ದಿನದ ಸುದ್ದಿ
ಎನ್ ಇ ಪಿ ತಡೆ | ಶಿಕ್ಷಣ ತಜ್ಞರ ಜತೆ ಚರ್ಚಿಸಿ ತೀರ್ಮಾನ : ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್
ಸುದ್ದಿದಿನ,ಚಿಕ್ಕಬಳ್ಳಾಪುರ : ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕಳೆದ ಎರಡು ವರ್ಷಗಳಲ್ಲಿ ಆಗಿರುವ ಬದಲಾವಣೆಗಳು ಸಾಧಕ ಬಾಧಕಗಳು ಹಾಗೂ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಎಲ್ಲಾ ವಿವರಗಳನ್ನು ಸಂಗ್ರಹಿಸಿದ ನಂತರ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಹಾಗೂ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ರಾಷ್ಟ್ರೀಯ ಶಿಕ್ಷಣ ನೀತಿ ಕೈ ಬಿಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243