Connect with us

ರಾಜಕೀಯ

ಬರಿದಾದ ಖಜಾನೆ-ಮೋದಿ ಸರ್ಕಾರದ ಬಳುವಳಿ

Published

on

  • ಮೋದಿ ಸರ್ಕಾರದ ಆಡಳಿತಾವಧಿಯ ಕಡೆಯ ವರ್ಷದಲ್ಲಿ ಪ್ರತ್ಯಕ್ಷ ಮತ್ತು ಅಪ್ರತ್ಯಕ್ಷ ತೆರಿಗೆ ಸಂಗ್ರಹದಲ್ಲಿ ಕಮ್ಮಿಯೆಂದರೂ ರೂ. 1.75 ಲಕ್ಷ ಕೋಟಿಗಳಷ್ಟು ಕೊರತೆ ಉಂಟಾಗಿದೆ. ಇದು ಒಟ್ಟು ಜಿಡಿಪಿಯ ಶೇ. 1 ಕ್ಕೆ ಹತ್ತಿರ ಇದೆ. ಈ ಮೊತ್ತದ ಪ್ರಮಾಣ ಎಷ್ಟೆಂದರೆ ಇದರಿಂದ ಮೋದಿ ಸರಕಾರ ಕೊನೆಯ ಬಜೆಟಿನಲ್ಲಿ ಸಣ್ಣ ರೈತರಿಗೆಂದು ಪ್ರಕಟಿಸಿದ ವಾರ್ಷಿಕ 6000 ರೂ. ಆದಾಯ ಬೆಂಬಲವನ್ನು ಅವರಿಗೆ ಮಾತ್ರವಲ್ಲ ದೇಶದ ಎಲ್ಲ ಕುಟುಂಬಗಳಿಗೂ ಕೊಡಬಹುದು. ಅಥವ 15 ಕೋಟಿ ಕುಟುಂಬಗಳಿಗೆ ಅಂದರೆ ನಮ್ಮ ದೇಶದ ಜನ ಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ಪ್ರತಿ ತಿಂಗಳು ರೂ.1000 ದಂತೆ ಒಂದಿಲ್ಲೊಂದು ರೀತಿಯಲ್ಲಿ ಆದಾಯ ಬೆಂಬಲ ಕೊಡಬಹುದಾಗಿತ್ತು ಈ ಹಿನ್ನೆಲೆಯಲ್ಲಿ ದೇಶದ ಮುಂದಿರುವ ಪ್ರಶ್ನೆ- ಮೇ ತಿಂಗಳ ಕೊನೆಯಲ್ಲಿ ಬಲಿಷ್ಟ ಹಿತಾಸಕ್ತಿಗಳನ್ನು ಎದುರಿಸಿ ನಿಲ್ಲಬಲ್ಲ ಮತ್ತು ಜನಪರವಾದ ಪರ್ಯಾಯವನ್ನು ದಿಟ್ಟತನದಿಂದ ಆಯ್ದುಕೊಳ್ಳಬಲ್ಲ ಒಂದು ಮಜಬೂತ್ ಸರಕಾರ ಬರುವುದೇ ಎಂಬುದು.

ಪ್ರೊ. ಸುರಜಿತ್ ಮಜುಂದಾರ್

1 ಏಪ್ರಿಲ್ 2019 ರಂದು ಹಣಕಾಸು ಸಚಿವಾಲಯ ಮಾರ್ಚ್ 2019 ರ ಜಿಎಸ್‌ಟಿ ಸಂಗ್ರಹದ ಬಗ್ಗೆ ಹೇಳಿಕೆ ನೀಡಿದ್ದು ಅದು ಪ್ರಸಕ್ತ ಹಣಕಾಸು ವರ್ಷದ ಕಡೆಯ ತಿಂಗಳು ಆಗಿದೆ. ಈ ಹೇಳಿಕೆ ಪ್ರಕಾರ ಮಾರ್ಚ್ ತಿಂಗಳಲ್ಲಿ ಸಂಗ್ರಹವಾದ ರೂ. 1,06,577 ಕೋಟಿ ಜಿಎಸ್‌ಟಿ ಕಾರ್ಯರೂಪಕ್ಕೆ ಬಂದನಂತರ ಗಳಿಸಿರುವ ಅತ್ಯದಿಕ ಮೊತ್ತವಾಗಿದೆ. ಆದರೆ ಈ ವಿಷಯದಲ್ಲಿ ಮರೆಮಾಚುತ್ತಿರುವ ಸಂಗತಿಯೆಂದರೆ ಫೆಬ್ರುವರಿ 1, 2019 ರಂದು ಮಂಡಿಸಿದ ಬಜೆಟ್‌ನಲ್ಲಿ ಪರಿಷ್ಕರಿಸಿದ ಜಿಎಸ್‌ಟಿ ಆದಾಯದ ಪುನರ್ ಅಂದಾಜಿಗಿಂತಲೂ ಬಹಳ ಕಡಿಮೆಯಿದೆ. ವಾಸ್ತವವಾಗಿ ಈ ಪರಿಷ್ಕೃತ ಅಂದಾಜೇ ಕಳೆದ ವರ್ಷದ ಬಜೆಟಿನಲ್ಲಿ ಇರಿಸಿಕೊಂಡಿದ್ದ ಗುರಿಗಿಂತ ಒಂದು ಲಕ್ಷ ಕೋಟಿ ರೂ. ಕಡಿಮೆಯಾಗಿದೆ.

ಕೇಂದ್ರ ಸರ್ಕಾರದ ಕಂಟ್ರೊಲರ್ ಜನರಲ್ ಆಫ್ ಅಕೌಂಟ್ಸ್ ಅವರ ವೆಬ್‌ಸೈಟ್‌ನಲ್ಲಿ ಫೆಬುವರಿ 2019 ರ ವರೆಗಿನ ಲೆಕ್ಕದ ವಿವರವನ್ನು ಪ್ರಕಟಿಸಲಾಗಿದೆ. ಇದರಂತೆ ಜಿಎಸ್‌ಟಿಯ ಎಲ್ಲಾ ಆದಾಯಗಳ ಮೊತ್ತ ಫೆಬ್ರವರಿ ೨೦೧೯ ಕ್ಕೆ ರೂ. 5,26,680 ಕೋಟಿ, ಈ ಬಜೆಟಿನ ಪರಿಷ್ಕೃತ ಅಂದಾಜು ರೂ. 6,43,900 ಕೋಟಿ, ಅಂದರೆ ಆದಾಯ ಗಳಿಕೆಯ ಗುರಿಗಿಂತ ರೂ.1,17,220 ಕೋಟಿ ಕಡಿಮೆ ಮತ್ತು ಕಳೆದ ಬಜೆಟ್‌ನಲ್ಲಿ ಮಂಡಿಸಿದ ಅಂದಾಜು ರೂ.7,43,900 ಕೋಟಿ.

ಅಂದರೆ ಒಟ್ಟು ಸಂಗ್ರಹವಾಗಿರುವ ಮೊತ್ತ ಪರಿಷ್ಕೃತ ಅಂದಾಜಿನ ಗುರಿ ಮುಟ್ಟಿರುವುದಿಲ್ಲ. ಮಾರ್ಚ್ ತಿಂಗಳಲ್ಲಿ ಸಂಗ್ರಹಿಸಿದ ದಾಖಲೆ ಆದಾಯದಲ್ಲಿ 51,209 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕಿದ್ದು ಮತ್ತು ಉಳಿದ ರೂ. 55,368 ಕೋಟಿ ಯಲ್ಲಿ ಜಿಎಸ್‌ಟಿ ಪರಿಹಾರಕ್ಕಾಗಿ ಇಟ್ಟಿರುವ ರೂ. 8000 ಕೋಟಿ ಸೇರಿರುತ್ತದೆ. ಈ ಎಲ್ಲವನ್ನೂ ಕೇಂದ್ರದ ಲೆಕ್ಕಕ್ಕೆ ಸೇರಿಸಿದರೂ ಮೊತ್ತ ರೂ5,82,048 ಕೋಟಿ ಆಗುತ್ತದಷ್ಟೇ. ಒಟ್ಟು ಕೇಂದ್ರ ಸರ್ಕಾರದ ಸಂಗ್ರಹಿಸಿರುವ ಜಿಎಸ್‌ಟಿ ತೆರಿಗೆ ಸಂಗ್ರಹ 5,82,048 ಕೋಟಿಯಾಗಿದ್ದು. ಇದು ಪರಿಷ್ಕೃತ ಬಜೆಟ್ ಅಂದಾಜಿಗಿಂತ ರೂ.61,852 ಕೋಟಿ ಕಡಿಮೆಯಾಗಿದ್ದರೆ, ಮೂಲ ಬಜೆಟ್‌ಗಿಂತ ರೂ. 1.62 ಲಕ್ಷ ಕೋಟಿ ಕಡಿಮೆಯಾಗಿದೆ.

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿನ ತೀವ್ರ ಕೊರತೆ ಕೇಂದ್ರ ಸರ್ಕಾರದ ಅಪ್ರತ್ಯಕ್ಷ ತೆರಿಗೆ ಸಂಗ್ರಹವನ್ನು ತೀವ್ರವಾಗಿ ತಟ್ಟುತ್ತದೆ, ಏಕೆಂದರೆ ಇದು ಅಪ್ರತ್ಯಕ್ಷ ತೆರಿಗೆ ಆದಾಯಗಳ ಬಹುಮುಖ್ಯವಾದ ಭಾಗವಾಗಿದೆ. 2018-19ಪರಿಷ್ಕೃತ ಅಂದಾಜಿನ ಪ್ರಕಾರ ಜಿಎಸ್‌ಟಿ ಒಟ್ಟು ಅಪ್ರತ್ಯಕ್ಷ ತೆರಿಗೆ ಸಂಪನ್ಮೂಲದ ಶೇ. 60 ಭಾಗವಾಗಿದೆ. ಉಳಿದ ಅಪ್ರತ್ಯಕ್ಷ ತೆರಿಗೆ ಸಂಗ್ರಹವೂ ತೃಪ್ತಿಕರವಾಗಿಲ್ಲವೆಂದು ಕಂಡು ಬರುತ್ತಿದೆ.

ಎಪ್ರಿಲ್ 2018ರಿಂದ-ಫೆಬ್ರುವರಿ 2019ರ ಅಂಕಿಅಂಶಗಳನ್ನು ಗಮನಿಸಿದರೆ ನಾಮಿನಲ್ ಜಿಡಿಪಿ ಹಿಂದಿನ ಸಾಲಿಗಿಂತ ಶೇ. 11.5 ಹೆಚ್ಚಳ ಸಾಧಿಸಿದ್ದರೂ, ಈ 11 ತಿಂಗಳ ಅವಧಿಯಲ್ಲಿ (ಏಪ್ರಿಲ್- ಫೆಬ್ರವರಿ) ಹಿಂದಿನ ಹಣಕಾಸು ವರ್ಷದ ಅದೇ 11ತಿಂಗಳ ಆದಾಯದೊಂದಿಗೆ ಹೋಲಿಸಿದರೆ ಅಪ್ರತ್ಯಕ್ಷ ತೆರಿಗೆ ಹೆಚ್ಚಳ ಕೇವಲ ಶೇ2%ಆಗಿದೆ. ಆದ್ದರಿಂದ ಮಾರ್ಚ್ 2019ರ ಈ ‘ಬೃಹತ್’ ಹೆಚ್ಚಳ ಸಹಾ ಒಟ್ಟಾರೆ ಕೊರತೆಯನ್ನು ಕಡಿಮೆ ಮಾಡುವುದಿಲ್ಲ. ಮಾರ್ಚ್ ತಿಂಗಳಿನಲ್ಲಿ ಅಪ್ರತ್ಯಕ್ಷ ತೆರಿಗೆಗಳ ಸಂಗ್ರಹದಲ್ಲಿ 20% ಆಗಿದ್ದರೂ ಕೂಡ, ಒಟ್ಟಾರೆ ಕೊರತೆ 1 ಲಕ್ಷ ಕೋಟಿ ರೂ. ಮೀರಲಿದೆ ಮತ್ತು ಮೂಲ ಬಜೆಟ್‌ಗಿಂತ 2 ಲಕ್ಷ ಕೋಟಿಗಳಿಗಿಂತ ಹೆಚ್ಚಾಗಲಿದೆ.

ನಿಚ್ಚಳವಾಗಿ ಜಿಎಸ್‌ಟಿ ಮೂಲಕ ಅಪ್ರತ್ಯಕ್ಷ ತೆರಿಗೆ ಆದಾಯ ಹೆಚ್ಚುವುದೆಂಬ ಆಶಯ ಕುಸಿಯುತ್ತಿದೆ. ಇದೇ ಸಂದರ್ಭದಲ್ಲಿ ನೇರ ತೆರಿಗೆ ಸಂಗ್ರಹವೂ ಹೆಚ್ಚಾಗಿರುವುದಿಲ್ಲ. ಕಾರ್ಪೋರೇಟ್ ತೆರಿಗೆ ಸಂಗ್ರಹ ಪರಿಷ್ಕೃತ ಬಜೆಟ್ ಅಂದಾಜಿನಂತೆ ಇರಬೇಕಾದರೆ ಮಾರ್ಚ್ 2018 ಗಿಂತ ಮಾರ್ಚ್ 2019 ರಲ್ಲಿ 22.74% ಹೆಚ್ಚಳ ಕಾಣಬೇಕಿದೆ. ಎಪರಿಲ್-ಫೆಬ್ರುವರಿ ಅವಧಿಯಲ್ಲಿ ಕಾಣ ಬಂದಿರುವ ಹೆಚ್ಚಳದ ಪ್ರಮಾಣ ೧೫.೪೩, ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಣೆ ಆಗಬೇಕಿದೆ.

ವೈಯುಕ್ತಿಕ ವರಮಾನ ತೆರಿಗೆ ಸಂಗ್ರಹಕ್ಕೆ ಸಂಬಂಧಪಟ್ಟಂತೆ ಕಳೆದ ವರ್ಷದ ಬಜೆಟ್ ಬಹಳ ಆಶಾದಾಯಕ ಅಂದಾಜು ಮಾಡಿತ್ತು, ಇದನ್ನು ಈ ಬಾರಿಯ ಪರಿಷ್ಕೃತ ಅಂದಾಜಿನಲ್ಲೂ ಉಳಿಸಿಕೊಳ್ಳಲಾಗಿದೆ. ಆದರೆ ನೋಟ್‌ರದ್ಧತಿಯ ನಂತರ ಸತತವಾಗಿ ಎರಡನೇಯ ವರ್ಷವೂ ಈ ಬಾಬ್ತಿನ ಸಂಪನಮೂಲ ಸಂಗ್ರಹ ಮೂಲ ಬಜೆಟ್/ ಪರಿಷ್ಕೃತ ಅಂದಾಜಿನ ಹತ್ತಿರವೂ ಬರುವಂತಿಲ್ಲ. ಎಪ್ರಿಲ್-ಫೆಬ್ರವರಿ 11 ತಿಂಗಳ ಅವಧಿಯಲ್ಲಿನ ಸಂಗ್ರಹವನ್ನು ಗಮನಿಸಿದರೆ, ಕನಿಷ್ಠ ರೂ. 50,000 ಕೋಟಿ ಕೊರತೆ ತೋರಿಸಲಿದೆ. ಇದರ ಫಲಿತಾಂಶವೆಂದರೆ, ಒಟ್ಟು ವರಮಾನ ತೆರಿಗೆ ಜಿಡಿಪಿಯ ಕೇವಲ 2.5% ಮಾತ್ರ ಆಗಬಹುದು. ಅಂದರೆ ಅದೇ ನಿಧಾನಗತಿಯ ಏರಿಕೆ.

ತೆರಿಗೆ ತೆರಬೇಕಾದ ಶ್ರೀಮಂತ ವಿಭಾಗಗಳ ಆದಾಯಗಳಲ್ಲಿ ತ್ವರಿತ ಹೆಚ್ಚಳವಾಗಿದ್ದರೂ, ನೊಟುರದ್ಧತಿಯ ನಂತರವೂ ವರಮಾನ ತೆರಿಗೆಯ ಆದಾಯದ ಸಂಗ್ರಹದ ಏರಿಕೆಯ ಗತಿ ಮಾತ್ರ ಹಿಂದಿನಂತೆಯೇ ನಿಧಾನವಾಗಿಯೇ ಇದೆ.

ನೋಟುರದ್ಧತಿ ಕ್ರಮದಿಂದಾಗಿ ತೆರಿಗೆ ರಿಟರ್ನ್ ಸಲ್ಲಿಸುವರ ಸಂಖ್ಯೆ ಹೆಚ್ಚಾಗಿದೆ ಎಂದು ಸರಕಾರೀ ಪ್ರಚಾರಯಂತ್ರ ಸಾರುತ್ತಿದೆ. ವಾಸ್ತವವಾಗಿ ಈ ಪ್ರವೃತ್ತಿ ನೋಟುರದ್ಧತಿಯ ಮೊದಲೇ ಕಂಡು ಬಂದಿತ್ತು. ಈಗ ಇದೇ ರೀತಿಯ ಕತೆಯನ್ನು ಜಿಎಸ್‌ಟಿ ಬಗ್ಗೆಯೂ ಹೇಳಲಾಗುತ್ತಿದೆ. ಈ ಅಂಕಿ ಅಂಶಗಳು ಮರೆಮಾಚುತ್ತಿರುವ ಸಂಗತಿಯೆಂದರೆ, ತೆರಿಗೆ ಬಲೆಯಲ್ಲಿನ ಸಂಖ್ಯೆಗಳಿಗೂ ಮತ್ತು ತೆರಿಗೆ ಆದಾಯಕ್ಕೂ ಯಾವುದೇ ನೇರ ಸಂಬಂಧವಿಲ್ಲವೆಂಬುದು.

ವರಮಾನ ತೆರಿಗೆ ರಿಟರ್ನ್ ಸಲ್ಲಿಸುವ ಶೇ. 90 ರಷ್ಟು ಜನ ಯಾವ ತೆರಿಗೆಯನ್ನು ಕಟ್ಟಿರುವುದಿಲ್ಲ ಅಥವಾ ಬಹಳ ಕಡಿಮೆ ತೆರಿಗೆ ಕಟ್ಟುತ್ತಾರೆ ಮತ್ತು 57% ತೆರಿಗೆ ಮೊತ್ತ ಸಂಬಳಗಳ ಮೂಲದಿಂದ ಬರುತ್ತಿದೆ, ವ್ಯಾಪಾರ-ವ್ಯವಹಾರಗಳ ಮೂಲದಿಂದ ಬರುವ ತೆರಿಗೆ ಆದಾಯಗಳ ಪ್ರಮಾಣ ಇದರ ಅರ್ಧದಷ್ಟು ಮಾತ್ರ. ಈ ಅಂಶಗಳನ್ನು ಗಮನಿಸಿ- ಆದಾಯ ತೆರಿಗೆ ಇಲಾಖೆ ಡಿಸೆಂಬರ್ 2018ರ ವರೆಗೆ 37 ಕೋಟಿ ವ್ಯಕ್ತಿಗಳಿಗೆ ವ್ಯಕ್ತಿಗಳಿಗೆ ಪಾನ್ ಕಾರ್ಡ್ ಅಂದರೆ ತೆರಿಗೆದಾರರ ಶಾಶ್ವತ ಅಕೌಂಟ್ ಸಂಖ್ಯೆ ನೀಡಿದೆ.

ಇದು ತೆರಿಗೆ ರಿಟರ್ನ್ ಸಲ್ಲಿಸುವವರ ಸಂಖ್ಯೆಯ 5 ಪಟ್ಟಿಗಿಂತಲೂ ಹೆಚ್ಚು ಮತ್ತು ದೇಶದ ಒಟ್ಟು ದುಡಿಮೆಗಾರರ 75% ದಷ್ಟು!ಆದ್ದರಿಂದ ಮೋದಿ ಸರ್ಕಾರದ ಆಡಳಿತಾವಧಿಯ ಕಡೆಯ ವರ್ಷದಲ್ಲಿ ಪ್ರತ್ಯಕ್ಷ ಮತ್ತು ಅಪ್ರತ್ಯಕ್ಷ ತೆರಿಗೆ ಸಂಗ್ರಹದಲ್ಲಿ ರೂ. 1.5 ಲಕ್ಷ ಕೋಟಿ ಕೊರತೆಯಿರುವುದು ಕೇವಲ ಎರಡು ತಿಂಗಳ ಹಿಂದಿನ ಪರಿಷ್ಕೃತ ಅಂದಾಜಿನಲ್ಲಿ ವ್ಯಕ್ತವಾಗಿದೆ. ಈ ಪರಿಷ್ಕೃತ ಅಂದಾಜು ಈ ಹಣಕಾಸು ವರ್ಷಧ ಆರಂಭದ ಅಂದಾಜಿಗಿಂತ 23,000 ಕೋಟಿ ರೂ.ಗಳಷ್ಟು ಕಡಿಮೆಯಿರುವುದರಿಂದ ಒಟ್ಟು ತೆರಿಗೆ ಆದಾಯ ಸಂಗ್ರಹಣೆಯಲ್ಲಿ ಒಟ್ಟು ಕೊರತೆ ಕಮ್ಮಿಯೆಂದರೂ ರೂ. 1.75 ಲಕ್ಷ ಕೋಟಿಗಳಷ್ಟಾಗುತ್ತದೆ.

ಇದು ಒಟ್ಟು ಜಿಡಿಪಿಯ ಶೇ. 1 ಕ್ಕೆ ಹತ್ತಿರ ಇದೆ. ಈ ಮೊತ್ತದ ಪ್ರಮಾಣ ಎಷ್ಟೆಂದರೆ ಇದರಿಂದ ಮೋದಿ ಸರಕಾರ ಅದರ ಕೊನೆಯ ಬಜೆಟಿನಲ್ಲಿ ಸಣ್ಣ ರೈತರಿಗೆಂದು ಪ್ರಕಟಿಸಿದ ವಾರ್ಷಿಕ 6000 ರೂ. ಆದಾಯ ಬೆಂಬಲವನ್ನು ಅವರಿಗೆ ಮಾತ್ರವಲ್ಲ ದೇಶದ ಎಲ್ಲ ಕುಟುಂಬಗಳಿಗೂ ಕೊಡಬಹುದು. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ೧೫ ಕೋಟಿ ಕುಟುಂಬಗಳಿಗೆ ಅಂದರೆ ನಮ್ಮ ದೇಶದ ಜನ ಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ಪ್ರತಿ ತಿಂಗಳು ರೂ. 1000 ದಂತೆ ಒಂದಿಲ್ಲೊಂದು ರೀತಿಯಲ್ಲಿ ಆದಾಯ ಬೆಂಬಲ ಕೊಡಬಹುದಾಗಿತ್ತು. ಕಡಿಮೆ ತೆರಿಗೆ ಸಂಗ್ರಹದಿಂದ ರಾಜ್ಯಗಳ ಪಾಲು ಸಹಿತ ಕಡಿತಗೊಳ್ಳಲಿದೆ. ಇದರೊಂದಿಗೆ ಜಿಎಸ್‌ಟಿ ತೆರಿಗೆ ಸಂಗ್ರಹದ ಕೊರತೆ ರಾಜ್ಯ ಸರ್ಕಾರಗಳಿಗೆ ತೀವ್ರ ಹೊಡೆತ ನೀಡಲಿದೆ.

2018-19 ರ ತೆರಿಗೆ ಸಂಗ್ರಹದಲ್ಲಿ ಕೊರತೆ ಉಂಟಾಗಿರುವುದರ ಅರ್ಥ, ವಿತ್ತೀಯ ಕೊರತೆ ಅಂದಾಜಿಗಿಂತ ಬಹಳ ಹೆಚ್ಚಿದೆ ಅಥವಾ ಮಾರ್ಚ್ ತಿಂಗಳಲ್ಲಿ ತೀವ್ರ ವೆಚ್ಚಗಳನ್ನು ತೀವ್ರವಾಗಿ ಕಡಿತ ಮಾಡಲಾಗಿದೆ ಎಂದೇ ಆಗುತ್ತದೆ. ಫೆಬ್ರವರಿ ತಿಂಗಳ ವರೆಗಿನ ಆದಾಯ ಮತ್ತು ಖರ್ಚಿನ ಪ್ರವೃತ್ತಿಯನ್ನು ನೋಡಿದಾಗ, ಹಣಕಾಸು ವರ್ಷ ಮುಗಿಯುವ ಒಂದು ತಿಂಗಳ ಹಿಂದೆಯೇ ಬಜೆಟ್ ಅಂದಾಜಿಗಿಂತ ೩೪% ಹೆಚ್ಚಾಗಿರುವುದು, ಅಥವ ಜಿಡಿಪಿಯ 4.5% ರಷ್ಟು ಆಗಿರುವುದು ಕಂಡು ಬರುತ್ತದೆ.

ಈ ಹಿನ್ನೆಲೆಯಲ್ಲಿ, ಮೇ ತಿಂಗಳ ಕೊನೆಯಲ್ಲಿ ಬರಲಿರುವ ಹೊಸ ಸರ್ಕಾರದ ಮುಂದಿರುವ ಸವಾಲೆಂದರೆ ವಿತ್ತೀಯ ಕೊರತೆಯನ್ನು ಜಿಡಿಪಿಯ 3% ಮಿತಿಯಲ್ಲಿಡಬೇಕು ಎಂಬ ಎಫ್‌ಆರ್‌ಬಿಎಂ ಕಾಯ್ದೆ ಹೇರಿರುವ ವಿಚಾರಹೀನ ಗೀಳನ್ನು ತ್ಯಜಿಸುವುದು, ಮತ್ತು ಶ್ರೀಮಂತರಿಂದ, ಸಂಪತ್ತುಳ್ಳವರಿಂದ ಹಾಗೂ ಬೃಹತ್ ಉದ್ದಿಮೆಗಳಿಂದ ಮುಲಾಜಿಲ್ಲದೆ ತೆರಿಗೆ ಸಂಗ್ರಹಿಸುವುದು. ಈ ಮೂಲಕ, ತೆರಿಗೆಗಳ್ಳತನ ತಮ್ಮ ದಿಂಬುಗಳ ಅಡಿಯಲ್ಲಿ ನೋಟಿನ ಕಂತೆಗಳನ್ನು ಬಚ್ಚಿಟ್ಟರಿಗಿಂತ ಹೆಚ್ಚಾಗಿ, ಬಹುಪಾಲು ತೆರಿಗೆ ಬಲೆಯಲ್ಲಿರುವವರಿಂದಲೇ ನಡೆಯುತ್ತಿದೆ ಎಂಬುದನ್ನು ಒಪ್ಪಿಕೊಳ್ಳ ಬೇಕಾಗುತ್ತದೆ. ಆದಾಯ ತೆರಿಗೆ ಮತ್ತು ಜಿಎಸ್‌ಟ್ ಸಂಗ್ರಹದಲ್ಲಿ ಕಂಡು ಬಂದಿರುವ ಪ್ರವೃತ್ತಿ ಕೂಡ ಇಂತಹುದೇ.

ಇದರ ಬದಲಾಗಿ ಹೊಸ ಸರಕಾರಕ್ಕೆ ಇರುವ ಏಕೈಕ ದಾರಿಯೆಂದರೆ, ಒಂದು ತೀವ್ರತರದ ಮಿತವ್ಯಯ ಎಂದು ಹೇಳುವ ದಾರಿ. ಅಂದರೆ ಜನಸಾಮಾನ್ಯರಿಗಾಗಿ ಮಾಡುವ ವೆಚ್ಚಗಳನ್ನು ಕಡಿತಗೊಳಿಸುವುದು. ಕಳೆದ ಒಂದು ದಶಕದಲ್ಲಿ ಬಂದ ಸರಕಾರಗಳು ಇದನ್ನೇ ಅನುಸರಿಸಿವೆ. ಇದು ಜನಸಾಮಾನ್ಯರ ಬದುಕನ್ನು ನರಕಗೊಳಿಸಿರುವ ದಾರಿ. ಮೋದಿ ಸರ್ಕಾರ ಮತ್ತೆ ಬಂದರೆ ಇದೇ ದಾರಿಯನ್ನು ಮುಂದುವರೆಸುತ್ತದೆ ಎಂಬುದು ಖಡಾಖಂಡಿತ.

ಆದ್ದರಿಂದಲೇ, ಜನಸಾಮಾನ್ಯರ ಮೇಲೆ ಇನ್ನೂ ಹೆಚ್ಚಿನ ದಾಳಿಯನ್ನು ತಪ್ಪಿಸಬೇಕಾದರೆ ಈ ಮೋದಿ ಸರ್ಕಾರವನ್ನು ಸೋಲಿಸುವುದು ಆದ್ಯ ಕರ್ತವ್ಯವಾಗಬೇಕು. ಆದರೆ ಪ್ರಶ್ನೆಯಿರುವುದು-ದೇಶಕ್ಕೆ ಒಂದು ನಿಜವಾಗಿಯೂ ಹೊಸ ಸರ್ಕಾರ ಬರುವುದೇ, ಬಲಿಷ್ಟ ಹಿತಾಸಕ್ತಿಗಳನ್ನು ಎದುರಿಸಿ ನಿಲ್ಲಬಲ್ಲ ಮತ್ತು ಜನಪರವಾದ ಒಂದು ಧೀರ ಪರ್ಯಾಯವನ್ನು ಆಯ್ದುಕೊಳ್ಳಬಲ್ಲ ಒಂದು ಮಜಬೂತ್ ಸರಕಾರ ಬರುವುದೇ ಎಂಬುದು.

(ಕೃಪೆ-ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಅನುವಾದ : ಎಂ.ಜಿ.ವೆಂಕಟೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.

ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.

ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡುವ ಕಟ್ಟಡವನ್ನು ನಿರ್ಮಿಸಬೇಕು ಎಂದರು. ಖಬರಸ್ಥಾನಕ್ಕೆ ಮತ್ತು ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ತೆರೆಯುವುದು, ಇದರಿಂದಾಗಿ ಯೋಜನೆಯ ಪ್ರಯೋಜನೆಗಳು ಅವರುಗಳಿಗೆ ನೇರವಾಗಿ ಸಿಗುತ್ತವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನವಿದ್ದರೂ ಗುರುತಿಸಿ ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.

ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಡೇಶ್ವರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.

ಸಮಾಜದ ಧಾರ್ಮಿಕ ಮುಖಂಡರು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ಸೇರಿಸುವಂತಾಗಲು ಪ್ರೇರೇಪಿಸಬೇಕು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅಗತ್ಯ ಸೌಲಭ್ಯ ಇರುವ ಬಗ್ಗೆ ತಿಳಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ19 hours ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ20 hours ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ2 days ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ3 days ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ5 days ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ5 days ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ5 days ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ5 days ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 week ago

ಎಂನರೇಗಾ ಯೋಜನೆ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ...

ದಿನದ ಸುದ್ದಿ2 weeks ago

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ...

Trending