ದಿನದ ಸುದ್ದಿ
ತುದಿ ಬೆರಳಲ್ಲಿದೆ ನಿಮ್ಮ ಭವಿಷ್ಯ ; NOTA ನಿಮ್ಮ ಹಕ್ಕು
![](https://suddidina.com/wp-content/uploads/2023/05/nota_suddidina.jpg)
- ಮಲ್ಲಿಕಾರ್ಜುನ್. ಸಿ,ಎಂ.ಎ, ಪ್ರಥಮ ವರ್ಷದ ವಿದ್ಯಾರ್ಥಿ, ಪತ್ರಿಕೋದ್ಯಮದ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಇದೆ. ಹಾಗಾಗಿ ಹಲವಾರು ನಾನಾ ರಾಜಕೀಯ ಪಕ್ಷಗಳು ನಾ ಮುಂದು, ತಾ ಮುಂದು ಎಂಬುದು ಹಲವಾರು ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಮತ ಹಾಕಿ ನಮ್ಮ ಪಕ್ಷಕ್ಕೆ ಮತ ಹಾಕಿ ಎಂಬ ಕೂಗು ಎಲ್ಲೆಲ್ಲೂ ಕೇಳಿ ಬರುತ್ತಿದೆ.
ಭರವಸೆ, ಪ್ರಚಾರಗಳ ಭರಾಟೆ ಏನೂ ಕಡಿಮೆ ಇಲ್ಲ ಬಿಡಿ. ಈ ಸಮಯದಲ್ಲಿ ನಿರಂಜನರವರ ‘ತಿರುಕಣ್ಣನ ಮತದಾನ’ , ನೇಮಿಚಂದ್ರರ ‘ಆಯ್ಕೆ ಇದೆ ನಿಮ್ಮ ಕೈಯಲ್ಲಿ ‘ ಕಥೆಗಳು ನೆನಪಾಗದಿದ್ದರೆ ಹೇಗೆ? ಅದು ಬಿಡಿ ಪ್ರಪಂಚದಲ್ಲೇ ಹೆಚ್ಚು ಯುವ ಜನತೆಯಿರುವ ನಮ್ಮ ದೇಶದಲ್ಲಿ ನಾವು ಮತ ಹಾಕುವ ತುದಿ ಬೆರಳಿನಲ್ಲೇ ನಮ್ಮ ಭವಿಷ್ಯವಿದೆ ಎಂಬುದನ್ನ ಮರೆಯಬೇಡಿ.
ಸದ್ಯದ ಭಾರತದಲ್ಲಿ ಒಂದೆಡೆಯಾದರೆ ಕರ್ನಾಟಕದ ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಅದೆಷ್ಟೋ ಮಂದಿಗೆ ಚುನಾವಣೆಯ ಬಗ್ಗೆ ಹೆಚ್ಚು ಮಾಹಿತಿಯೂ ತಿಳಿದಿಲ್ಲ ಕೆಲವರ ಬಳಿ ಗುರುತಿನ ಚೀಟಿಯೂ ಇಲ್ಲ ಇನ್ನು ಕೆಲವರು ಚೀಟಿ ಇದ್ದರೂ ಮತ ಚಲಾಯಿಸುವುದೇ ಇಲ್ಲ. ನಮಗೆ ಸೂಕ್ತ, ಪ್ರಜಾಪ್ರಭುತ್ವಕ್ಕೆ ಹಿತ ಎನ್ನುವಂತಹ ಅಭ್ಯರ್ಥಿಗೆ ಮತ ಹಾಕಬೇಕು ಎನ್ನುವ ಕನಿಷ್ಠ ಜ್ಞಾನ ಇಂದಿನ ಜನತೆ ತಿಳಿಯಲೇಬೇಕು.
ಅದರಲ್ಲೂ ಯುವಜನತೆಯ ರಾಷ್ಟ್ರ ಮಟ್ಟದ ನಾಯಕರನ್ನು ಅಥವಾ ಪಕ್ಷವನ್ನು ಪರಿಗಣಿಸದೇ ನಿಮ್ಮ ಕ್ಷೇತ್ರದಲ್ಲಿ, ನಿಮಗೆ ಸರಿಯೆನಿಸುವ, ನ್ಯಾಯ ಎನಿಸುವ ಯಾವ ಪಕ್ಷದ ಅಭ್ಯರ್ಥಿಗಾದರೂ, ಸ್ವತಂತ್ರ ಅಭ್ಯರ್ಥಿಗಾದರೂ ಮತ ಹಾಕಿ. ಇನ್ನು ಒಂದು ಮುಖ್ಯ ವಿಚಾರ ನೆನಪಿನಲ್ಲಿಡಿ ಅದ್ಯಾವುದೇ ಅಭ್ಯರ್ಥಿ ನಿಮಗೆ ಸೂಕ್ತವಲ್ಲವೆನಿಸಿದರೂ ಅದಕ್ಕೆಂದೇ ಸುಪ್ರೀಂ ಕೋರ್ಟ್ 2013ರಿಂದ NOTA ಎಂಬ ಆಯ್ಕೆಯನ್ನು ನಮಗೆ ನೀಡಿದ್ದಾರೆ. ಈ ಒಂದು ಆಯ್ಕೆ ಇರುವುದರ ಬಗ್ಗೆ ಅದೆಷ್ಟೋ ಜನತೆಗೆ ಜಾಗೃತಿಯೇ ಇಲ್ಲ.
ಆಸೆ ಆಮಿಷಗಳಿಗೆ ಒಳಗಾಗದೇ ಒಬ್ಬ ಜವಾಬ್ದಾರಿಯುತ ಪ್ರಜೆಯಾಗಿ ಎಲ್ಲಾ ಹಕ್ಕು, ಅಧಿಕಾರಗಳು ನಿಮಗೆ ಇದೆ. ಪರೀಕ್ಷೆ ಬರೆಯುವಾಗ ಮೇಲಿನ ಮೇಲಿನ ಮೂರೂ ಆಯ್ಕೆಗಳು ತಪ್ಪಾಗಿದ್ದಲ್ಲಿ ನೀವು ಹೇಗೆ ಕೊನೆಯ NOTA -(ಈ ಮೇಲಿನ ಯಾವುದೂ ಅಲ್ಲ) ಆಯ್ಕೆಯನ್ನ ಬರೆದು ಬರುತ್ತೀರೋ ಹಾಗೆಯೇ ಈ ಚುನಾವಣೆ ಪರೀಕ್ಷೆಯಲ್ಲಿಯೂ NOTA ಒತ್ತಿ ಅಭ್ಯರ್ಥಿಗಳನ್ನು ತ್ಯಜಿಸುವ, ದಿಕ್ಕರಿಸುವ ಹಕ್ಕು ನಿಮಗಿದೆ.
ಒಬ್ಬ ಜವಾಬ್ದಾರಿಯಾಗಿ ವರ್ತಿಸಿ ಮತ ಚಲಾಯಿಸಿ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳದ್ದೇ ಮುಖ್ಯ ಪಾತ್ರ ಎಂಬುದನ್ನು ಮರೆಯಬೇಡಿ ಕಾಲ ಮಿಂಚಿದ ಮೇಲೆ ಚಿಂತಿಸಿ ಫಲವಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!