ದಿನದ ಸುದ್ದಿ
ಮೈಸೂರು ವಿ.ವಿ | ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಸಂಶೋಧನ ವಿದ್ಯಾರ್ಥಿಗೆ ಹಾಸ್ಟೆಲ್ ಸೌಲಭ್ಯ ಕೊಡದ ಕುಲಸಚಿವ

ಸಂಶೋಧನ ವಿದ್ಯಾರ್ಥಿಗೆ ಹಾಸ್ಟೆಲ್ ಸೌಲಭ್ಯ ಕೊಡದ ಕುಲಸಚಿವ ಸ್ಟೂಡೆಂಟ್ ಅಸೋಸಿಯೇಷನ್ ಸಂಘಟನೆಯೊಂದನ್ನು ಕಟ್ಟಿಕೊಂಡು ಜಾಗೃತಿಗೊಳಿಸುತಿದ್ಧ ರೋಹಿತ್ ವೇಮುಲಾ ಎಂಬ ವಿದ್ಯಾರ್ಥಿಯನ್ನು ನಿಲಯದಿಂದ ಹೊರ ಹಾಕಲಾಗಿತ್ತು. ಇದರಿಂದ ದಿನಾಂಕ 17_05_2015 ರಂದು ಕೊಠಡಿಯಲ್ಲಿ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಮೈಸೂರಿನ ವಿಶ್ವವಿದ್ಯಾನಿಲಯದಲ್ಲಿ ಅಂತದ್ದೇ ಪ್ರಕರಣವೊಂದು ಜರುಗುವ ಸಾಧ್ಯತೆಗಳಿವೆ.
ಹೈದ್ರಾಬಾದ್ ಕೇಂದ್ರಿಯ ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಸಂಘಟನೆ ಇರುವಂತೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟ ಇದೆ. ಇದು ಸಂಘಟನೆಯು ನಿರಂತರವಾಗಿ 25 ವರ್ಷಗಳಿಂದಲೂ ಇದೆ. ಈ ಸಂಘಟನೆಯು ವಿಶ್ವವಿದ್ಯಾಲಯದಲ್ಲಿ ಆಡಳಿತಾತ್ಮಕ ಲೋಪದೋಷಗಳನ್ನು ಪ್ರಶ್ನಿಸುವುದರ ಜೊತೆಗೆ ವಿದ್ಯಾರ್ಥಿಗಳಿಗಾಗುವ ಅನ್ಯಾಯದ ವಿರುದ್ಧ ನ್ಯಾಯಯುತವಾಗಿ ಕೆಲಸ ಮಾಡುತ್ತಿದೆ. 2013 ನೇ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಎಂ. ಎ ಇತಿಹಾಸ ವಿಭಾಗಕ್ಕೆ ಪ್ರವೇಶಾತಿ ಪಡೆದ ಮಹೇಶ್ ಸೋಸ್ಲೆ Mahesh Sosle ಎಂಬ ವಿದ್ಯಾರ್ಥಿಯು ದಲಿತ ವಿದ್ಯಾರ್ಥಿ ಒಕ್ಕೂಟದ ಗೌರವಾಧ್ಯಕ್ಷನಾಗಿದ್ದ. ಆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಗಿರುವ ಅನಾನುಕೂಲ ಮತ್ತು ಇನ್ನಿತರ ಲೋಪದೋಷಗಳನ್ನು ಎತ್ತಿ ಹಿಡಿದಿದ್ದ.
ಎಂ. ಎ ಯಲ್ಲಿ ಚಿನ್ನದ ಪದಕ ಪಡೆದು ಹೊರಬಂದ ಈ ವಿದ್ಯಾರ್ಥಿಯು ಇಂದು ಅದೇ ಇತಿಹಾಸ ವಿಭಾಗದಲ್ಲಿ ಪಿಹೆಚ್, ಡಿ (ಸಂಶೋಧನೆ) ಗೆ ಪ್ರವೇಶ ಪಡೆದಿರುತ್ತಾನೆ. ಈ ವಿದ್ಯಾರ್ಥಿಗೆ ನಿಲಯ ಪ್ರವೇಶ ಕೊಟ್ಟರೆ ವಿಶ್ವವಿದ್ಯಾನಿಲದ ಲೋಪದೋಷಗಳನ್ನು ಎತ್ತಿ ಹಿಡಿಯುತ್ತಾನೆ ಮತ್ತು ವಿದ್ಯಾರ್ಥಿಗಳನ್ನು ಸಂಘಟಿಸುತ್ತಾನೆ ಎನ್ನುವ ನೆಪವೋಡ್ಡಿ ವಿಶ್ವವಿದ್ಯಾನಿಲಯದ ಸದರಿ ಕುಲಸಚಿವರು ವಿದ್ಯಾರ್ಥಿಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದಾರೆ. ಪಿಹೆಚ್, ಡಿ ಗೆ ಪ್ರವೇಶವಿದ್ದರೂ ನಿಲಯದ ಪ್ರವೇಶಾತಿ ಸಿಗದ ಈ ದಲಿತ ವಿದ್ಯಾರ್ಥಿಯು ನಿಲಯದ ಕಾರಿಡಾರ್ ನಲ್ಲಿ ಯೇ ಮಲಗುತಿದ್ದಾನೆ.
ಇಲ್ಲಿ ನನ್ನ ಪ್ರಶ್ನೆ ಎಂದರೆ ಒಂದು ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನಕ್ಕೆ ಪ್ರವೇಶಾತಿ ಕೊಟ್ಟ ನಂತರ ನಿಲಯದ ಪ್ರವೇಶಾತಿಯನ್ನು ಬಯಸಿದರೆ ಕಡ್ಡಾಯವಾಗಿ ಕೊಡಬೇಕು. ಪಿಹೆಚ್, ಡಿ ಗೆ ಪ್ರವೇಶಕೊಟ್ಟು ನಿಲಯಕ್ಕೆ ಪ್ರವೇಶಕೊಡದೆ ಯಾವ ಕಾನೂನಿನಡಿ ಕಪ್ಪು ಪಟ್ಟಿಯಲ್ಲಿ ಸೇರಿಸಿದ್ದೀರಿ? ಸಂಘಟನೆ ಮಾಡುವ ವ್ಯಕ್ತಿಗಳನ್ನು ಕಪ್ಪು ಪಟ್ಟಿಯಲ್ಲಿಡಬೇಕು ಎಂದು ರಾಜ್ಯಸರ್ಕಾರದ ಶೈಕ್ಷಣಿಕ ನಿಯಮಾವಳಿಯಾಗಲಿ, ವಿಶ್ವವಿದ್ಯಾನಿಲಯದ ನಿಯಮಾವಳಿಯಾಗಲಿ, ಯುಜಿಸಿ ನಿಯಮಾವಳಿಯಾಗಲಿ ಹೇಳುತ್ತದೆಯೇ? ಕರ್ನಾಟಕ ರಾಜ್ಯ ಸರ್ಕಾರ ಇದನ್ನು ಕೂಡಲೇ ಗಮನಿಸಿ ಕುಲಸಚಿವರ ವಿರುದ್ಧ ಕ್ರಮ ಜರುಗಿಸಿ ವಿದ್ಯಾರ್ಥಿಗೆ ನ್ಯಾಯ ದೊರಕಿಸಿ. ಇಲ್ಲವಾದರೆ ಹೈದ್ರಾಬಾದ್ ಕೇಂದ್ರಿಯ ವಿಶ್ವವಿದ್ಯಾನಿಲಯದಲ್ಲಿ ನಡೆದ ಆತ್ಮಹತ್ಯೆಯ ಭಾಗ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದರೂ ಅಚ್ಚರಿಯಿಲ್ಲ. ಮುಂದೆ ಅದರ ಹೊಣೆಯನ್ನು ಸರ್ಕಾರವೇ ಹೋರಬೇಕಾಗುತ್ತದೆ.
(ಮಾಹಿತಿ ಕೃಪೆ:
– ಹಾರೋಹಳ್ಳಿ ರವೀಂದ್ರ)
ದಿನದ ಸುದ್ದಿ
ಡಿಎಸ್ಟಿ/ಪಿಹೆಚ್ಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ /ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) 2018-19ನೇ ಸಾಲಿನಿಂದ ಕರ್ನಾಟಕ ಡಿ.ಎಸ್.ಟಿ-ಪಿಹೆಚ್ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಿದ್ದು, ಅರ್ಜಿಯನ್ನು ಆನ್ಲೈನ್ http://ksteps.karnataka.gov.in ಮುಖಾಂತರ ಫೆಬ್ರವರಿ 10, 2021 ರೊಳಗಾಗಿ ಸಲ್ಲಿಸಬೆಕೆಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತರು- ಕೇಂದ್ರ ಸರ್ಕಾರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ

ಸುದ್ದಿದಿನ,ನವದೆಹಲಿ : ಇಂದು ನಡೆಯಬೇಕಾಗಿದ್ದ ರೈತ ಮುಖಂಡರು ಮತ್ತು ಕೇಂದ್ರದ ಮಂತ್ರಿಗಳ ನಡುವಿನ 10ನೇ ಸುತ್ತಿನ ಮಾತುಕತೆ ಜ. 20ರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
ಕೃಷಿ ಸಚಿವ ನರೇಂದ್ರ ಸಿಂಗ್ ತಡರಾತ್ರಿ ರೈತ ಮುಖಂಡರಿಗೆ ಬರೆದಿರುವ ಪತ್ರದಲ್ಲಿ, ತಳ್ಳಿ ಹಾಕಲಾದ ಕಾರಣಗಳಿಂದಾಗಿ ಇಂದು ಸಭೆ ನಡೆಸಲಾಗುತ್ತಿಲ್ಲ ಎಂದು,’ ಜ. 20ರಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ್ ಭವನದಲ್ಲಿ ಸಭೆ ನಡೆಸಲಾಗುವುದು” ಎಂದು ತಿಳಿಸಲಾಗಿದೆ.
ಮಧ್ಯಪ್ರದೇಶದ ತಮ್ಮ ಕ್ಷೇತ್ರದ ವೀಕ್ಷಣೆಗೆ ತೆರಳಿದ್ದ ಕೃಷಿ ಸಚಿವ ನರೇಂದ್ರ ಸಿಮಗ್ ತೋಮರ್ ಸೋಮವಾರ ತಡರಾತ್ರಿ ದೆಹಲಿಗೆ ಮರಳಿದರು. ಗ್ವಾಲಿಯರ್ನಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ರೈತ ಸಂಘಟನೆಗಳು ಕಾಯ್ದೆಗಳಲ್ಲಿರುವ ನಿರ್ದಿಷ್ಟ ರಿಯಾಯಿತಿಗಳ ಕುರಿತು ಚರ್ಚಿಸುವುದಕ್ಕೆ ಮನಸ್ಸು ಮಾಡುತ್ತಿಲ್ಲ. ಪಟ್ಟು ಸಡಿಸಲು ಸಿದ್ಧರೇ ಇಲ್ಲ. ನಾಳೆ ಸಭೆ ಇದೆ. ಅಲ್ಲಿ ರೈತ ಸಂಘಟನೆಗಳು ಪರ್ಯಾಯ ಸಾಧ್ಯತೆಗಳ ಕುರಿತು ಚರ್ಚಿಸುವ ನಂಬಿಕೆ ಇದೆ. ಹಾಗಾದರೆ ನಾವು ಪರಿಹಾರ ಕಂಡುಕೊಳ್ಳಲು ಸಾಧ್ಯ” ಎಂದಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ದಿನದ ಸುದ್ದಿ6 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ಲೈಫ್ ಸ್ಟೈಲ್6 days ago
ಪಕ್ಷಿ ಪರಿಚಯ | ಬೆಳ್ಗಣ್ಣ
-
ದಿನದ ಸುದ್ದಿ6 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ7 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಲೈಫ್ ಸ್ಟೈಲ್6 days ago
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ ; ಮಿಸ್ ಮಾಡ್ದೆ ಓದಿ..!
-
ದಿನದ ಸುದ್ದಿ6 days ago
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?
-
ದಿನದ ಸುದ್ದಿ6 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!