ರಾಜಕೀಯ

NRC ಮತ್ತು CAA ಯಾರಿಗೆ ಲಾಭ‌..?

Published

on

ಬಿಂದು ಶ್ರೀ ಗೌಡ
  • ಬಿಂದು ಗೌಡ ಕೆಪಿಸಿಸಿ,ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ

ಒಂದು ಮನೆಯಲ್ಲಿ ನಾಲ್ಕು ಜನ ಇದ್ರು ಆದ್ರೆ ತಿನ್ನೋಕೆ ಇದ್ದಿದ್ದೇ ಎರಡು ರೊಟ್ಟಿ ಕಡೆಗೆ ಅರ್ಧ ಅರ್ಧ ತಗೊಂಡು ಹಂಚಿಕೊಂಡು ತಿನ್ನೋಣ ಅಂತ ಮಾತು ಕಥೆ ಆಯ್ತು ಇನ್ನೇನು ಎರಡು ರೊಟ್ಟಿ ಭಾಗ ಆಗಿ ನಾಲ್ಕು ಜನ ಹಂಚಿಕೊಳ್ಳಬೇಕು ಅಷ್ಟರಲ್ಲಿ ಹೊರಗಿಂದ ಯಾರೋ 3 ಜನ ಬಂದ್ರು ಈಗ ಇರುವ 2 ರೊಟ್ಟಿಯನ್ನು 4+3 ಅಂದ್ರೆ 7 ಜನ ಹಂಚಿಕೊಳ್ಳಬೇಕು , ಹೇಗೆ ಹಂಚಿಕೊಳ್ಳುತ್ತಾರೆ, ಇದರಿಂದ ಹೊಟ್ಟೆ ತುಂಬುತ್ತಾ ? ರೊಟ್ಟಿಯನ್ನು ಹಂಚಿಕೊಳ್ಳಬಹುದು ಭೂಮಿಯನ್ನು ಹಂಚಿಕೊಳ್ಳೋಕೆ ಸಾಧ್ಯವಾ ?

ಹೌದು ಈಗಿನ ಸಧ್ಯದ ಪರಿಸ್ಥಿತಿ ಹಾಗಿದೆ ದೇಶದಲ್ಲಿ ಈಗಾಗಲೇ ನಿರುದ್ಯೋಗ ಸಮಸ್ಯೆ ಕಳೆದ 45 ವರ್ಷದಲ್ಲೇ ಇದೆ ಮೊದಲ ಬಾರಿಗೆ ಇಷ್ಟರ ಮಟ್ಟಿಗೆ ನಿರುದ್ಯೋಗ ಸಮಸ್ಯೆ ಕಂಡು ಬಂದಿದೆ ಅಂತದರಲ್ಲಿ ಹೊರ ದೇಶಗಳಿಂದ ಬರುವವರಿಗೆ ಜಾಗ ಕೊಟ್ಟು ಪೌರತ್ವವನ್ನು ಕೊಡ್ತೀರಿ ಆಮೇಲೆ ಅವರಿಗೆ ಉದ್ಯೋಗ ಎಲ್ಲಿಂದ ಕೊಡ್ತೀರಿ ? ಬಂದವರು ಬಂದವರ ಹಾಗೆ ಇರ್ತಾರ ? ನೋ ಮದುವೆ ಮಕ್ಕಳು ಹೀಗೆ ಜನಸಂಖ್ಯೆ ಹೆಚ್ಚುತ್ತಲೇ ಹೋಗುತ್ತೆ ಅವರಿಗೆಲ್ಲ ಉದ್ಯೋಗ, ಆಹಾರ ಎಲ್ಲಿಂದ ಉತ್ಪತ್ತಿ ಆಗುತ್ತೆ ಈಗಾಗಲೇ ಅವೈಜ್ಞಾನಿಕ ಜಿ ಎಸ್ ಟಿ ಹೊರೆಯಾಗಿದೆ.

ನೋಟ್ ಬಂದಿಗಳ ಕಾರಣಕ್ಕೆ ಎಷ್ಟೋ ಕಾರ್ಖಾನೆ , ಉದ್ದಿಮೆ , ವ್ಯವಹಾರಗಳು ಮುಚ್ಚಿಹೋಗಿವೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ , ಇಲ್ಲಿರುವವರೇ ಕೆಲಸಗಳನ್ನ ಕಳೆದುಕೊಂಡು ಮನೆಯಲ್ಲಿ ಕೂತಿರುವಾಗ , ನಿರುದ್ಯೋಗ ಹಸಿವಿನ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ, ದೊಡ್ಡ ದೊಡ್ಡ ಉದ್ಯಮಿಗಳು ನಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ CAA ಅವಶ್ಯಕತೆ ಇದೆಯಾ ?

ಇನ್ನು NRC ಇದಿನ್ನೂ ಜಾರಿಯಾಗಿಲ್ಲ , ಆಗುತ್ತೆ ಅನ್ನುವ ಸುಳಿವು ಇದೆ 1990ರಲ್ಲಿ ಹುಟ್ಟಿರುವ ನನ್ನಲ್ಲೇ BIRTH CERTIFICATE ಇಲ್ಲ ಇನ್ನು ಹಳ್ಳಿಗಾಡುಗಳಲ್ಲಿ ಹುಟ್ಟಿದ , ಮನೆಯಲ್ಲಿಯೇ ಹೆರಿಗೆ ಆದವರ ಜನನ ಪ್ರಮಾಣ ಪತ್ರವನ್ನು ಎಲ್ಲಿಂದ ತರೋದು , ಆದಿವಾಸಿಗಳು , ಹಕ್ಕಿ ಪಿಕ್ಕಿಯವರು ಬುಡಕಟ್ಟಿನವರು ಇಂದಿಗೂ ಸೌಲಭ್ಯ ವಂಚಿತರಾಗಿ ಅರಣ್ಯಗಳಲ್ಲಿ ಇದ್ದಾರೆ ಅವರೆಲ್ಲ ಎಲ್ಲಿಂದ ತರ್ತಾರೆ ?? ನಮ್ಮ ದೇಶದಲ್ಲಿ ಏನಿಲ್ಲ ಅಂದ್ರು ಸಾವಿರಾರು ಅನಾಥ ಆಶ್ರಮ , ವೃದ್ಧಾಶ್ರಮಗಳು ಇವೆ ಅವರೆಲ್ಲ ಎಲ್ಲಿಂದ ತರ್ತಾರೆ ತಮ್ಮ ಜನನ ಪ್ರಮಾಣ ಪತ್ರಗಳನ್ನು ?

ಆಧಾರ್ ಕಾರ್ಡ್ , ಪ್ಯಾನ್ ಕಾರ್ಡ್ , ವೋಟರ್ ಐಡಿ , ಪಾಸ್ ಪೋರ್ಟ್ , ರೇಶನ್ ಕಾರ್ಡ್ , ಡ್ರೈವಿಂಗ್ ಲೈಸನ್ಸ್ ಇದ್ಯಾವುದೂ ಕೂಡ ದಾಖಲೆ ಅಲ್ಲ ಅನ್ನೋದೇ ಆದ್ರೆ ಇನ್ನೇನು ಕೊಟ್ಟು ಸಾಭೀತು ಪಡಿಸಬೇಕು ??

ಬಿಜೆಪಿ MEMBERSHIP CARD ತೋರಿಸಿ ಈ ದೇಶದ ಪ್ರಜೆ ಅಂತ ಸಾಬೀತು ಪಡಿಸಬೇಕಾ ???

ಆಧಾರ್ ಕಾರ್ಡ್ ಆಧಾರ ಅಲ್ಲ ಅಂದಾದರೆ ಯಾವ ಆಧಾರದ ಮೇಲೆ ಮಾಡಿದ್ದು ಅದನ್ನ ಯಾತಕ್ಕಾಗಿ ಮಾಡಿದ್ದು , ಜನಗಳ ಸಮಯ ಜೊತೆಗೆ ಹಣ ಎರಡು ಖರ್ಚಾಗಿದೆ ಇನ್ನು ಆಗುತ್ತಲೇ ಇದೆ ಒಂದು ಸಾರಿ ಅಪ್ಡೇಟ್ ಮಾಡಿಸೋಕೆ 50 ರೂಪಾಯಿ ಕೊಡಬೇಕು ಆಧಾರ್ ಆಧಾರ ಅಲ್ಲ ಅಂದಮೇಲೆ ಅಪ್ಡೇಟ್ ಯಾಕೆ ಮಾಡಿಸಬೇಕು ಬ್ಯಾನ್ ಮಾಡಿ ಜನರ ಸಮಯ ಮತ್ತು ದುಡ್ಡು ಆದ್ರೂ ಉಳಿಯುತ್ತೆ!

ಇದರಿಂದ ಮುಸಲ್ಮಾನರಿಗೆ ಮಾತ್ರ ತೊಂದರೆ ಅನ್ನೋದು ಮೂರ್ಖತನ , ಪಕ್ಕದ ಮನೆ ಅಹ್ಮದ್ ಭಾಯ್ ಅವರ ಹಿರೀಕರು ಜನನ ಪುರಾವೆ ಇಟ್ಕೊಂಡಿದ್ರೆ ಅವರಿಗೇನು ಸಮಸ್ಯೆ ಇಲ್ಲ ಇಲ್ಲಿನ ಪೌರತ್ವ ಪಡೀತಾರೆ ಅದೇ ಅಹ್ಮದ್ ಅಣ್ಣನ ಪಕ್ಕದ ಮನೆಯವ ಸುರೇಶ ಯಾವ ದಾಖಲೆ ಇಟ್ಕೊಂಡಿಲ್ಲ ಅಂದ್ರೆ ಅವನು ಈ ದೇಶದ ಪ್ರಜೆ ಅಲ್ಲ ಅಂತ ಡೈರೆಕ್ಟ್ ಆಗಿ ಡಿಟೆಂಶನ್ ಸೆಂಟರ್ ಗೆ ಹಾಕ್ತಾರೆ ಹಿಂದೂ ಅಂತ ಸುಮ್ಮನೆ ಬಿಡೋದಿಲ್ಲ .

ಆದ್ದರಿಂದ NRC ಮತ್ತು CAA ಇಂದ ಅನಾನುಕೂಲವೆ ಹೊರತು ಅನುಕೂಲವಾಗಲಿ , ಲಾಭವಾಗಲಿ ದೇಶದ ಜನತೆಗೆ ಇಲ್ಲ ಇದರಿಂದ ಅನುಕೂಲ ಬಹುಶಃ ಬಿಜೆಪಿಗರಿಗೆ ಆಗಬಹುದು (ವೋಟರ್ಸ್ ಮ್ಯಾಟರ್ಸ್ ) ಅಷ್ಟೇ ಬಿಟ್ರೆ ಬೇರೆ ಇಲ್ಲ , ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಕೆಲಸಕ್ಕೆ ಬಾರದ ಇಂತಹ ವಿಚಾರಗಳನ್ನು ಬಿಟ್ಟು ನಿಜವಾಗಿಯೂ ಗಮನ ಕೊಡಬೇಕಾದ ಆರ್ಥಿಕ ಸಮಸ್ಯೆ , ಶಿಕ್ಷಣ , ರಕ್ಷಣೆ , ಭದ್ರತೆ , ನಿರುದ್ಯೋಗ ಇವುಗಳ ಬಗ್ಗೆ ಗಮನ ಕೊಡಲಿ.

ಇನ್ನುಳಿದಂತೆ ಭಾವುಕವಾಗಿ ಯೋಚನೆ ಮಾಡೋದಾದರೆ ಹೌದು ನಮಗೆ ಬೇಕಿಲ್ಲ ನಾವು ಈ ಮಣ್ಣಿನ ಮಕ್ಕಳು ನಮ್ಮ ನೆಲದಲ್ಲಿ ನಾವು ಯಾರಿಗೂ ನಾವು ಇಲ್ಲಿಯವರು ಎಂದು ಸಾಬೀತು ಪಡಿಸುವ ಅವಶ್ಯಕತೆ ಇಲ್ಲ !

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version