Connect with us

ಸಿನಿ ಸುದ್ದಿ

ಸ್ಯಾಂಡಲ್‌ವುಡ್‌ನಲ್ಲಿ ಹೊಸ ಪ್ರಯತ್ನ : ಬಿಡಗುಡಗೆಯೂ ಮುನ್ನವೇ ‘ನವರಾತ್ರಿ’ ಚಿತ್ರ ವೀಕ್ಷಿಸಿ

Published

on

ಸುದ್ದಿದಿನ,ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸಿನಿಮಾ ಬಿಡುಗಡೆಗೂ ಮುನ್ನವೇ ಪ್ರೇಕ್ಷಕರು ಉಚಿತವಾಗಿ ಚಿತ್ರವನ್ನು ವೀಕ್ಷಿಸುವ ಅವಕಾಶ ಕಲ್ಪಸಿದೆ ನವರಾತ್ರಿ ಚಿತ್ರತಂಡ. ಅದಕ್ಕಾಗಿಯೇ ಭರದಿಂದ ಸಿದ್ಧತೆ ಮಾಡಿಕೊಂಡಿಕೊಳ್ಳುತ್ತಿದ್ದೆ.

ಹೌದು ಲಕ್ಷ್ಮೇಕಾಂತ್‌ ಚೆನ್ನ ನಿರ್ದೆಶನದಲ್ಲಿ ಮೂಡಿಬಂದಿರುವ ಈ ಚಿತ್ರವೂ ಇದೆ ದಸರಾ ಸಮಯದಲ್ಲಿ ರಾಜ್ಯದಾದ್ಯಂತ ತೆರೆಕಾಣಲಿದೆ. ಕಾಫಿಸ್‌ ಸಿನಿಮಾಸ್‌ ಬ್ಯಾನರ್‌ ಅಡಿಯಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಸಮನ್ಯ ರೆಡ್ಡಿ ಬಂಡವಾಳ ಹೂಡಿದ್ದಾರೆ.
‘ಯೂಟ್ಯೂಬ್‌ನಲ್ಲಿ ಸಿನಿಮಾವನ್ನು 10 ನಿಮಿಷಗಳ ಸಮಯದಲ್ಲಿಯೇ ಬಿಡುಗಡೆಗೂ ಮುನ್ನವೇ ಬಿಡಲಾಗುತ್ತದೆ. ಇದನ್ನು ಎಲ್ಲರೂ ಉಚಿತವಾಗಿಯೇ ವೀಕ್ಷಿಸಬಹುದು, ಇಷ್ಟವಾದರೆ ಬಿಡುಗಡೆಯಾದ ನಂತರ ಹತ್ತಿರದ ಚಿತ್ರಮಂದಿರಗಳಲ್ಲಿ ನೋಡಿ ವೀಕ್ಷಿಸಲಿ, ಇಲ್ಲವಾದರೆ ಅವರ ಅಭಿಪ್ರಾಯವನ್ನು ತಿಳಿಸಲಿ. ಕನ್ನಡದಲ್ಲಿಯೇ ಮೊದಲನೇ ಸಲ ಇಂತಹ ಪ್ರಯೋಗಕ್ಕೆ ನಾವು ಮುಂದಾಗಿದ್ದೇವೆ’ ಎನ್ನುತ್ತಾರೆ ನಿರ್ಮಾಪಕ ಸಮನ್ಯ ರೆಡ್ಡಿ.
ಥ್ರಿಲ್ಲರ್‌ ಜಾನರ್‌ ಹೊಂದಿರುವ ಈ ಚಿತ್ರದಲ್ಲಿ ಪ್ರಮುಖ ತಾರಾಬಳಗದಿಂದ ಕೂಡಿದೆ. ‘ಒರಟ ಐ ಲವ್ ಯೂ’ ಹಾಗೂ ‘ತ್ರಾಟಕ’ ಚಿತ್ರದ ಖ್ಯಾತಿಯ ಹೃದಯ ಅವಂತಿ ನಾಯಕಿಯಾಗಿದ್ದೂ, ನಾಯಕನಾಗಿ ಪದ್ಮವಾತಿ ಸೀರಿಯಲ್ ಖ್ಯಾತಿಯ ‘ತ್ರಿವಿಕ್ರಮ್’ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಶಿವ ಮಂಜು, ಕಾರ್ತಿಕ್, ಪ್ರಣಯ ಮೂರ್ತಿ, ಲೋಕೇಶ್ ಸೇರಿದಂತೆ ಮುಂತಾದವರು ಪ್ರಮುಖ ಪಾತ್ರಧಾರಿಗಳಾಗಿ ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಒಂದು ಫೈಟ್ ಹೊಂದಿದ್ದೂ, ಯಾವುದೇ ರೀತಿಯ ಹಾಡಿಲ್ಲದಿರುವುದೇ ಚಿತ್ರದ ವಿಶೇಷವಾಗಿದೆ. ಸಂಗೀತ ನಿರ್ದೇಶಕರಾಗಿ ತೆಲುಗು ಸಿನಿಮಾ ‘ಛೋಟಾ ಭೀಮ್’ ಹಾಗೂ ‘ಮನು’ ಖ್ಯಾತಿಯ ನರೇಶ್ ಕುಮಾರನ್ ಸಂಯೋಜನೆ ಮಾಡಿದ್ದಾರೆ.

ಚಿತ್ರವೂ 1. 55 ನಿಮಿಷಗಳನ್ನು ಒಳಗೊಂಡಿದ್ದೂ, ಸಂಕಲನವು ಲೋಕೇಶ್ ಚೆನ್ನ ಹಾಗೂ ಛಾಯಾಗ್ರಹಣ ಸಂಕಲನವನ್ನು ಅನ್ನಪೂರ್ಣ ಸ್ಟುಡಿಯೋಸ್ ಮಾಡಿದೆ. ಶೀಘ್ರದಲ್ಲಿಯೇ ಈ ಚಿತ್ರವೂ ಪ್ರೇಕ್ಷಕರ ಮುಂದೆ ಬರಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

Published

on

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂ.ಇ.ಎಸ್ ಗ್ರೌಂಡ್ ನಲ್ಲಿ ‘ಘೋಸ್ಟ್’ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.

ಸಂದೇಶ್‍ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಘೋಸ್ಟ್’ ಚಿತ್ರವನ್ನು ಆರ್‍.ಜೆ. ಶ್ರೀನಿ ಬರೆದು, ನಿರ್ದೇಶಿಸಿದ್ದು, ಅರ್ಜುನ್‌ ಜನ್ಯಾ ಸಂಗೀತವಿದೆ. ಶಿವರಾಜಕುಮಾರ್ ಜೊತೆ ಮಲಯಾಳಂ ನಟ ಜಯರಾಮ್‌, ಹಿಂದಿ ನಟ ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ ಹಾಗೂ ಇನ್ನಿತರರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending