Connect with us

ರಾಜಕೀಯ

ಬರಿದಾದ ಖಜಾನೆ-ಮೋದಿ ಸರ್ಕಾರದ ಬಳುವಳಿ

Published

on

  • ಮೋದಿ ಸರ್ಕಾರದ ಆಡಳಿತಾವಧಿಯ ಕಡೆಯ ವರ್ಷದಲ್ಲಿ ಪ್ರತ್ಯಕ್ಷ ಮತ್ತು ಅಪ್ರತ್ಯಕ್ಷ ತೆರಿಗೆ ಸಂಗ್ರಹದಲ್ಲಿ ಕಮ್ಮಿಯೆಂದರೂ ರೂ. 1.75 ಲಕ್ಷ ಕೋಟಿಗಳಷ್ಟು ಕೊರತೆ ಉಂಟಾಗಿದೆ. ಇದು ಒಟ್ಟು ಜಿಡಿಪಿಯ ಶೇ. 1 ಕ್ಕೆ ಹತ್ತಿರ ಇದೆ. ಈ ಮೊತ್ತದ ಪ್ರಮಾಣ ಎಷ್ಟೆಂದರೆ ಇದರಿಂದ ಮೋದಿ ಸರಕಾರ ಕೊನೆಯ ಬಜೆಟಿನಲ್ಲಿ ಸಣ್ಣ ರೈತರಿಗೆಂದು ಪ್ರಕಟಿಸಿದ ವಾರ್ಷಿಕ 6000 ರೂ. ಆದಾಯ ಬೆಂಬಲವನ್ನು ಅವರಿಗೆ ಮಾತ್ರವಲ್ಲ ದೇಶದ ಎಲ್ಲ ಕುಟುಂಬಗಳಿಗೂ ಕೊಡಬಹುದು. ಅಥವ 15 ಕೋಟಿ ಕುಟುಂಬಗಳಿಗೆ ಅಂದರೆ ನಮ್ಮ ದೇಶದ ಜನ ಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ಪ್ರತಿ ತಿಂಗಳು ರೂ.1000 ದಂತೆ ಒಂದಿಲ್ಲೊಂದು ರೀತಿಯಲ್ಲಿ ಆದಾಯ ಬೆಂಬಲ ಕೊಡಬಹುದಾಗಿತ್ತು ಈ ಹಿನ್ನೆಲೆಯಲ್ಲಿ ದೇಶದ ಮುಂದಿರುವ ಪ್ರಶ್ನೆ- ಮೇ ತಿಂಗಳ ಕೊನೆಯಲ್ಲಿ ಬಲಿಷ್ಟ ಹಿತಾಸಕ್ತಿಗಳನ್ನು ಎದುರಿಸಿ ನಿಲ್ಲಬಲ್ಲ ಮತ್ತು ಜನಪರವಾದ ಪರ್ಯಾಯವನ್ನು ದಿಟ್ಟತನದಿಂದ ಆಯ್ದುಕೊಳ್ಳಬಲ್ಲ ಒಂದು ಮಜಬೂತ್ ಸರಕಾರ ಬರುವುದೇ ಎಂಬುದು.

ಪ್ರೊ. ಸುರಜಿತ್ ಮಜುಂದಾರ್

1 ಏಪ್ರಿಲ್ 2019 ರಂದು ಹಣಕಾಸು ಸಚಿವಾಲಯ ಮಾರ್ಚ್ 2019 ರ ಜಿಎಸ್‌ಟಿ ಸಂಗ್ರಹದ ಬಗ್ಗೆ ಹೇಳಿಕೆ ನೀಡಿದ್ದು ಅದು ಪ್ರಸಕ್ತ ಹಣಕಾಸು ವರ್ಷದ ಕಡೆಯ ತಿಂಗಳು ಆಗಿದೆ. ಈ ಹೇಳಿಕೆ ಪ್ರಕಾರ ಮಾರ್ಚ್ ತಿಂಗಳಲ್ಲಿ ಸಂಗ್ರಹವಾದ ರೂ. 1,06,577 ಕೋಟಿ ಜಿಎಸ್‌ಟಿ ಕಾರ್ಯರೂಪಕ್ಕೆ ಬಂದನಂತರ ಗಳಿಸಿರುವ ಅತ್ಯದಿಕ ಮೊತ್ತವಾಗಿದೆ. ಆದರೆ ಈ ವಿಷಯದಲ್ಲಿ ಮರೆಮಾಚುತ್ತಿರುವ ಸಂಗತಿಯೆಂದರೆ ಫೆಬ್ರುವರಿ 1, 2019 ರಂದು ಮಂಡಿಸಿದ ಬಜೆಟ್‌ನಲ್ಲಿ ಪರಿಷ್ಕರಿಸಿದ ಜಿಎಸ್‌ಟಿ ಆದಾಯದ ಪುನರ್ ಅಂದಾಜಿಗಿಂತಲೂ ಬಹಳ ಕಡಿಮೆಯಿದೆ. ವಾಸ್ತವವಾಗಿ ಈ ಪರಿಷ್ಕೃತ ಅಂದಾಜೇ ಕಳೆದ ವರ್ಷದ ಬಜೆಟಿನಲ್ಲಿ ಇರಿಸಿಕೊಂಡಿದ್ದ ಗುರಿಗಿಂತ ಒಂದು ಲಕ್ಷ ಕೋಟಿ ರೂ. ಕಡಿಮೆಯಾಗಿದೆ.

ಕೇಂದ್ರ ಸರ್ಕಾರದ ಕಂಟ್ರೊಲರ್ ಜನರಲ್ ಆಫ್ ಅಕೌಂಟ್ಸ್ ಅವರ ವೆಬ್‌ಸೈಟ್‌ನಲ್ಲಿ ಫೆಬುವರಿ 2019 ರ ವರೆಗಿನ ಲೆಕ್ಕದ ವಿವರವನ್ನು ಪ್ರಕಟಿಸಲಾಗಿದೆ. ಇದರಂತೆ ಜಿಎಸ್‌ಟಿಯ ಎಲ್ಲಾ ಆದಾಯಗಳ ಮೊತ್ತ ಫೆಬ್ರವರಿ ೨೦೧೯ ಕ್ಕೆ ರೂ. 5,26,680 ಕೋಟಿ, ಈ ಬಜೆಟಿನ ಪರಿಷ್ಕೃತ ಅಂದಾಜು ರೂ. 6,43,900 ಕೋಟಿ, ಅಂದರೆ ಆದಾಯ ಗಳಿಕೆಯ ಗುರಿಗಿಂತ ರೂ.1,17,220 ಕೋಟಿ ಕಡಿಮೆ ಮತ್ತು ಕಳೆದ ಬಜೆಟ್‌ನಲ್ಲಿ ಮಂಡಿಸಿದ ಅಂದಾಜು ರೂ.7,43,900 ಕೋಟಿ.

ಅಂದರೆ ಒಟ್ಟು ಸಂಗ್ರಹವಾಗಿರುವ ಮೊತ್ತ ಪರಿಷ್ಕೃತ ಅಂದಾಜಿನ ಗುರಿ ಮುಟ್ಟಿರುವುದಿಲ್ಲ. ಮಾರ್ಚ್ ತಿಂಗಳಲ್ಲಿ ಸಂಗ್ರಹಿಸಿದ ದಾಖಲೆ ಆದಾಯದಲ್ಲಿ 51,209 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕಿದ್ದು ಮತ್ತು ಉಳಿದ ರೂ. 55,368 ಕೋಟಿ ಯಲ್ಲಿ ಜಿಎಸ್‌ಟಿ ಪರಿಹಾರಕ್ಕಾಗಿ ಇಟ್ಟಿರುವ ರೂ. 8000 ಕೋಟಿ ಸೇರಿರುತ್ತದೆ. ಈ ಎಲ್ಲವನ್ನೂ ಕೇಂದ್ರದ ಲೆಕ್ಕಕ್ಕೆ ಸೇರಿಸಿದರೂ ಮೊತ್ತ ರೂ5,82,048 ಕೋಟಿ ಆಗುತ್ತದಷ್ಟೇ. ಒಟ್ಟು ಕೇಂದ್ರ ಸರ್ಕಾರದ ಸಂಗ್ರಹಿಸಿರುವ ಜಿಎಸ್‌ಟಿ ತೆರಿಗೆ ಸಂಗ್ರಹ 5,82,048 ಕೋಟಿಯಾಗಿದ್ದು. ಇದು ಪರಿಷ್ಕೃತ ಬಜೆಟ್ ಅಂದಾಜಿಗಿಂತ ರೂ.61,852 ಕೋಟಿ ಕಡಿಮೆಯಾಗಿದ್ದರೆ, ಮೂಲ ಬಜೆಟ್‌ಗಿಂತ ರೂ. 1.62 ಲಕ್ಷ ಕೋಟಿ ಕಡಿಮೆಯಾಗಿದೆ.

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿನ ತೀವ್ರ ಕೊರತೆ ಕೇಂದ್ರ ಸರ್ಕಾರದ ಅಪ್ರತ್ಯಕ್ಷ ತೆರಿಗೆ ಸಂಗ್ರಹವನ್ನು ತೀವ್ರವಾಗಿ ತಟ್ಟುತ್ತದೆ, ಏಕೆಂದರೆ ಇದು ಅಪ್ರತ್ಯಕ್ಷ ತೆರಿಗೆ ಆದಾಯಗಳ ಬಹುಮುಖ್ಯವಾದ ಭಾಗವಾಗಿದೆ. 2018-19ಪರಿಷ್ಕೃತ ಅಂದಾಜಿನ ಪ್ರಕಾರ ಜಿಎಸ್‌ಟಿ ಒಟ್ಟು ಅಪ್ರತ್ಯಕ್ಷ ತೆರಿಗೆ ಸಂಪನ್ಮೂಲದ ಶೇ. 60 ಭಾಗವಾಗಿದೆ. ಉಳಿದ ಅಪ್ರತ್ಯಕ್ಷ ತೆರಿಗೆ ಸಂಗ್ರಹವೂ ತೃಪ್ತಿಕರವಾಗಿಲ್ಲವೆಂದು ಕಂಡು ಬರುತ್ತಿದೆ.

ಎಪ್ರಿಲ್ 2018ರಿಂದ-ಫೆಬ್ರುವರಿ 2019ರ ಅಂಕಿಅಂಶಗಳನ್ನು ಗಮನಿಸಿದರೆ ನಾಮಿನಲ್ ಜಿಡಿಪಿ ಹಿಂದಿನ ಸಾಲಿಗಿಂತ ಶೇ. 11.5 ಹೆಚ್ಚಳ ಸಾಧಿಸಿದ್ದರೂ, ಈ 11 ತಿಂಗಳ ಅವಧಿಯಲ್ಲಿ (ಏಪ್ರಿಲ್- ಫೆಬ್ರವರಿ) ಹಿಂದಿನ ಹಣಕಾಸು ವರ್ಷದ ಅದೇ 11ತಿಂಗಳ ಆದಾಯದೊಂದಿಗೆ ಹೋಲಿಸಿದರೆ ಅಪ್ರತ್ಯಕ್ಷ ತೆರಿಗೆ ಹೆಚ್ಚಳ ಕೇವಲ ಶೇ2%ಆಗಿದೆ. ಆದ್ದರಿಂದ ಮಾರ್ಚ್ 2019ರ ಈ ‘ಬೃಹತ್’ ಹೆಚ್ಚಳ ಸಹಾ ಒಟ್ಟಾರೆ ಕೊರತೆಯನ್ನು ಕಡಿಮೆ ಮಾಡುವುದಿಲ್ಲ. ಮಾರ್ಚ್ ತಿಂಗಳಿನಲ್ಲಿ ಅಪ್ರತ್ಯಕ್ಷ ತೆರಿಗೆಗಳ ಸಂಗ್ರಹದಲ್ಲಿ 20% ಆಗಿದ್ದರೂ ಕೂಡ, ಒಟ್ಟಾರೆ ಕೊರತೆ 1 ಲಕ್ಷ ಕೋಟಿ ರೂ. ಮೀರಲಿದೆ ಮತ್ತು ಮೂಲ ಬಜೆಟ್‌ಗಿಂತ 2 ಲಕ್ಷ ಕೋಟಿಗಳಿಗಿಂತ ಹೆಚ್ಚಾಗಲಿದೆ.

ನಿಚ್ಚಳವಾಗಿ ಜಿಎಸ್‌ಟಿ ಮೂಲಕ ಅಪ್ರತ್ಯಕ್ಷ ತೆರಿಗೆ ಆದಾಯ ಹೆಚ್ಚುವುದೆಂಬ ಆಶಯ ಕುಸಿಯುತ್ತಿದೆ. ಇದೇ ಸಂದರ್ಭದಲ್ಲಿ ನೇರ ತೆರಿಗೆ ಸಂಗ್ರಹವೂ ಹೆಚ್ಚಾಗಿರುವುದಿಲ್ಲ. ಕಾರ್ಪೋರೇಟ್ ತೆರಿಗೆ ಸಂಗ್ರಹ ಪರಿಷ್ಕೃತ ಬಜೆಟ್ ಅಂದಾಜಿನಂತೆ ಇರಬೇಕಾದರೆ ಮಾರ್ಚ್ 2018 ಗಿಂತ ಮಾರ್ಚ್ 2019 ರಲ್ಲಿ 22.74% ಹೆಚ್ಚಳ ಕಾಣಬೇಕಿದೆ. ಎಪರಿಲ್-ಫೆಬ್ರುವರಿ ಅವಧಿಯಲ್ಲಿ ಕಾಣ ಬಂದಿರುವ ಹೆಚ್ಚಳದ ಪ್ರಮಾಣ ೧೫.೪೩, ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಣೆ ಆಗಬೇಕಿದೆ.

ವೈಯುಕ್ತಿಕ ವರಮಾನ ತೆರಿಗೆ ಸಂಗ್ರಹಕ್ಕೆ ಸಂಬಂಧಪಟ್ಟಂತೆ ಕಳೆದ ವರ್ಷದ ಬಜೆಟ್ ಬಹಳ ಆಶಾದಾಯಕ ಅಂದಾಜು ಮಾಡಿತ್ತು, ಇದನ್ನು ಈ ಬಾರಿಯ ಪರಿಷ್ಕೃತ ಅಂದಾಜಿನಲ್ಲೂ ಉಳಿಸಿಕೊಳ್ಳಲಾಗಿದೆ. ಆದರೆ ನೋಟ್‌ರದ್ಧತಿಯ ನಂತರ ಸತತವಾಗಿ ಎರಡನೇಯ ವರ್ಷವೂ ಈ ಬಾಬ್ತಿನ ಸಂಪನಮೂಲ ಸಂಗ್ರಹ ಮೂಲ ಬಜೆಟ್/ ಪರಿಷ್ಕೃತ ಅಂದಾಜಿನ ಹತ್ತಿರವೂ ಬರುವಂತಿಲ್ಲ. ಎಪ್ರಿಲ್-ಫೆಬ್ರವರಿ 11 ತಿಂಗಳ ಅವಧಿಯಲ್ಲಿನ ಸಂಗ್ರಹವನ್ನು ಗಮನಿಸಿದರೆ, ಕನಿಷ್ಠ ರೂ. 50,000 ಕೋಟಿ ಕೊರತೆ ತೋರಿಸಲಿದೆ. ಇದರ ಫಲಿತಾಂಶವೆಂದರೆ, ಒಟ್ಟು ವರಮಾನ ತೆರಿಗೆ ಜಿಡಿಪಿಯ ಕೇವಲ 2.5% ಮಾತ್ರ ಆಗಬಹುದು. ಅಂದರೆ ಅದೇ ನಿಧಾನಗತಿಯ ಏರಿಕೆ.

ತೆರಿಗೆ ತೆರಬೇಕಾದ ಶ್ರೀಮಂತ ವಿಭಾಗಗಳ ಆದಾಯಗಳಲ್ಲಿ ತ್ವರಿತ ಹೆಚ್ಚಳವಾಗಿದ್ದರೂ, ನೊಟುರದ್ಧತಿಯ ನಂತರವೂ ವರಮಾನ ತೆರಿಗೆಯ ಆದಾಯದ ಸಂಗ್ರಹದ ಏರಿಕೆಯ ಗತಿ ಮಾತ್ರ ಹಿಂದಿನಂತೆಯೇ ನಿಧಾನವಾಗಿಯೇ ಇದೆ.

ನೋಟುರದ್ಧತಿ ಕ್ರಮದಿಂದಾಗಿ ತೆರಿಗೆ ರಿಟರ್ನ್ ಸಲ್ಲಿಸುವರ ಸಂಖ್ಯೆ ಹೆಚ್ಚಾಗಿದೆ ಎಂದು ಸರಕಾರೀ ಪ್ರಚಾರಯಂತ್ರ ಸಾರುತ್ತಿದೆ. ವಾಸ್ತವವಾಗಿ ಈ ಪ್ರವೃತ್ತಿ ನೋಟುರದ್ಧತಿಯ ಮೊದಲೇ ಕಂಡು ಬಂದಿತ್ತು. ಈಗ ಇದೇ ರೀತಿಯ ಕತೆಯನ್ನು ಜಿಎಸ್‌ಟಿ ಬಗ್ಗೆಯೂ ಹೇಳಲಾಗುತ್ತಿದೆ. ಈ ಅಂಕಿ ಅಂಶಗಳು ಮರೆಮಾಚುತ್ತಿರುವ ಸಂಗತಿಯೆಂದರೆ, ತೆರಿಗೆ ಬಲೆಯಲ್ಲಿನ ಸಂಖ್ಯೆಗಳಿಗೂ ಮತ್ತು ತೆರಿಗೆ ಆದಾಯಕ್ಕೂ ಯಾವುದೇ ನೇರ ಸಂಬಂಧವಿಲ್ಲವೆಂಬುದು.

ವರಮಾನ ತೆರಿಗೆ ರಿಟರ್ನ್ ಸಲ್ಲಿಸುವ ಶೇ. 90 ರಷ್ಟು ಜನ ಯಾವ ತೆರಿಗೆಯನ್ನು ಕಟ್ಟಿರುವುದಿಲ್ಲ ಅಥವಾ ಬಹಳ ಕಡಿಮೆ ತೆರಿಗೆ ಕಟ್ಟುತ್ತಾರೆ ಮತ್ತು 57% ತೆರಿಗೆ ಮೊತ್ತ ಸಂಬಳಗಳ ಮೂಲದಿಂದ ಬರುತ್ತಿದೆ, ವ್ಯಾಪಾರ-ವ್ಯವಹಾರಗಳ ಮೂಲದಿಂದ ಬರುವ ತೆರಿಗೆ ಆದಾಯಗಳ ಪ್ರಮಾಣ ಇದರ ಅರ್ಧದಷ್ಟು ಮಾತ್ರ. ಈ ಅಂಶಗಳನ್ನು ಗಮನಿಸಿ- ಆದಾಯ ತೆರಿಗೆ ಇಲಾಖೆ ಡಿಸೆಂಬರ್ 2018ರ ವರೆಗೆ 37 ಕೋಟಿ ವ್ಯಕ್ತಿಗಳಿಗೆ ವ್ಯಕ್ತಿಗಳಿಗೆ ಪಾನ್ ಕಾರ್ಡ್ ಅಂದರೆ ತೆರಿಗೆದಾರರ ಶಾಶ್ವತ ಅಕೌಂಟ್ ಸಂಖ್ಯೆ ನೀಡಿದೆ.

ಇದು ತೆರಿಗೆ ರಿಟರ್ನ್ ಸಲ್ಲಿಸುವವರ ಸಂಖ್ಯೆಯ 5 ಪಟ್ಟಿಗಿಂತಲೂ ಹೆಚ್ಚು ಮತ್ತು ದೇಶದ ಒಟ್ಟು ದುಡಿಮೆಗಾರರ 75% ದಷ್ಟು!ಆದ್ದರಿಂದ ಮೋದಿ ಸರ್ಕಾರದ ಆಡಳಿತಾವಧಿಯ ಕಡೆಯ ವರ್ಷದಲ್ಲಿ ಪ್ರತ್ಯಕ್ಷ ಮತ್ತು ಅಪ್ರತ್ಯಕ್ಷ ತೆರಿಗೆ ಸಂಗ್ರಹದಲ್ಲಿ ರೂ. 1.5 ಲಕ್ಷ ಕೋಟಿ ಕೊರತೆಯಿರುವುದು ಕೇವಲ ಎರಡು ತಿಂಗಳ ಹಿಂದಿನ ಪರಿಷ್ಕೃತ ಅಂದಾಜಿನಲ್ಲಿ ವ್ಯಕ್ತವಾಗಿದೆ. ಈ ಪರಿಷ್ಕೃತ ಅಂದಾಜು ಈ ಹಣಕಾಸು ವರ್ಷಧ ಆರಂಭದ ಅಂದಾಜಿಗಿಂತ 23,000 ಕೋಟಿ ರೂ.ಗಳಷ್ಟು ಕಡಿಮೆಯಿರುವುದರಿಂದ ಒಟ್ಟು ತೆರಿಗೆ ಆದಾಯ ಸಂಗ್ರಹಣೆಯಲ್ಲಿ ಒಟ್ಟು ಕೊರತೆ ಕಮ್ಮಿಯೆಂದರೂ ರೂ. 1.75 ಲಕ್ಷ ಕೋಟಿಗಳಷ್ಟಾಗುತ್ತದೆ.

ಇದು ಒಟ್ಟು ಜಿಡಿಪಿಯ ಶೇ. 1 ಕ್ಕೆ ಹತ್ತಿರ ಇದೆ. ಈ ಮೊತ್ತದ ಪ್ರಮಾಣ ಎಷ್ಟೆಂದರೆ ಇದರಿಂದ ಮೋದಿ ಸರಕಾರ ಅದರ ಕೊನೆಯ ಬಜೆಟಿನಲ್ಲಿ ಸಣ್ಣ ರೈತರಿಗೆಂದು ಪ್ರಕಟಿಸಿದ ವಾರ್ಷಿಕ 6000 ರೂ. ಆದಾಯ ಬೆಂಬಲವನ್ನು ಅವರಿಗೆ ಮಾತ್ರವಲ್ಲ ದೇಶದ ಎಲ್ಲ ಕುಟುಂಬಗಳಿಗೂ ಕೊಡಬಹುದು. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ೧೫ ಕೋಟಿ ಕುಟುಂಬಗಳಿಗೆ ಅಂದರೆ ನಮ್ಮ ದೇಶದ ಜನ ಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ಪ್ರತಿ ತಿಂಗಳು ರೂ. 1000 ದಂತೆ ಒಂದಿಲ್ಲೊಂದು ರೀತಿಯಲ್ಲಿ ಆದಾಯ ಬೆಂಬಲ ಕೊಡಬಹುದಾಗಿತ್ತು. ಕಡಿಮೆ ತೆರಿಗೆ ಸಂಗ್ರಹದಿಂದ ರಾಜ್ಯಗಳ ಪಾಲು ಸಹಿತ ಕಡಿತಗೊಳ್ಳಲಿದೆ. ಇದರೊಂದಿಗೆ ಜಿಎಸ್‌ಟಿ ತೆರಿಗೆ ಸಂಗ್ರಹದ ಕೊರತೆ ರಾಜ್ಯ ಸರ್ಕಾರಗಳಿಗೆ ತೀವ್ರ ಹೊಡೆತ ನೀಡಲಿದೆ.

2018-19 ರ ತೆರಿಗೆ ಸಂಗ್ರಹದಲ್ಲಿ ಕೊರತೆ ಉಂಟಾಗಿರುವುದರ ಅರ್ಥ, ವಿತ್ತೀಯ ಕೊರತೆ ಅಂದಾಜಿಗಿಂತ ಬಹಳ ಹೆಚ್ಚಿದೆ ಅಥವಾ ಮಾರ್ಚ್ ತಿಂಗಳಲ್ಲಿ ತೀವ್ರ ವೆಚ್ಚಗಳನ್ನು ತೀವ್ರವಾಗಿ ಕಡಿತ ಮಾಡಲಾಗಿದೆ ಎಂದೇ ಆಗುತ್ತದೆ. ಫೆಬ್ರವರಿ ತಿಂಗಳ ವರೆಗಿನ ಆದಾಯ ಮತ್ತು ಖರ್ಚಿನ ಪ್ರವೃತ್ತಿಯನ್ನು ನೋಡಿದಾಗ, ಹಣಕಾಸು ವರ್ಷ ಮುಗಿಯುವ ಒಂದು ತಿಂಗಳ ಹಿಂದೆಯೇ ಬಜೆಟ್ ಅಂದಾಜಿಗಿಂತ ೩೪% ಹೆಚ್ಚಾಗಿರುವುದು, ಅಥವ ಜಿಡಿಪಿಯ 4.5% ರಷ್ಟು ಆಗಿರುವುದು ಕಂಡು ಬರುತ್ತದೆ.

ಈ ಹಿನ್ನೆಲೆಯಲ್ಲಿ, ಮೇ ತಿಂಗಳ ಕೊನೆಯಲ್ಲಿ ಬರಲಿರುವ ಹೊಸ ಸರ್ಕಾರದ ಮುಂದಿರುವ ಸವಾಲೆಂದರೆ ವಿತ್ತೀಯ ಕೊರತೆಯನ್ನು ಜಿಡಿಪಿಯ 3% ಮಿತಿಯಲ್ಲಿಡಬೇಕು ಎಂಬ ಎಫ್‌ಆರ್‌ಬಿಎಂ ಕಾಯ್ದೆ ಹೇರಿರುವ ವಿಚಾರಹೀನ ಗೀಳನ್ನು ತ್ಯಜಿಸುವುದು, ಮತ್ತು ಶ್ರೀಮಂತರಿಂದ, ಸಂಪತ್ತುಳ್ಳವರಿಂದ ಹಾಗೂ ಬೃಹತ್ ಉದ್ದಿಮೆಗಳಿಂದ ಮುಲಾಜಿಲ್ಲದೆ ತೆರಿಗೆ ಸಂಗ್ರಹಿಸುವುದು. ಈ ಮೂಲಕ, ತೆರಿಗೆಗಳ್ಳತನ ತಮ್ಮ ದಿಂಬುಗಳ ಅಡಿಯಲ್ಲಿ ನೋಟಿನ ಕಂತೆಗಳನ್ನು ಬಚ್ಚಿಟ್ಟರಿಗಿಂತ ಹೆಚ್ಚಾಗಿ, ಬಹುಪಾಲು ತೆರಿಗೆ ಬಲೆಯಲ್ಲಿರುವವರಿಂದಲೇ ನಡೆಯುತ್ತಿದೆ ಎಂಬುದನ್ನು ಒಪ್ಪಿಕೊಳ್ಳ ಬೇಕಾಗುತ್ತದೆ. ಆದಾಯ ತೆರಿಗೆ ಮತ್ತು ಜಿಎಸ್‌ಟ್ ಸಂಗ್ರಹದಲ್ಲಿ ಕಂಡು ಬಂದಿರುವ ಪ್ರವೃತ್ತಿ ಕೂಡ ಇಂತಹುದೇ.

ಇದರ ಬದಲಾಗಿ ಹೊಸ ಸರಕಾರಕ್ಕೆ ಇರುವ ಏಕೈಕ ದಾರಿಯೆಂದರೆ, ಒಂದು ತೀವ್ರತರದ ಮಿತವ್ಯಯ ಎಂದು ಹೇಳುವ ದಾರಿ. ಅಂದರೆ ಜನಸಾಮಾನ್ಯರಿಗಾಗಿ ಮಾಡುವ ವೆಚ್ಚಗಳನ್ನು ಕಡಿತಗೊಳಿಸುವುದು. ಕಳೆದ ಒಂದು ದಶಕದಲ್ಲಿ ಬಂದ ಸರಕಾರಗಳು ಇದನ್ನೇ ಅನುಸರಿಸಿವೆ. ಇದು ಜನಸಾಮಾನ್ಯರ ಬದುಕನ್ನು ನರಕಗೊಳಿಸಿರುವ ದಾರಿ. ಮೋದಿ ಸರ್ಕಾರ ಮತ್ತೆ ಬಂದರೆ ಇದೇ ದಾರಿಯನ್ನು ಮುಂದುವರೆಸುತ್ತದೆ ಎಂಬುದು ಖಡಾಖಂಡಿತ.

ಆದ್ದರಿಂದಲೇ, ಜನಸಾಮಾನ್ಯರ ಮೇಲೆ ಇನ್ನೂ ಹೆಚ್ಚಿನ ದಾಳಿಯನ್ನು ತಪ್ಪಿಸಬೇಕಾದರೆ ಈ ಮೋದಿ ಸರ್ಕಾರವನ್ನು ಸೋಲಿಸುವುದು ಆದ್ಯ ಕರ್ತವ್ಯವಾಗಬೇಕು. ಆದರೆ ಪ್ರಶ್ನೆಯಿರುವುದು-ದೇಶಕ್ಕೆ ಒಂದು ನಿಜವಾಗಿಯೂ ಹೊಸ ಸರ್ಕಾರ ಬರುವುದೇ, ಬಲಿಷ್ಟ ಹಿತಾಸಕ್ತಿಗಳನ್ನು ಎದುರಿಸಿ ನಿಲ್ಲಬಲ್ಲ ಮತ್ತು ಜನಪರವಾದ ಒಂದು ಧೀರ ಪರ್ಯಾಯವನ್ನು ಆಯ್ದುಕೊಳ್ಳಬಲ್ಲ ಒಂದು ಮಜಬೂತ್ ಸರಕಾರ ಬರುವುದೇ ಎಂಬುದು.

(ಕೃಪೆ-ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಅನುವಾದ : ಎಂ.ಜಿ.ವೆಂಕಟೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.

ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ

ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.

ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ

ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.

ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ

ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.

ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ

ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.

ಭವಿಷ್ಯದ ಆಶಯ

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 hours ago

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು. ಚಲನಚಿತ್ರ ರಂಗ – 2005ರಲ್ಲಿ ‘ಬಾಯ್...

ದಿನದ ಸುದ್ದಿ7 hours ago

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ...

ದಿನದ ಸುದ್ದಿ8 hours ago

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ...

ದಿನದ ಸುದ್ದಿ1 day ago

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು...

ದಿನದ ಸುದ್ದಿ2 days ago

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ...

ದಿನದ ಸುದ್ದಿ2 days ago

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ...

ದಿನದ ಸುದ್ದಿ3 days ago

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ...

ದಿನದ ಸುದ್ದಿ3 days ago

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ...

ಅಂಕಣ3 days ago

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ...

ದಿನದ ಸುದ್ದಿ4 days ago

ಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

ಸುದ್ದಿದಿನ,ದಾವಣಗೆರೆ:ಎ.ವಿ.ಕೆ. ಕಾಲೇಜು ಹಾಗೂ ಹಳೆ ಬಿಸ್ಲೇರಿ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಅಧಿಕಾರಿಗಳಾದ ಉಪ್ಪಾರ...

Trending