ದಿನದ ಸುದ್ದಿ
ದಲಿತರಿಗಿಂತಲೂ ಹಿಂದುಳಿದಿರುವ ಹಿಂದುಳಿದ ಜಾತಿಗಳು..?
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/08/obc_suddidina.jpg&description=ದಲಿತರಿಗಿಂತಲೂ ಹಿಂದುಳಿದಿರುವ ಹಿಂದುಳಿದ ಜಾತಿಗಳು..?', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/08/obc_suddidina.jpg&description=ದಲಿತರಿಗಿಂತಲೂ ಹಿಂದುಳಿದಿರುವ ಹಿಂದುಳಿದ ಜಾತಿಗಳು..?', 'pinterestShare', 'width=750,height=350'); return false;" title="Pin This Post">
- ರಘೋತ್ತಮ ಹೊ.ಬ
ಸಮಾಜದಲ್ಲಿ ನಮ್ಮಂತಹವರು ಕಷ್ಟ ಕೇವಲ ನಮಗೆ ಮಾತ್ರ ಎಂದು ಅಂದುಕೊಳ್ಳುತ್ತೇವೆ. ಆದರೆ ವಾಸ್ತವ ಹಾಗಿಲ್ಲ. ಯಾಕೆಂದರೆ ದಲಿತರಿಗಿಂತಲೂ ಹಿಂದುಳಿದಿರುವ ಒಂದು ಬೃಹತ್ ವರ್ಗ ನಮ್ಮ ಸುತ್ತ ಇದೆ. ಅವರನ್ನು ಸಾಂವಿಧಾನಿಕ ಭಾಷೆಯಲ್ಲಿ ಹಿಂದುಳಿದ ವರ್ಗಗಳು ಎಂದೇ ಕರೆಯಬಹುದು ಮತ್ತು ಅವರ ಹಕ್ಕುಗಳಿಗಾಗಿ ಬಾಬಾಸಾಹೇಬ್ ಅಂಬೇಡ್ಕರರು ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ನೀಡಿದರು ಎಂಬುದಷ್ಟೆ ನಮಗೆ ಗೊತ್ತಿರುವುದು.
ಆದರೆ ಈಗಿನ ವಾಸ್ತವವೆಂದರೆ so called ದಲಿತೇತರ ಹಿಂದುಳಿದ ವರ್ಗಗಳು ಶಿಕ್ಷಣ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ದಲಿತರಿಗಿಂತಲೂ ಹಿಂದುಳಿದಿದ್ದಾರೆ. ಬಾಲ್ಯವಿವಾಹ, ಶಿಕ್ಷಣದ ಮಹತ್ವದ ಅರಿವಿಲ್ಲದಿರುವುದು, ಅತಿಯಾದ ಮೂಢನಂಬಿಕೆ ಈ ಸಮಸ್ಯೆಗಳಿಂದ ಅವರು ಜರ್ಝರಿತರಾಗಿದ್ದಾರೆ.
ದಲಿತರ ಒಂದು advantage ಏನೆಂದರೆ ಅವರಿಗೆ ಒಂದು ಬಾಬಾಸಾಹೇಬ್ ಅಂಬೇಡ್ಕರರಂತಹ ವೈಚಾರಿಕ ಐಕಾನ್ ಸಿಕ್ಕಿದ್ದಾರೆ. ಅವರ ಮೂಢನಂಬಿಕೆ ಆಚರಣೆಗಳು ಅಂಬೇಡ್ಕರ್ ಚಿಂತನೆ ಮತ್ತು ಭಾವಚಿತ್ರಗಳ ಮುಂದೆ ಮಸುಕಾಗಿ ಹೋಗುತ್ತವೆ. ಆದರೆ ಹಿಂದುಳಿದ ವರ್ಗಗಳ ಸ್ಥಿತಿ ಹಾಗಲ್ಲ. ಅವರಿಗೆ ತಮ್ಮದೆ ಆದಂತಹ ವೈಚಾರಿಕ ಐಕಾನ್ ಅಥವಾ ಆದರ್ಶ ಸಿಕ್ಕಿಲ್ಲ. ಕೆಲ ಪೌರಾಣಿಕ ಮತ್ತು ಜಾನಪದ ಶಕ್ತಿಗಳನ್ನು ಅವರು ಆದರ್ಶ ಅಥವಾ ಐಕಾನ್ ಆಗಿ ಸ್ವೀಕರಿಸಿರಬಹುದು.
ಆದರೆ ಜಾತಿ ವ್ಯವಸ್ಥೆಯ ಶೋಷಣೆಯಿಂದ ತಪ್ಪಿಸಿಕೊಳ್ಳಲು ಅದು ಅವರಿಗೆ ಏನೇನಕ್ಕೂ ಸಹಾಯಕ್ಕೆ ಬರುತ್ತಿಲ್ಲ ಮತ್ತು ಅವರ ಈ ನಂಬಿಕೆಗಳನ್ನು ಪಟ್ಟಭದ್ರ ಜಾತಿಗಳು ತಮ್ಮ ಹಿತಾಸಕ್ತಿಗಳಿಗೆ ಬಳಸಿಕೊಂಡು ಹಿಂದುಳಿದ ಜಾತಿಗಳು ಮತ್ತಷ್ಟು ಹಿಂದುಳಿಯುವಂತಾಗಲು, ಅವರ ಹಕ್ಕುಗಳು ಅವರಿಗೆ ಅರಿವಾಗದಂತಿರಲು ನೋಡಿಕೊಳ್ಳುತ್ತಿವೆ ಎನಿಸುತ್ತಿದೆ.
ಈ ಕಾರಣಕ್ಕಾಗಿ ಹಿಂದುಳಿದ ವರ್ಗಗಳು ಕೂಡ ಬಾಬಾಸಾಹೇಬ್ ಅಂಬೇಡ್ಕರರನ್ನು ತನ್ನ ಆದರ್ಶವಾಗಿ ಸ್ವೀಕರಿಸಬಹುದು, ಅವರ ಚಿಂತನೆಗಳನ್ನು ಓದಿಕೊಂಡು ತಮ್ಮ ಸಮುದಾಯಗಳಿಗೆ ಅದನ್ನು apply ಮಾಡಿಕೊಂಡು ವಿಮೋಚನೆ ಕಂಡುಕೊಳ್ಳಬಹುದು. ಇದೇ ಉದ್ದೇಶ ಇಟ್ಟುಕೊಂಡೇ ಇರಬಹುದು ಕಾನ್ಷೀರಾಮ್ ರವರು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ನಾವೆಲ್ಲಾ ಬಹುಜನರು ಎಂದು ಹೇಳಿದ್ದಿರಬಹುದು.
ಕಾನ್ಷೀರಾಮ್ ರವರು ಹೇಳಿದ್ದು ಕೆಲವರಿಗೆ ಅಂದು ಅಸಹಜ ಎನಿಸಿರಬಹುದು. ಆದರೆ ಇಂದು ಅದು ವಾಸ್ತವ ಎನಿಸುತ್ತಿದೆ. ದಲಿತರಿಗಿಂತ ಶಿಕ್ಷಣ, ವೈಚಾರಿಕತೆ ಮತ್ತು ವೈಜ್ಞಾನಿಕತೆಯಲ್ಲಿ ಹಿಂದುಳಿದಿರುವ ಹಿಂದುಳಿದ ವರ್ಗಗಳು ನಮ್ಮ ಕಣ್ಣ ಮುಂದಿರುವುದು ಇದಕ್ಕೆ ಸಾಕ್ಷಿಯಾಗಿದೆ. ಯಾವ ಮಟ್ಟಿಗಿನ ಹಿಂದುಳಿದಿರುವಿಕೆ ಎಂದರೆ ತಮಗೂ ಕೂಡ ಸಂವಿಧಾನ ಪ್ರಕಾರ ಇಷ್ಟಿಷ್ಟು ಶೇಕಡ ಮೀಸಲಾತಿ ಇದೆ ಎಂದು ಈಗಲೂ ಎಷ್ಟೋ ಹಿಂದುಳಿದ ಜಾತಿಗಳಿಗೆ ಗೊತ್ತಿಲ್ಲ.
ಆ ಕಾರಣದಿಂದ ಜಾತಿ ವ್ಯವಸ್ಥೆಯ ಈ ಕ್ರೂರ ಪದ್ದತಿಯಲ್ಲಿ ಹಿಂದುಳಿದ ವರ್ಗಗಳು ತಡವಾಗಿಯಾದರೂ ಎಚ್ಚೆತ್ತುಕೊಳ್ಳುವ ಅಗತ್ಯವಿದೆ. ತಮ್ಮ ವಿಮೋಚನೆಯನ್ನು ತಾವೇ ಎಷ್ಟು ಸಾಧ್ಯವೋ ಅಷ್ಟು ಕಂಡುಕೊಳ್ಳಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ4 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ22 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

