Connect with us

ದಿನದ ಸುದ್ದಿ

ದಲಿತರಿಗಿಂತಲೂ ಹಿಂದುಳಿದಿರುವ ಹಿಂದುಳಿದ ಜಾತಿಗಳು..?

Published

on

  • ರಘೋತ್ತಮ ಹೊ.ಬ

ಮಾಜದಲ್ಲಿ ನಮ್ಮಂತಹವರು ಕಷ್ಟ ಕೇವಲ ನಮಗೆ ಮಾತ್ರ ಎಂದು ಅಂದುಕೊಳ್ಳುತ್ತೇವೆ. ಆದರೆ ವಾಸ್ತವ ಹಾಗಿಲ್ಲ. ಯಾಕೆಂದರೆ ದಲಿತರಿಗಿಂತಲೂ ಹಿಂದುಳಿದಿರುವ ಒಂದು ಬೃಹತ್ ವರ್ಗ ನಮ್ಮ ಸುತ್ತ ಇದೆ. ಅವರನ್ನು ಸಾಂವಿಧಾನಿಕ ಭಾಷೆಯಲ್ಲಿ ಹಿಂದುಳಿದ ವರ್ಗಗಳು ಎಂದೇ ಕರೆಯಬಹುದು ಮತ್ತು ಅವರ ಹಕ್ಕುಗಳಿಗಾಗಿ ಬಾಬಾಸಾಹೇಬ್ ಅಂಬೇಡ್ಕರರು ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ನೀಡಿದರು ಎಂಬುದಷ್ಟೆ ನಮಗೆ ಗೊತ್ತಿರುವುದು.

ಆದರೆ ಈಗಿನ ವಾಸ್ತವವೆಂದರೆ so called ದಲಿತೇತರ ಹಿಂದುಳಿದ ವರ್ಗಗಳು ಶಿಕ್ಷಣ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ದಲಿತರಿಗಿಂತಲೂ ಹಿಂದುಳಿದಿದ್ದಾರೆ. ಬಾಲ್ಯವಿವಾಹ, ಶಿಕ್ಷಣದ ಮಹತ್ವದ ಅರಿವಿಲ್ಲದಿರುವುದು, ಅತಿಯಾದ ಮೂಢನಂಬಿಕೆ ಈ ಸಮಸ್ಯೆಗಳಿಂದ ಅವರು ಜರ್ಝರಿತರಾಗಿದ್ದಾರೆ.

ದಲಿತರ ಒಂದು advantage ಏನೆಂದರೆ ಅವರಿಗೆ ಒಂದು ಬಾಬಾಸಾಹೇಬ್ ಅಂಬೇಡ್ಕರರಂತಹ ವೈಚಾರಿಕ ಐಕಾನ್ ಸಿಕ್ಕಿದ್ದಾರೆ. ಅವರ ಮೂಢನಂಬಿಕೆ ಆಚರಣೆಗಳು ಅಂಬೇಡ್ಕರ್ ಚಿಂತನೆ ಮತ್ತು ಭಾವಚಿತ್ರಗಳ ಮುಂದೆ ಮಸುಕಾಗಿ ಹೋಗುತ್ತವೆ. ಆದರೆ ಹಿಂದುಳಿದ ವರ್ಗಗಳ ಸ್ಥಿತಿ ಹಾಗಲ್ಲ. ಅವರಿಗೆ ತಮ್ಮದೆ ಆದಂತಹ ವೈಚಾರಿಕ ಐಕಾನ್ ಅಥವಾ ಆದರ್ಶ ಸಿಕ್ಕಿಲ್ಲ. ಕೆಲ ಪೌರಾಣಿಕ ಮತ್ತು ಜಾನಪದ ಶಕ್ತಿಗಳನ್ನು ಅವರು ಆದರ್ಶ ಅಥವಾ ಐಕಾನ್ ಆಗಿ ಸ್ವೀಕರಿಸಿರಬಹುದು.

ಆದರೆ ಜಾತಿ ವ್ಯವಸ್ಥೆಯ ಶೋಷಣೆಯಿಂದ ತಪ್ಪಿಸಿಕೊಳ್ಳಲು ಅದು ಅವರಿಗೆ ಏನೇನಕ್ಕೂ ಸಹಾಯಕ್ಕೆ ಬರುತ್ತಿಲ್ಲ ಮತ್ತು ಅವರ ಈ ನಂಬಿಕೆಗಳನ್ನು ಪಟ್ಟಭದ್ರ ಜಾತಿಗಳು ತಮ್ಮ ಹಿತಾಸಕ್ತಿಗಳಿಗೆ ಬಳಸಿಕೊಂಡು ಹಿಂದುಳಿದ ಜಾತಿಗಳು ಮತ್ತಷ್ಟು ಹಿಂದುಳಿಯುವಂತಾಗಲು, ಅವರ ಹಕ್ಕುಗಳು ಅವರಿಗೆ ಅರಿವಾಗದಂತಿರಲು ನೋಡಿಕೊಳ್ಳುತ್ತಿವೆ ಎನಿಸುತ್ತಿದೆ.

ಈ ಕಾರಣಕ್ಕಾಗಿ ಹಿಂದುಳಿದ ವರ್ಗಗಳು ಕೂಡ ಬಾಬಾಸಾಹೇಬ್ ಅಂಬೇಡ್ಕರರನ್ನು ತನ್ನ ಆದರ್ಶವಾಗಿ ಸ್ವೀಕರಿಸಬಹುದು, ಅವರ ಚಿಂತನೆಗಳನ್ನು ಓದಿಕೊಂಡು ತಮ್ಮ ಸಮುದಾಯಗಳಿಗೆ ಅದನ್ನು apply ಮಾಡಿಕೊಂಡು ವಿಮೋಚನೆ ಕಂಡುಕೊಳ್ಳಬಹುದು. ಇದೇ ಉದ್ದೇಶ ಇಟ್ಟುಕೊಂಡೇ ಇರಬಹುದು ಕಾನ್ಷೀರಾಮ್ ರವರು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ನಾವೆಲ್ಲಾ ಬಹುಜನರು ಎಂದು ಹೇಳಿದ್ದಿರಬಹುದು.

ಕಾನ್ಷೀರಾಮ್ ರವರು ಹೇಳಿದ್ದು ಕೆಲವರಿಗೆ ಅಂದು ಅಸಹಜ ಎನಿಸಿರಬಹುದು. ಆದರೆ ಇಂದು ಅದು ವಾಸ್ತವ ಎನಿಸುತ್ತಿದೆ. ದಲಿತರಿಗಿಂತ ಶಿಕ್ಷಣ, ವೈಚಾರಿಕತೆ ಮತ್ತು ವೈಜ್ಞಾನಿಕತೆಯಲ್ಲಿ ಹಿಂದುಳಿದಿರುವ ಹಿಂದುಳಿದ ವರ್ಗಗಳು ನಮ್ಮ ಕಣ್ಣ ಮುಂದಿರುವುದು ಇದಕ್ಕೆ ಸಾಕ್ಷಿಯಾಗಿದೆ. ಯಾವ ಮಟ್ಟಿಗಿನ ಹಿಂದುಳಿದಿರುವಿಕೆ ಎಂದರೆ ತಮಗೂ ಕೂಡ ಸಂವಿಧಾನ ಪ್ರಕಾರ ಇಷ್ಟಿಷ್ಟು ಶೇಕಡ ಮೀಸಲಾತಿ ಇದೆ ಎಂದು ಈಗಲೂ ಎಷ್ಟೋ ಹಿಂದುಳಿದ ಜಾತಿಗಳಿಗೆ ಗೊತ್ತಿಲ್ಲ.

ಆ ಕಾರಣದಿಂದ ಜಾತಿ ವ್ಯವಸ್ಥೆಯ ಈ ಕ್ರೂರ ಪದ್ದತಿಯಲ್ಲಿ ಹಿಂದುಳಿದ ವರ್ಗಗಳು ತಡವಾಗಿಯಾದರೂ ಎಚ್ಚೆತ್ತುಕೊಳ್ಳುವ ಅಗತ್ಯವಿದೆ. ತಮ್ಮ ವಿಮೋಚನೆಯನ್ನು ತಾವೇ ಎಷ್ಟು ಸಾಧ್ಯವೋ ಅಷ್ಟು ಕಂಡುಕೊಳ್ಳಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending