ದಿನದ ಸುದ್ದಿ
ಪರಿಶಿಷ್ಟ ಜಾತಿ ಯುವಜನರಿಗೆ ‘ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರ’ : ಅರ್ಜಿ ಆಹ್ವಾನ

ಸುದ್ದಿದಿನ, ಬೆಂಗಳೂರು : 2023-24ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಅನುಷ್ಠಾನಗೊಳಿಸಲಿರುವ ತರಬೇತಿ ಶಿಬಿರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಯುವಜನರಿಗೆ ಪೂರಕವಾದ ಉದ್ಯೋಗಗಳ ವಿಫುಲ ಅವಕಾಶಗಳಿದ್ದು, ಅದರಂತೆ ಪರಿಶಿಷ್ಟ ಜಾತಿ ಯುವಜನರಿಗೆ ಕೆಳಕಂಡ ತರಬೇತಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಬಗ್ಗೆ 2023-24ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ತರಬೇತಿ ಶಿಬಿರವನ್ನು ಇಲಾಖೆ ವತಿಯಿಂದ ನೀಡಲಾಗುವುದು.
ತರಬೇತಿ ಶಿಬಿರ : ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರ (8 ದಿನಗಳು)
ದಿನಾಂಕ : 31-01-2024 ರಿಂದ 07-02-2024 ರವರೆಗೆ
ವಿದ್ಯಾರ್ಹತೆ : ಪದವಿ ಹಾಗೂ ಜರ್ನಲಿಸಂಗೆ ಪ್ರಾಮುಖ್ಯತೆ
ವಯೋಮಿತಿ : 15 ರಿಂದ 29 ವರ್ಷ
ಯುವಜನರನ್ನು ಸ್ವಾವಲಂಭಿಯಾಗಲು ಉತ್ತೇಜಿಸುವ ದೃಷ್ಟಿಯಿಂದ (ಹೊರ ಜಿಲ್ಲೆಗಳ ಆಸಕ್ತ ಯುವಜನರಿಗೆ ವಸತಿ ಸಹಿತ) ಮೇಲ್ಕಂಡ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಈ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಅದರಂತೆ ಸಂಬಂಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು ತಮ್ಮ ಜಿಲ್ಲೆಯಲ್ಲಿ ಸ್ಥಳೀಯವಾಗಿ ಪ್ರಚಲಿತವಿರುವ ದಿನಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರವನ್ನು ನೀಡಿ ಅಸಕ್ತ ಯುವಜನರಿಂದ ಅರ್ಜಿಗಳನ್ನು ಪಡೆದು ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಮುಂದುವರೆದು ಮೊದಲನೇ ತರಬೇತಿ ಶಿಬಿರದಲ್ಲಿ 50 ಶಿಬಿರಾರ್ಥಿಗಳಿಗೆ ಸೀಮಿತಗೊಳಿಸಬೇಕಾಗಿರುವುದರಿಂದ ಸಂಬಂಧಪಟ್ಟ ಉಪ/ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು 27-01-2024 ರೊಳಗೆ ಕೇಂದ್ರ ಕಚೇರಿಯ ಮೂಲಕ ಈ ಮೇಲ್ (tspscp@gmail.com) ಹಾಗೂ ಅಂಚೆ ಮೂಲಕ ಕಳುಹಿಸಲು ಸೂಚಿಸಿದೆ. ತದನಂತರ ಬಂದಿರುವ ಅರ್ಜಿಗಳನ್ನು ಶಿಬಿರದಲ್ಲಿ ಪರಿಗಣಿಸಲು ಅವಕಾಶವಿರುವುದಿಲ್ಲ. ತರಬೇತಿ ಶಿಬಿರದಲ್ಲಿ ಭಾಗವಹಿಸುವ
ಶಿಬಿರಾರ್ಥಿಗಳ ದೂರವಾಣಿ/ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸ ಬೇಕು.
ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಸ ಹಣಕಾಸು ವರ್ಷ ಆರಂಭ | ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ; ಇಲ್ಲದಿದ್ದರೆ ಭಾರೀ ದಂಡ

ಸುದ್ದಿದಿನಡೆಸ್ಕ್:ಇಂದು ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದ್ದು, ಕೆಲವು ಪ್ರಮುಖ ತೆರಿಗೆ ಹಾಗೂ ಹಣಕಾಸು ಬದಲಾವಣೆಗಳು ಮತ್ತು ಕೆಲವು ನೀತಿ ಸುಧಾರಣೆಗಳು ಜಾರಿಗೆ ಬರಲಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಹೊಸ ಆದಾಯ ತೆರಿಗೆ ಸ್ಲ್ಯಾಬ್ಗಳು ಈ ಹಣಕಾಸು ವರ್ಷದಿಂದ ಅನ್ವಯವಾಗಲಿವೆ. ನಾಳೆಯಿಂದ, 12ಲಕ್ಷ ರೂಪಾಯಿ ಬಳ ಪಡೆಯುವ ವ್ಯಕ್ತಿಯು ಹೊಸ ತೆರಿಗೆ ವ್ಯವಸ್ಥೆ ಆರಿಸಿಕೊಂಡರೆ, ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.
ಡಿಜಿಟಲ್ ಪಾವತಿಗಳು ಇಂದಿನಿಂದ ಹೊಸ ಬದಲಾವಣೆಯನ್ನು ಹೊಂದಿರುತ್ತವೆ. ದೀರ್ಘಕಾಲದ ನಿಷ್ಕ್ರಿಯ ಸ್ಥಿತಿಯಿಂದ ಇರುವ ಮೊಬೈಲ್ ಸಂಖ್ಯೆಗಳಿಗೆ ಯುಪಿಐ ಪಾವತಿ ಇರುವುದಿಲ್ಲ.
ಎಲ್ಲಾ ಬ್ಯಾಂಕ್ ಗ್ರಾಹಕರು ತಮ್ಮ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಹೊಂದಿರುವುದು ಕಡ್ಡಾಯವಾಗಲಿದೆ. ಒಂದು ವೇಳೆ ವಿಫಲವಾದರೆ ಬ್ಯಾಂಕ್ ಭಾರಿ ದಂಡ ವಿಧಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಏಪ್ರಿಲ್ 5 ಮತ್ತು 6 ರಂದು ಜಲಸಾಹಸ ಕ್ರೀಡೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 5 ಮತ್ತು 6 ರಂದು ದಾವಣಗೆರೆ ಕೊಂಡಜ್ಜಿ ಕೆರೆಯಲ್ಲಿ ಜಲಸಾಹಸ ಕ್ರೀಡೆಯನ್ನು ಆಯೋಜಿಸಲಾಗಿದೆ.
ಜಲಸಾಹಸ ಕ್ರೀಡೆಯಲ್ಲಿ ಲೋಕಸಭಾ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸುವರು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭವಿಷ್ಯಕ್ಕಾಗಿ ಹೂಡಿಕೆಯ ಜ್ಞಾನ ಅವಶ್ಯಕ

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆಯ ನಿರ್ಣಯ ಶಾಸ್ತ್ರ ವಿಭಾಗದ ವತಿಯಿಂದ ನಿರ್ಣಯ ಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಹೂಡಿಕೆ ಕುರಿತ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹೂಡಿಕೆ ತಜ್ಞರಾದ ಎಂಜಲ್ ವನ್ನ ಆದಿತ್ಯ ಮತ್ತು ಅಶೋಕ್ ರಾಯಭಾಗಿ ಅವರು ವಿದ್ಯಾರ್ಥಿಗಳಿಗೆ ಹೂಡಿಕೆ ವಿಷಯದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ಮುಖ್ಯಸ್ಥರಾದ ವೆಂಕಟೇಶ್ ಬಾಬು ಎಸ್. ಅವರು ವಿದ್ಯಾರ್ಥಿಗಳಿಗೆ ಹೂಡಿಕೆಯ ಮಹತ್ವ ಮತ್ತು ಅದರ ಪ್ರಾಯೋಗಿಕ ಅಂಶಗಳ ಕುರಿತು ವಿವರಿಸಿದರು. ಅವರು ಹೂಡಿಕೆ ಹೇಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಹುದು ಮತ್ತು ಹೇಗೆ ಸ್ಮಾರ್ಟ್ ಹೂಡಿಕೆಗೆ ಮೊದಲ ಹೆಜ್ಜೆ ಇಡಬೇಕು ಎಂಬುದರ ಬಗ್ಗೆ ಉದಾಹರಣೆಗಳ ಮೂಲಕ ವಿವರಿಸಿದರು.
ಎಂಜಲ್ ವನ್ನ ಆದಿತ್ಯ ಅವರು ಹೂಡಿಕೆಯ ವಿವಿಧ ಪ್ರಕಾರಗಳು, ಅದರ ಲಾಭ-ನಷ್ಟಗಳು ಮತ್ತು ಸರಿಯಾದ ಹೂಡಿಕೆ ತಂತ್ರಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವಂತೆ ಅವರು ನೈಜ ಜಗತ್ತಿನ ಉದಾಹರಣೆಗಳನ್ನು ನೀಡಿ, ಹೂಡಿಕೆಯಲ್ಲಿ ತಿಳಿವಳಿಕೆಯಿಂದ ನಿರ್ಧಾರ ಕೈಗೊಳ್ಳುವ ತಂತ್ರಗಳನ್ನು ವಿವರಿಸಿದರು.
ಅಶೋಕ್ ರಾಯಭಾಗಿ ಅವರು ಹೂಡಿಕೆ ಕ್ಷೇತ್ರದಲ್ಲಿ ಜನರು ಸಾಮಾನ್ಯವಾಗಿ ಮಾಡುವ ತಪ್ಪುಗಳು ಮತ್ತು ಅವುಗಳನ್ನು ತಪ್ಪಿಸುವ ವಿಧಾನಗಳ ಬಗ್ಗೆ ಮಾತನಾಡಿದರು. ಇಂದಿನ ಹೂಡಿಕೆ ಪ್ರವೃತ್ತಿಗಳು ಮತ್ತು ಮಾರುಕಟ್ಟೆಯ ಬದಲಾವಣೆಗಳ ಬಗ್ಗೆ ವಿವರಿಸುವ ಮೂಲಕ ಅವರು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ನೀಡಿದರು.
ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಭವಿಷ್ಯದ ಹಣಕಾಸು ನಿರ್ವಹಣೆಗೆ ಹಿತಕರ ಮಾಹಿತಿ ನೀಡಿದ್ದು, ಅವರು ಹೂಡಿಕೆ ಜಗತ್ತಿನಲ್ಲಿ ತಮ್ಮ ಮೊದಲ ಹೆಜ್ಜೆ ಇಡುವ ನೈಪುಣ್ಯವನ್ನು ಸಂಪಾದಿಸಲು ಪ್ರೇರೇಪಿಸಲಾಯಿತು. ಕಾರ್ಯಗಾರದಲ್ಲಿ ವಿಭಾಗದ ಎಲ್ಲಾ ಅಧ್ಯಾಪಕರೂ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’; ವಿದ್ಯಾರ್ಥಿಗಳ ಕಲರವ
-
ದಿನದ ಸುದ್ದಿ4 days ago
2 ಸಾವಿರ ಹೊಸ ಬಸ್ ಖರೀದಿಗೆ ಅನುದಾನ ಬಿಡುಗಡೆ
-
ದಿನದ ಸುದ್ದಿ4 days ago
ಜನಪದ ಕಲೆ ಸಾಹಿತ್ಯದ ಬೇರು : ಪ್ರಾಂಶುಪಾಲ ಡಾ. ಧನಂಜಯ ಬಿ.ಜಿ
-
ದಿನದ ಸುದ್ದಿ4 days ago
ಏಪ್ರಿಲ್ 2 ರಂದು ದಾವಣಗೆರೆ ವಿವಿ 12ನೇ ಘಟಿಕೋತ್ಸವ
-
ದಿನದ ಸುದ್ದಿ4 days ago
ದಾವಣಗೆರೆ | ಏಪ್ರಿಲ್ 22ರಿಂದ ಉಪಲೋಕಾಯುಕ್ತರ ಪ್ರವಾಸ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ4 days ago
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಜಗಳೂರು | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ : ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಭವಿಷ್ಯಕ್ಕಾಗಿ ಹೂಡಿಕೆಯ ಜ್ಞಾನ ಅವಶ್ಯಕ