ದಿನದ ಸುದ್ದಿ
ನೋಟುರದ್ಧತಿ : ಪ್ರಧಾನಿಗಳ ಯಾವ ತರ್ಕವನ್ನೂ ಒಪ್ಪದಿದ್ದ ಆರ್ಬಿಐ ‘ಅನುಮೋದನೆ’..!

ಓಟುಗಳ ಮುದ್ರಣ, ಚಲಾವಣೆ ರಿಝರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಕಾರ್ಯಕ್ಷೇತ್ರದಲ್ಲಿ ಬರುವಂತದ್ದು. ಆದರೂ ನವಂಬರ್ 8, 2016ರಂದು ಪ್ರಧಾನ ಮಂತ್ರಿಗಳು ಕಪ್ಪು ಹಣದ, ಖೋಟಾ ನೋಟುಗಳ ಮತ್ತು ಭಯೋತ್ಪಾದಕರ ಹಣಕಾಸಿನ ಮೂಲದ ವಿರುದ್ಧ 56 ಅಂಗುಲದ ಧೀರ ಕಾರ್ಯಾಚರಣೆ ಎಂದ 500 ರೂ. ಮತ್ತು 1000 ರೂ. ನೋಟುಗಳ ರದ್ಧತಿಯ ಪ್ರಕಟಣೆ ಮಾಡಿದಾಗ ಅದು ಆರ್ಬಿಐನ ನಿರ್ಧಾರವಾಗಿತ್ತೇ, ಅಥವ ಅದಕ್ಕೆ ಆರ್ಬಿಐ ನ ಮಂಜೂರಾತಿಯಾದರೂ ಸಿಕ್ಕಿತ್ತೇ? ಇದುವರೆಗೆ ಬಹಳ ಊಹಾಪೋಹದಲ್ಲೇ ಇದ್ದ ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಮಾಹಿತಿ ಹಕ್ಕು ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸುತ್ತ ಬಂದ ಆರ್.ಬಿ.ಐ. ಕೊನೆಗೂ ನೀಡಿರುವ ಮಾಹಿತಿಯ ಪ್ರಕಾರ, ನೋಟುರದ್ಧತಿಯ ಮೋದಿ ಸರಕಾರದ ಪ್ರಸ್ತಾವನೆ ಆರ್.ಬಿ.ಐ. ಆಡಳಿತ ಮಂಡಳಿಯಲ್ಲಿ ಪ್ರಧಾನ ಮಂತ್ರಿಗಳು ಅದರ ಪ್ರಕಟಣೆ ಮಾಡುವ ಕೇವಲ ಎರಡೂವರೆ ಗಂಟೆಗಳ ಮೊದಲಷ್ಟೇ ಚರ್ಚೆಗೆ ಬಂತು.
ಆದರೆ ಪ್ರಧಾನ ಮಂತ್ರಿಗಳು ಅದನ್ನು ಪ್ರಕಟಿಸುವಾಗ ಅದಕ್ಕೆ ಆರ್.ಬಿ. ಐ. ಮಂಜೂರಾತಿ ಸಿಕ್ಕಿರಲಿಲ್ಲ, ಅದನ್ನು ಸರಕಾರಕ್ಕೆ ಕಳಿಸಿದ್ದು 38 ದಿನಗಳ ನಂತರ, ಡಿಸೆಂಬರ್ 6, 2016ರಂದು; ಕೊನೆಗೂ, ಆರ್ಬಿಐ ಆಡಳಿತ ಮಂಡಳಿ ಅನುಮೋದನೆ ನೀಡಿದರೂ, ಸರಕಾರದ ಹೆಚ್ಚಿನ ತರ್ಕಗಳನ್ನು ಅದು ಒಪ್ಪಲಿಲ್ಲ;
- ನೋಟುರದ್ಧತಿಯಿಂದ ಕಪ್ಪು ಹಣವನ್ನು ತಡೆಯಲು ಸಹಾಯವಾಗುವದಿಲ್ಲ, ಏಕೆಂದರೆ, ಹೆಚ್ಚಿನ ಕಪ್ಪು ಹಣ ನಗದಿನಲ್ಲಿ ಇಲ್ಲ, ಬದಲಾಗಿ ರಿಯಲ್ ಎಸ್ಟೇಟ್ ಮತ್ತು ಚಿನ್ನದ ರೂಪದಲ್ಲಿದೆ, ಅವುಗಳ ಮೇಲೆ ಈ ಕ್ರಮದ ಪರಿಣಾಮ ಅತ್ಯಲ್ಪ;
- ಖೋಟಾ ನೋಟಿನ ಪ್ರಮಾಣ 400 ಕೋಟಿ ರೂ.ಗಳಷ್ಟಾದರೂ ಒಟ್ಟು ನೋಟುಗಳ ಚಲಾವಣೆಯಲ್ಲಿ ಅದರ ಪ್ರಮಾಣ ಅತ್ಯಲ್ಪ, ಅದಕ್ಕಾಗಿ ನೋಟುರದ್ಧತಿಯ ಕ್ರಮದ ಅಗತ್ಯವಿರಲಿಲ್ಲ;3. ಚಲಾವಣೆಯಲ್ಲಿದ್ದ 500 ರೂ. ಮತ್ತು 1000ರೂ. ನೋಟುಗಳ ಏರಿಕೆಯ ಪ್ರಮಾಣ ಆರ್ಥಿಕ ಬೇಳವಣಿಗೆಯ ದರಕ್ಕೆ ಹೋಲಿಸಿದರೆ ಬಹಳ ಹೆಚ್ಚು ಎಂಬ ತರ್ಕವೂ ಅವುಗಳ ನಿಜಮೌಲ್ಯವನ್ನು ಪರಿಗಣಿಸಿದಾಗ ಒಪ್ಪುವಂತದ್ದಲ್ಲ;4. ಪ್ರಸಕ್ತ ವರ್ಷದಲ್ಲಿ ಈ ಕ್ರಮ ಜಿಡಿಪಿ ಬೆಳವಣಿಗೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತದೆ.
ಅಂದರೆ ಒಟ್ಟಿನಲ್ಲಿ, ಪ್ರಧಾನ ಮಂತ್ರಿಗಳು ನೋಟುರದ್ಧತಿಗೆ ಕೊಟ್ಟ ಯಾವ ಕಾರಣವನ್ನೂ ಒಪ್ಪದಿದ್ದರೂ, ಬದಲಾಗಿ ಇದರಿಂದ ಆರ್ಥಿಕ ವ್ಯವಸ್ಥೆಯ ಮೇಲೆ ಅಲ್ಪಾವಧಿ ದುಷ್ಪರಿಣಾಮ ಉಂಟಾಗಬಹುದು ಎಂದು ಎಚ್ಚರಿಸಿದ್ದರೂ ಆರ್ಬಿಐ ಈ ಕ್ರಮವನ್ನು ಶಿಪಾರಸು ಮಾಡಿತು ಎಂಬುದು ಈ ಆರ್ಟಿಐ ಉತ್ತರದಿಂದ ತಿಳಿಯುವ ಆಂಶ.
ಇವೆಲ್ಲವೂ ಈಗಾಗಲೇ ಎಲ್ಲರ ಗಮನಕ್ಕೆ ಬಂದಿರುವ ಸಂಗತಿ, ನೋಟುರದ್ಧತಿ ಆರ್ಬಿಐ ಎಚ್ಚರಿಸಿದ್ದಕ್ಕಿತಲೂ ಹೆಚ್ಚಿನ ದುಷ್ಪರಿಣಾಮವನ್ನು ಜನಸಾಮಾನ್ಯರ ಮೇಲೆ ಅಲ್ಪಾವಧಿಯಲ್ಲಿ, ನಗದಿಗಾಗಿ ಪರದಾಟದಲ್ಲಿ ಮಾತ್ರವಲ್ಲ, ಅನೌಪಚಾರಿಕ, ಸಣ್ಣ ಉತ್ಪಾದನೆಯ ವಲಯದ ಧ್ವಂಸ ಮತ್ತು ಅಪಾರ ಪ್ರಮಾಣದ ಉದ್ಯೋಗ ನಷ್ಟದಲ್ಲಿ ಈಗಲೂ ಕಾಣ ಬರುತ್ತಿದೆ.
ಆದರೂ ರಿಝರ್ವ್ ಬ್ಯಾಂಕ್ ಈ ಕ್ರಮವನ್ನು ಬೆಂಬಲಿಸಿದ್ದು ಏಕೆ ಎಂಬ ಪ್ರಶ್ನೆಯೂ ಈಗ ಅರ್ಥಹೀನವಾಗಿದೆ.. ಆಗ ಆಡಳಿತ ಮಂಡಳಿಯ ಸದಸ್ಯರಾಗಿ ನವಂಬರ್ 8ರ ಸಭೆಯಲ್ಲಿ ಭಾಗವಹಿಸಿದ್ದವರಲ್ಲಿ ಒಬ್ಬರು ಈಗ ಆರ್ಬಿಐ ಗವರ್ನರ್ ಆಗಿದ್ದಾರೆ.
(ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ1 day ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ1 day ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ1 day ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ1 day ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ