ದಿನದ ಸುದ್ದಿ
ಆನ್ಲೈನ್ ಶಿಕ್ಷಣ ಬೇಕೋ..? ಬೇಡವೋ..?
- ಸಂಗಮೇಶ ಎನ್ ಜವಾದಿ
ಕರೋನಾ ಎಂಬ ಮಹಾಮಾರಿಯ ಹಾವಳಿಯಿಂದ ಲಕ್ಷಾಂತರ ಜನರು ಇನ್ನು ಆತಂಕ ಸ್ಥಿತಿಯಲ್ಲಿ ಇದ್ದಾರೆ. ಜೊತೆಗೆ ಹಲವಾರು ಸಮಸ್ಯೆಗಳು ಜನಸಾಮಾನ್ಯರು ದಿನನಿತ್ಯ ಅನುಭವಿಸುತ್ತಿದ್ದಾರೆ. ಅದರಲ್ಲಿ ವಿಶೇಷವಾಗಿ ಮಕ್ಕಳ ಸ್ಥಿತಿಯಂತು ಹೇಳತೀರದು ಎನ್ನಬಹುದು. ಈಗ ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಅಂದರೆ ಅವರ ಶಿಕ್ಷಣದ ಉನ್ನತಿಗಾಗಿ ಶಿಕ್ಷಣ ಪಡೆಯುವುದು ಅನಿವಾರ್ಯವಾಗಿದೆ ಎನ್ನಬಹುದು.
ಆದರೆ ಈಗ ಸಧ್ಯ ಶಾಲೆಗಳಿಗೆ ಮಕ್ಕಳು ಹೋಗುವಂತಿಲ್ಲ.ಒಂದು ವೇಳೆ ಶಾಲೆಗಳಿಗೆ ತೆರಳಿ ಒಂದೇ ಕಡೆ ಮಕ್ಕಳು ಸೇರಿದರೇ, ಕೊರೋನಾ ಹಾವಳಿ ಹೆಚ್ಚಾಗುವದಂತು ಖಂಡಿತಾ ಹಾಗಾಗಿ ಕೊರೋನಾ ಹಾವಳಿ ಹೆಚ್ಚಾಗಬಹುದೆಂಬ ಭಯದ ಹಿನ್ನೆಲೆಯಲ್ಲಿ ಕೆಲ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ
ಆನ್ಲೈನ್ ಶಿಕ್ಷಣ ನೀಡುವ ವ್ಯವಸ್ಥೆ ಜಾರಿಗೆ ತಂದಿದ್ದಾರೆ.
ಆದರೆ ಈ ಆನ್ಲೈನ್ ಶಿಕ್ಷಣ ವ್ಯವಸ್ಥೆಯಿಂದ
ಮಕ್ಕಳ ಅಧ್ಯಯನದ ಮೇಲೆ ಎಷ್ಟು ಪರಿಣಾಮಕಾರಿಯಾಗಿ ಶಿಕ್ಷಣ(ಅಭ್ಯಾಸ)ದ ಪ್ರಭಾವ ಬೀರುತ್ತದೆ ಎಂಬುದು ಈಗಿರುವ ಮುಖ್ಯ ಪ್ರಶ್ನೆ ಜೊತೆಗೆ ಬಡ ಕುಟುಂಬದ ಮಕ್ಕಳ ಸ್ಥಿತಿಗತಿ, ಅವರ ಆರ್ಥಿಕ ಪರಿಸ್ಥಿತಿ ಹೇಗೆ ಎನ್ನುವುದು ಸೇರಿದಂತೆ ನೂರಾರು ಪ್ರಶ್ನೆಗಳು ಸಹಜವಾಗಿಯೇ ನಮ್ಮನ್ನು ಕಾಡುತ್ತಿವೆ ಮತ್ತು ಘಾಸಿಗೊಳಿಸುತ್ತಿವೆ.ಈ ನಿಟ್ಟಿನಲ್ಲಿ ಆನ್ಲೈನ್ ಶಿಕ್ಷಣ ಬೇಕೋ ಬೇಡವೋ ಎನ್ನುವ ಶೀರ್ಷಿಕೆ ಬಳಸಿಕೊಂಡು ಈ ಚಿಕ್ಕ ಲೇಖನ ಬರೆಯುವ ಕಾಯಕ ಮಾಡಿರುತ್ತೇನೆ.ಹಾಗಾಗಿ ತಮ್ಮ ಮುಂದೆ ಈ ಲೇಖನ ತರುವ ಪುಟ್ಟ ಪ್ರಯತ್ನ ನಮ್ಮದಾಗಿದೆ.
ಈ ಹಿನ್ನೆಲೆಯಲ್ಲಿ ಈಗ ಎಲ್ಲೆಡೆ ಆನ್ಲೈನ್ ಕ್ಲಾಸ್ ಗಳು ಪ್ರಾರಂಭವಾಗಿವೆ. ಆಯಾ ವಿಷಯಕ್ಕೆ ತಕ್ಕಂತೆ ದಿನಾಲೂ ಶಿಕ್ಷಕಿಯರು – ಶಿಕ್ಷಕರು ಪಾಠ ಮಾಡುತ್ತಿದ್ದಾರೆ.ಮಕ್ಕಳು ಆನ್ಲೈನ್ ಕ್ಲಾಸ್ನನಲ್ಲಿಯೇ
ಪಾಠಗಳನ್ನು ಕೇಳಿ ಮನೆಯಲ್ಲಿಯೇ ಅಭ್ಯಾಸ ಮಾಡಬೇಕು. ಶಾಲೆಯಲ್ಲಿ ಪಾಠ ಮಾಡುವಾಗ ಶಿಕ್ಷಕರು ಮಕ್ಕಳ ಮನಸ್ಸನ್ನು ಸೆರೆ ಹಿಡಿಯಲು ಪಾಠ ಬೋಧನೋಪಕರಣಗಳ ಜೊತೆಗೆ ನಾನಾ ತರಹದ ಸರ್ಕಸ್ಸುಗಳನ್ನು ಮಾಡುತ್ತಿರುತ್ತಾರೆ.
ಆದರೂ ಕೂಡ ಕೆಲವು ವಿದ್ಯಾರ್ಥಿಗಳು ಪಾಠಗಳನ್ನು ಕೇಳುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ ಹಾಗೂ ಮತ್ತೊಂದು ಕಡೆ ಬಡತನದ ಪರಿಸ್ಥಿತಿಯಲ್ಲಿ ಬದುಕು ಸಾಗಿಸುತ್ತಿರುವ ಬಡವರ ಹತ್ತಿರ ಮೊಬೈಲ್ ಇಲ್ಲದೇ ಇರಬಹುದು. ಇದ್ದರೂ ಹಳ್ಳಿಗಳಲ್ಲಿ ನೆಟ್ವರ್ಕ್ ಸಮಸ್ಯೆ. ಇದರಿಂದ ಆನ್ಲೈನ್ ಶಿಕ್ಷಣ ಎಲ್ಲರಿಗೂ ತಲುಪುವುದು ಕಷ್ಟವಾಗಬಹುದೆಂಬ ಅನುಮಾನ ಕೆಲ ಪೂಷಕರಲ್ಲಿ ಕಾಣುತ್ತವೆ.ಆದ್ದರಿಂದ ಹಿಗಿದ್ದ ಮೇಲೂ ಮಕ್ಕಳ ಮೇಲೆ ಈ ಶಿಕ್ಷಣ ಯಾವ ರೀತಿ ಪ್ರಭಾವ ಬೀರುತ್ತದೆಯೇ ಎಂಬುದು ಬರುವ ದಿನಮಾನಗಳಲ್ಲಿ ಕಾಣಬಹುದು.
ಇನ್ನೂ ನನ್ನ ಪ್ರಕಾರ ಹೇಳುವುದಾದರೆ ಆನ್ಲೈನ್ ಕ್ಲಾಸ್ ತೆಗೆದುಕೊಳ್ಳುವುದು ಸೂಕ್ತವಲ್ಲ. ಏಕೆಂದರೆ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಅಷ್ಟು ಚೆನ್ನಾಗಿ ಶಿಕ್ಷಕರು ಪಾಠ ಮಾಡಿದರು ಸಹ ಮಕ್ಕಳಿಗೆ ಆ ಪಾಠವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟಕರವಾಗುವಾಗ,ಇಂತಹ ಸಮಯದಲ್ಲಿ ಈಗ ಆನ್ಲೈನ್ ಪಾಠ ತಿಳಿದುಕೊಳ್ಳುತ್ತಾರೆಯೇ ಎನ್ನುವುದು ನಮ್ಮ ದೊಡ್ಡ ಯಕ್ಷ ಪ್ರಶ್ನೆ ? ಇದು ಒಂದು ಕಡೆಯಾದರೆ ಆನ್ಲೈನ್ ಕ್ಲಾಸ್ ಕೇಳಲು ಫೋನ್ ಮತ್ತು ಲ್ಯಾಪ್ಟಾಪ್ ಗಳ ಅವಶ್ಯಕತೆ ಇದೆ ಎನ್ನುವುದು ಸುಳ್ಳಲ್ಲ.
ಆದರೆ ಎಲ್ಲ ಪೋಷಕರು ಶ್ರೀಮಂತರಾಗಿರುವುದಿಲ್ಲ ಎನ್ನುವುದಂತು ನೂರಕ್ಕೆ ನೂರರಷ್ಟು ನಿಜ. ನಿಜವಾದರೆ ಅಂತಹ ಬಡ ವಿದ್ಯಾರ್ಥಿಗಳಿಗೆ ಫೋನ್ ಮತ್ತು ಲ್ಯಾಪ್ಟಾಪ್ ಗಳನ್ನು ಖರೀದಿಸಲು ಸಾಧ್ಯವಿಲ್ಲ ಅಂದ ಮೇಲೆ ಅಂತಹವರಿಗೆ ಆನ್ಲೈನ್ ಕ್ಲಾಸ್ ನಿಂದ ಅವರಿಗೇನು ಪ್ರಯೋಜನ ಎಂಬುದು ಇನ್ನು ಅರ್ಥವಾಗದೆ ಇರುವ ಮಾತು. ಅಂದರೆ ಇದು ಕೇವಲ ಉಳ್ಳುವವರಿಗೆ ಮಾತ್ರ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.ಹಿಗಾದಾಗ ಶ್ರೀಮಂತರು ಮಾತ್ರ ಪಾಠ ಕೇಳಬೇಕೆ? ಎನ್ನುವ ಪ್ರಶ್ನೆ ಕೆಲ ಬಡವರಲ್ಲಿ
ಮೂಡುತ್ತದೆ.
ಇದಲ್ಲದೆ ಚಿಕ್ಕಮಕ್ಕಳಂತೂ ಮನೆಯಲ್ಲಿ ಮೊಬೈಲ್ ದಾಸರಾಗಿಬಿಟ್ಟಿದ್ದಾರೆ. ಆನ್ಲೈನ್ ಕ್ಲಾಸ್ ಇದೆಯಂತ ಹೇಳಿ ವಿಡಿಯೋ ಗೇಮ್ ಗಳನ್ನು ಆಡುವುದೇ ಜಾಸ್ತಿ.ಒಂದಿಬ್ಬರು ಸೇರಿದರೆ ಇಡೀ ದಿನ ಆಟಆಡುವುದರಲ್ಲೆ ಮಗ್ನನಾಗಿರುತ್ತಾರೆ.ಒಂದೆಡೆ ಕೂತು ಆನ್ಲೈನ್ ಕ್ಲಾಸ್ ಕೇಳುವುದು ಇವರಿಗೆ ಕಷ್ಟವಾಗಬಹುದು. ಹಾಗೂ ಹೋಮ್ ವರ್ಕ್ ಮಾಡಲು ಕಿರಿಕಿರಿ ಮಾಡುತ್ತಾರೆ. ಅದರಿಂದ ಮಕ್ಕಳ ಪಾಲಕರಿಗೆ ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆಯಾಗುವುದು ಸುಳ್ಳಲ್ಲ.
ಅಲ್ಲದೆ ಹಳ್ಳಿಗಳಲ್ಲಿ ಇರುವ ಮಕ್ಕಳು ಹೊಲ ಮನೆ ಕೆಲಸ, ಕೂಲಿ ಕೆಲಸ ಇನ್ನೂ ಅನೇಕ ಕೆಲಸಗಳನ್ನು ಮಾಡುವುದರಿಂದ ಪೂಷಕರೂಂದಿಗೆ ದುಡಿಯಲು ಹೋಗುತ್ತಾರೆ. ಇದರಿಂದ ಇವರ ಶಿಕ್ಷಣ ಕಡಿತ ಗೊಳ್ಳುವ ಸಂಬಂಧ ಎದುರಾಗಬಹುದು.
ಆದ್ದರಿಂದ ಹಳ್ಳಿಗಳಲ್ಲಿ ದುಡಿಮೆಯೇ ದೇವರು ಎಂದುಕೊಂಡವರು ಶಾಲೆಗಳ ಕಡೆಗೆ ಅಷ್ಟಾಗಿ ಒತ್ತು ಕೊಡುವುದಿಲ್ಲ. ಕರೋನಾದಿಂದ ಕೆಲಸ ಹುಡುಕಿ ಹೊಟ್ಟೆ ತುಂಬಿಸಿಕೊಳ್ಳುವುದೇ ಅನಿವಾರ್ಯವಾಗಿದೆ. ಇನ್ನು ಅವರ ಹತ್ತಿರ ಎಲ್ಲಿಂದ ಬರಬೇಕು ಸ್ಮಾರ್ಟ್ ಫೋನ್ ಗಳು? ಸ್ಮಾರ್ಟ್ ಫೋನ್ ಗಳು ಇದ್ದರೂ ಕೂಡ ಅತಿಯಾಗಿ ಮೊಬೈಲ್ ನೋಡುವುದರಿಂದ ಮಕ್ಕಳ ಕಣ್ಣಿನ ದೃಷ್ಟಿಯ ಮೇಲೆ ಹೆಚ್ಚು ಹಾನಿಯಾಗುತ್ತದೆ. ಶಿಕ್ಷಕರು ನೋಟ್ಸ ಕಳಿಸಿದ್ದರೆ ಅವುಗಳನ್ನು ಪ್ರತಿ ಶಬ್ದಕ್ಕೂ ಝೂಮ್ ಮಾಡಿ ನೋಡುವುದು ಕಷ್ಟದ ಕೆಲಸ.
ಇದರಿಂದ ಬರೆದುಕೊಳ್ಳಲು ಕೂಡ ಬೇಸರವಾಗುತ್ತದೆ. ಶಿಕ್ಷಕರು ಪಾಠವನ್ನು ವಿವರಿಸುತ್ತಾ ಹೋಗುತ್ತಾರೆ.ತಿಳಿಯದಿದ್ದರೆ ಮರಳಿ ಕೇಳಿ ತಿಳಿದುಕೊಳ್ಳುವ ಹಾಗಿಲ್ಲ. ಅದೇರೀತಿ ಗಣಿತವು ಕೂಡ ಲೆಕ್ಕಗಳನ್ನು ಬಿಡಿಸುವುದರಿಂದ ಅರ್ಥವಾಗುತ್ತದೆ. ತಿಳಿಯದಿದ್ದರೆ ವಾಪಸ್ ಕೇಳುವ ಹಾಗಿಲ್ಲ ಅಂದ ಮೇಲೆ ಈ ಆನ್ಲೈನ್ ಶಿಕ್ಷಣದಿಂದ ಏನು ಪ್ರಯೋಜನ ಅಲ್ಲವೇ ?
ಒಟ್ಟಾರೆಯಾಗಿ ಕರೋನ ಬಂದ ಕಾರಣ ಕಡ್ಡಾಯವಾಗಿ ಆನ್ಲೈನ್ ಕ್ಲಾಸ್ ಬೇಕೆ ಬೇಕು ಎಂತೇನಿಲ್ಲ. ಸ್ವಲ್ಪ ದಿನ ವಿದ್ಯಾಭ್ಯಾಸವನ್ನು ಮುಂದುಡಿದರೆ ನಷ್ಟವೇನಿಲ್ಲ.ಆನ್ಲೈನ್ ಶಿಕ್ಷಣದಿಂದ ಎಷ್ಟು ದುಷ್ಪರಿಣಾಮವೆಂದರೆ ಮಕ್ಕಳಿಗೆ ಮೊಬೈಲ್ ಚಟವನ್ನು ಹಿಡಿಸಿ ಬಿಡುತ್ತದೆ. ಹಾಗಂತ ನಾನು ಆನ್ಲೈನ್ ಶಿಕ್ಷಣವನ್ನು ತೆಗೆಳುತ್ತಿಲ್ಲ. ಶಿಕ್ಷಣವು ಮಕ್ಕಳ ಜೀವನದಲ್ಲಿ ಅತ್ಯಂತ ಮುಖ್ಯಪಾತ್ರವನ್ನು ವಹಿಸುತ್ತದೆ. ಆದರೆ ಆನ್ಲೈನ್ ಶಿಕ್ಷಣದಿಂದ ಮಕ್ಕಳ ಬುದ್ಧಿಯಂತು ಚುರುಕು ಮಾಡುವುದಿಲ್ಲ.
ಮಕ್ಕಳನ್ನು ಮಬ್ಬಾಗಿಸಿ ಬಿಡುತ್ತದೆ ಮತ್ತು ಕಣ್ಣಿಗೆ ಹಾನಿಯನ್ನುಂಟು ಮಾಡುವುದರಲ್ಲಿ ಸಂಶಯವಿಲ್ಲ. ಇನ್ನು ಕೆಲವೊಂದು ವಿಷಯಗಳನ್ನು ನೋಟ್ಸ್ ಮಾಡಿ ಹೇಗೋ ಓದಿ ಕಂಟಪಾಠ ಮಾಡಬಹುದು. ಆದರೆ ಗಣಿತವನ್ನು ಕಂಟಪಾಠ ಮಾಡಲಾಗುವುದಿಲ್ಲ. ಆನ್ಲೈನ್ ಕ್ಲಾಸಿನಲ್ಲಿ ಅರ್ಥ ಆಗುವುದಿಲ್ಲ. ತರಗತಿಯಲ್ಲಾದರೆ ಎಲ್ಲಾ ವಿದ್ಯಾರ್ಥಿಗಳ ಗಮನ ಪಾಠದ ಮೇಲಿರುತ್ತದೆ ಮತ್ತು ಅವರೆಲ್ಲರ ಉದ್ದೇಶ ಪಾಠ ಕೇಳುವುದಾಗಿರುತ್ತದೆ.
ಆದರೆ ಮನೆಯಲ್ಲಿ ಹಾಗಲ್ಲ ಎಲ್ಲರೂ ಬೇರೆ ಬೇರೆ ಕೆಲಸದಲ್ಲಿ ತೊಡಗಿರುವಾಗ ಆನ್ಲೈನ್ ಕ್ಲಾಸ್ ಮೇಲೆ ವಿದ್ಯಾರ್ಥಿಗಳಿಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ.ಇನ್ನೊಂದು ಇಲ್ಲಿ ಅತಿ ದೊಡ್ಡ ನಷ್ಟ ಏನು ಗೊತ್ತೆ? ಕೆಲವೊಂದು ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯವಿರುತ್ತದೆ, ಫೋನ್ ಇರುತ್ತೆ, ಇಂಟರ್ನೆಟ್ ಇರುತ್ತೆ ಆನ್ಲೈನ್ ಪಾಠ ಕೇಳಲು ಎಲ್ಲಾ ಸೌಲಭ್ಯವಿರುತ್ತದೆ ಆದರೆ ಅವರು ಅದನ್ನು ಬೇರೆ ಕಾರ್ಯಕ್ಕೆ ಬಳಸಲುಬಹುದು.
ಇದರ ಬಗ್ಗೆ ಸಹ ಎಚ್ಚರ ವಹಿಸುವುದು ಅನಿವಾರ್ಯವಾಗುತ್ತದೆ ಜೊತೆಗೆ ಮೊಬೈಲಿನ ಚಟವನ್ನು ಹತ್ತಿಕೊಂಡು ಬಿಡುತ್ತದೆ ಮತ್ತು ಅದನ್ನು ನೋಡಿ ನೋಡಿ ಮಾನಸಿಕವಾಗಿ ಬಳಲುತ್ತಿರುವ ವಿದ್ಯಾರ್ಥಿಗಳನ್ನು ನಾವು ಸಾಮಾನ್ಯವಾಗಿ ನೋಡಿದ್ದೇವೆ ಅಲ್ಲವೇ ? ಹಾಗಾಗಿ
ಮಕ್ಕಳಿಗೆ ಆನ್ಲೈನ್ ಶಿಕ್ಷಣ ಅಷ್ಟು ಪರಿಣಾಮಕಾರಿಯಲ್ಲ ಎಂಬುದು ನನ್ನ ಅನಿಸಿಕೆ ಜೊತೆಗೆ ಈ ಆನ್ಲೈನ್ ಶಿಕ್ಷಣದಿಂದ ಮಕ್ಕಳಿಗೆ ಶಿಕ್ಷಕರ ಬಗ್ಗೆ ಗೌರವ ಕಡಿಮೆಯಾಗಬಹುದು ಭಾವನೆಯೊಂದಿಗೆ ಹೀಗೆ ಹತ್ತು ಹಲವು ಸಮಸ್ಯೆಗಳು ಆನ್ಲೈನ್ ಶಿಕ್ಷಣದಲ್ಲಿ ಕಾಣಬಹುದಾಗಿದೆ.
ಆದ್ದರಿಂದ ಇಂತಹ ಆನ್ಲೈನ್ ಶಿಕ್ಷಣದ ವ್ಯವಸ್ಥೆಯಿಂದ ಮಕ್ಕಳ ಭವಿಷ್ಯ ಹೇಗೆ ಬೆಳಗಬಹುದು ಎಂಬುದು ಯೋಚಿಸಬೇಕಾಗಿದೆ. ಹಾಗಾಗಿ ಈಗ ಈ ವ್ಯವಸ್ಥೆಯಿಂದ ಉಪಯುಕ್ತವಾಗದೇ ಅನಾನೂಕುಲ ಹೆಚ್ಚು ವಾಗಬಹುದು.ಇದರಿಂದ ಯಾರಿಗೂ ನೆಮ್ಮದಿ ಖಂಡಿತಾ ಸೀಗುವುದಿಲ್ಲ. ಶಾಲೆಗಳಲ್ಲಿ ಶಿಸ್ತು ಕ್ರಮ ತೆಗೆದುಕೊಂಡು ಎಲ್ಲರನ್ನೂ ಒಂದು ಕಡೆ ಸೇರಿಸಿ ಪಾಠ ಮಾಡುವರು.ಮಾಡುವ ಮೂಲಕ ಮಕ್ಕಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬಹುದಾಗಿದೆ.
ಆದ್ದರಿಂದ ಆನ್ಲೈನ್ ಶಿಕ್ಷಣ ಬೇಕೂ,ಬೇಡವೂ ಎಂಬುದು ಯೋಚನೆ ಮಾಡುವ ಸಂಧರ್ಭ ಸಧ್ಯ ಇಂದು ಎದುರಾಗಿದೆ. ಸಂಬಂಧ ಪಟ್ಟವರು ಈ ಕುರಿತು ಒಳ್ಳೆಯ ನಿರ್ಧಾರ ಕೈಗೊಳ್ಳುವುದು ಅವಶ್ಯಕತೆ ಇದೆ. ಸಧ್ಯದ ಪರಿಸ್ಥಿತಿಯ ಬಗ್ಗೆ ಮಾತ್ರ ಯೋಚಿಸದೇ ವಿದ್ಯಾರ್ಥಿಗಳ ಮುಂದಿನ ಜೀವನದ ಬಗ್ಗೆ ಯೋಚಿಸಬೇಕಾಗುತ್ತದೆ ಎಂಬುದು ಸರ್ವರೂ ಅರಿತುಕೊಳ್ಳುವುದು ಅತ್ಯುತ್ತಮ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

ದಿನದ ಸುದ್ದಿ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್
-
658 OMR ಕಾರ್ಬನ್ ಶೀಟ್ಗಳು FSLಗೆ
-
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ
-
₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ
-
ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
http://Visit : www.suddidina.com
329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.
ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
IAS ಅಧಿಕಾರಿಯತ್ತ ತನಿಖೆಯ ಚಿತ್ತ
ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.
ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.
ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ
ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.
ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ17 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ18 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ14 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ14 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ18 hours agoಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !





