Connect with us

ದಿನದ ಸುದ್ದಿ

ಪಾದರಾಯನಪುರದ‌ ನಂತರವಾದರೂ..!

Published

on

  • ಹ.ರಾ.ಮಹಿಶ ಬೌದ್ಧ

ಹೇಗೂ ಸೀಲ್ ಡೌನ್ ಆಗಿರುವುದರಿಂದ ಹಗಲಾಗಲೀ‌ ರಾತ್ರಿಯಾಗಲಿ ಜನರೆಲ್ಲಾ ಮನೆಯಲ್ಲೇ ಇರುತ್ತಾರೆ ರಸ್ತೆರಸ್ತೆಯಲ್ಲಿಯೂ ಪೋಲಿಸ್ ಸರ್ಪಗಾವಲು ಇರುತ್ತದೆ. ಹಾಗಾಗಿ ಪಾದರಾಯನಪುರದ ನಂತರ ಮುಂದೇನಾದರೂ ಸೀಲ್ ಡೌನ್ ಆಗಿರುವ ಬೇರೆ ಏರಿಯಾಗಳಲ್ಲಿರುವ ಶಂಕಿತ ಸೋಂಕಿತರನ್ನು ಕ್ವಾರಂಟೇನ್ ಗೆ ಕರೆದುಕೊಂಡು ಹೋಗುವುದಿದ್ದರೆ ದಯಮಾಡಿ ಹಗಲಿನ ಸಮಯದಲ್ಲೇ ಹೋದರೆ ಒಳಿತು. ಹಾಗೂ ಹೋಗುವ ಮುನ್ನ ಅಲ್ಲಿನ ಜನರಿಗೆ ಅರ್ಥವಾಗುವಂತೆ ಜಾಗೃತಿ ಮೂಡುವಂತೆ ಇಡೀ ಬಡಾವಣೆಯ ಮನೆಯೊಳಗಿರುವ ಜನರಿಗೆ ಕೇಳಿಸುವಂತೆ ಅನೌನ್ಸ್ ಮೆಂಟ್ ಮಾಡಿಸಿ ನಂತರ ಹೋದರೆ ಒಳಿತು.

ಮೊದಲೇ ಈ ಕೊರೋನದಾಳಿಯಿಂದ ಕಂಗೆಟ್ಟು ಹೈರಾಣವಾಗಿರುವ ದೇಶದ ಜನಸಾಮಾನ್ಯರು ನಂತರ ಅನಿವಾರ್ಯವಾದ ಲಾಕ್ ಡೌನ್ ನಿಂದ ದಿಕ್ಕೆಟ್ಟು ಹೋಗಿ ನಂತರ ಧುತ್ತನೆರಗಿದ ಸೀಲ್ ಡೌನ್‌ನಿಂದ ಇನ್ನೂ ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಅಲ್ಲದೆ ಕೊರೋನ ಬಗ್ಗೆ ಈ ಟಿವಿಯವರು 24/7 ಉತ್ಪಾದಿಸಿರುವ ಭಯವೂ ಸೇರಿಹೋಗಿ ಜೊತೆಗೆ ಕೂಲಿ‌ಕೆಲಸಗಳನ್ನು ಕಳೆದುಕೊಂಡು ತುತ್ತುಕೂಳಿಗೂ ತತ್ತರಿಸುತ್ತಾ ಜೀವನವೇ ರೋಸಿಹೋಗಿ ಜೊತೆಗೆ ಭಾರತದಂಥ ದೇಶದಲ್ಲಿ ಸಾಂಕ್ರಾಮಿಕ ರೋಗಕ್ಕೂ ಜಾತಿ ಧರ್ಮದ ಬಣ್ಣಬಳಿದು ಜನರನ್ನು ಮಾನಸಿಕವಾಗಿ ನೈತಿಕವಾಗಿ ಕುಗ್ಗಿಸುವ ಕಲೆಕಲಿತವರ ನಡುವೆ ಒಂಥರಾ ಪಾಪಪ್ರಜ್ಞೆಯಿಂದ ನರಳುತ್ತಿರುವ ಜನಸಾಮಾನ್ಯರು‌ ಪಾದರಾಯನಪುರದಲ್ಲಿರಲಿ ಬಸವನಗುಡಿಯಲ್ಲಿರಲಿ ಅಥವಾ ಇನ್ನೆಲ್ಲೋ ಇರಲಿ ಇಷ್ಟೆಲ್ಲಾ ಮಾನಸಿಕವಾಗಿ ತತ್ತರಿಸುತ್ತಾ ಭಯ ಮತ್ತು ಅಭದ್ರತೆಯಲ್ಲಿ ಕುಸಿದಿದ್ದಾರೆ.

ತಮ್ಮ ಕಣ್ಮುಂದೆ ತಮ್ಮಮನೆಯ ಸಣ್ಣಮಕ್ಕಳ ವಯಸ್ಸಾದ ತಂದೆತಾಯಿಗಳ‌‌ ದುಸ್ಥಿತಿಯನ್ನು ಕಂಡೂ ಅಸಹಾಯಕರಾಗಿ ತಮ್ಮಗಳ ಬದುಕಿನ ಬಗ್ಗೆಯೇ ಭರವಸೆ ಕಳೆದುಕೊಂಡು ಮೊದಲೇ ಭಯಾಂತಕದಲ್ಲಿರುವಾಗ ದಿಢೀರನೆ ರಾತ್ರಿಯ ವೇಳೆ ನಮ್ಮ ಪರವಾಗಿಯೇ ನಮಗಾಗಿಯೇ ನಮ್ಮ ಸಹಾಯಕ್ಕಾಗಿಯೇ ನಮ್ಮವರೇ ನಮ್ಮ ಪೋಲಿಸರೇ ವೈದ್ಯರೇ ಮನೆಗೆ ಹೋದರೂ ಜನಕ್ಕೆ ಅನುಮಾನದ ಜೊತೆಗೆ ಮತ್ತಷ್ಟು ಭಯ ಹೆಚ್ಚಾಗುತ್ತದೆ..! ದಿಕ್ಕುತೋಚದ ಜನಸಮೂಹ ಹುಚ್ಚಾಗುತ್ತದೆ..!

ವೈದ್ಯರಾಗಲಿ‌ ದಾದಿಯರಾಗಲಿ ಆಶಾಕಾರ್ಯಕರ್ತೆಯರಾಗಲಿ ಪೋಲಿಸರಾಗಲಿ ಸರ್ಕಾರವಾಗಲೀ ಇರುವುದು ನಮಗಾಗಿ ನಮ್ಮ ರಕ್ಷಣೆಗಾಗಿಯೇ ಹೊರತು‌ ಬೇರೆ ಉದ್ದೇಶಗಳಿಗಾಗಿ ಅಲ್ಲ ಎಂಬ ಸತ್ಯವನ್ನು ಜನರು ಅರ್ಥಮಾಡಿಕೊಳ್ಳಬೇಕು. ಆ ಸತ್ಯವನ್ನು ಜನಸಾಮಾನ್ಯರಿಗೆ ಅವರ ಮಟ್ಟಕ್ಕಿಳಿದು ಅರ್ಥ ಮಾಡಿಸಬೇಕಾದುದು ನಮ್ಮ ಕರ್ತವ್ಯವಾಗಬೇಕು. ಅವರಿಗೆ ನಂಬಿಕೆ ಬರುವಂತೆ ನಡೆದುಕೊಳ್ಳಬೇಕು. ಜನರೂ ಅದನ್ನು‌ ತಾಳ್ಮೆಯಿಂದ ಅರ್ಥ ಮಾಡಿಕೊಳ್ಳಬೇಕು..! ಮಾಧ್ಯಮದವರು ಮನುಷ್ಯರಂತೆ ವರ್ತಿಸಬೇಕು..!

ಪಾದರಾಯನಪುರದವರಾಗಲೀ ಪಾಂಡುರಂಗಪುರವಾಗಲಿ ನಾವೆಲ್ಲರೂ ಭಾರತೀಯರು ಮೊದಲಿಗೂ ಕೊನೆಗೂ… ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೋರೊನಾ ದೃಷ್ಟಿಯಲ್ಲಿ ನಾವೆಲ್ಲರೂ ಕೇವಲ ಮನುಷ್ಯರು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು..! ಇಂಥ ವಿಷಮಕಾಲದಲ್ಲಿ ಮನುಷ್ಯತ್ವ ಮತ್ತು ಸೌಹಾರ್ದತೆಯೊಂದೇ ನಮ್ಮೆಲ್ಲರನ್ನೂ ಉಳಿಸಬಲ್ಲದು‌‌ ಎಂಬುದನ್ನು ನಾವೆಲ್ಲರೂ ಮನಗಾಣಬೇಕು..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending