ದಿನದ ಸುದ್ದಿ
ಪ್ರಾತಃ ಸ್ಮರಣೀಯ ಸಮಾಜವಾದಿ ಮಹಾರಾಜ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ..!
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ 4, 1848- ಆಗಸ್ಟ್ 3, 1940) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ 24ನೇ ರಾಜರು. ಇವರ ಆಳ್ವಿಕೆ1902 ರಿಂದ1940 ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು1895 ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ 10 ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.
ಮಾದರಿ ಮೈಸೂರು
1902ರ ಆಗಸ್ಟ್ 8ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್. ಕೆ. ಶೇಷಾದ್ರಿ ಐಯ್ಯರ್ ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವತೋಮಖ ಅಭಿವೃದ್ದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣ ಬದ್ದರಾದರು.
ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ, ಮೈಸೂರು ಸಂಸ್ಥಾನಕ್ಕೆ ‘ಮಾದರಿ ಮೈಸೂರು’ ಎಂಬ ಕೀರ್ತಿ ಪ್ರಾಪ್ತವಾಯಿತು. ನಾಲ್ವಡಿ ಕೃಷ್ಣರಾಜ ಒಡೆಯ ರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ, ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು.
ಪ್ರಜಾ ಪ್ರತಿನಿಧಿ ಸಭೆ
ಆದುದರಿಂದ ಅವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ ‘ಪ್ರಜಾ ಪ್ರತಿನಿಧಿ ಸಭೆ’ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು. ಅದಕ್ಕಾಗಿ 1923ರರಲ್ಲಿ ಹೊಸ ಕಾನೂನೊಂದನ್ನು ಜಾರಿಗೆ ತಂದು, ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು. ಇದು (ಪ್ರಜಾತಂತ್ರದ ದೃಷ್ಟಿಯಿಂದ ಭಾರತದಲ್ಲಿಯೇ ಮಾದರಿಯಾದ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಆರಂಭಿಸಿತು. ಪ್ರಜಾ ಪ್ರತಿನಿಧಿ ಸಭೆಯು ವರ್ಷಕ್ಕೆ ಎರಡು ಬಾರಿ (1 ಜೂನ್ – ಮಹಾರಾಜರ ವರ್ಧಂತಿ , 2 ಅಕ್ಟೋಬರ್ – ದಸರಾ ಮಹೋತ್ಸವ ) ಸಮಾವೇಶಗೊಂಡು ಕಲಾಪಗಳನ್ನು ನಡೆಸುತ್ತಿತ್ತು ಅಲ್ಲಿ ವಾರ್ಷಿಕ ಆಯ ವ್ಯಯ ಪರಿಶೀಲನೆ, ಪ್ರಶ್ನೋತ್ತರಗಳು, ಠರಾವುಗಳನ್ನು ಮಂಡಿಸುವುದು ಮುಂತಾದ ಸಂಸದೀಯ ಮಾದರಿಯ ನಡವಳಿಕೆಗಳು ನಡೆಯುತ್ತಿದ್ದವು. ಪ್ರತಿನಿಧಿ ಸಭೆಯಲ್ಲಿದ್ದ ೨೭೫ ಸದಸ್ಯರಲ್ಲಿ ಹೆಚ್ಚು ಪ್ರತಿನಿಧಿಗಳು ಜನರಿಂದ ಆಯ್ಕೆಯಾದವರಾಗಿದ್ದರು.
ನ್ಯಾಯ ವಿಧಾಯಕ ಸಭೆ
ಇದರ ಜೊತೆಗೆ1907 ರಲ್ಲಿ ‘ನ್ಯಾಯ ವಿಧಾಯಕ’ ಸಭೆಯನ್ನೂ ಸಹ ಸ್ಥಾಪಿಸಲಾಯಿತು. ಇದರ ಸದಸ್ಯರ ಸಂಖ್ಯೆ 50. ಇದರಲ್ಲಿ ಜನರಿಂದ ಆಯ್ಕೆಯಾದವರು 23ಸದಸ್ಯರು. ಮೇಲ್ಮನೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಸಂಸ್ಥೆ, ಜೂನ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿತ್ತು.
ಪ್ರಜಾ ಪ್ರತಿನಿಧಿ ಸಭೆಯಲ್ಲಿ ಮಂಡಿಸಿದ ಎಲ್ಲ ವಿಷಯಗಳನ್ನೂ ಸಹ ವಿಮರ್ಶಿಸುವ ಅಧಿಕಾರ ಆ ಸಭೆಗೆ ಇದ್ದಿತು. ಮುಖ್ಯವಾಗಿ ಯಾವುದೇ ಕಾನೂನನ್ನು ಜಾರಿಗೊಳಿಸಲು ಆ ಸಭೆಯ ಅನುಮತಿ ಅಗತ್ಯವಾಗಿತ್ತು .ಆ ಸಭೆಗೆ ಸರ್ಕಾರದ ಖರ್ಚು ಗಳನ್ನು ಕಡಿಮೆ ಮಾಡುವ ಅಧಿಕಾರ ಸಹ ಇದ್ದಿತು.
ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ
ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು.
ಇವರ ಕಾಲದಲ್ಲಿ…
- ಗ್ರಾಮ ನಿರ್ಮಲೀಕರಣ
- ವೈದ್ಯ ಸಹಾಯ
- ವಿದ್ಯಾ ಪ್ರಚಾರ
- ನೀರಿನ ಸೌಕರ್ಯ
- ಪ್ರಯಾಣ ಸೌಲಭ್ಯ
ಮುಂತಾದ ಕ್ಷೇತ್ರಗಳು ಸ್ವಯಮಾಡಳಿತ ಸಂಸ್ಥೆಗಳಾದವು. ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1905ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು.
ಹೊಸ ರೈಲು ದಾರಿಗಳ ನಿರ್ಮಾಣ
- ಮೈಸೂರು – ಅರಸೀಕೆರೆ
- ಬೆಂಗಳೂರು – ಚಿಕ್ಕಬಳ್ಳಾಪುರ
- ಚಿಕ್ಕಜಾಜೂರು – ಚಿತ್ರದುರ್ಗ
- ನಂಜನಗೂಡು – ಚಾಮರಾಜನಗರ
- ತರೀಕೆರೆ – ನರಸಿಂಹರಾಜಪುರ
- ಶಿವಮೊಗ್ಗ – ಆನಂದಪುರ
ಈ ಎಲ್ಲ ರೈಲು ಮಾರ್ಗಗಳನ್ನು1931 ರ ವೇಳೆಗೆ ಪೂರೈಸಲಾಯಿತು .
ನೀರಾವರಿ
1907 ರಲ್ಲಿ ‘ವಾಣೀವಿಲಾಸ ಸಾಗರ’ (ಮಾರಿ ಕಣಿವೆ) ಕಟ್ಟಲ್ಪಟ್ಟಿತು. 1911ರಲ್ಲಿ ಆರಂಭವಾದ ‘ಕೃಷ್ಣರಾಜ ಸಾಗರ’ ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ. 1900ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು. ಇದು ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ.
ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ 1905 ಆಗಸ್ಟ್ 3 ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು. ಸತತ 24 ವರ್ಷಗಳ ಕಾಲ ಕಾಮಗಾರಿ ನಡೆಸಿ ಕೃಷ್ಣ ರಾಜ ಸಾಗರ ( ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು) ನಿರ್ಮಿಸಿದರು.
ವಿದ್ಯಾಭ್ಯಾಸ
ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು. ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದುದು. ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು.
ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. 1096 ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.
ಜಾರಿ ಮಾಡಿದ ಸಾಮಾಜಿಕ ಕಾನೂನುಗಳು
- 1909 ರಲ್ಲಿ ದೇವದಾಸಿ ಪದ್ಧತಿ ನಿಷೇಧ
- 1910ರಲ್ಲಿ ಬಸವಿ ಪದ್ಧತಿ ರದ್ಧತಿ
- 1910 ರಲ್ಲಿ ’ಗೆಜ್ಜೆಪೂಜೆ’ ಪದ್ಧತಿ ಸಂಪೂರ್ಣ ನಿರ್ಮೂಲನೆ
- 1936 ಜುಲೈ 14 ರಂದು ವೇಶ್ಯಾವೃತ್ತಿ ತಡೆಗಟ್ಟುವ ಕಾಯ್ದೆ ಜಾರಿ
- 1936ಜುಲೈ 7 ರಂದು ವಿಧವೆಯರಿಗೆ ಮರುವಿವಾಹ ಮಾಡಿಕೊಳ್ಳುವ ಕಾಯ್ದೆಯ ಜಾರಿ
- 1936 ಜುಲೈ 7 ರಂದು ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ ಜಾರಿ
- 1914 ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪರಿಗಣನೆಯ ನಿಷೇಧ
- 1919ರಲ್ಲಿ ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕ ರದ್ಧತಿ
- 1927 ರಲ್ಲಿ ಸ್ತ್ರೀಯರಿಗೆ ಮತದಾನದ ಹಕ್ಕನ್ನು ಮೊಟ್ಟಮೊದಲ ಬಾರಿಗೆ ಕಲ್ಪಿಸಿಕೊಟ್ಟರು
- 1905 ರಲ್ಲಿ ಸಹಕಾರಿ ಕಾರ್ಮಿಕ ಪರಿಹಾರ ಕಾಯ್ದೆಯನ್ನು ಜಾರಿಗೆ ತಂದರು
- 1913 ರಲ್ಲಿ ಮೈಸೂರು ಗ್ರಾಮ ನ್ಯಾಯಾಲಯ ಕಾಯ್ದೆಯನ್ನು ಜಾರಿ ಮಾಡಿದರು
- 1918 ರಲ್ಲಿ ಗ್ರಾಮ ಪಂಚಾಯ್ತಿಗಳ ಕಾಯ್ದೆಯನ್ನು ಜಾರಿಗೆ ತಂದರು
ನೂರು ವರ್ಷಗಳ ಹಿಂದೆಯೇ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಕೊಟ್ಟವರು.
ಮಹಾತ್ಮ ಗಾಂಧಿ ಯವರಿಂದ ” ರಾಜರ್ಷಿ ” ಎಂಬ ಗೌರವ ಪಡೆದವರು.
–ಮಾಹಿತಿ : ವಿವಿಧ ಮೂಲಗಳು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

