ದಿನದ ಸುದ್ದಿ
ಪಾದರಾಯನಪುರದ ನಂತರವಾದರೂ..!
- ಹ.ರಾ.ಮಹಿಶ ಬೌದ್ಧ
ಹೇಗೂ ಸೀಲ್ ಡೌನ್ ಆಗಿರುವುದರಿಂದ ಹಗಲಾಗಲೀ ರಾತ್ರಿಯಾಗಲಿ ಜನರೆಲ್ಲಾ ಮನೆಯಲ್ಲೇ ಇರುತ್ತಾರೆ ರಸ್ತೆರಸ್ತೆಯಲ್ಲಿಯೂ ಪೋಲಿಸ್ ಸರ್ಪಗಾವಲು ಇರುತ್ತದೆ. ಹಾಗಾಗಿ ಪಾದರಾಯನಪುರದ ನಂತರ ಮುಂದೇನಾದರೂ ಸೀಲ್ ಡೌನ್ ಆಗಿರುವ ಬೇರೆ ಏರಿಯಾಗಳಲ್ಲಿರುವ ಶಂಕಿತ ಸೋಂಕಿತರನ್ನು ಕ್ವಾರಂಟೇನ್ ಗೆ ಕರೆದುಕೊಂಡು ಹೋಗುವುದಿದ್ದರೆ ದಯಮಾಡಿ ಹಗಲಿನ ಸಮಯದಲ್ಲೇ ಹೋದರೆ ಒಳಿತು. ಹಾಗೂ ಹೋಗುವ ಮುನ್ನ ಅಲ್ಲಿನ ಜನರಿಗೆ ಅರ್ಥವಾಗುವಂತೆ ಜಾಗೃತಿ ಮೂಡುವಂತೆ ಇಡೀ ಬಡಾವಣೆಯ ಮನೆಯೊಳಗಿರುವ ಜನರಿಗೆ ಕೇಳಿಸುವಂತೆ ಅನೌನ್ಸ್ ಮೆಂಟ್ ಮಾಡಿಸಿ ನಂತರ ಹೋದರೆ ಒಳಿತು.
ಮೊದಲೇ ಈ ಕೊರೋನದಾಳಿಯಿಂದ ಕಂಗೆಟ್ಟು ಹೈರಾಣವಾಗಿರುವ ದೇಶದ ಜನಸಾಮಾನ್ಯರು ನಂತರ ಅನಿವಾರ್ಯವಾದ ಲಾಕ್ ಡೌನ್ ನಿಂದ ದಿಕ್ಕೆಟ್ಟು ಹೋಗಿ ನಂತರ ಧುತ್ತನೆರಗಿದ ಸೀಲ್ ಡೌನ್ನಿಂದ ಇನ್ನೂ ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಅಲ್ಲದೆ ಕೊರೋನ ಬಗ್ಗೆ ಈ ಟಿವಿಯವರು 24/7 ಉತ್ಪಾದಿಸಿರುವ ಭಯವೂ ಸೇರಿಹೋಗಿ ಜೊತೆಗೆ ಕೂಲಿಕೆಲಸಗಳನ್ನು ಕಳೆದುಕೊಂಡು ತುತ್ತುಕೂಳಿಗೂ ತತ್ತರಿಸುತ್ತಾ ಜೀವನವೇ ರೋಸಿಹೋಗಿ ಜೊತೆಗೆ ಭಾರತದಂಥ ದೇಶದಲ್ಲಿ ಸಾಂಕ್ರಾಮಿಕ ರೋಗಕ್ಕೂ ಜಾತಿ ಧರ್ಮದ ಬಣ್ಣಬಳಿದು ಜನರನ್ನು ಮಾನಸಿಕವಾಗಿ ನೈತಿಕವಾಗಿ ಕುಗ್ಗಿಸುವ ಕಲೆಕಲಿತವರ ನಡುವೆ ಒಂಥರಾ ಪಾಪಪ್ರಜ್ಞೆಯಿಂದ ನರಳುತ್ತಿರುವ ಜನಸಾಮಾನ್ಯರು ಪಾದರಾಯನಪುರದಲ್ಲಿರಲಿ ಬಸವನಗುಡಿಯಲ್ಲಿರಲಿ ಅಥವಾ ಇನ್ನೆಲ್ಲೋ ಇರಲಿ ಇಷ್ಟೆಲ್ಲಾ ಮಾನಸಿಕವಾಗಿ ತತ್ತರಿಸುತ್ತಾ ಭಯ ಮತ್ತು ಅಭದ್ರತೆಯಲ್ಲಿ ಕುಸಿದಿದ್ದಾರೆ.
ತಮ್ಮ ಕಣ್ಮುಂದೆ ತಮ್ಮಮನೆಯ ಸಣ್ಣಮಕ್ಕಳ ವಯಸ್ಸಾದ ತಂದೆತಾಯಿಗಳ ದುಸ್ಥಿತಿಯನ್ನು ಕಂಡೂ ಅಸಹಾಯಕರಾಗಿ ತಮ್ಮಗಳ ಬದುಕಿನ ಬಗ್ಗೆಯೇ ಭರವಸೆ ಕಳೆದುಕೊಂಡು ಮೊದಲೇ ಭಯಾಂತಕದಲ್ಲಿರುವಾಗ ದಿಢೀರನೆ ರಾತ್ರಿಯ ವೇಳೆ ನಮ್ಮ ಪರವಾಗಿಯೇ ನಮಗಾಗಿಯೇ ನಮ್ಮ ಸಹಾಯಕ್ಕಾಗಿಯೇ ನಮ್ಮವರೇ ನಮ್ಮ ಪೋಲಿಸರೇ ವೈದ್ಯರೇ ಮನೆಗೆ ಹೋದರೂ ಜನಕ್ಕೆ ಅನುಮಾನದ ಜೊತೆಗೆ ಮತ್ತಷ್ಟು ಭಯ ಹೆಚ್ಚಾಗುತ್ತದೆ..! ದಿಕ್ಕುತೋಚದ ಜನಸಮೂಹ ಹುಚ್ಚಾಗುತ್ತದೆ..!
ವೈದ್ಯರಾಗಲಿ ದಾದಿಯರಾಗಲಿ ಆಶಾಕಾರ್ಯಕರ್ತೆಯರಾಗಲಿ ಪೋಲಿಸರಾಗಲಿ ಸರ್ಕಾರವಾಗಲೀ ಇರುವುದು ನಮಗಾಗಿ ನಮ್ಮ ರಕ್ಷಣೆಗಾಗಿಯೇ ಹೊರತು ಬೇರೆ ಉದ್ದೇಶಗಳಿಗಾಗಿ ಅಲ್ಲ ಎಂಬ ಸತ್ಯವನ್ನು ಜನರು ಅರ್ಥಮಾಡಿಕೊಳ್ಳಬೇಕು. ಆ ಸತ್ಯವನ್ನು ಜನಸಾಮಾನ್ಯರಿಗೆ ಅವರ ಮಟ್ಟಕ್ಕಿಳಿದು ಅರ್ಥ ಮಾಡಿಸಬೇಕಾದುದು ನಮ್ಮ ಕರ್ತವ್ಯವಾಗಬೇಕು. ಅವರಿಗೆ ನಂಬಿಕೆ ಬರುವಂತೆ ನಡೆದುಕೊಳ್ಳಬೇಕು. ಜನರೂ ಅದನ್ನು ತಾಳ್ಮೆಯಿಂದ ಅರ್ಥ ಮಾಡಿಕೊಳ್ಳಬೇಕು..! ಮಾಧ್ಯಮದವರು ಮನುಷ್ಯರಂತೆ ವರ್ತಿಸಬೇಕು..!
ಪಾದರಾಯನಪುರದವರಾಗಲೀ ಪಾಂಡುರಂಗಪುರವಾಗಲಿ ನಾವೆಲ್ಲರೂ ಭಾರತೀಯರು ಮೊದಲಿಗೂ ಕೊನೆಗೂ… ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೋರೊನಾ ದೃಷ್ಟಿಯಲ್ಲಿ ನಾವೆಲ್ಲರೂ ಕೇವಲ ಮನುಷ್ಯರು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು..! ಇಂಥ ವಿಷಮಕಾಲದಲ್ಲಿ ಮನುಷ್ಯತ್ವ ಮತ್ತು ಸೌಹಾರ್ದತೆಯೊಂದೇ ನಮ್ಮೆಲ್ಲರನ್ನೂ ಉಳಿಸಬಲ್ಲದು ಎಂಬುದನ್ನು ನಾವೆಲ್ಲರೂ ಮನಗಾಣಬೇಕು..!
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ4 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ