ದಿನದ ಸುದ್ದಿ
ರೈಲು ವಿಳಂಬ : ‘ನೀಟ್’ ಮರು ಪರೀಕ್ಷೆ ನಡೆಸಲು ಎಸ್ ಎಫ್ ಐ ಆಗ್ರಹ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/05/Neet-exam-suddidina-32.jpg&description=ರೈಲು ವಿಳಂಬ : ‘ನೀಟ್’ ಮರು ಪರೀಕ್ಷೆ ನಡೆಸಲು ಎಸ್ ಎಫ್ ಐ ಆಗ್ರಹ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/05/Neet-exam-suddidina-32.jpg&description=ರೈಲು ವಿಳಂಬ : ‘ನೀಟ್’ ಮರು ಪರೀಕ್ಷೆ ನಡೆಸಲು ಎಸ್ ಎಫ್ ಐ ಆಗ್ರಹ', 'pinterestShare', 'width=750,height=350'); return false;" title="Pin This Post">
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅಗತ್ಯವಾಗಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಭಾನುವಾರ ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿರುತ್ತದೆ. ಬಳ್ಳಾರಿ, ಕೊಪ್ಪಳ, ಗದಗ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೆಂಗಳೂರಿಗೆ ಬರಲು ಹಂಪಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿರುತ್ತಾರೆ. ಭಾನುವಾರ ಬೆಳಗ್ಗೆ 6.30 ಕ್ಕೆ ಬೆಂಗಳೂರು ತಲುಪಬೇಕಿದ್ದ ರೈಲು ಮಧ್ಯಾಹ್ನ 2.30ಕ್ಕೆ ಅಂದರೆ ಸುಮಾರು 7 ಗಂಟೆಗಳ ತಡವಾಗಿ ಬಂದು ತಲುಪಿದೆ. ಹಾಗಾಗಿ ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವಂಚಿತರಾಗಿದ್ದಾರೆ.
ಇದು ರೈಲ್ವೆ ಇಲಾಖೆಯ ಬೇಜವಾಬ್ದಾರಿ ಯಿಂದಾಗಿ ಸಂಭವಿಸಿದೆ. ರೈಲಿನ ಮಾರ್ಗ ಬದಲಾವಣೆ ಮತ್ತು ವಿಳಂಬದ ಬಗ್ಗೆ ಪ್ರಯಾಣಿಕರಿಗೆ ಮೊದಲೇ ಮಾಹಿತಿ ನೀಡಿದ್ದೇವು ಎಂದು ತಪ್ಪನ್ನು ಸಮರ್ಥಿಸಿಕೊಳ್ಳುವುದು ರೈಲ್ವೇ ಇಲಾಖೆಯ ಕ್ರಮ ನಾಚಿಕೆಗೇಡಿನ ಸಂಗತಿ.
ಇನ್ನೂ ಕೊನೆಯ ಕ್ಷಣದಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಪರೀಕ್ಷೆ ಕೇಂದ್ರಗಳನ್ನು ಬದಲಿಸುವ ಮೂಲಕ ತಪ್ಪು ಮಾಡಿದೆ. ಇದರಿಂದಾಗಿಯೇ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವಂಚಿತರಾಗಿದ್ದಾರೆ. ಇದಕ್ಕೆ NTA ಯೇ ನೇರ ಹೊಣೆಯಾಗಿದೆ. ಸಾಕಷ್ಟು ಪೂರ್ವ ತಯಾರಿಗಳನ್ನು ನಡೆಸಿಕೊಂಡು ಪರೀಕ್ಷೆ ಬರೆಯಲು ಸಿದ್ದರಾಗಿದ್ದ ನೂರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಇದರಿಂದಾಗಿ ಮುಸುಕು ಕವಿದಂತಾಗಿದೆ.
ಈ ನಿಟ್ಟಿನಲ್ಲಿ ರೈಲ್ವೇ ಇಲಾಖೆಯಿಂದಾದ ಮತ್ತು NTA ಸಂಸ್ಥೆಯಿಂದಾದ ಎಡವಟ್ಟಿನಿಂದ ಪರೀಕ್ಷೆ ಬರೆಯಲು ವಂಚಿತರಾದ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಮರು ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಎಸ್ಎಫ್ಐ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸುತ್ತದೆ.
–ಅಂಬರೀಷ್ ವಿ
ರಾಜ್ಯಾಧ್ಯಕ್ಷರು
ಗುರುರಾಜ ದೇಸಾಯಿ
ರಾಜ್ಯ ಕಾರ್ಯದರ್ಶಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

