಿಸಲು ಮುಂದಾದಾಗ ನನ್ನ 5 ಎಕೆರೆ ಭೂಮಿಯನ್ನು ಹಂತಹಂತವಾಗಿ ಹದಮಾಡಿ ಮೊದಲ ಬಾರಿಗೆ ಬಾಳೆಹಣ್ಣು ಬೆಳೆಯಲು ಮುಂದಾದೆ. ಆದರೆ ಇದರಿಂದ ತುಂಬಾ ನಷ್ಟವಾಯಿತು.

ನನಗೆ ಸಾವಯವ ಕೃಷಿ ಅಂದರೇ ನನಗೆ ಎಲ್ಲಿಲದ ಪ್ರೀತಿ, ಆಸಕ್ತಿ. ಆದರೇ ಇದರ ಬಗ್ಗೆ ನನಗೆ ಅಷ್ಟೋಂದು ತಿಳಿದಿರಲಿಲ್ಲ ನಂತರದ ದಿನಗಳಲ್ಲಿ ಸುತ್ತೂರಿನ ಜೆ.ಎಸ್.ಎಸ್. ಕೃಷಿ ವಿಜ್ಞಾನ ಕೇಂದ್ರದ ತರಬೇತಿಗೆ ತೆರಳಿ ಅಲ್ಲಿರುವ ತಜ್ಞರ ಮಾಹಿತಿಯ ಮೇರೆಗೆ ಸಾವಯವ ಕೃಷಿಯಲ್ಲಿ ಸಂಪೂರ್ಣವಾಗಿ ತೊಡಗಲು ಸಾಧ್ಯವಾಯಿತು ಎಂದು ಕೃಷಿಕ ಶಂಕರೇಗೌಡ ಅವರು ಹೇಳುತ್ತಾರೆ.

ಶಂಕರೇಗೌಡರು ಮೊದಲು ಬಾಳೆಯ ವಿವಿಧ ತಳಿಗಳಾದ ಕಾಡುಬಾಳೆ, ನೇಂದ್ರನ್, ನಂಜನಗೂಡು ರಸಬಾಳೆ, ಪಚ್ಚಬಾಳೆ, ಏಲಕ್ಕಿ ಬಾಳೆಗಳ ಸುಮಾರು 400 ಗಿಡಗಳನ್ನು ಟ್ರೆಂಚ್ ಪದ್ದತಿಯಲ್ಲಿ ಬೆಳೆದರು. ಶಂಕರೇಗೌಡರಿಗೆ ಮೊದಲಿನಿಂದಲೂ ಸಾವಯವ ಕೃಷಿಯಲ್ಲಿ ಬಹಳ ಆಸಕ್ತಿ ಇರುವುದರಿಂದ ತಮ್ಮ ಭೂಮಿಯನ್ನು ಹಂತ ಹಂತವಾಗಿ ಸಂಪೂರ್ಣ ಸಾವಯವ ಭೂಮಿಯಾಗಿ ಪರಿವರ್ತಿಸಿದರು.

ಮುಂದುವರೆದು 8 ಗುಂಟೆ ಪ್ರದೇಶದಲ್ಲಿ ಅರಿಶಿಣ ಹಾಗೂ ಪರಂಗಿ 50 ಗಿಡ, ಹುಣಸೆ ಮರ 2, ತೆಂಗು-130, ನೇರಳೆ-2, ಹಲಸು-6, ಸೀಬೆ-40, ಮಾವು-6. ಮೊಸಂಬಿ-2, ಚಕ್ಕೊತಾ-1, ನೆಲ್ಲಿಕಾಯಿ-1, ನುಗ್ಗೆ-15, ಸೀತಾಫಲ-2, ಇರಳೆಕಾಯಿ-20, ಗಜನಿಂಬೆ-25, ನಿಂಬೆ-12, ಕರಿಬೇವು-15, ಸೊಪ್ಪುಗಳಾದ ಕೊತ್ತಂಬರಿ, ಸಬ್ಬಸಿಗೆ, ಹೊನಗೊನೆ, ಕೀರೆ, ಪುದೀನಾ, ಮೆಂತ್ಯಾ, ಇತ್ಯಾದಿ ಬೆಳೆಗಳನ್ನು ಬೆಳೆದಿದ್ದಾರೆ.

ಜಮೀನಿನ ಸುತ್ತಾ ಬದುಗಳಲ್ಲಿ ಸಿಲ್ವರ್ ಓಕ್-200, ಟೀಕ್-100, ಹೆಬ್ಬೇವು-20, ಕಹಿಬೇವು-6, ಜೇನು ಪೆಟ್ಟಿಗೆ-2, ಹಾಗೂ ಕುರಿಗಳು-15, ಕೋಳಿ-15, ಹೆಚ್.ಎಫ್ ಹಸು-2, ಮೆಣಸು-4, ಅಡಿಕೆ-2, ಮರಗೆಣಸು-5, ಶುಂಠಿ-1 ಗುಂಟೆ, ಹಾಗೂ 4 ಎರೆಹುಳು ಗೊಬ್ಬರ ಘಟಕಗಳನ್ನು ಹೊಂದಿದ್ದಾರೆ ಹಾಗೂ ಒಂದು ಬೋರ್‍ವೆಲ್ ಮತ್ತು ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಲಾದ ಕೃಷಿಹೊಂಡವನ್ನು ಹೊಂದಿದ್ದು, ಇವುಗಳ ಮೂಲಕ ಬೆಳೆಗಳಿಗೆ ನೀರುಣಿಸುತ್ತಾರೆ.

ದಿನನಿತ್ಯ ಉಪಯೋಗಿಸುವಂತಹ ಪದಾರ್ಥಗಳು, ಸಾಂಬಾರ ಪದಾರ್ಥಗಳು, ಸೊಪ್ಪು, ಹಾಗೂ ತರಕಾರಿಗಳನ್ನು ಮಾತ್ರ ಬೆಳೆಯುತ್ತಿದ್ದರು, ಇವುಗಳಿಗೆ ಮಾರುಕಟ್ಟೆಯಲ್ಲಿ ಸದಾಕಾಲ ಬೇಡಿಕೆ ಇದ್ದೇ ಇರುತ್ತಿತ್ತು. ಇದನ್ನರಿತ ಶಂಕರೇಗೌಡರು ಕೃಷಿ ತಜ್ಞರ ಸಲಹೆಯ ಮೇರೆಗೆ ವಿವಿಧ ಹಂತಗಳಲ್ಲಿ ಕಟಾವಿಗೆ ಬರುವಂತೆ ಉಪಚರಿಸಿ, ಯತೇಚ್ಚವಾಗಿ ಜೀವಾಮೃತ ಮತ್ತು ಪಂಚಗವ್ಯಗಳನ್ನು ಬಳಸಿ ಬಿತ್ತನೆ ಮಾಡುತ್ತಿದ್ದರು.

ಇವರು ವಾರಕ್ಕೊಮ್ಮೆ ಭಾನುವಾರದ ದಿನ ತಮ್ಮಲ್ಲಿ ಲಭ್ಯವಿರುವ ಎಲ್ಲಾ ಬೆಳೆಗಳು ಮತ್ತು ಪದಾರ್ಥಗಳನ್ನು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಯಾವುದೇ ಮದ್ಯವರ್ತಿಗಳ ಸಹಾಯವಿಲ್ಲದೆ ಮೈಸೂರಿನ ವಿವೇಕಾನಂದ ಸರ್ಕಲ್‍ನ ಬಳಿ ತಮ್ಮದೇ ಆದ ಒಂದು ಸಂತೆ (ಮಾರುಕಟ್ಟೆ) ಕಲ್ಪಿಸಿಕೊಂಡು ಇದರ ಮೂಲಕ ನಗರ ಪ್ರದೇಶದ ಗ್ರಾಹಕರಿಗೆ ಉತ್ತಮ ಗುಣಮಟ್ಟದ ತಾಜಾ ಸಾವಯವ ತರಕಾರಿ ಮತ್ತು ಹಣ್ಣುಗಳನ್ನು ಪೂರೈಸುತ್ತಿದ್ದಾರೆ.

ಇವರ ಈ ರಾಸಾಯನಿಕ ಮುಕ್ತವಾದ ಸಾವಯವ ಪದಾರ್ಥಗಳೆಂದರೇ ಗ್ರಾಹಕರಿಗೆ ಎಲ್ಲಿಲ್ಲದ ಬೇಡಿಕೆ. ಒಂದು ವಾರಕ್ಕಾಗುವಷ್ಟು ದಿನಬಳಕೆ ಪದಾರ್ಥಗಳನ್ನು ಭಾನುವಾರದ ದಿನ ಶಂಕರೇಗೌಡರಿಂದ ಖರೀದಿಸುತ್ತಾರೆ. ಹಾಗೂ ಮತ್ತೇನಾದರೂ ಅವಶ್ಯಕತೆವಿರುವ ತರಕಾರಿ ಬೇಕಾದಲ್ಲಿ ಗ್ರಾಹಕರು ಶಂಕರೇಗೌಡರಿಗೆ ದೂರವಾಣಿಯ ಮೂಲಕ ಕರೆ ಮಾಡುವರು. ತಾವು ಬೆಳೆದ ಅರಿಶಿಣವನ್ನು ತಾವೇ ಸ್ವತಃ ಸಂಸ್ಕರಿಸಿ ಚನ್ನಾಗಿ ಒಣಗಿಸಿ ಪುಡಿಗೊಳಿಸಿ ಅದನ್ನು ಪ್ಯಾಕ್ ಮಾಡಿ, ಮಾರಾಟ ಮಾಡುತ್ತಾರೆ.

ಇವರ ಅರಿಶಿಣ ಪಾರ್ಸಲ್ ಮೂಲಕ ಉತ್ತರ ಕರ್ನಾಟಕದ ವಿವಿಧ ಭಾಗಗಳಿಗೆ ತಲುಪುತ್ತದೆ. ಏಕೆಂದರೇ ಇವರ ಗ್ರಾಹಕರು ಅಲ್ಲಿಯವರೆಗೂ ಸಹ ವ್ಯಾಪಿಸಿದ್ದಾರೆ ಎನ್ನುವುದು ಬಹಳ ಹೆಮ್ಮೆಯ ವಿಷಯ ಹಾಗೂ ಪೆÇಸ್ಟಲ್ ಮೂಲಕವೇ ಮನಿ ಆರ್ಡರ್ ಮಾಡಿ ಅಂಚೆ ಮೂಲಕವೇ ತಮಗೆ ಬೇಕಾದ ಪದಾರ್ಥವನ್ನು ಪಡೆಯುತ್ತಾರೆ.

ಕಳೆದ 7 ವರ್ಷಗಳಿಂದಲೂ ಸಹ ಯಾವುದೇ ರಾಸಾಯನಿಕಗಳನ್ನು ಭೂಮಿಗೆ ಸೋಕಿಸದೇ ಇರುವ ಶಂಕರೇಗೌಡರು ಕುರಿ ಮತ್ತು ಕೋಳಿ ಸಾಕಣೆಯನ್ನೂ ಸಹ ವಿಶಿಷ್ಟ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. 15 ಕುರಿಗಳು ಮತ್ತು 15 ಕೋಳಿಗಳನ್ನು ಸ್ಟಾಲ್ ಫೀಡಿಂಗ್ ಪದ್ದತಿಯಲ್ಲಿ ಸಾಕುತ್ತಿದ್ದು, ಇವುಗಳಿಂದ ಬಂದಂತಹ ಗೊಬ್ಬರಗಳನ್ನು ಚೆನ್ನಾಗಿ ಕಲಸಿ, ಅದನ್ನು ತಮ್ಮ ಭೂಮಿಗೆ ಸಿಂಪಡಿಸಿ, ಇದರ ಜೊತೆಗೆ 4 ಎರೆಹುಳು ಘಟಕಗಳನ್ನು ಕೃಷಿ ಇಲಾಖೆ ಸಹಾಯಧನದಲ್ಲಿ ನಿರ್ಮಿಸಿಕೊಂಡು ಇದರಿಂದ ಉತ್ಪಾದನೆಯಾಗುವ ಗೊಬ್ಬರವನ್ನೂ ಸಹ ತಮ್ಮ ಜಮೀನಿಗೆ ಬಳಸಿಕೊಳ್ಳುತ್ತಾರೆ.

ಹೆಚ್ಚು ಎರೆಹುಳು ಗೊಬ್ಬರ ಉತ್ಪಾದನೆ ಮಾಡುವ ಶಂಕರೇಗೌಡರು ಅದನ್ನು ಬೇರೇ ರೈತರಿಗೆ ಬೇಡಿಕೆಗನುಗುಣವಾಗಿ ಮಾರಾಟ ಮಾಡುತ್ತಾರೆ. ತೋಟಗಾರಿಕೆ ಇಲಾಖೆಯ ಸಹಾಯಧನದಲ್ಲಿ ಪಡೆದಿರುವ ಬಹುಪಯೋಗಿ ರೋಟರಿ ಟಿಲ್ಲರ್ ಯಂತ್ರವನ್ನು ಬಹಳ ಪರಿಣಾಮಕಾರಿಯಾಗಿ ಉಳುಮೆ ಮಾಡಲು, ಭೂಮಿ ಹದಾ ಮಾಡಲು, ಸಾಲು ತೆಗೆಯಲು, ಕಳೆ ತೆಗೆಯಲು, ಅಂತರಬೇಸಾಯ, ಹೀಗೇ ಹಲವಾರು ಚಟುವಟಿಕೆಗಳಿಗೆ ಬಳಸುತ್ತಾರೆ.

ಇಷ್ಟೆಲ್ಲಾ ವೈವಿಧ್ಯತೆ ಸಾಧಿಸಿರುವ ಇವರು ಮಾಸಿಕ ಅಂದಾಜು 35 ರಿಂದ 40 ಸಾವಿರ ರೂಗಳ ಆದಾಯ ಗಳಿಸುತ್ತಿದ್ದಾರೆ. ಕೆಲ ಆಸಕ್ತ ರೈತರು ಹಾಗೂ ಹೊರ ಜಿಲ್ಲೆ, ರಾಜ್ಯಗಳಿಂದ ಬಂದ ರೈತರುಗಳಿಗೆ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡುತ್ತಾ ಅವರಲ್ಲಿ ಸ್ಪೂರ್ತಿ ತುಂಬುವ ಕೆಲಸದಲ್ಲೂ ಸಹ ಆಸಕ್ತಿ ವಹಿಸುತ್ತಾರೆ.

ಅವರೆಲ್ಲರಿಗೂ ಸಹ ಏಕಬೆಳೆ ಪದ್ದತಿ ತ್ಯಜಿಸಿ ಬಹುಬೆಳೆ ಮತ್ತು ಮಿಶ್ರಬೆಳೆ ಪದ್ದತಿಯನ್ನು ಹಾಗೂ ರಾಸಾಯನಿಕ ಮುಕ್ತವಾದ ಸಾವಯವ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳುವ ರೈತನು ಯಾವುದೇ ಕಾರಣಕ್ಕೂ ಆತ್ಮಹತ್ಯೆಯ ದಾರಿ ಹಿಡಿಯುವುದಿಲ್ಲ. ಬದಲಾಗಿ ನಾಲ್ಕು ಜನರಿಗೆ ಕೆಲಸ ನೀಡುವ ಸಾಹುಕಾರನಾಗಿ ಬೆಳೆಯುತ್ತಾನೆ, ಇದಕ್ಕೆ ಸ್ವತಃ ನಾನೇ ನೈಜ ಉದಾಹರಣೆ ಎನ್ನುತ್ತಾರೆ ಪ್ರಗತಿಪರ ರೈತ ಶಂಕರೇಗೌಡ ಅವರು. –

ಸಂಜಯ್.ಕೆ.ಬೆಳತ್ತೂರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

Trending