Connect with us

ರಾಜಕೀಯ

ಅಹಿಂಸೆ : ಎಂದಿಗೂ ಬತ್ತದ ನದಿಯ ನಿನಾದ

Published

on

ಸಂಘರ್ಷವನ್ನು ಸ್ಥಾಯಿಯಾಗಿಸಿ ಪ್ರಯೋಜನ ಪಡೆದುಕೊಳ್ಳುವ ಪ್ರಯತ್ನಗಳು ನಿರಂತರವಾಗಿ ಯಶಸ್ಸು ಕಾಣುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಹಿಂಸೆಯ ಮೌಲ್ಯದ ಆಧಾರದಲ್ಲಿ ಪರ್ಯಾಯ ರಾಜಕಾರಣ ರಾಷ್ಟ್ರದಾದ್ಯಂತ ರೂಪುಗೊಳ್ಳಬೇಕಾದ ಅನಿವಾರ್ಯತೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಕಾಡಿಸಿಕೊಳ್ಳಬೇಕಿದೆ. ದೇಶವೊಂದು ಇನ್ನೊಂದು ರಾಷ್ಟ್ರದ ಕುರಿತು ಸಿಟ್ಟಿಗೇಳುವಿಕೆ ಜಾಗತಿಕ ಮಟ್ಟದ ಸಂಘರ್ಷವನ್ನು ಸಂಕೇತಿಸಿದರೆ, ಜನರ ನಡುವೆಯೇ ನಡೆಯುವ ಜಗಳಗಳು ಆಂತರಿಕ ವ್ಯಗ್ರತೆಗೆ ಸಾಕ್ಷಿಯಾಗುತ್ತವೆ. ವಿವಿಧ ಸ್ತರಗಳಲ್ಲಿ ವ್ಯಗ್ರತೆಯು ವ್ಯಕ್ತಿಯೊಳಗೆ ಮೇಳೈಸಿಕೊಳ್ಳುತ್ತದೆ. ಅದು ವಿವಿಧ ವರ್ತನೆಗಳಲ್ಲಿ ವ್ಯಕ್ತವಾಗುತ್ತದೆ. ಆ ವರ್ತನೆಗಳು ಉಂಟುಮಾಡುವ ಪರಿಣಾಮಗಳು ವ್ಯಕ್ತಿಗತ ಹಾಗೂ ಸಾಮೂಹಿಕ ಸಂಘರ್ಷಗಳ ರೂಪದಲ್ಲಿ ಕಂಡುಬರುತ್ತವೆ. ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಅಧಿಕಾರ ಕೇಂದ್ರಗಳು ಈ ರೂಪಗಳನ್ನು ತಮ್ಮ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಳ್ಳುತ್ತವೆ. ದೇಶ, ಧರ್ಮ ಮತ್ತು ಜಾತಿಯ ಅಸ್ಮಿತೆಯ ಪ್ರಶ್ನೆಗಳನ್ನು ಮುನ್ನೆಲೆಗೆ ತಂದು ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ರಾಜಕಾರಣ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲ್ಪಡುತ್ತದೆ.

ಪ್ರಜಾಪ್ರಭುತ್ವವಾದಿ ಆಡಳಿತ ವಿನ್ಯಾಸಗೊಳಿಸಗೊಳಿಸಿಕೊಂಡಿರುವ ಅಭಿವೃದ್ಧಿ ಮತ್ತು ಅದಕ್ಕೆ ಸಂಬಂಧಿಸಿದ ಪರಿಕಲ್ಪನೆಗಳು ಅಂಥ ರಾಜಕಾರಣಕ್ಕೆ ಪೂರಕವಾಗಿರುವಂತೆಯೇ ಪಾತ್ರವನ್ನು ನಿರ್ವಹಿಸುತ್ತಿವೆ. ಟೊಳ್ಳುತನದ ಸಂಗತಿಗಳೊಂದಿಗೆ ಅಭಿವೃದ್ದಿಯನ್ನು ವ್ಯಾಖ್ಯಾನಿಸುವ ಪ್ರವೃತ್ತಿಯನ್ನು ಸಾರ್ವತ್ರಿಕಗೊಳಿಸುವ ಈ ಅಭಿವೃದ್ಧಿಯು ಅದಕ್ಕೆ ಸಹಕಾರಿಯಾಗಿರುತ್ತದೆ. ಪ್ರಶ್ನಿಸುವ ಬದಲಾಗಿ ಆ ಸಂಕುಚಿತ ರಾಜಕಾರಣವು ಅಧಿಕಾರ ಮತ್ತು ಪ್ರಭಾವವನ್ನು ಸ್ಥಿರವಾಗಿರಿಸಿಕೊಂಡು ಬಹುದೊಡ್ಡ ಸಾಮಾಜಿಕ ಪಲ್ಲಟದ ಸಾಧ್ಯತೆಗಳನ್ನು ಒಡೆಯುವುದರ ಕಡೆಗೆ ನಡೆದುಬಿಡುತ್ತದೆ. ಅಡ್ಡ ಎದುರಾಗುವವರನ್ನು ತಮ್ಮ ಪ್ರಭಾವೀ ಪ್ರಾಬಲ್ಯದ ಬಲದೊಂದಿಗೆ ಹತ್ತಿಕ್ಕಿಬಿಡುತ್ತದೆ. ಅಧಿಕಾರ ಕೇಂದ್ರಗಳ ಮೂಲಕ ದಾಟಿಕೊಂಡ ಶಿಕ್ಷಣವು ವ್ಯಕ್ತಿಗತ ಪ್ರಯೋಜನವಾದಿ ಯೋಚನೆಗಳನ್ನೇ ಬಿತ್ತುವುದರ ಕಡೆಗೆ ಆಸಕ್ತಿ ವಹಿಸುವುದರಿಂದ ಶಿಕ್ಷಿತ-ಸುಶಿಕ್ಷಿತ ವಲಯವೂ ಅನಕ್ಷರಸ್ತ ಸಮುದಾಯಗಳಲ್ಲಿರುವ ಮೌಢ್ಯವನ್ನೇ ಅಂತರ್ಗತ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ಅದನ್ನು ಜನರೊಳಗೂ ವ್ಯಾಪಕವಾಗಿಸಲು ಪ್ರಯತ್ನಿಸುತ್ತದೆ. ಹೀಗಾದಾಗ ಹೊಸ ಪೀಳಿಗೆಯು ಅದರ ರಹಸ್ಯ ಕಾರ್ಯಸೂಚಿಯ ಭಾಗವಾಗಿರುವ ಅಪಮೌಲ್ಯೀಕೃತ ಅಂಶಗಳು ರೂಪಿಸುವ ಚೌಕಟ್ಟುಗಳಲ್ಲಿ ಬಂಧಿಯಾಗಿ ಯೋಚಿಸಲಾರಂಭಿಸುತ್ತದೆ.

ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳು

ಈ ಹಂತದಲ್ಲಿಯೇ ಸಂಘರ್ಷದ ಪರ ನಿಲ್ಲುವ ದೃಷ್ಟಿಕೋನಗಳನ್ನೇ ಮುಖ್ಯವಾಗಿಸಿಕೊಳ್ಳುತ್ತದೆ. ಅಹಿಂಸೆಯ ಮೌಲ್ಯದ ಸಕಾರಾತ್ಮಕತೆಯು ಹಿಂಸೆಯ ಪರವಾದ ವಿತಂಡವಾದಿ ಆಲೋಚನೆಗಳ ಭರಾಟೆಯಲ್ಲಿ ಹಿನ್ನೆಲೆಗೆ ಸರಿಯುತ್ತದೆ. ಇಂಥ ಸಂದರ್ಭದಲ್ಲಿ ಅಹಿಂಸಾತ್ಮಕ ಮನೋಧರ್ಮವನ್ನು ಮುನ್ನೆಲೆಗೆ ತಂದು ಅಧಿಕೃತಗೊಳಿಸುವ ಅಪ್ಪಟ ಪ್ರಯೋಗಶೀಲ ರಾಜಕಾರಣ ಮೊಳಕೆಯೊಡೆಯಬೇಕು. ಹಾಗಾಗುತ್ತಿಲ್ಲ. ಹಾಗಾಗುವುದಕ್ಕೆ ಸಾಮಾಜಿಕ, ರಾಜಕೀಯ, ಧಾರ್ಮಿಕ ಕೇಂದ್ರಗಳ ಮುಂಚೂಣಿ ಮುಖಂಡತ್ವ ಬಿಡುತ್ತಿಲ್ಲ. ತಾವು ಸಮಸ್ಯೆ ಎಂದು ಪರಿಭಾವಿಸಿಕೊಂಡಿರುವ ಜಟಿಲತೆಗೆ ಪ್ರಾಮಾಣಿಕವಾಗಿ ಪರಿಹಾರ ಹುಡುಕಿಕೊಳ್ಳುವ ಪ್ರಯತ್ನಗಳನ್ನೂ ನಡೆಸುತ್ತಿಲ್ಲ. ಅಂಥ ಪ್ರಾಮಾಣಿಕ ಹೆಜ್ಜೆಗಳು ಅಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸುವ ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳನ್ನು ಹೊಳೆಸುತ್ತವೆ. ಇದರ ಬದಲಾಗಿ ಮತ್ತೆ ಜಾತಿನಿಷ್ಠ ಮಿತಿಗಳನ್ನು ವಿಸ್ತರಿಸುವ, ಧರ್ಮದೊಳಗೆ ಇಲ್ಲದೇ ಇರುವ ಸಂಗತಿಗಳನ್ನು ಇತಿಹಾಸದೊಂದಿಗೆ ತಳುಕುಹಾಕುವ ಮತ್ತು ಅಂಥ ಸಂಕುಚಿತ ಪಠ್ಯಗಳ ಆಧಾರದಲ್ಲಿಯೇ ಅಧಿಕಾರ ರಾಜಕಾರಣವನ್ನು ಬದುಕಿಸಿಬಿಡುವ ಹುನ್ನಾರಗಳನ್ನು ಹೊಳೆಸಿಕೊಳ್ಳುವುದರ ಕಡೆಗೇ ಅತ್ಯುತ್ಸಾಹ ವ್ಯಕ್ತವಾಗುತ್ತಿದೆ. ಒಳ್ಳೆಯದನ್ನು ಹೇಳಿದರೆ ಸುಲಭಕ್ಕೆ ಒಪ್ಪಿಕೊಳ್ಳದ ಹಠಮಾರಿತನ ಅದರದ್ದು. ಗಾಂಧಿ ಜೀವಂತಗೊಳಿಸಿದ ಅಹಿಂಸೆಯ ಮಾದರಿಯ ಬಗ್ಗೆ ಪ್ರಸ್ತಾಪಿಸಿದರೆ ಅದು ದಿಢೀರನೆ ಅವಿವೇಕತನದ ಅತಿರೇಕವನ್ನು ಪ್ರದರ್ಶಿಸಿಬಿಡುತ್ತದೆ. ‘ಗಾಂಧಿ ಏನಿದ್ದರೂ ಆ ಕಾಲಕ್ಕೆ, ಈಗಲ್ಲ’ ಎಂದು ಉಡಾಫೆಯ ಮನೋಭಾವವನ್ನು ತೂರಿಬಿಡುತ್ತದೆ.
ಗಾಂಧಿಯ ವ್ಯಕ್ತಿತ್ವದೊಂದಿಗೇ ಬೆರೆತುಹೋಗಿದ್ದ ಅಹಿಂಸೆಯ ಮೌಲ್ಯವು ವರ್ತಮಾನದಲ್ಲಷ್ಟೇ ಅಲ್ಲ, ಭವಿಷ್ಯದ ಜಗತ್ತಿನ ಎಲ್ಲ ಬಗೆಯ ಸಂಘರ್ಷಗಳನ್ನು ಕೊನೆಗಾಣಿಸುವ ಪ್ರಾಕೃತಿಕ ದಿವ್ಯೌಷಧ ಎಂಬುದನ್ನು ಮನಗಾಣಲೇಬೇಕು. ಗಾಂಧಿಯನ್ನು ಅರ್ಥೈಸಿಕೊಳ್ಳದ ಮನಸ್ಸುಗಳು ಈ ಕ್ಷಣಕ್ಕೆ ತಮ್ಮ ಮೂಗಿನ ನೇರಕ್ಕೆ ತೀರ್ಮಾನವನ್ನು ಕೈಗೊಂಡುಬಿಡುತ್ತವೆ. ಸಂಪೂರ್ಣ ತಿಳುವಳಿಕೆ ಇಲ್ಲದೇ ರೂಪುಗೊಳ್ಳುವ ಅಂಥ ವ್ಯಕ್ತಿಗತ ನಿಲುವುಗಳು ಸಮೂಹಕ್ಕೂ ದಾಟಿಕೊಳ್ಳುತ್ತವೆ. ಗಾಂಧಿ ಮತ್ತು ಅವರು ಪ್ರತಿಪಾದಿಸಿದ ಅಹಿಂಸಾವಾದ ಅಪ್ರಸ್ತುತ ಎಂದು ಹೇಳುವ ಕಾಲಕ್ಕೆ ಅಹಿಂಸೆಯ ತಾತ್ವಿಕತೆಯೊಂದಿಗಿನ ಗಾಂಧಿ ವ್ಯಕ್ತಿತ್ವವನ್ನು ಸಮಗ್ರವಾಗಿ ತಿಳಿದುಕೊಳ್ಳುವ ಪ್ರಯತ್ನಗಳನ್ನೇ ನಡೆಸುವುದಿಲ್ಲ. ಆ ತಾತ್ವಿಕ ಆದರ್ಶವನ್ನು ವರ್ತಮಾನದ ಸ್ಥಿತಿಗತಿಗಳಿಗೆ ತಕ್ಕಂತೆ ಅನ್ವಯಿಸಿಕೊಳ್ಳುವ ನಮ್ಯತೆಯ ಹೆಜ್ಜೆಗಳನ್ನೇ ಅನುಸರಿಸದೇ ಸಾರಾಸಗಟಾಗಿ ತಿರಸ್ಕಾರದ ಭಾವನೆಗಳು ನೆಲೆಗೊಂಡರೆ ಪ್ರಯೋಜನವಿಲ್ಲ.

ಅಹಿಂಸೆ : ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆ..?

ಈಗಿನ ರಾಜಕೀಯ ಹೇಳಿಕೆಗಳು ಇಂಥ ತಿರಸ್ಕಾರದ ಭಾವನೆಗಳ ಆಧಾರದಲ್ಲಿಯೇ ರೂಪುಗೊಳ್ಳುತ್ತಿವೆ. ಅವುಗಳು ಜನರ ಅಭಿಪ್ರಾಯಗಳನ್ನೂ ನಿಯಂತ್ರಿಸುತ್ತಿವೆ. ಗಾಂಧಿ ಮತ್ತು ಅಹಿಂಸಾ ತಾತ್ವಿಕತೆಯ ಬಗ್ಗೆ ಹೊಸ ಪೀಳಿಗೆಯು ಅರ್ಧಂಬರ್ಧ ತಿಳಿದುಕೊಂಡ ಸಂದರ್ಭದಲ್ಲಿ ಪ್ರಬಲ ಕೇಂದ್ರಗಳು ಹಿಂಸೆಯೊಂದಿಗಿನ ಕಾರ್ಯತಂತ್ರಗಳನ್ನು ಪ್ರಯೋಗಿಸಿ ಯಶಸ್ಸು ಕಂಡುಕೊಳ್ಳುತ್ತವೆ. ಈ ಕಾರ್ಯತಂತ್ರಗಳನ್ನು ಅಧಿಕಾರ ಕೇಂದ್ರಗಳು ಸಂಘಟನೆಗಳ ನೆರವಿನೊಂದಿಗೆ ಪ್ರಯೋಗಿಸುತ್ತವೆ. ಈಗಾಗಲೇ ಆಗಿಹೋದ ಇತಿಹಾಸ, ಗಾಂಧಿಯೂ ಸೇರಿದಂತೆ ವಿವಿಧ ದಾರ್ಶನಿಕರ ಕುರಿತಾದ ಸಮಗ್ರ ವಿವರಗಳು ಮತ್ತು ತಾತ್ವಿಕತೆಯ ಶಕ್ತಿಯ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿರದ ಜನಸಮೂಹದ ಅಜ್ಞಾನವನ್ನು ತಮ್ಮ ರಹಸ್ಯ ಕಾರ್ಯಸೂಚಿಗಳ ಯಶಸ್ವಿಗೆ ಪೂರಕವಾಗಿ ಬಳಸಿಕೊಳ್ಳುತ್ತವೆ. ಇಂದು ಬಹುತೇಕ ಯುವಕರು ಹಿಂಸೆ ಮತ್ತು ಅಹಿಂಸೆಯನ್ನು ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆಯಲ್ಲಿ ಚರ್ಚೆಗೊಳಪಡಿಸುತ್ತಿದ್ದಾರೆ. ಇದರರ್ಥ ಐವತ್ತು ಪರ್ಸೆಂಟ್ ಹಿಂಸೆ, ಐವತ್ತು ಪರ್ಸೆಂಟ್ ಅಹಿಂಸೆ ಇರಬೇಕು, ಅಂದಾಗಲೇ ಬ್ಯಾಲೆನ್ಸ್ ಆಗುತ್ತದೆ ಎಂಬ ಸಂಕುಚಿತತೆಯ ವಾದಗಳನ್ನು ಮುಂದಿಡುತ್ತಿದ್ದಾರೆ. ಹಿಂಸಿಸುವ ಪ್ರಾಬಲ್ಯ ನಮ್ಮ ಜೊತೆಗಿದ್ದರೆ ಉಳಿದವರು ಭಯಪಡುತ್ತಾರೆ ಎಂದು ಹಿರಿಯರ ಮುಂದೆ ಅಪ್ರಬುದ್ಧ ಮಾತುಗಳನ್ನಾಡುತ್ತಿದ್ದಾರೆ. ಅವರೊಂದಿಗೆ ಚರ್ಚಿಸುವ ಉತ್ಸಾಹದಲ್ಲಿ ಗಾಂಧಿ ವ್ಯಕ್ತಿತ್ವ, ಅವರು ಪ್ರತಿಪಾದಿಸಿದ ಅಹಿಂಸಾ ಮೌಲ್ಯ, ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಅದು ನಿರ್ವಹಿಸಿದ ಮೌಲಿಕ ಪಾತ್ರ, ವರ್ತಮಾನದಲ್ಲಿ ಅದು ಅನ್ವಯಗೊಳ್ಳಬೇಕಾದ ಅವಶ್ಯಕತೆಗಳ ಬಗ್ಗೆ ಮಾತನಾಡಿದರೆ ಆ ಅಂಶಗಳನ್ನು ಆ ಕ್ಷಣಕ್ಕೆ ಸಂಕುಚಿತವಾಗಿ ಅರ್ಥೈಸಿಕೊಂಡು ಅಪ್ರಸ್ತುತವೆನ್ನಿಸುವ, ಅವಿವೇಕತನದ ವಾದವನ್ನು ಮುಂದಿಡುತ್ತಿದ್ದಾರೆ. ಮುಖ್ಯವಾಹಿನಿಯ ಮಾಧ್ಯಮಗಳ ಒಳಗೂ ಇಂಥ ವಾದಗಳನ್ನು ನೆಚ್ಚಿಕೊಂಡವರು ಇರುವುದರಿಂದ ಗಾಂಧಿ ಕುರಿತಾದ ಸಮಗ್ರ ಅರ್ಥೈಸಿಕೊಳ್ಳುವಿಕೆಯ ಜವಾಬ್ದಾರಿಯುತ ನಡೆಗಳು ಹಿನ್ನಡೆ ಅನುಭವಿಸುವಂಥ ಸ್ಥಿತಿ ನಿರ್ಮಾಣವಾಗಿದೆ.

ಅಹಿಂಸೆಯ ಸಾರ್ವಕಾಲಿಕತೆಯ ನಿದರ್ಶನಗಳು

ಇತಿಹಾಸದ ಪುಟಗಳಲ್ಲಿ ಅಹಿಂಸೆಯ ಸಾರ್ವಕಾಲಿಕತೆಯ ಶ್ರೇಷ್ಠ ನಿದರ್ಶನಗಳು ದಾಖಲಾಗಿವೆ. ಅವುಗಳು ವರ್ತಮಾನದ ಪೀಳಿಗೆಯ ಪ್ರಜ್ಞೆಯ ಅಂತಸತ್ವವನ್ನು ಮತ್ತಷ್ಟು ಪ್ರಖರಗೊಳಿಸುವ ರೀತಿಯಲ್ಲಿ ಮೇಳೈಸಿಕೊಳ್ಳಬೇಕು. ಆದರೆ, ಮೌಲಿಕ ಆದರ್ಶ ಹೆಜ್ಜೆಗಳು ಮತ್ತು ಅವುಗಳೊಂದಿಗಿನ ಇತಿಹಾಸದ ಅರಿವು ತಂದುಕೊಳ್ಳುವ ಯಾವುದೇ ಪ್ರಯತ್ನಗಳಲ್ಲಿ ತೊಡಗಿಕೊಳ್ಳದೇ ಅಗ್ರೆಸ್ಸಿವ್ ನಡವಳಿಕೆಗಳನ್ನೇ ಬಂಡವಾಳವಾಗಿಸಿಕೊಳ್ಳುತ್ತಿರುವ ಯುವ ಸಮೂಹವು ಪ್ರಬಲ ಶಕ್ತಿಗಳು ಸಾಕಿಕೊಳ್ಳುವ ರಾಜಕೀಯ ಪಕ್ಷಗಳ
ಕಾರ್ಯಕರ್ತರಾಗುವುದಕ್ಕಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದೆ. ಹಿಂದಿನದ್ದನ್ನು ಅರಿತುಕೊಳ್ಳುವ ಸಂಯಮ, ಯಾರು ಯಾರನ್ನು ದಾರಿ ತಪ್ಪಿಸಿ ತಮ್ಮ ಶಕ್ತಿ ಸಂಪನ್ಮೂಲವನ್ನು ಯಾವ ಬಗೆಯ ಸಂಘರ್ಷಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಕುರಿತಾದ ಸ್ಪಷ್ಟ ತಿಳುವಳಿಕೆ, ಆ ಮೂಲಕ ಅಹಿಂಸೆಯೊಂದಿಗಿನ ಗಾಂಧಿವಾದವನ್ನು ಮುನ್ನೆಲೆಗೆ ತರುವಂಥ ಆದರ್ಶಯುತ ಹೆಜ್ಜೆಗಳೊಂದಿಗೆ ಗುರುತಿಸಿಕೊಳ್ಳಬಹುದಾದ ಅವಕಾಶವನ್ನೇ ಬಿಟ್ಟುಕೊಟ್ಟಿದೆ. ಈ ಕಾರಣಕ್ಕಾಗಿಯೇ ಯಾವುದು ಸರಿ, ಯಾವುದು ತಪ್ಪು ಎಂಬ ವಿವೇಚನೆಯ ಬದಲು ಅಧಿಕಾರ ಸಂರಚನೆಯ ಕೇಂದ್ರಗಳನ್ನು ಬಲಪಡಿಸಿ ತಮ್ಮ ತಾತ್ಪೂರ್ತಿಕ ಆಸೆಗಳನ್ನು ಅವರು ಈಡೇರಿಸಿಕೊಳ್ಳುತ್ತಿದ್ದಾರೆ. ಬೈಕ್ ಕೊಳ್ಳಬೇಕು, ಕಾರ್ ಜೊತೆಗಿರಿಸಿಕೊಂಡು ಪ್ರತಿಷ್ಠೆ ಮೆರೆಯಬೇಕು, ಸುಸಜ್ಜಿತ ಮನೆ ಹೊಂದಬೇಕು, ಐಷಾರಾಮಿ ಬದುಕು ತಮ್ಮದಾಗಿಸಿಕೊಳ್ಳಬೇಕು – ಇಂಥವೇ ತಾತ್ಪೂರ್ತಿಕ ಆಸೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ಕಾರ್ಯಕರ್ತರಿಗೆ ಹಂತಹಂತವಾಗಿ ರಾಜಕೀಯ ಪಕ್ಷಗಳು ನೆರವಾಗುತ್ತವೆ. ಅಧಿಕಾರದ ಗಮ್ಯ ತಲುಪಿಕೊಳ್ಳಲು ಇವು ಸಂಘರ್ಷ ಸೃಷ್ಟಿಗೆ ಇಂಥ ಯುವ ಸಮೂಹವನ್ನೇ ಬಳಸಿಕೊಳ್ಳುತ್ತವೆ. ಆಗ ಹಿಂಸೆಯೇ ವ್ಯಾಪಕವಾಗುತ್ತದೆ. ಅಹಿಂಸೆಯ ತಾರ್ಕಿಕವಾದವನ್ನೇ ಅಲ್ಲಗಳೆಯುವಂಥ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತದೆ.

ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳು

ನಾವು ಎಷ್ಟೇ ಕೃತಿಗಳನ್ನು ಓದಿಕೊಂಡರೂ, ತಜ್ಞರ ಬರಹಗಳನ್ನು ಗೊತ್ತುಮಾಡಿಕೊಂಡರೂ ಗಾಂಧೀಜಿಯವರ ಅಹಿಂಸೆಯ ತಾತ್ವಿಕ ದಾರ್ಶನಿಕ ನದಿಯ ಜೀವಜಲದ ಬೊಗಸೆಯಷ್ಟು ಹನಿಗಳನ್ನಷ್ಟೇ ದಕ್ಕಿಸಿಕೊಂಡಿರುತ್ತೇವೆ. ಅದರ ಜೀವಂತಿಕೆಯ ಸಮಗ್ರ ಅಮೃತಧಾರೆಯನ್ನು ನಮ್ಮೊಳಗಿಳಿಸಿಕೊಳ್ಳುವ ನಿರಂತರ ಪ್ರಯತ್ನಗಳ ಮೂಲಕವೇ ಆ ತಾತ್ವಿಕತೆಯ ಹೊಳೆಯು ಮನುಷ್ಯಸಮೂಹದೊಳಗೆ ನೆಲೆಗೊಳ್ಳುತ್ತಾ ತನ್ನ ನಡಿಗೆಯನ್ನು ಮೂಡಿಸುತ್ತಾ ಸಾಗುತ್ತದೆ. ಅದು ಸಾಗಿದಲ್ಲೆಲ್ಲಾ ಮನುಷ್ಯತ್ವ ಮತ್ತು ಜೀವಪರ ನಿಲುವುಗಳ ಫಲವತ್ತತೆಯು ವ್ಯಾಪಕವಾಗುತ್ತಿರುತ್ತದೆ. ಆದರೆ, ಇಂಥ ತಾತ್ವಿಕ ನದಿಯ ಹರಿವನ್ನು ಅರ್ಧಕ್ಕೆ ತಡೆಗಟ್ಟಿ ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳನ್ನು ಕಟ್ಟಲಾಗುತ್ತಿದೆ. ಈ ಅಣೆಕಟ್ಟುಗಳೇ ಸುಖ, ಶಾಂತಿ, ನೆಮ್ಮದಿಯೊಂದಿಗಿನ ಅಭ್ಯುದಯದ ಬೆಳೆ ಬೆಳೆಯುವುದಕ್ಕೆ ಸಹಕಾರಿಯಾಗುತ್ತವೆ ಎಂಬ ತಪ್ಪುಕಲ್ಪನೆಯನ್ನೇ ಬಿತ್ತಿ ನಂಬಿಸಲಾಗುತ್ತಿದೆ. ಇಂಥ ಸಂಕೀರ್ಣತೆಯ ಮಧ್ಯೆ ಅಹಿಂಸೆಯ ಜೀವನದಿ ಬತ್ತದಂತೆ, ಅದು ಕಾಲದಿಂದ ಕಾಲಕ್ಕೆ ಅತ್ಯಂತ ಎಚ್ಚರದೊಂದಿಗೆ ದಾಟಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವ ಹೊಸದೊಂದು ಪರ್ಯಾಯ ರಾಜಕಾರಣದ ಮಾದರಿ ರೂಪುಗೊಳ್ಳಬೇಕಾಗಿದೆ. ಅದಕ್ಕಿಂತ ಮುಂಚೆ ಅಹಿಂಸೆಯ ತಾತ್ವಿಕ ನದಿಯ ಹರಿವು ನಿಲ್ಲಿಸುತ್ತಿರುವ ಶಕ್ತಿಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಾಗಿದೆ. ಆ ಶಕ್ತಿಗಳು ಈ ನದಿಯನ್ನು ಬತ್ತಿಸುವ ಪ್ರಯತ್ನದಲ್ಲಿ ತೊಡಗಿವೆ. ಅದರ ಚಲನೆಯ ಹರಿವಿನೊಳಗೆ ರಕ್ತಪಾತ ನಡೆಸಿ ಭಯ ಹುಟ್ಟಿಸಿ ತಾವು ಪ್ರಬಲರಾಗುವ ಸ್ವಹಿತಾಸಕ್ತಿಗಳನ್ನು ಕಾಯ್ದುಕೊಳ್ಳುತ್ತಿವೆ. ಜನರನ್ನು ಮರಳು ಮಾಡುವ ಮರಳುಗಾರಿಕೆಯನ್ನು ಇದೇ ಆವರಣದಲ್ಲಿಯೇ ಅತ್ಯಂತ ಚಾಣಾಕ್ಷತನದಿಂದ ನಿರ್ವಹಿಸುತ್ತಿವೆ. ಇದಕ್ಕೆ ಪರ್ಯಾಯವಾಗಿ ಅಪ್ಪಟ ಸಾತ್ವಿಕತೆಯೊಂದಿಗಿನ ರಾಜಕಾರಣ ರೂಪುಗೊಳ್ಳಬೇಕು. ಅಹಿಂಸೆಯು ಸಾರ್ವಕಾಲಿಕ ಸತ್ಯ. ಹಾಗಾಗಿಯೇ ಎಲ್ಲ ಕಾಲದ ಕೊಳಕುಗಳೊಂದಿಗೆ ಎದುರುಗೊಳ್ಳುತ್ತಲೇ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುತ್ತದೆ. ಅದು ಎಂದಿಗೂ ಬತ್ತದ ನದಿಯ ನಿನಾದದ ಹಾಗೆ. ಪ್ರಾಕೃತಿಕ ವಿಕೋಪಗಳಾದಾಗ ಅದರ ನಡಿಗೆಗೆ ಅಡ್ಡಿ-ಆತಂಕಗಳು ಎದುರಾಗುವ ಹಾಗೆ ಇದೀಗ ಪ್ರಬಲ ಶಕ್ತಿಗಳ ಉದ್ದೇಶಪೂರ್ವಕ ನಕಾರಾತ್ಮಕತೆಯ ಕಾರಣಕ್ಕಾಗಿ ಹಿಂಸೆಯೇ ಸರಿಯಾದದ್ದು ಎಂಬ ಸಂಕುಚಿತ ಅಭಿಪ್ರಾಯ ಮುನ್ನೆಲೆಗೆ ಬಂದಿದೆ. ಇದನ್ನು ಅಲ್ಲಗಳೆದು ಅಹಿಂಸೆಯೇ ನಿರ್ಣಾಯಕ, ಅದರ ಆಧಾರದಲ್ಲಿಯೇ ನವಭಾರತದ ನಿರ್ಮಾಣ ಎಂಬ ದೃಢಸಂಕಲ್ಪದೊಂದಿಗಿನ ಸನ್ಮತಿಯ ರಾಜಕಾರಣ ಶುರುವಾಗಬೇಕಿದೆ. ಅಹಿಂಸೆಯ ನಿನಾದದ ಮಾಧುರ್ಯದ ಮಾದರಿ ಜಗತ್ತನ್ನು ಸ್ವಚ್ಛಗೊಳಿಸಬೇಕಿದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

Published

on

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

Published

on

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.

ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

Published

on

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ4 days ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ6 days ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ6 days ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ1 week ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ2 weeks ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ2 weeks ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ2 weeks ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ2 weeks ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

ದಿನದ ಸುದ್ದಿ2 weeks ago

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು...

Trending