ದಿನದ ಸುದ್ದಿ
ನೋಟುರದ್ಧತಿ : ಪ್ರಧಾನಿಗಳ ಯಾವ ತರ್ಕವನ್ನೂ ಒಪ್ಪದಿದ್ದ ಆರ್ಬಿಐ ‘ಅನುಮೋದನೆ’..!
ಓಟುಗಳ ಮುದ್ರಣ, ಚಲಾವಣೆ ರಿಝರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಕಾರ್ಯಕ್ಷೇತ್ರದಲ್ಲಿ ಬರುವಂತದ್ದು. ಆದರೂ ನವಂಬರ್ 8, 2016ರಂದು ಪ್ರಧಾನ ಮಂತ್ರಿಗಳು ಕಪ್ಪು ಹಣದ, ಖೋಟಾ ನೋಟುಗಳ ಮತ್ತು ಭಯೋತ್ಪಾದಕರ ಹಣಕಾಸಿನ ಮೂಲದ ವಿರುದ್ಧ 56 ಅಂಗುಲದ ಧೀರ ಕಾರ್ಯಾಚರಣೆ ಎಂದ 500 ರೂ. ಮತ್ತು 1000 ರೂ. ನೋಟುಗಳ ರದ್ಧತಿಯ ಪ್ರಕಟಣೆ ಮಾಡಿದಾಗ ಅದು ಆರ್ಬಿಐನ ನಿರ್ಧಾರವಾಗಿತ್ತೇ, ಅಥವ ಅದಕ್ಕೆ ಆರ್ಬಿಐ ನ ಮಂಜೂರಾತಿಯಾದರೂ ಸಿಕ್ಕಿತ್ತೇ? ಇದುವರೆಗೆ ಬಹಳ ಊಹಾಪೋಹದಲ್ಲೇ ಇದ್ದ ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಮಾಹಿತಿ ಹಕ್ಕು ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸುತ್ತ ಬಂದ ಆರ್.ಬಿ.ಐ. ಕೊನೆಗೂ ನೀಡಿರುವ ಮಾಹಿತಿಯ ಪ್ರಕಾರ, ನೋಟುರದ್ಧತಿಯ ಮೋದಿ ಸರಕಾರದ ಪ್ರಸ್ತಾವನೆ ಆರ್.ಬಿ.ಐ. ಆಡಳಿತ ಮಂಡಳಿಯಲ್ಲಿ ಪ್ರಧಾನ ಮಂತ್ರಿಗಳು ಅದರ ಪ್ರಕಟಣೆ ಮಾಡುವ ಕೇವಲ ಎರಡೂವರೆ ಗಂಟೆಗಳ ಮೊದಲಷ್ಟೇ ಚರ್ಚೆಗೆ ಬಂತು.
ಆದರೆ ಪ್ರಧಾನ ಮಂತ್ರಿಗಳು ಅದನ್ನು ಪ್ರಕಟಿಸುವಾಗ ಅದಕ್ಕೆ ಆರ್.ಬಿ. ಐ. ಮಂಜೂರಾತಿ ಸಿಕ್ಕಿರಲಿಲ್ಲ, ಅದನ್ನು ಸರಕಾರಕ್ಕೆ ಕಳಿಸಿದ್ದು 38 ದಿನಗಳ ನಂತರ, ಡಿಸೆಂಬರ್ 6, 2016ರಂದು; ಕೊನೆಗೂ, ಆರ್ಬಿಐ ಆಡಳಿತ ಮಂಡಳಿ ಅನುಮೋದನೆ ನೀಡಿದರೂ, ಸರಕಾರದ ಹೆಚ್ಚಿನ ತರ್ಕಗಳನ್ನು ಅದು ಒಪ್ಪಲಿಲ್ಲ;
- ನೋಟುರದ್ಧತಿಯಿಂದ ಕಪ್ಪು ಹಣವನ್ನು ತಡೆಯಲು ಸಹಾಯವಾಗುವದಿಲ್ಲ, ಏಕೆಂದರೆ, ಹೆಚ್ಚಿನ ಕಪ್ಪು ಹಣ ನಗದಿನಲ್ಲಿ ಇಲ್ಲ, ಬದಲಾಗಿ ರಿಯಲ್ ಎಸ್ಟೇಟ್ ಮತ್ತು ಚಿನ್ನದ ರೂಪದಲ್ಲಿದೆ, ಅವುಗಳ ಮೇಲೆ ಈ ಕ್ರಮದ ಪರಿಣಾಮ ಅತ್ಯಲ್ಪ;
- ಖೋಟಾ ನೋಟಿನ ಪ್ರಮಾಣ 400 ಕೋಟಿ ರೂ.ಗಳಷ್ಟಾದರೂ ಒಟ್ಟು ನೋಟುಗಳ ಚಲಾವಣೆಯಲ್ಲಿ ಅದರ ಪ್ರಮಾಣ ಅತ್ಯಲ್ಪ, ಅದಕ್ಕಾಗಿ ನೋಟುರದ್ಧತಿಯ ಕ್ರಮದ ಅಗತ್ಯವಿರಲಿಲ್ಲ;3. ಚಲಾವಣೆಯಲ್ಲಿದ್ದ 500 ರೂ. ಮತ್ತು 1000ರೂ. ನೋಟುಗಳ ಏರಿಕೆಯ ಪ್ರಮಾಣ ಆರ್ಥಿಕ ಬೇಳವಣಿಗೆಯ ದರಕ್ಕೆ ಹೋಲಿಸಿದರೆ ಬಹಳ ಹೆಚ್ಚು ಎಂಬ ತರ್ಕವೂ ಅವುಗಳ ನಿಜಮೌಲ್ಯವನ್ನು ಪರಿಗಣಿಸಿದಾಗ ಒಪ್ಪುವಂತದ್ದಲ್ಲ;4. ಪ್ರಸಕ್ತ ವರ್ಷದಲ್ಲಿ ಈ ಕ್ರಮ ಜಿಡಿಪಿ ಬೆಳವಣಿಗೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತದೆ.
ಅಂದರೆ ಒಟ್ಟಿನಲ್ಲಿ, ಪ್ರಧಾನ ಮಂತ್ರಿಗಳು ನೋಟುರದ್ಧತಿಗೆ ಕೊಟ್ಟ ಯಾವ ಕಾರಣವನ್ನೂ ಒಪ್ಪದಿದ್ದರೂ, ಬದಲಾಗಿ ಇದರಿಂದ ಆರ್ಥಿಕ ವ್ಯವಸ್ಥೆಯ ಮೇಲೆ ಅಲ್ಪಾವಧಿ ದುಷ್ಪರಿಣಾಮ ಉಂಟಾಗಬಹುದು ಎಂದು ಎಚ್ಚರಿಸಿದ್ದರೂ ಆರ್ಬಿಐ ಈ ಕ್ರಮವನ್ನು ಶಿಪಾರಸು ಮಾಡಿತು ಎಂಬುದು ಈ ಆರ್ಟಿಐ ಉತ್ತರದಿಂದ ತಿಳಿಯುವ ಆಂಶ.
ಇವೆಲ್ಲವೂ ಈಗಾಗಲೇ ಎಲ್ಲರ ಗಮನಕ್ಕೆ ಬಂದಿರುವ ಸಂಗತಿ, ನೋಟುರದ್ಧತಿ ಆರ್ಬಿಐ ಎಚ್ಚರಿಸಿದ್ದಕ್ಕಿತಲೂ ಹೆಚ್ಚಿನ ದುಷ್ಪರಿಣಾಮವನ್ನು ಜನಸಾಮಾನ್ಯರ ಮೇಲೆ ಅಲ್ಪಾವಧಿಯಲ್ಲಿ, ನಗದಿಗಾಗಿ ಪರದಾಟದಲ್ಲಿ ಮಾತ್ರವಲ್ಲ, ಅನೌಪಚಾರಿಕ, ಸಣ್ಣ ಉತ್ಪಾದನೆಯ ವಲಯದ ಧ್ವಂಸ ಮತ್ತು ಅಪಾರ ಪ್ರಮಾಣದ ಉದ್ಯೋಗ ನಷ್ಟದಲ್ಲಿ ಈಗಲೂ ಕಾಣ ಬರುತ್ತಿದೆ.
ಆದರೂ ರಿಝರ್ವ್ ಬ್ಯಾಂಕ್ ಈ ಕ್ರಮವನ್ನು ಬೆಂಬಲಿಸಿದ್ದು ಏಕೆ ಎಂಬ ಪ್ರಶ್ನೆಯೂ ಈಗ ಅರ್ಥಹೀನವಾಗಿದೆ.. ಆಗ ಆಡಳಿತ ಮಂಡಳಿಯ ಸದಸ್ಯರಾಗಿ ನವಂಬರ್ 8ರ ಸಭೆಯಲ್ಲಿ ಭಾಗವಹಿಸಿದ್ದವರಲ್ಲಿ ಒಬ್ಬರು ಈಗ ಆರ್ಬಿಐ ಗವರ್ನರ್ ಆಗಿದ್ದಾರೆ.
(ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ3 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

