ದಿನದ ಸುದ್ದಿ
ನಾರಾಯಣ ಗೌಡರು ಯಾರು..? ಅಂದ ಸಚಿವ ಡಾ.ಸುಧಾಕರ್ ಕ್ಷಮೆಯಾಚಿಸಲೇ ಬೇಕು
- ದಿವ್ಯಶ್ರೀ.ವಿ, ಬೆಂಗಳೂರು
ತನ್ನ ಬದುಕಿನಲ್ಲಿ ಕಿಂಚಿತ್ತು ಸ್ವಾರ್ಥವಿಲ್ಲದೆ ನಮ್ಮ ನಾಡಿಗೋಸ್ಕರ ಕನ್ನಡಿಗರಿಗೋಸ್ಕರ ತಮ್ಮ ಬದುಕನ್ನು ಮುಡುಪಾಗಿಟ್ಟಿರುವ ಕೆಚ್ಚೆದೆಯ ಕನ್ನಡಿಗ ಎಂದರೆ ನಾರಾಯಣ ಗೌಡರು.
ಇವರೆಂದರೆ ಪುಟ್ಟ ಪುಟ್ಟ ಮಕ್ಕಳು ಕೂಡ ಗೊತ್ತು ಎನ್ನುತ್ತಾರೆ ಆದರೆ ಬೇಸರದ ಸ್ಥಿತಿ ಏನೆಂದರೆ ನಮ್ಮ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ಮಾತ್ರ ನಮ್ಮ ಗೌಡ್ರು ಯಾರೆಂದು ಗೊತ್ತಿಲ್ಲ ಎನ್ನುವ ಮಾತು ನಿಜಕ್ಕೂ ಖಂಡನೀಯ.
ನಮ್ಮ ಕರ್ನಾಟಕದಲ್ಲಷ್ಟೇ ಅಲ್ಲದೆ ಇತರ ರಾಜ್ಯ ಮತ್ತು ದೇಶಗಳಿಗೆ ನಮ್ಮ ಗೌಡರು ಪರಿಚಯ ಅಂತಹುದರಲ್ಲಿ ನಮ್ಮ ರಾಜ್ಯದ ಸಚಿವರಿಗೆ ಗೊತ್ತಿಲ್ಲ ಎನ್ನುವುದು ಮೂರ್ಖತನ ಪರಮಾವಧಿ. ಇವರ ಹೇಳಿಕೆಯಿಂದ ಎಲ್ಲಾ ಕನ್ನಡಿಗರಿಗೆ ಕಾಡುವ ಪ್ರಶ್ನೆ ಎಂದರೆ ನಮ್ಮ ಸಚಿವರಾದ ಡಾ. ಸುಧಾಕರ್ ಅವರು ನಿಜಕ್ಕು ಕನ್ನಡಿಗರ ಎನ್ನುವುದು!
ಲಿಂಕ್ ಮೇಲೆ ಕ್ಲಿಕ್ ಮಾಡಿ
https://www.facebook.com/tv5kannadatv/videos/119132520071641/
ಅಂದು ಬಾಗೇಪಲ್ಲಿಯಲ್ಲಿ ಜನರಿಗೆ ಕುಡಿಯುವ ನೀರಿನ ಕೊರತೆಯಾಗಿತ್ತು. ಬಾಗೇಪಲ್ಲಿ ಜನರಿಗೋಸ್ಕರ ಕುಡಿಯುವ ನೀರಿಗಾಗಿ ಚಿತ್ರಾವತಿ ನದಿಗೊಂದು ಅಣೆಕಟ್ಟು ನಿರ್ಮಿಸಲು ಅಂದಿನ ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಅಂದು ಆಂಧ್ರಪ್ರದೇಶದ ಸರ್ಕಾರ ಈ ಯೋಜನೆಗೆ ಕಿರುಕುಳ ಕೊಡಲು ಆರಂಭಿಸುತ್ತಾರೆ.
ಆದುದರಿಂದ ಬಾಗೇಪಲ್ಲಿಯಲ್ಲಾದರೂ ಅಣೆಕಟ್ಟು ಕಟ್ಟಲು ಪ್ರಾರಂಭಿಸುತ್ತಾರೆ. ಆದರೆ ಅಂದು ಬಂದಂತಹ ಬೆದರಿಕೆಯ ಮಾತುಗಳು ತೊಂದರೆಗಳನ್ನು ಎದುರಿಸಲು ಯಾರೊಬ್ಬರೂ ಮುಂದಾಗಲಿಲ್ಲ ಆಗಿದ್ದು ನಮ್ಮ ಗೌಡರು ಮಾತ್ರ.ಅಂದು ಎಂತಹ ಬೆದರಿಕೆ ಬಂದರು ಹೆದರದೆ ನೇರವಾಗಿ ಸ್ವೀಕರಿಸಿದ್ದು ಹೆಮ್ಮೆಯ ಕನ್ನಡಿಗ ನಾರಾಯಣಗೌಡರು.
ಯಾರ ಮಾತಿಗೂ ಅವರು ಹೆದರದೆ ಬಾಗೇಪಲ್ಲಿಯ ಅಣೆಕಟ್ಟು ನಿರ್ಮಾಣದ ಪರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸಿದರು. ಬೆಂಗಳೂರಿನ ಕೆಂಪೇಗೌಡ ಪ್ರತಿಮೆಯಿಂದ ಬಾಗೇಪಲ್ಲಿಗೆ ತಮ್ಮ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಹೋರಾಟ ನಡೆಸಿದರು ಅಂದು ಹೊರಟ ಅತ್ಯಂತ ಯಶಸ್ವಿಯಾಗಿ ನಡೆಯಿತು. ಮತ್ತು ಯಾವುದೇ ತೊಂದರೆ ಇಲ್ಲದೆ ಹಣೆಕಟ್ಟು ಕೂಡ ನಿರ್ಮಾಣವಾಯಿತು.
ಸಾವಿರಾರು ಜನರಿಗೆ ಕುಡಿಯುವ ನೀರಿನ ಸೌಲಭ್ಯವನ್ನು ನಮ್ಮ ಗೌಡರು ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಣೆಕಟ್ಟಿನ ಮೊದಲ ಬಾಗಿನ ಪೂಜೆಯನ್ನು ನಮ್ಮ ಗೌಡರ ಕೈಯಿಂದ ನೆರವೇರಿದೆ ಇದೆಲ್ಲವೂ ಡಾ.ಸುಧಾಕರ್ ಅವರು ರಾಜಕೀಯಕ್ಕೆ ಬರುವ ಮುಂಚೆಯೇ ಆಗಿರುವ ಘಟನೆ.
ಚಿಕ್ಕಬಳ್ಳಾಪುರದಲ್ಲಿ ಹುಟ್ಟಿದ ನಮ್ಮ ಸಚಿವರಿಗೆ ಯಾರಿಗೋಸ್ಕರ ಯಾರು ಏನು ಮಾಡಿದರು ಎಷ್ಟು ಸಹಾಯ ಮಾಡಿದರು ಎಂದು ಪ್ರಜ್ಞೆಯಿಲ್ಲ. ತಮ್ಮಊರಲ್ಲಿ ಅಣೆಕಟ್ಟೆ ಗಾಗಿ ಹೋರಾಡಿದ ವ್ಯಕ್ತಿಯ ಹೆಸರು ಕೂಡ ಗೊತ್ತಿಲ್ಲ ಎಂದರೆ ಇವರೆಂತಹ ಸಚಿವರು ತಮ್ಮ ಊರಿನ ಬಗ್ಗೆ ಗೊತ್ತಿಲ್ಲ ಇನ್ನೂ ರಾಜ್ಯಕ್ಕೆ ಏನು ಮಾಡುವರು ಎನ್ನುವುದು ಯಕ್ಷಪ್ರಶ್ನೆಯಾಗಿದೆ. ನಮ್ಮ ಸಚಿವರು ಈ ಹೇಳಿಕೆಗೆ ಕನ್ನಡಿಗರ ಮುಂದೆ ಮುಖ್ಯವಾಗಿ ಕರವೇ ಕಾರ್ಯಕರ್ತರ ಮುಂದೆ ಕ್ಷಮೆಯನ್ನು ಯಾಚಿಸಲೇಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ20 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

