ದಿನದ ಸುದ್ದಿ
ನೋಟುರದ್ಧತಿ : ಪ್ರಧಾನಿಗಳ ಯಾವ ತರ್ಕವನ್ನೂ ಒಪ್ಪದಿದ್ದ ಆರ್ಬಿಐ ‘ಅನುಮೋದನೆ’..!
ಓಟುಗಳ ಮುದ್ರಣ, ಚಲಾವಣೆ ರಿಝರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಕಾರ್ಯಕ್ಷೇತ್ರದಲ್ಲಿ ಬರುವಂತದ್ದು. ಆದರೂ ನವಂಬರ್ 8, 2016ರಂದು ಪ್ರಧಾನ ಮಂತ್ರಿಗಳು ಕಪ್ಪು ಹಣದ, ಖೋಟಾ ನೋಟುಗಳ ಮತ್ತು ಭಯೋತ್ಪಾದಕರ ಹಣಕಾಸಿನ ಮೂಲದ ವಿರುದ್ಧ 56 ಅಂಗುಲದ ಧೀರ ಕಾರ್ಯಾಚರಣೆ ಎಂದ 500 ರೂ. ಮತ್ತು 1000 ರೂ. ನೋಟುಗಳ ರದ್ಧತಿಯ ಪ್ರಕಟಣೆ ಮಾಡಿದಾಗ ಅದು ಆರ್ಬಿಐನ ನಿರ್ಧಾರವಾಗಿತ್ತೇ, ಅಥವ ಅದಕ್ಕೆ ಆರ್ಬಿಐ ನ ಮಂಜೂರಾತಿಯಾದರೂ ಸಿಕ್ಕಿತ್ತೇ? ಇದುವರೆಗೆ ಬಹಳ ಊಹಾಪೋಹದಲ್ಲೇ ಇದ್ದ ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಮಾಹಿತಿ ಹಕ್ಕು ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸುತ್ತ ಬಂದ ಆರ್.ಬಿ.ಐ. ಕೊನೆಗೂ ನೀಡಿರುವ ಮಾಹಿತಿಯ ಪ್ರಕಾರ, ನೋಟುರದ್ಧತಿಯ ಮೋದಿ ಸರಕಾರದ ಪ್ರಸ್ತಾವನೆ ಆರ್.ಬಿ.ಐ. ಆಡಳಿತ ಮಂಡಳಿಯಲ್ಲಿ ಪ್ರಧಾನ ಮಂತ್ರಿಗಳು ಅದರ ಪ್ರಕಟಣೆ ಮಾಡುವ ಕೇವಲ ಎರಡೂವರೆ ಗಂಟೆಗಳ ಮೊದಲಷ್ಟೇ ಚರ್ಚೆಗೆ ಬಂತು.
ಆದರೆ ಪ್ರಧಾನ ಮಂತ್ರಿಗಳು ಅದನ್ನು ಪ್ರಕಟಿಸುವಾಗ ಅದಕ್ಕೆ ಆರ್.ಬಿ. ಐ. ಮಂಜೂರಾತಿ ಸಿಕ್ಕಿರಲಿಲ್ಲ, ಅದನ್ನು ಸರಕಾರಕ್ಕೆ ಕಳಿಸಿದ್ದು 38 ದಿನಗಳ ನಂತರ, ಡಿಸೆಂಬರ್ 6, 2016ರಂದು; ಕೊನೆಗೂ, ಆರ್ಬಿಐ ಆಡಳಿತ ಮಂಡಳಿ ಅನುಮೋದನೆ ನೀಡಿದರೂ, ಸರಕಾರದ ಹೆಚ್ಚಿನ ತರ್ಕಗಳನ್ನು ಅದು ಒಪ್ಪಲಿಲ್ಲ;
- ನೋಟುರದ್ಧತಿಯಿಂದ ಕಪ್ಪು ಹಣವನ್ನು ತಡೆಯಲು ಸಹಾಯವಾಗುವದಿಲ್ಲ, ಏಕೆಂದರೆ, ಹೆಚ್ಚಿನ ಕಪ್ಪು ಹಣ ನಗದಿನಲ್ಲಿ ಇಲ್ಲ, ಬದಲಾಗಿ ರಿಯಲ್ ಎಸ್ಟೇಟ್ ಮತ್ತು ಚಿನ್ನದ ರೂಪದಲ್ಲಿದೆ, ಅವುಗಳ ಮೇಲೆ ಈ ಕ್ರಮದ ಪರಿಣಾಮ ಅತ್ಯಲ್ಪ;
- ಖೋಟಾ ನೋಟಿನ ಪ್ರಮಾಣ 400 ಕೋಟಿ ರೂ.ಗಳಷ್ಟಾದರೂ ಒಟ್ಟು ನೋಟುಗಳ ಚಲಾವಣೆಯಲ್ಲಿ ಅದರ ಪ್ರಮಾಣ ಅತ್ಯಲ್ಪ, ಅದಕ್ಕಾಗಿ ನೋಟುರದ್ಧತಿಯ ಕ್ರಮದ ಅಗತ್ಯವಿರಲಿಲ್ಲ;3. ಚಲಾವಣೆಯಲ್ಲಿದ್ದ 500 ರೂ. ಮತ್ತು 1000ರೂ. ನೋಟುಗಳ ಏರಿಕೆಯ ಪ್ರಮಾಣ ಆರ್ಥಿಕ ಬೇಳವಣಿಗೆಯ ದರಕ್ಕೆ ಹೋಲಿಸಿದರೆ ಬಹಳ ಹೆಚ್ಚು ಎಂಬ ತರ್ಕವೂ ಅವುಗಳ ನಿಜಮೌಲ್ಯವನ್ನು ಪರಿಗಣಿಸಿದಾಗ ಒಪ್ಪುವಂತದ್ದಲ್ಲ;4. ಪ್ರಸಕ್ತ ವರ್ಷದಲ್ಲಿ ಈ ಕ್ರಮ ಜಿಡಿಪಿ ಬೆಳವಣಿಗೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತದೆ.
ಅಂದರೆ ಒಟ್ಟಿನಲ್ಲಿ, ಪ್ರಧಾನ ಮಂತ್ರಿಗಳು ನೋಟುರದ್ಧತಿಗೆ ಕೊಟ್ಟ ಯಾವ ಕಾರಣವನ್ನೂ ಒಪ್ಪದಿದ್ದರೂ, ಬದಲಾಗಿ ಇದರಿಂದ ಆರ್ಥಿಕ ವ್ಯವಸ್ಥೆಯ ಮೇಲೆ ಅಲ್ಪಾವಧಿ ದುಷ್ಪರಿಣಾಮ ಉಂಟಾಗಬಹುದು ಎಂದು ಎಚ್ಚರಿಸಿದ್ದರೂ ಆರ್ಬಿಐ ಈ ಕ್ರಮವನ್ನು ಶಿಪಾರಸು ಮಾಡಿತು ಎಂಬುದು ಈ ಆರ್ಟಿಐ ಉತ್ತರದಿಂದ ತಿಳಿಯುವ ಆಂಶ.
ಇವೆಲ್ಲವೂ ಈಗಾಗಲೇ ಎಲ್ಲರ ಗಮನಕ್ಕೆ ಬಂದಿರುವ ಸಂಗತಿ, ನೋಟುರದ್ಧತಿ ಆರ್ಬಿಐ ಎಚ್ಚರಿಸಿದ್ದಕ್ಕಿತಲೂ ಹೆಚ್ಚಿನ ದುಷ್ಪರಿಣಾಮವನ್ನು ಜನಸಾಮಾನ್ಯರ ಮೇಲೆ ಅಲ್ಪಾವಧಿಯಲ್ಲಿ, ನಗದಿಗಾಗಿ ಪರದಾಟದಲ್ಲಿ ಮಾತ್ರವಲ್ಲ, ಅನೌಪಚಾರಿಕ, ಸಣ್ಣ ಉತ್ಪಾದನೆಯ ವಲಯದ ಧ್ವಂಸ ಮತ್ತು ಅಪಾರ ಪ್ರಮಾಣದ ಉದ್ಯೋಗ ನಷ್ಟದಲ್ಲಿ ಈಗಲೂ ಕಾಣ ಬರುತ್ತಿದೆ.
ಆದರೂ ರಿಝರ್ವ್ ಬ್ಯಾಂಕ್ ಈ ಕ್ರಮವನ್ನು ಬೆಂಬಲಿಸಿದ್ದು ಏಕೆ ಎಂಬ ಪ್ರಶ್ನೆಯೂ ಈಗ ಅರ್ಥಹೀನವಾಗಿದೆ.. ಆಗ ಆಡಳಿತ ಮಂಡಳಿಯ ಸದಸ್ಯರಾಗಿ ನವಂಬರ್ 8ರ ಸಭೆಯಲ್ಲಿ ಭಾಗವಹಿಸಿದ್ದವರಲ್ಲಿ ಒಬ್ಬರು ಈಗ ಆರ್ಬಿಐ ಗವರ್ನರ್ ಆಗಿದ್ದಾರೆ.
(ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ10 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ9 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

