ರಾಜಕೀಯ
ಮೋದಿ ಭ್ರಷ್ಟನಲ್ಲ ಎಂಬ ಮಿಥ್ಯೆ : ಅದಾನಿ, ಮೋದಿ ಎಂಬ ಅವಳಿ-ಜವಳಿ ದರೋಡೆಗಾರರು

ಗುಜರಾತ್ ಸರ್ಕಾರಕ್ಕೆ ಅದಾನಿ ಬಿಟ್ಟರೆ ಬೇರೆ ಯಾರೂ ಕಾಣುವುದಿಲ್ಲವೇ ? ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಬಹಿರಂಗ ಕೋರ್ಟ್ನಲ್ಲಿ ಕೇಳಿದ ಪ್ರಶ್ನೆ, ಮೋದಿ ಮುಖ್ಯ ಮಂತ್ರಿಯಾಗಿ, ಹಲವು ಸಾವಿರ ಎಕರೆ ಕಡಲ ತೀರವನ್ನು ಎಕರೆಗೆ ಒಂದು ರೂನಂತೆ ಅದಾನಿಗೆ ಕೊಟ್ಟಾಗ, ಗುಜರಾತ್ನ ಬಂದರುಗಳನ್ನೂ ಅದಾನಿಗೆ ಕೊಡಲಾಯಿತು.ವಿದ್ಯುತ್ ತಯಾರಿಕೆಯನ್ನೂ.. ಇನ್ನೂ ಎಷ್ಟೆಷ್ಟೋ.
ಅಷ್ಟು ಸಾಲದೆಂದು ಕರ್ನಾಟಕದಲ್ಲಿ ಯಡ್ಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಮೂಲಕ ಅದಾನಿಗೆ ಗಣಿ ದರೋಡೆ ಮಾಡಲು ಅವಕಾಶ.ಕಾರವಾರದ ಬಳಿಯ ಬೆಳ್ಳಿಕೇರಿ ಬಂದರಿನಲ್ಲಿ ಲೋಕಾಯುಕ್ತ ಸಂತೋಷ ಹೆಗ್ಡೆಯವರು ವಶಪಡಿಸಿಕೊಂಡಿದ್ದ ಹಲವು ಲಕ್ಷಾಂತರ ಟನ್ ಕಬ್ಬಿಣದ ಅದಿರು ರಾತ್ರೋರಾತ್ರೆ ಮಾಯವಾದ ಅತ್ಯಂತ ಗೂಂಡಾಗಿರಿಯ ಪ್ರಸಂಗದಲ್ಲಿ ಅದಾನಿಯದೇ ಅತ್ಯಂತ ದೊಡ್ಡ ಪಾಲು. ಜನಾರ್ದನ ರೆಡ್ಡಿ ಜೈಲಿಗೆ ಹೋದ.
ಅದಾನಿಗೆ ಮೋದಿ ರಕ್ಷಣೆ. ಪ್ರಧಾನಿಯಾದ ಕೂಡಲೆ ಅದಾನಿಯ ಭ್ರಷ್ಟತನಕ್ಕೆ ರೆಕ್ಕೆ ಬಂದು ವಿಶ್ವವ್ಯಾಪಿಯಾಯಿತು. ವರ್ಷಗಟ್ಟಲೆ ತೊಗರಿ ಬೇಳೆಯ ಬೆಲೆ 180 ಕ್ಕೆ ಏರಿದ್ದು ಅದಾನಿಗೆ ಮೋದಿ ತೊಗರಿ ಆಮದಿನ , ಬಂದರುಗಳಲ್ಲಿ ದಾಸ್ತಾನು ಮಾಡುವ ಗುತ್ತಿಗೆ ನೀಡಿದುದರಿಂದ. ಇಡೀ ಭಾರತದ ಜನರಿಂದ ಕಸಿದ ಹಣ ಹಲವು ಹತ್ತು ಸಾವಿರ ಕೋಟಿ ಮೀರುತ್ತದೆ.
ಮೋದಿಯ ಪಾಕಿಸ್ತಾನ,ಬಂಗ್ಲಾದೇಶ, ಆಸ್ಟ್ರೇಲಿಯಾ ಮೊದಲಾದ ಹಲವು ದೇಶಗಳ ಭೇಟಿಯಲ್ಲಿ ಸಹಿ ಮಾಡಿದ 15ಕ್ಕೂ ಹೆಚ್ವು ಬೃಹತ್ ಗಾತ್ರದ ಒಪ್ಪಂದಗಳು ಅದಾನಿಗಾಗಿ..
ಆಸ್ಟ್ರೇಲಿಯಾದಲ್ಲಿ ಕಲ್ಲಿದ್ದಲು ಗಣಿ ಒಪ್ಪಂದಕ್ಕೆ ಮೋದಿ ಸಹಿ ಹಾಕಿ ಒಂದೇ ಬಾರಿಗೆ 15, ೦೦೦ ಕೋಟಿ ಸಾಲ SBI ನಿಂದ ಕೊಡಿಸಿದ್ದು ಒಂದು ಉದಾಹರಣೆ. ಭಾರತದಲ್ಲಿ ನೂರಾರು ಸರ್ಕಾರಿ ಆಜ್ಞೆಗಳು, ತೆರಿಗೆ ರಿಯಾಯಿತಿಗಳು , ಪರಿಸರ ಸಂರಕ್ಷಣೆ ಕಾಯಿದೆ , ಗಣಿ ಕಾಯಿದೆ , ಅರಣ್ಯ ಕಾಯಿದೆ ಆಜ್ಞೆಗಳ ಉಲ್ಲಂಘನೆಗಳು ಈ ಐದು ವರ್ಷಗಳಲ್ಲಿ. ಕೇವಲ ಮೋದಿ ಅಧಿಕಾರದ ಕೊನೆಯ ತಿಂಗಳಿನಲ್ಲಿ ಎಲ್ಲಾ ನೀತಿ ನಿಯಮಗಳನ್ನು ಉಲ್ಲಂಘಿಸಿ, ಸಾರ್ವಜನಿಕ ರಂಗದ ಉದ್ಯಮಗಳನ್ನು ತುಳಿದು ವಿಮಾನ ನಿಲ್ದಾಣ ನಿರ್ಮಾಣ, ನಿರ್ವಹಣೆಯ ಯಾವುದೇ ಅನುಭವವಿಲ್ಲದಿದ್ದರೂ ಆರು ವಿಮಾನ ನಿಲ್ದಾಣಗಳ ಗುತ್ತಿಗೆ. 4.3 ಲಕ್ಷ ಎಕರೆ ಚತ್ತಿಸಘಡದ ದಟ್ಟ ಅರಣ್ಯದ ಗುತ್ತಿಗೆ.
ಎನರ್ಜಿ ಎಸ್.ಇ.ಝಡ್ ಹೆಸರಿನಲ್ಲಿ ಮೂರು ಸಾವಿರ ಕೋಟಿಗೂ ಮಿಗಿಲು ತೆರಿಗೆ ವಿನಾಯಿತಿ. ಹೀಗೆ ಒಂದೇ ಒಂದು ಕುಟುಂಬಕ್ಕೆ ಒಂದಲ್ಲ ಎರಡಲ್ಲ ಲಕ್ಷಾಂತರ ಕೋಟಿ ರೂ ಬೆಲೆಯ ದೇಶದ ಭೂಮಿ, ಅರಣ್ಯ, ಬಂದರು, ವಿಮಾನ ನಿಲ್ದಾಣ , ವಿದ್ಯುತ್, ಕಲ್ಲಿದ್ದಲು ಸಂಪನ್ಮೂಲದ ಚಿನ್ನದ ಮಳೆ ಸುರಿಸಲಾಗಿದೆ.
ಏಕೆ ? ಏಕೆ ?? ಏಕೆ ???
– ಜಿ.ಎನ್. ನಾಗರಾಜ್

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.
ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು.
ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕ್ರಮಕೈಗೊಳ್ಳಲಾಗುವುದು. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಕೈಗೊಳ್ಳಲಾಗುವುದು.
ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ