Connect with us

ದಿನದ ಸುದ್ದಿ

ನೋಟುರದ್ಧತಿ : ಪ್ರಧಾನಿಗಳ ಯಾವ ತರ್ಕವನ್ನೂ ಒಪ್ಪದಿದ್ದ ಆರ್‌ಬಿಐ ‘ಅನುಮೋದನೆ’..!

Published

on

ಓಟುಗಳ ಮುದ್ರಣ, ಚಲಾವಣೆ ರಿಝರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಕಾರ್ಯಕ್ಷೇತ್ರದಲ್ಲಿ ಬರುವಂತದ್ದು. ಆದರೂ ನವಂಬರ್ 8, 2016ರಂದು ಪ್ರಧಾನ ಮಂತ್ರಿಗಳು ಕಪ್ಪು ಹಣದ, ಖೋಟಾ ನೋಟುಗಳ ಮತ್ತು ಭಯೋತ್ಪಾದಕರ ಹಣಕಾಸಿನ ಮೂಲದ ವಿರುದ್ಧ 56 ಅಂಗುಲದ ಧೀರ ಕಾರ್ಯಾಚರಣೆ ಎಂದ 500 ರೂ. ಮತ್ತು 1000 ರೂ. ನೋಟುಗಳ ರದ್ಧತಿಯ ಪ್ರಕಟಣೆ ಮಾಡಿದಾಗ ಅದು ಆರ್‌ಬಿಐನ ನಿರ್ಧಾರವಾಗಿತ್ತೇ, ಅಥವ ಅದಕ್ಕೆ ಆರ್‌ಬಿಐ ನ ಮಂಜೂರಾತಿಯಾದರೂ ಸಿಕ್ಕಿತ್ತೇ? ಇದುವರೆಗೆ ಬಹಳ ಊಹಾಪೋಹದಲ್ಲೇ ಇದ್ದ ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಮಾಹಿತಿ ಹಕ್ಕು ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸುತ್ತ ಬಂದ ಆರ್.ಬಿ.ಐ. ಕೊನೆಗೂ ನೀಡಿರುವ ಮಾಹಿತಿಯ ಪ್ರಕಾರ, ನೋಟುರದ್ಧತಿಯ ಮೋದಿ ಸರಕಾರದ ಪ್ರಸ್ತಾವನೆ ಆರ್.ಬಿ.ಐ. ಆಡಳಿತ ಮಂಡಳಿಯಲ್ಲಿ ಪ್ರಧಾನ ಮಂತ್ರಿಗಳು ಅದರ ಪ್ರಕಟಣೆ ಮಾಡುವ ಕೇವಲ ಎರಡೂವರೆ ಗಂಟೆಗಳ ಮೊದಲಷ್ಟೇ ಚರ್ಚೆಗೆ ಬಂತು.

ಆದರೆ ಪ್ರಧಾನ ಮಂತ್ರಿಗಳು ಅದನ್ನು ಪ್ರಕಟಿಸುವಾಗ ಅದಕ್ಕೆ ಆರ್.ಬಿ. ಐ. ಮಂಜೂರಾತಿ ಸಿಕ್ಕಿರಲಿಲ್ಲ, ಅದನ್ನು ಸರಕಾರಕ್ಕೆ ಕಳಿಸಿದ್ದು 38 ದಿನಗಳ ನಂತರ, ಡಿಸೆಂಬರ್ 6, 2016ರಂದು; ಕೊನೆಗೂ, ಆರ್‌ಬಿಐ ಆಡಳಿತ ಮಂಡಳಿ ಅನುಮೋದನೆ ನೀಡಿದರೂ, ಸರಕಾರದ ಹೆಚ್ಚಿನ ತರ್ಕಗಳನ್ನು ಅದು ಒಪ್ಪಲಿಲ್ಲ;

  1. ನೋಟುರದ್ಧತಿಯಿಂದ ಕಪ್ಪು ಹಣವನ್ನು ತಡೆಯಲು ಸಹಾಯವಾಗುವದಿಲ್ಲ, ಏಕೆಂದರೆ, ಹೆಚ್ಚಿನ ಕಪ್ಪು ಹಣ ನಗದಿನಲ್ಲಿ ಇಲ್ಲ, ಬದಲಾಗಿ ರಿಯಲ್ ಎಸ್ಟೇಟ್ ಮತ್ತು ಚಿನ್ನದ ರೂಪದಲ್ಲಿದೆ, ಅವುಗಳ ಮೇಲೆ ಈ ಕ್ರಮದ ಪರಿಣಾಮ ಅತ್ಯಲ್ಪ;
  2. ಖೋಟಾ ನೋಟಿನ ಪ್ರಮಾಣ 400 ಕೋಟಿ ರೂ.ಗಳಷ್ಟಾದರೂ ಒಟ್ಟು ನೋಟುಗಳ ಚಲಾವಣೆಯಲ್ಲಿ ಅದರ ಪ್ರಮಾಣ ಅತ್ಯಲ್ಪ, ಅದಕ್ಕಾಗಿ ನೋಟುರದ್ಧತಿಯ ಕ್ರಮದ ಅಗತ್ಯವಿರಲಿಲ್ಲ;3. ಚಲಾವಣೆಯಲ್ಲಿದ್ದ 500 ರೂ. ಮತ್ತು 1000ರೂ. ನೋಟುಗಳ ಏರಿಕೆಯ ಪ್ರಮಾಣ ಆರ್ಥಿಕ ಬೇಳವಣಿಗೆಯ ದರಕ್ಕೆ ಹೋಲಿಸಿದರೆ ಬಹಳ ಹೆಚ್ಚು ಎಂಬ ತರ್ಕವೂ ಅವುಗಳ ನಿಜಮೌಲ್ಯವನ್ನು ಪರಿಗಣಿಸಿದಾಗ ಒಪ್ಪುವಂತದ್ದಲ್ಲ;4. ಪ್ರಸಕ್ತ ವರ್ಷದಲ್ಲಿ ಈ ಕ್ರಮ ಜಿಡಿಪಿ ಬೆಳವಣಿಗೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತದೆ.

ಅಂದರೆ ಒಟ್ಟಿನಲ್ಲಿ, ಪ್ರಧಾನ ಮಂತ್ರಿಗಳು ನೋಟುರದ್ಧತಿಗೆ ಕೊಟ್ಟ ಯಾವ ಕಾರಣವನ್ನೂ ಒಪ್ಪದಿದ್ದರೂ, ಬದಲಾಗಿ ಇದರಿಂದ ಆರ್ಥಿಕ ವ್ಯವಸ್ಥೆಯ ಮೇಲೆ ಅಲ್ಪಾವಧಿ ದುಷ್ಪರಿಣಾಮ ಉಂಟಾಗಬಹುದು ಎಂದು ಎಚ್ಚರಿಸಿದ್ದರೂ ಆರ್‌ಬಿಐ ಈ ಕ್ರಮವನ್ನು ಶಿಪಾರಸು ಮಾಡಿತು ಎಂಬುದು ಈ ಆರ್‌ಟಿಐ ಉತ್ತರದಿಂದ ತಿಳಿಯುವ ಆಂಶ.

ಇವೆಲ್ಲವೂ ಈಗಾಗಲೇ ಎಲ್ಲರ ಗಮನಕ್ಕೆ ಬಂದಿರುವ ಸಂಗತಿ, ನೋಟುರದ್ಧತಿ ಆರ್‌ಬಿಐ ಎಚ್ಚರಿಸಿದ್ದಕ್ಕಿತಲೂ ಹೆಚ್ಚಿನ ದುಷ್ಪರಿಣಾಮವನ್ನು ಜನಸಾಮಾನ್ಯರ ಮೇಲೆ ಅಲ್ಪಾವಧಿಯಲ್ಲಿ, ನಗದಿಗಾಗಿ ಪರದಾಟದಲ್ಲಿ ಮಾತ್ರವಲ್ಲ, ಅನೌಪಚಾರಿಕ, ಸಣ್ಣ ಉತ್ಪಾದನೆಯ ವಲಯದ ಧ್ವಂಸ ಮತ್ತು ಅಪಾರ ಪ್ರಮಾಣದ ಉದ್ಯೋಗ ನಷ್ಟದಲ್ಲಿ ಈಗಲೂ ಕಾಣ ಬರುತ್ತಿದೆ.

ಆದರೂ ರಿಝರ್ವ್ ಬ್ಯಾಂಕ್ ಈ ಕ್ರಮವನ್ನು ಬೆಂಬಲಿಸಿದ್ದು ಏಕೆ ಎಂಬ ಪ್ರಶ್ನೆಯೂ ಈಗ ಅರ್ಥಹೀನವಾಗಿದೆ.. ಆಗ ಆಡಳಿತ ಮಂಡಳಿಯ ಸದಸ್ಯರಾಗಿ ನವಂಬರ್ 8ರ ಸಭೆಯಲ್ಲಿ ಭಾಗವಹಿಸಿದ್ದವರಲ್ಲಿ ಒಬ್ಬರು ಈಗ ಆರ್‌ಬಿಐ ಗವರ್ನರ್ ಆಗಿದ್ದಾರೆ.

(ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ4 days ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ4 days ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ5 days ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ2 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ3 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ3 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ3 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending