ರಾಜಕೀಯ
NRC ಮತ್ತು CAA ಯಾರಿಗೆ ಲಾಭ..?

- ಬಿಂದು ಗೌಡ ಕೆಪಿಸಿಸಿ,ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ
ಒಂದು ಮನೆಯಲ್ಲಿ ನಾಲ್ಕು ಜನ ಇದ್ರು ಆದ್ರೆ ತಿನ್ನೋಕೆ ಇದ್ದಿದ್ದೇ ಎರಡು ರೊಟ್ಟಿ ಕಡೆಗೆ ಅರ್ಧ ಅರ್ಧ ತಗೊಂಡು ಹಂಚಿಕೊಂಡು ತಿನ್ನೋಣ ಅಂತ ಮಾತು ಕಥೆ ಆಯ್ತು ಇನ್ನೇನು ಎರಡು ರೊಟ್ಟಿ ಭಾಗ ಆಗಿ ನಾಲ್ಕು ಜನ ಹಂಚಿಕೊಳ್ಳಬೇಕು ಅಷ್ಟರಲ್ಲಿ ಹೊರಗಿಂದ ಯಾರೋ 3 ಜನ ಬಂದ್ರು ಈಗ ಇರುವ 2 ರೊಟ್ಟಿಯನ್ನು 4+3 ಅಂದ್ರೆ 7 ಜನ ಹಂಚಿಕೊಳ್ಳಬೇಕು , ಹೇಗೆ ಹಂಚಿಕೊಳ್ಳುತ್ತಾರೆ, ಇದರಿಂದ ಹೊಟ್ಟೆ ತುಂಬುತ್ತಾ ? ರೊಟ್ಟಿಯನ್ನು ಹಂಚಿಕೊಳ್ಳಬಹುದು ಭೂಮಿಯನ್ನು ಹಂಚಿಕೊಳ್ಳೋಕೆ ಸಾಧ್ಯವಾ ?
ಹೌದು ಈಗಿನ ಸಧ್ಯದ ಪರಿಸ್ಥಿತಿ ಹಾಗಿದೆ ದೇಶದಲ್ಲಿ ಈಗಾಗಲೇ ನಿರುದ್ಯೋಗ ಸಮಸ್ಯೆ ಕಳೆದ 45 ವರ್ಷದಲ್ಲೇ ಇದೆ ಮೊದಲ ಬಾರಿಗೆ ಇಷ್ಟರ ಮಟ್ಟಿಗೆ ನಿರುದ್ಯೋಗ ಸಮಸ್ಯೆ ಕಂಡು ಬಂದಿದೆ ಅಂತದರಲ್ಲಿ ಹೊರ ದೇಶಗಳಿಂದ ಬರುವವರಿಗೆ ಜಾಗ ಕೊಟ್ಟು ಪೌರತ್ವವನ್ನು ಕೊಡ್ತೀರಿ ಆಮೇಲೆ ಅವರಿಗೆ ಉದ್ಯೋಗ ಎಲ್ಲಿಂದ ಕೊಡ್ತೀರಿ ? ಬಂದವರು ಬಂದವರ ಹಾಗೆ ಇರ್ತಾರ ? ನೋ ಮದುವೆ ಮಕ್ಕಳು ಹೀಗೆ ಜನಸಂಖ್ಯೆ ಹೆಚ್ಚುತ್ತಲೇ ಹೋಗುತ್ತೆ ಅವರಿಗೆಲ್ಲ ಉದ್ಯೋಗ, ಆಹಾರ ಎಲ್ಲಿಂದ ಉತ್ಪತ್ತಿ ಆಗುತ್ತೆ ಈಗಾಗಲೇ ಅವೈಜ್ಞಾನಿಕ ಜಿ ಎಸ್ ಟಿ ಹೊರೆಯಾಗಿದೆ.
ನೋಟ್ ಬಂದಿಗಳ ಕಾರಣಕ್ಕೆ ಎಷ್ಟೋ ಕಾರ್ಖಾನೆ , ಉದ್ದಿಮೆ , ವ್ಯವಹಾರಗಳು ಮುಚ್ಚಿಹೋಗಿವೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ , ಇಲ್ಲಿರುವವರೇ ಕೆಲಸಗಳನ್ನ ಕಳೆದುಕೊಂಡು ಮನೆಯಲ್ಲಿ ಕೂತಿರುವಾಗ , ನಿರುದ್ಯೋಗ ಹಸಿವಿನ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ, ದೊಡ್ಡ ದೊಡ್ಡ ಉದ್ಯಮಿಗಳು ನಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ CAA ಅವಶ್ಯಕತೆ ಇದೆಯಾ ?
ಇನ್ನು NRC ಇದಿನ್ನೂ ಜಾರಿಯಾಗಿಲ್ಲ , ಆಗುತ್ತೆ ಅನ್ನುವ ಸುಳಿವು ಇದೆ 1990ರಲ್ಲಿ ಹುಟ್ಟಿರುವ ನನ್ನಲ್ಲೇ BIRTH CERTIFICATE ಇಲ್ಲ ಇನ್ನು ಹಳ್ಳಿಗಾಡುಗಳಲ್ಲಿ ಹುಟ್ಟಿದ , ಮನೆಯಲ್ಲಿಯೇ ಹೆರಿಗೆ ಆದವರ ಜನನ ಪ್ರಮಾಣ ಪತ್ರವನ್ನು ಎಲ್ಲಿಂದ ತರೋದು , ಆದಿವಾಸಿಗಳು , ಹಕ್ಕಿ ಪಿಕ್ಕಿಯವರು ಬುಡಕಟ್ಟಿನವರು ಇಂದಿಗೂ ಸೌಲಭ್ಯ ವಂಚಿತರಾಗಿ ಅರಣ್ಯಗಳಲ್ಲಿ ಇದ್ದಾರೆ ಅವರೆಲ್ಲ ಎಲ್ಲಿಂದ ತರ್ತಾರೆ ?? ನಮ್ಮ ದೇಶದಲ್ಲಿ ಏನಿಲ್ಲ ಅಂದ್ರು ಸಾವಿರಾರು ಅನಾಥ ಆಶ್ರಮ , ವೃದ್ಧಾಶ್ರಮಗಳು ಇವೆ ಅವರೆಲ್ಲ ಎಲ್ಲಿಂದ ತರ್ತಾರೆ ತಮ್ಮ ಜನನ ಪ್ರಮಾಣ ಪತ್ರಗಳನ್ನು ?
ಆಧಾರ್ ಕಾರ್ಡ್ , ಪ್ಯಾನ್ ಕಾರ್ಡ್ , ವೋಟರ್ ಐಡಿ , ಪಾಸ್ ಪೋರ್ಟ್ , ರೇಶನ್ ಕಾರ್ಡ್ , ಡ್ರೈವಿಂಗ್ ಲೈಸನ್ಸ್ ಇದ್ಯಾವುದೂ ಕೂಡ ದಾಖಲೆ ಅಲ್ಲ ಅನ್ನೋದೇ ಆದ್ರೆ ಇನ್ನೇನು ಕೊಟ್ಟು ಸಾಭೀತು ಪಡಿಸಬೇಕು ??
ಬಿಜೆಪಿ MEMBERSHIP CARD ತೋರಿಸಿ ಈ ದೇಶದ ಪ್ರಜೆ ಅಂತ ಸಾಬೀತು ಪಡಿಸಬೇಕಾ ???
ಆಧಾರ್ ಕಾರ್ಡ್ ಆಧಾರ ಅಲ್ಲ ಅಂದಾದರೆ ಯಾವ ಆಧಾರದ ಮೇಲೆ ಮಾಡಿದ್ದು ಅದನ್ನ ಯಾತಕ್ಕಾಗಿ ಮಾಡಿದ್ದು , ಜನಗಳ ಸಮಯ ಜೊತೆಗೆ ಹಣ ಎರಡು ಖರ್ಚಾಗಿದೆ ಇನ್ನು ಆಗುತ್ತಲೇ ಇದೆ ಒಂದು ಸಾರಿ ಅಪ್ಡೇಟ್ ಮಾಡಿಸೋಕೆ 50 ರೂಪಾಯಿ ಕೊಡಬೇಕು ಆಧಾರ್ ಆಧಾರ ಅಲ್ಲ ಅಂದಮೇಲೆ ಅಪ್ಡೇಟ್ ಯಾಕೆ ಮಾಡಿಸಬೇಕು ಬ್ಯಾನ್ ಮಾಡಿ ಜನರ ಸಮಯ ಮತ್ತು ದುಡ್ಡು ಆದ್ರೂ ಉಳಿಯುತ್ತೆ!
ಇದರಿಂದ ಮುಸಲ್ಮಾನರಿಗೆ ಮಾತ್ರ ತೊಂದರೆ ಅನ್ನೋದು ಮೂರ್ಖತನ , ಪಕ್ಕದ ಮನೆ ಅಹ್ಮದ್ ಭಾಯ್ ಅವರ ಹಿರೀಕರು ಜನನ ಪುರಾವೆ ಇಟ್ಕೊಂಡಿದ್ರೆ ಅವರಿಗೇನು ಸಮಸ್ಯೆ ಇಲ್ಲ ಇಲ್ಲಿನ ಪೌರತ್ವ ಪಡೀತಾರೆ ಅದೇ ಅಹ್ಮದ್ ಅಣ್ಣನ ಪಕ್ಕದ ಮನೆಯವ ಸುರೇಶ ಯಾವ ದಾಖಲೆ ಇಟ್ಕೊಂಡಿಲ್ಲ ಅಂದ್ರೆ ಅವನು ಈ ದೇಶದ ಪ್ರಜೆ ಅಲ್ಲ ಅಂತ ಡೈರೆಕ್ಟ್ ಆಗಿ ಡಿಟೆಂಶನ್ ಸೆಂಟರ್ ಗೆ ಹಾಕ್ತಾರೆ ಹಿಂದೂ ಅಂತ ಸುಮ್ಮನೆ ಬಿಡೋದಿಲ್ಲ .
ಆದ್ದರಿಂದ NRC ಮತ್ತು CAA ಇಂದ ಅನಾನುಕೂಲವೆ ಹೊರತು ಅನುಕೂಲವಾಗಲಿ , ಲಾಭವಾಗಲಿ ದೇಶದ ಜನತೆಗೆ ಇಲ್ಲ ಇದರಿಂದ ಅನುಕೂಲ ಬಹುಶಃ ಬಿಜೆಪಿಗರಿಗೆ ಆಗಬಹುದು (ವೋಟರ್ಸ್ ಮ್ಯಾಟರ್ಸ್ ) ಅಷ್ಟೇ ಬಿಟ್ರೆ ಬೇರೆ ಇಲ್ಲ , ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಕೆಲಸಕ್ಕೆ ಬಾರದ ಇಂತಹ ವಿಚಾರಗಳನ್ನು ಬಿಟ್ಟು ನಿಜವಾಗಿಯೂ ಗಮನ ಕೊಡಬೇಕಾದ ಆರ್ಥಿಕ ಸಮಸ್ಯೆ , ಶಿಕ್ಷಣ , ರಕ್ಷಣೆ , ಭದ್ರತೆ , ನಿರುದ್ಯೋಗ ಇವುಗಳ ಬಗ್ಗೆ ಗಮನ ಕೊಡಲಿ.
ಇನ್ನುಳಿದಂತೆ ಭಾವುಕವಾಗಿ ಯೋಚನೆ ಮಾಡೋದಾದರೆ ಹೌದು ನಮಗೆ ಬೇಕಿಲ್ಲ ನಾವು ಈ ಮಣ್ಣಿನ ಮಕ್ಕಳು ನಮ್ಮ ನೆಲದಲ್ಲಿ ನಾವು ಯಾರಿಗೂ ನಾವು ಇಲ್ಲಿಯವರು ಎಂದು ಸಾಬೀತು ಪಡಿಸುವ ಅವಶ್ಯಕತೆ ಇಲ್ಲ !
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.
ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ6 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ2 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ1 day ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ