Connect with us

ದಿನದ ಸುದ್ದಿ

ಎನ್ ಆರ್ ಸಿ ವಿರುದ್ಧ ಕವಿತೆ ವಾಚಿಸಿದ್ದಕ್ಕೆ ಎಫ್ ಐ ಆರ್ | ಇದು ‘ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ’ ; ನೆಟ್ಟಿಗರ ಆಕ್ರೋಶ

Published

on

ಪತ್ರಕರ್ತ ಸಿರಾಜ್ ಬೆಸರಳ್ಳಿ

ಸುದ್ದಿದಿನ ಡೆಸ್ಕ್ : ಕೊಪ್ಪಳದ ಪತ್ರಕರ್ತ ಸಿರಾಜ್ ಬಿಸರಳ್ಳಿ ಅವರು ಜನವರಿ 9 ಮತ್ತು 10 ನೇ ತಾರೀಖಿನಂದು ಕೊಪ್ಪಳದಲ್ಲಿ ನಡೆದ ‘ಆನೆಗುಂದಿ ಉತ್ಸವ’ ದಲ್ಲಿ ‘ ನಿನ್ನ ದಾಖಲೆ ಯಾವಾಗ ಕೊಡುತ್ತೀ..? ಎಂಬ ಪೌರತ್ವ ತಿದ್ದುಪಡಿ ಕಾಯ್ದೆ (ಎನ್ ಆರ್ ಸಿ)ವಿರೋಧಿಸಿ ಬರೆದ ಕವಿತೆಯನ್ನು ವಾಚಿಸಿದ್ದರು. ಈ ಕಾರಣವನ್ನಿಟ್ಟುಕೊಂಡು ಗಂಗಾವತಿಯ ಬಿಜೆಪಿ ನಗರ ಘಟಕವು ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿಗೆ ದೂರುನೀಡಿತ್ತು. ಈ ದೂರಿನನ್ವಯ ಪೊಲೀಸರು ಪತ್ರಕರ್ತ ಸಿರಾಜ್ ಬಿಸರಳ್ಳಿಯವರ ಮೇಲೆ ಎಫ್ ಐ ಆರ್ ದಾಖಲಿಸಿದೆ.

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ಕಾಯ್ದೆಯೊಂದನ್ನು ವಿರೋಧಿಸಿ ಬರೆದ ಕವಿತೆ ವಾಚಿಸಿದಕ್ಕೆ ಕವಿಯ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ, ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವೆಂದು ನೆಟ್ಟಿಗರು ಬಿಜೆಪಿ ಮತ್ತು ಗಂಗಾವತಿ ಪೋಲಿಸ್ ಇಲಾಖೆಯ ವಿರುದ್ಧ ಆಕ್ರೋಶವ್ಯಕ್ತ ಪಡಿಸಿದ್ದಾರೆ.

ಹಾಗೆಯೇ, ಸಿರಾಜ್ ಬಿಸರಳ್ಳಿ ಅವರಿಗೆ ಬೆಂಬಲ ಸೂಚಿಸಿ ಅವರು ವಾಚಿಸಿದ ಕವಿತೆಯನ್ನು ಪ್ರಗತಿಪರ ಚಿಂತಕರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ಆ ಕವಿತೆ ಈ ಕೆಳಗಿನಂತಿದೆ.

ಕವಿತೆ | ನಿನ್ನ ದಾಖಲೆ ಯಾವಾಗ ಕೊಡುತ್ತೀ ?

  • ಸಿರಾಜ್ ಬೆಸರಳ್ಳಿ

ಧಾರು, ರೇಷನ್ ಕಾರ್ಡಗಳ ಕ್ಯೂನಲ್ಲಿ
ಥಂಬಿನ, ಸರ್ವರಿನ ಮಂಗನಾಟದಲ್ಲಿ
ಬದುಕ ಕಳೆದುಕೊಳ್ಳು ತ್ತಿರುವವರ ದಾಖಲೆ
ಕೇಳುವವನೇ ನಿನ್ನ ದಾಖಲೆ ಯಾವಾಗ ನೀಡುತ್ತಿ?

ನಾಡಿನ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಲೇ ನೇಣಿಗೇರಿದವರ,
ಹೆಸರೂ ಬೇಡವೆಂದು ಹುತಾತ್ಮರಾದವರ
ಇತಿಹಾಸದ ಹಾಳೆಗಳ ಹರಿಯುತ್ತಿರುವವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ ?

ತಾಜ್ ಮಹಲ್, ಚಾರ್ ಮಿನಾರು ಗುಂಬಜಗಳಿಗೆ
ಕೆಂಪು ಕೋಟೆ ಕುತುಬ್ ಮಿನಾರುಗಳಿಗೆ ಸಾಕ್ಷಿ ಕೇಳುತ್ತಿರುವವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ?

ಬ್ರಿಟಿಷರ ಬೂಟು ನೆಕ್ಕಿದ ತಲೆಹಿಡುಕರ
ಧರ್ಮ ದ್ವೇಷದ ಅಮಲಿನಲ್ಲಿ ರಕ್ತ ಕುಡಿಯುತ್ತಿರುವ
ಗೊಬೆಲ್ ಸಂತತಿಯವನೇ
ನಿನ್ನ ದಾಖಲೆ ಯಾವಾಗ ನೀಡುತ್ತಿ?

ಪಕೋಡ ಮಾರಿ ಬದುಕಿದವನು
ಚಾ ಮಾರಿ ಬದುಕಿದವನು ನನ್ನೂರಿನಲ್ಲಿ
ಮನುಷ್ಯತ್ವ ಮಾರಿಕೊಂಡಿಲ್ಲ
ಸ್ವಾಭಿಮಾನ ಮಾರಿಕೊಂಡಿಲ್ಲ, ಸುಳ್ಳಿನ ಕಂತೆಗಳ ಕತೆ ಕಟ್ಟಿಲ್ಲ
ಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ?

ಮುಳ್ಳು ಚುಚ್ಚಿ, ಹರಿದು, ಸಿಡಿದು ಹೋದ
ಟ್ಯೂಬುಗಳ, ಟೈಯರುಗಳ ತಿದ್ದಿ ತೀಡಿ ಗಾಳಿ ತುಂಬಿದ
ಪಂಚರ್ ನವನು ತನ್ನತನವನ್ನು ಮಾರಿಕೊಳ್ಳಲಿಲ್ಲ
ನೀನು ದೇಶವನ್ನೇ ಮಾರಿಬಿಟ್ಟೆಯಲ್ಲ
ಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ?

ದೇಶವನ್ನೇ ಯಾಮಾರಿಸಿದ ನಿನಗೆ
ನಕಲಿ ದಾಖಲೆಗಳು ದೊಡ್ಡದಲ್ಲ ಬಿಡು
ಕನಿಷ್ಠ ಮನುಷ್ಯತ್ವವೂ ನಿನಗಿದೆ
ಎನ್ನುವ ದಾಖಲೆ ಯಾವಾಗ ನೀಡುತ್ತಿ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending