Connect with us

ರಾಜಕೀಯ

ಅಹಿಂಸೆ : ಎಂದಿಗೂ ಬತ್ತದ ನದಿಯ ನಿನಾದ

Published

on

ಸಂಘರ್ಷವನ್ನು ಸ್ಥಾಯಿಯಾಗಿಸಿ ಪ್ರಯೋಜನ ಪಡೆದುಕೊಳ್ಳುವ ಪ್ರಯತ್ನಗಳು ನಿರಂತರವಾಗಿ ಯಶಸ್ಸು ಕಾಣುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಹಿಂಸೆಯ ಮೌಲ್ಯದ ಆಧಾರದಲ್ಲಿ ಪರ್ಯಾಯ ರಾಜಕಾರಣ ರಾಷ್ಟ್ರದಾದ್ಯಂತ ರೂಪುಗೊಳ್ಳಬೇಕಾದ ಅನಿವಾರ್ಯತೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಕಾಡಿಸಿಕೊಳ್ಳಬೇಕಿದೆ. ದೇಶವೊಂದು ಇನ್ನೊಂದು ರಾಷ್ಟ್ರದ ಕುರಿತು ಸಿಟ್ಟಿಗೇಳುವಿಕೆ ಜಾಗತಿಕ ಮಟ್ಟದ ಸಂಘರ್ಷವನ್ನು ಸಂಕೇತಿಸಿದರೆ, ಜನರ ನಡುವೆಯೇ ನಡೆಯುವ ಜಗಳಗಳು ಆಂತರಿಕ ವ್ಯಗ್ರತೆಗೆ ಸಾಕ್ಷಿಯಾಗುತ್ತವೆ. ವಿವಿಧ ಸ್ತರಗಳಲ್ಲಿ ವ್ಯಗ್ರತೆಯು ವ್ಯಕ್ತಿಯೊಳಗೆ ಮೇಳೈಸಿಕೊಳ್ಳುತ್ತದೆ. ಅದು ವಿವಿಧ ವರ್ತನೆಗಳಲ್ಲಿ ವ್ಯಕ್ತವಾಗುತ್ತದೆ. ಆ ವರ್ತನೆಗಳು ಉಂಟುಮಾಡುವ ಪರಿಣಾಮಗಳು ವ್ಯಕ್ತಿಗತ ಹಾಗೂ ಸಾಮೂಹಿಕ ಸಂಘರ್ಷಗಳ ರೂಪದಲ್ಲಿ ಕಂಡುಬರುತ್ತವೆ. ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಅಧಿಕಾರ ಕೇಂದ್ರಗಳು ಈ ರೂಪಗಳನ್ನು ತಮ್ಮ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಳ್ಳುತ್ತವೆ. ದೇಶ, ಧರ್ಮ ಮತ್ತು ಜಾತಿಯ ಅಸ್ಮಿತೆಯ ಪ್ರಶ್ನೆಗಳನ್ನು ಮುನ್ನೆಲೆಗೆ ತಂದು ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ರಾಜಕಾರಣ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲ್ಪಡುತ್ತದೆ.

ಪ್ರಜಾಪ್ರಭುತ್ವವಾದಿ ಆಡಳಿತ ವಿನ್ಯಾಸಗೊಳಿಸಗೊಳಿಸಿಕೊಂಡಿರುವ ಅಭಿವೃದ್ಧಿ ಮತ್ತು ಅದಕ್ಕೆ ಸಂಬಂಧಿಸಿದ ಪರಿಕಲ್ಪನೆಗಳು ಅಂಥ ರಾಜಕಾರಣಕ್ಕೆ ಪೂರಕವಾಗಿರುವಂತೆಯೇ ಪಾತ್ರವನ್ನು ನಿರ್ವಹಿಸುತ್ತಿವೆ. ಟೊಳ್ಳುತನದ ಸಂಗತಿಗಳೊಂದಿಗೆ ಅಭಿವೃದ್ದಿಯನ್ನು ವ್ಯಾಖ್ಯಾನಿಸುವ ಪ್ರವೃತ್ತಿಯನ್ನು ಸಾರ್ವತ್ರಿಕಗೊಳಿಸುವ ಈ ಅಭಿವೃದ್ಧಿಯು ಅದಕ್ಕೆ ಸಹಕಾರಿಯಾಗಿರುತ್ತದೆ. ಪ್ರಶ್ನಿಸುವ ಬದಲಾಗಿ ಆ ಸಂಕುಚಿತ ರಾಜಕಾರಣವು ಅಧಿಕಾರ ಮತ್ತು ಪ್ರಭಾವವನ್ನು ಸ್ಥಿರವಾಗಿರಿಸಿಕೊಂಡು ಬಹುದೊಡ್ಡ ಸಾಮಾಜಿಕ ಪಲ್ಲಟದ ಸಾಧ್ಯತೆಗಳನ್ನು ಒಡೆಯುವುದರ ಕಡೆಗೆ ನಡೆದುಬಿಡುತ್ತದೆ. ಅಡ್ಡ ಎದುರಾಗುವವರನ್ನು ತಮ್ಮ ಪ್ರಭಾವೀ ಪ್ರಾಬಲ್ಯದ ಬಲದೊಂದಿಗೆ ಹತ್ತಿಕ್ಕಿಬಿಡುತ್ತದೆ. ಅಧಿಕಾರ ಕೇಂದ್ರಗಳ ಮೂಲಕ ದಾಟಿಕೊಂಡ ಶಿಕ್ಷಣವು ವ್ಯಕ್ತಿಗತ ಪ್ರಯೋಜನವಾದಿ ಯೋಚನೆಗಳನ್ನೇ ಬಿತ್ತುವುದರ ಕಡೆಗೆ ಆಸಕ್ತಿ ವಹಿಸುವುದರಿಂದ ಶಿಕ್ಷಿತ-ಸುಶಿಕ್ಷಿತ ವಲಯವೂ ಅನಕ್ಷರಸ್ತ ಸಮುದಾಯಗಳಲ್ಲಿರುವ ಮೌಢ್ಯವನ್ನೇ ಅಂತರ್ಗತ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ಅದನ್ನು ಜನರೊಳಗೂ ವ್ಯಾಪಕವಾಗಿಸಲು ಪ್ರಯತ್ನಿಸುತ್ತದೆ. ಹೀಗಾದಾಗ ಹೊಸ ಪೀಳಿಗೆಯು ಅದರ ರಹಸ್ಯ ಕಾರ್ಯಸೂಚಿಯ ಭಾಗವಾಗಿರುವ ಅಪಮೌಲ್ಯೀಕೃತ ಅಂಶಗಳು ರೂಪಿಸುವ ಚೌಕಟ್ಟುಗಳಲ್ಲಿ ಬಂಧಿಯಾಗಿ ಯೋಚಿಸಲಾರಂಭಿಸುತ್ತದೆ.

ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳು

ಈ ಹಂತದಲ್ಲಿಯೇ ಸಂಘರ್ಷದ ಪರ ನಿಲ್ಲುವ ದೃಷ್ಟಿಕೋನಗಳನ್ನೇ ಮುಖ್ಯವಾಗಿಸಿಕೊಳ್ಳುತ್ತದೆ. ಅಹಿಂಸೆಯ ಮೌಲ್ಯದ ಸಕಾರಾತ್ಮಕತೆಯು ಹಿಂಸೆಯ ಪರವಾದ ವಿತಂಡವಾದಿ ಆಲೋಚನೆಗಳ ಭರಾಟೆಯಲ್ಲಿ ಹಿನ್ನೆಲೆಗೆ ಸರಿಯುತ್ತದೆ. ಇಂಥ ಸಂದರ್ಭದಲ್ಲಿ ಅಹಿಂಸಾತ್ಮಕ ಮನೋಧರ್ಮವನ್ನು ಮುನ್ನೆಲೆಗೆ ತಂದು ಅಧಿಕೃತಗೊಳಿಸುವ ಅಪ್ಪಟ ಪ್ರಯೋಗಶೀಲ ರಾಜಕಾರಣ ಮೊಳಕೆಯೊಡೆಯಬೇಕು. ಹಾಗಾಗುತ್ತಿಲ್ಲ. ಹಾಗಾಗುವುದಕ್ಕೆ ಸಾಮಾಜಿಕ, ರಾಜಕೀಯ, ಧಾರ್ಮಿಕ ಕೇಂದ್ರಗಳ ಮುಂಚೂಣಿ ಮುಖಂಡತ್ವ ಬಿಡುತ್ತಿಲ್ಲ. ತಾವು ಸಮಸ್ಯೆ ಎಂದು ಪರಿಭಾವಿಸಿಕೊಂಡಿರುವ ಜಟಿಲತೆಗೆ ಪ್ರಾಮಾಣಿಕವಾಗಿ ಪರಿಹಾರ ಹುಡುಕಿಕೊಳ್ಳುವ ಪ್ರಯತ್ನಗಳನ್ನೂ ನಡೆಸುತ್ತಿಲ್ಲ. ಅಂಥ ಪ್ರಾಮಾಣಿಕ ಹೆಜ್ಜೆಗಳು ಅಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸುವ ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳನ್ನು ಹೊಳೆಸುತ್ತವೆ. ಇದರ ಬದಲಾಗಿ ಮತ್ತೆ ಜಾತಿನಿಷ್ಠ ಮಿತಿಗಳನ್ನು ವಿಸ್ತರಿಸುವ, ಧರ್ಮದೊಳಗೆ ಇಲ್ಲದೇ ಇರುವ ಸಂಗತಿಗಳನ್ನು ಇತಿಹಾಸದೊಂದಿಗೆ ತಳುಕುಹಾಕುವ ಮತ್ತು ಅಂಥ ಸಂಕುಚಿತ ಪಠ್ಯಗಳ ಆಧಾರದಲ್ಲಿಯೇ ಅಧಿಕಾರ ರಾಜಕಾರಣವನ್ನು ಬದುಕಿಸಿಬಿಡುವ ಹುನ್ನಾರಗಳನ್ನು ಹೊಳೆಸಿಕೊಳ್ಳುವುದರ ಕಡೆಗೇ ಅತ್ಯುತ್ಸಾಹ ವ್ಯಕ್ತವಾಗುತ್ತಿದೆ. ಒಳ್ಳೆಯದನ್ನು ಹೇಳಿದರೆ ಸುಲಭಕ್ಕೆ ಒಪ್ಪಿಕೊಳ್ಳದ ಹಠಮಾರಿತನ ಅದರದ್ದು. ಗಾಂಧಿ ಜೀವಂತಗೊಳಿಸಿದ ಅಹಿಂಸೆಯ ಮಾದರಿಯ ಬಗ್ಗೆ ಪ್ರಸ್ತಾಪಿಸಿದರೆ ಅದು ದಿಢೀರನೆ ಅವಿವೇಕತನದ ಅತಿರೇಕವನ್ನು ಪ್ರದರ್ಶಿಸಿಬಿಡುತ್ತದೆ. ‘ಗಾಂಧಿ ಏನಿದ್ದರೂ ಆ ಕಾಲಕ್ಕೆ, ಈಗಲ್ಲ’ ಎಂದು ಉಡಾಫೆಯ ಮನೋಭಾವವನ್ನು ತೂರಿಬಿಡುತ್ತದೆ.
ಗಾಂಧಿಯ ವ್ಯಕ್ತಿತ್ವದೊಂದಿಗೇ ಬೆರೆತುಹೋಗಿದ್ದ ಅಹಿಂಸೆಯ ಮೌಲ್ಯವು ವರ್ತಮಾನದಲ್ಲಷ್ಟೇ ಅಲ್ಲ, ಭವಿಷ್ಯದ ಜಗತ್ತಿನ ಎಲ್ಲ ಬಗೆಯ ಸಂಘರ್ಷಗಳನ್ನು ಕೊನೆಗಾಣಿಸುವ ಪ್ರಾಕೃತಿಕ ದಿವ್ಯೌಷಧ ಎಂಬುದನ್ನು ಮನಗಾಣಲೇಬೇಕು. ಗಾಂಧಿಯನ್ನು ಅರ್ಥೈಸಿಕೊಳ್ಳದ ಮನಸ್ಸುಗಳು ಈ ಕ್ಷಣಕ್ಕೆ ತಮ್ಮ ಮೂಗಿನ ನೇರಕ್ಕೆ ತೀರ್ಮಾನವನ್ನು ಕೈಗೊಂಡುಬಿಡುತ್ತವೆ. ಸಂಪೂರ್ಣ ತಿಳುವಳಿಕೆ ಇಲ್ಲದೇ ರೂಪುಗೊಳ್ಳುವ ಅಂಥ ವ್ಯಕ್ತಿಗತ ನಿಲುವುಗಳು ಸಮೂಹಕ್ಕೂ ದಾಟಿಕೊಳ್ಳುತ್ತವೆ. ಗಾಂಧಿ ಮತ್ತು ಅವರು ಪ್ರತಿಪಾದಿಸಿದ ಅಹಿಂಸಾವಾದ ಅಪ್ರಸ್ತುತ ಎಂದು ಹೇಳುವ ಕಾಲಕ್ಕೆ ಅಹಿಂಸೆಯ ತಾತ್ವಿಕತೆಯೊಂದಿಗಿನ ಗಾಂಧಿ ವ್ಯಕ್ತಿತ್ವವನ್ನು ಸಮಗ್ರವಾಗಿ ತಿಳಿದುಕೊಳ್ಳುವ ಪ್ರಯತ್ನಗಳನ್ನೇ ನಡೆಸುವುದಿಲ್ಲ. ಆ ತಾತ್ವಿಕ ಆದರ್ಶವನ್ನು ವರ್ತಮಾನದ ಸ್ಥಿತಿಗತಿಗಳಿಗೆ ತಕ್ಕಂತೆ ಅನ್ವಯಿಸಿಕೊಳ್ಳುವ ನಮ್ಯತೆಯ ಹೆಜ್ಜೆಗಳನ್ನೇ ಅನುಸರಿಸದೇ ಸಾರಾಸಗಟಾಗಿ ತಿರಸ್ಕಾರದ ಭಾವನೆಗಳು ನೆಲೆಗೊಂಡರೆ ಪ್ರಯೋಜನವಿಲ್ಲ.

ಅಹಿಂಸೆ : ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆ..?

ಈಗಿನ ರಾಜಕೀಯ ಹೇಳಿಕೆಗಳು ಇಂಥ ತಿರಸ್ಕಾರದ ಭಾವನೆಗಳ ಆಧಾರದಲ್ಲಿಯೇ ರೂಪುಗೊಳ್ಳುತ್ತಿವೆ. ಅವುಗಳು ಜನರ ಅಭಿಪ್ರಾಯಗಳನ್ನೂ ನಿಯಂತ್ರಿಸುತ್ತಿವೆ. ಗಾಂಧಿ ಮತ್ತು ಅಹಿಂಸಾ ತಾತ್ವಿಕತೆಯ ಬಗ್ಗೆ ಹೊಸ ಪೀಳಿಗೆಯು ಅರ್ಧಂಬರ್ಧ ತಿಳಿದುಕೊಂಡ ಸಂದರ್ಭದಲ್ಲಿ ಪ್ರಬಲ ಕೇಂದ್ರಗಳು ಹಿಂಸೆಯೊಂದಿಗಿನ ಕಾರ್ಯತಂತ್ರಗಳನ್ನು ಪ್ರಯೋಗಿಸಿ ಯಶಸ್ಸು ಕಂಡುಕೊಳ್ಳುತ್ತವೆ. ಈ ಕಾರ್ಯತಂತ್ರಗಳನ್ನು ಅಧಿಕಾರ ಕೇಂದ್ರಗಳು ಸಂಘಟನೆಗಳ ನೆರವಿನೊಂದಿಗೆ ಪ್ರಯೋಗಿಸುತ್ತವೆ. ಈಗಾಗಲೇ ಆಗಿಹೋದ ಇತಿಹಾಸ, ಗಾಂಧಿಯೂ ಸೇರಿದಂತೆ ವಿವಿಧ ದಾರ್ಶನಿಕರ ಕುರಿತಾದ ಸಮಗ್ರ ವಿವರಗಳು ಮತ್ತು ತಾತ್ವಿಕತೆಯ ಶಕ್ತಿಯ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿರದ ಜನಸಮೂಹದ ಅಜ್ಞಾನವನ್ನು ತಮ್ಮ ರಹಸ್ಯ ಕಾರ್ಯಸೂಚಿಗಳ ಯಶಸ್ವಿಗೆ ಪೂರಕವಾಗಿ ಬಳಸಿಕೊಳ್ಳುತ್ತವೆ. ಇಂದು ಬಹುತೇಕ ಯುವಕರು ಹಿಂಸೆ ಮತ್ತು ಅಹಿಂಸೆಯನ್ನು ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆಯಲ್ಲಿ ಚರ್ಚೆಗೊಳಪಡಿಸುತ್ತಿದ್ದಾರೆ. ಇದರರ್ಥ ಐವತ್ತು ಪರ್ಸೆಂಟ್ ಹಿಂಸೆ, ಐವತ್ತು ಪರ್ಸೆಂಟ್ ಅಹಿಂಸೆ ಇರಬೇಕು, ಅಂದಾಗಲೇ ಬ್ಯಾಲೆನ್ಸ್ ಆಗುತ್ತದೆ ಎಂಬ ಸಂಕುಚಿತತೆಯ ವಾದಗಳನ್ನು ಮುಂದಿಡುತ್ತಿದ್ದಾರೆ. ಹಿಂಸಿಸುವ ಪ್ರಾಬಲ್ಯ ನಮ್ಮ ಜೊತೆಗಿದ್ದರೆ ಉಳಿದವರು ಭಯಪಡುತ್ತಾರೆ ಎಂದು ಹಿರಿಯರ ಮುಂದೆ ಅಪ್ರಬುದ್ಧ ಮಾತುಗಳನ್ನಾಡುತ್ತಿದ್ದಾರೆ. ಅವರೊಂದಿಗೆ ಚರ್ಚಿಸುವ ಉತ್ಸಾಹದಲ್ಲಿ ಗಾಂಧಿ ವ್ಯಕ್ತಿತ್ವ, ಅವರು ಪ್ರತಿಪಾದಿಸಿದ ಅಹಿಂಸಾ ಮೌಲ್ಯ, ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಅದು ನಿರ್ವಹಿಸಿದ ಮೌಲಿಕ ಪಾತ್ರ, ವರ್ತಮಾನದಲ್ಲಿ ಅದು ಅನ್ವಯಗೊಳ್ಳಬೇಕಾದ ಅವಶ್ಯಕತೆಗಳ ಬಗ್ಗೆ ಮಾತನಾಡಿದರೆ ಆ ಅಂಶಗಳನ್ನು ಆ ಕ್ಷಣಕ್ಕೆ ಸಂಕುಚಿತವಾಗಿ ಅರ್ಥೈಸಿಕೊಂಡು ಅಪ್ರಸ್ತುತವೆನ್ನಿಸುವ, ಅವಿವೇಕತನದ ವಾದವನ್ನು ಮುಂದಿಡುತ್ತಿದ್ದಾರೆ. ಮುಖ್ಯವಾಹಿನಿಯ ಮಾಧ್ಯಮಗಳ ಒಳಗೂ ಇಂಥ ವಾದಗಳನ್ನು ನೆಚ್ಚಿಕೊಂಡವರು ಇರುವುದರಿಂದ ಗಾಂಧಿ ಕುರಿತಾದ ಸಮಗ್ರ ಅರ್ಥೈಸಿಕೊಳ್ಳುವಿಕೆಯ ಜವಾಬ್ದಾರಿಯುತ ನಡೆಗಳು ಹಿನ್ನಡೆ ಅನುಭವಿಸುವಂಥ ಸ್ಥಿತಿ ನಿರ್ಮಾಣವಾಗಿದೆ.

ಅಹಿಂಸೆಯ ಸಾರ್ವಕಾಲಿಕತೆಯ ನಿದರ್ಶನಗಳು

ಇತಿಹಾಸದ ಪುಟಗಳಲ್ಲಿ ಅಹಿಂಸೆಯ ಸಾರ್ವಕಾಲಿಕತೆಯ ಶ್ರೇಷ್ಠ ನಿದರ್ಶನಗಳು ದಾಖಲಾಗಿವೆ. ಅವುಗಳು ವರ್ತಮಾನದ ಪೀಳಿಗೆಯ ಪ್ರಜ್ಞೆಯ ಅಂತಸತ್ವವನ್ನು ಮತ್ತಷ್ಟು ಪ್ರಖರಗೊಳಿಸುವ ರೀತಿಯಲ್ಲಿ ಮೇಳೈಸಿಕೊಳ್ಳಬೇಕು. ಆದರೆ, ಮೌಲಿಕ ಆದರ್ಶ ಹೆಜ್ಜೆಗಳು ಮತ್ತು ಅವುಗಳೊಂದಿಗಿನ ಇತಿಹಾಸದ ಅರಿವು ತಂದುಕೊಳ್ಳುವ ಯಾವುದೇ ಪ್ರಯತ್ನಗಳಲ್ಲಿ ತೊಡಗಿಕೊಳ್ಳದೇ ಅಗ್ರೆಸ್ಸಿವ್ ನಡವಳಿಕೆಗಳನ್ನೇ ಬಂಡವಾಳವಾಗಿಸಿಕೊಳ್ಳುತ್ತಿರುವ ಯುವ ಸಮೂಹವು ಪ್ರಬಲ ಶಕ್ತಿಗಳು ಸಾಕಿಕೊಳ್ಳುವ ರಾಜಕೀಯ ಪಕ್ಷಗಳ
ಕಾರ್ಯಕರ್ತರಾಗುವುದಕ್ಕಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದೆ. ಹಿಂದಿನದ್ದನ್ನು ಅರಿತುಕೊಳ್ಳುವ ಸಂಯಮ, ಯಾರು ಯಾರನ್ನು ದಾರಿ ತಪ್ಪಿಸಿ ತಮ್ಮ ಶಕ್ತಿ ಸಂಪನ್ಮೂಲವನ್ನು ಯಾವ ಬಗೆಯ ಸಂಘರ್ಷಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಕುರಿತಾದ ಸ್ಪಷ್ಟ ತಿಳುವಳಿಕೆ, ಆ ಮೂಲಕ ಅಹಿಂಸೆಯೊಂದಿಗಿನ ಗಾಂಧಿವಾದವನ್ನು ಮುನ್ನೆಲೆಗೆ ತರುವಂಥ ಆದರ್ಶಯುತ ಹೆಜ್ಜೆಗಳೊಂದಿಗೆ ಗುರುತಿಸಿಕೊಳ್ಳಬಹುದಾದ ಅವಕಾಶವನ್ನೇ ಬಿಟ್ಟುಕೊಟ್ಟಿದೆ. ಈ ಕಾರಣಕ್ಕಾಗಿಯೇ ಯಾವುದು ಸರಿ, ಯಾವುದು ತಪ್ಪು ಎಂಬ ವಿವೇಚನೆಯ ಬದಲು ಅಧಿಕಾರ ಸಂರಚನೆಯ ಕೇಂದ್ರಗಳನ್ನು ಬಲಪಡಿಸಿ ತಮ್ಮ ತಾತ್ಪೂರ್ತಿಕ ಆಸೆಗಳನ್ನು ಅವರು ಈಡೇರಿಸಿಕೊಳ್ಳುತ್ತಿದ್ದಾರೆ. ಬೈಕ್ ಕೊಳ್ಳಬೇಕು, ಕಾರ್ ಜೊತೆಗಿರಿಸಿಕೊಂಡು ಪ್ರತಿಷ್ಠೆ ಮೆರೆಯಬೇಕು, ಸುಸಜ್ಜಿತ ಮನೆ ಹೊಂದಬೇಕು, ಐಷಾರಾಮಿ ಬದುಕು ತಮ್ಮದಾಗಿಸಿಕೊಳ್ಳಬೇಕು – ಇಂಥವೇ ತಾತ್ಪೂರ್ತಿಕ ಆಸೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ಕಾರ್ಯಕರ್ತರಿಗೆ ಹಂತಹಂತವಾಗಿ ರಾಜಕೀಯ ಪಕ್ಷಗಳು ನೆರವಾಗುತ್ತವೆ. ಅಧಿಕಾರದ ಗಮ್ಯ ತಲುಪಿಕೊಳ್ಳಲು ಇವು ಸಂಘರ್ಷ ಸೃಷ್ಟಿಗೆ ಇಂಥ ಯುವ ಸಮೂಹವನ್ನೇ ಬಳಸಿಕೊಳ್ಳುತ್ತವೆ. ಆಗ ಹಿಂಸೆಯೇ ವ್ಯಾಪಕವಾಗುತ್ತದೆ. ಅಹಿಂಸೆಯ ತಾರ್ಕಿಕವಾದವನ್ನೇ ಅಲ್ಲಗಳೆಯುವಂಥ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತದೆ.

ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳು

ನಾವು ಎಷ್ಟೇ ಕೃತಿಗಳನ್ನು ಓದಿಕೊಂಡರೂ, ತಜ್ಞರ ಬರಹಗಳನ್ನು ಗೊತ್ತುಮಾಡಿಕೊಂಡರೂ ಗಾಂಧೀಜಿಯವರ ಅಹಿಂಸೆಯ ತಾತ್ವಿಕ ದಾರ್ಶನಿಕ ನದಿಯ ಜೀವಜಲದ ಬೊಗಸೆಯಷ್ಟು ಹನಿಗಳನ್ನಷ್ಟೇ ದಕ್ಕಿಸಿಕೊಂಡಿರುತ್ತೇವೆ. ಅದರ ಜೀವಂತಿಕೆಯ ಸಮಗ್ರ ಅಮೃತಧಾರೆಯನ್ನು ನಮ್ಮೊಳಗಿಳಿಸಿಕೊಳ್ಳುವ ನಿರಂತರ ಪ್ರಯತ್ನಗಳ ಮೂಲಕವೇ ಆ ತಾತ್ವಿಕತೆಯ ಹೊಳೆಯು ಮನುಷ್ಯಸಮೂಹದೊಳಗೆ ನೆಲೆಗೊಳ್ಳುತ್ತಾ ತನ್ನ ನಡಿಗೆಯನ್ನು ಮೂಡಿಸುತ್ತಾ ಸಾಗುತ್ತದೆ. ಅದು ಸಾಗಿದಲ್ಲೆಲ್ಲಾ ಮನುಷ್ಯತ್ವ ಮತ್ತು ಜೀವಪರ ನಿಲುವುಗಳ ಫಲವತ್ತತೆಯು ವ್ಯಾಪಕವಾಗುತ್ತಿರುತ್ತದೆ. ಆದರೆ, ಇಂಥ ತಾತ್ವಿಕ ನದಿಯ ಹರಿವನ್ನು ಅರ್ಧಕ್ಕೆ ತಡೆಗಟ್ಟಿ ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳನ್ನು ಕಟ್ಟಲಾಗುತ್ತಿದೆ. ಈ ಅಣೆಕಟ್ಟುಗಳೇ ಸುಖ, ಶಾಂತಿ, ನೆಮ್ಮದಿಯೊಂದಿಗಿನ ಅಭ್ಯುದಯದ ಬೆಳೆ ಬೆಳೆಯುವುದಕ್ಕೆ ಸಹಕಾರಿಯಾಗುತ್ತವೆ ಎಂಬ ತಪ್ಪುಕಲ್ಪನೆಯನ್ನೇ ಬಿತ್ತಿ ನಂಬಿಸಲಾಗುತ್ತಿದೆ. ಇಂಥ ಸಂಕೀರ್ಣತೆಯ ಮಧ್ಯೆ ಅಹಿಂಸೆಯ ಜೀವನದಿ ಬತ್ತದಂತೆ, ಅದು ಕಾಲದಿಂದ ಕಾಲಕ್ಕೆ ಅತ್ಯಂತ ಎಚ್ಚರದೊಂದಿಗೆ ದಾಟಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವ ಹೊಸದೊಂದು ಪರ್ಯಾಯ ರಾಜಕಾರಣದ ಮಾದರಿ ರೂಪುಗೊಳ್ಳಬೇಕಾಗಿದೆ. ಅದಕ್ಕಿಂತ ಮುಂಚೆ ಅಹಿಂಸೆಯ ತಾತ್ವಿಕ ನದಿಯ ಹರಿವು ನಿಲ್ಲಿಸುತ್ತಿರುವ ಶಕ್ತಿಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಾಗಿದೆ. ಆ ಶಕ್ತಿಗಳು ಈ ನದಿಯನ್ನು ಬತ್ತಿಸುವ ಪ್ರಯತ್ನದಲ್ಲಿ ತೊಡಗಿವೆ. ಅದರ ಚಲನೆಯ ಹರಿವಿನೊಳಗೆ ರಕ್ತಪಾತ ನಡೆಸಿ ಭಯ ಹುಟ್ಟಿಸಿ ತಾವು ಪ್ರಬಲರಾಗುವ ಸ್ವಹಿತಾಸಕ್ತಿಗಳನ್ನು ಕಾಯ್ದುಕೊಳ್ಳುತ್ತಿವೆ. ಜನರನ್ನು ಮರಳು ಮಾಡುವ ಮರಳುಗಾರಿಕೆಯನ್ನು ಇದೇ ಆವರಣದಲ್ಲಿಯೇ ಅತ್ಯಂತ ಚಾಣಾಕ್ಷತನದಿಂದ ನಿರ್ವಹಿಸುತ್ತಿವೆ. ಇದಕ್ಕೆ ಪರ್ಯಾಯವಾಗಿ ಅಪ್ಪಟ ಸಾತ್ವಿಕತೆಯೊಂದಿಗಿನ ರಾಜಕಾರಣ ರೂಪುಗೊಳ್ಳಬೇಕು. ಅಹಿಂಸೆಯು ಸಾರ್ವಕಾಲಿಕ ಸತ್ಯ. ಹಾಗಾಗಿಯೇ ಎಲ್ಲ ಕಾಲದ ಕೊಳಕುಗಳೊಂದಿಗೆ ಎದುರುಗೊಳ್ಳುತ್ತಲೇ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುತ್ತದೆ. ಅದು ಎಂದಿಗೂ ಬತ್ತದ ನದಿಯ ನಿನಾದದ ಹಾಗೆ. ಪ್ರಾಕೃತಿಕ ವಿಕೋಪಗಳಾದಾಗ ಅದರ ನಡಿಗೆಗೆ ಅಡ್ಡಿ-ಆತಂಕಗಳು ಎದುರಾಗುವ ಹಾಗೆ ಇದೀಗ ಪ್ರಬಲ ಶಕ್ತಿಗಳ ಉದ್ದೇಶಪೂರ್ವಕ ನಕಾರಾತ್ಮಕತೆಯ ಕಾರಣಕ್ಕಾಗಿ ಹಿಂಸೆಯೇ ಸರಿಯಾದದ್ದು ಎಂಬ ಸಂಕುಚಿತ ಅಭಿಪ್ರಾಯ ಮುನ್ನೆಲೆಗೆ ಬಂದಿದೆ. ಇದನ್ನು ಅಲ್ಲಗಳೆದು ಅಹಿಂಸೆಯೇ ನಿರ್ಣಾಯಕ, ಅದರ ಆಧಾರದಲ್ಲಿಯೇ ನವಭಾರತದ ನಿರ್ಮಾಣ ಎಂಬ ದೃಢಸಂಕಲ್ಪದೊಂದಿಗಿನ ಸನ್ಮತಿಯ ರಾಜಕಾರಣ ಶುರುವಾಗಬೇಕಿದೆ. ಅಹಿಂಸೆಯ ನಿನಾದದ ಮಾಧುರ್ಯದ ಮಾದರಿ ಜಗತ್ತನ್ನು ಸ್ವಚ್ಛಗೊಳಿಸಬೇಕಿದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending